AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ಭರ್ಜರಿ ಸಿಕ್ಸರ್​ಗಳೊಂದಿಗೆ ಸ್ಪೋಟಕ ಸೆಂಚುರಿ ಸಿಡಿಸಿದ ಶ್ರೇಯಸ್ ಅಯ್ಯರ್

Vijay Hazare Trophy 2024-25: ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಶ್ರೇಯಸ್ ಅಯ್ಯರ್ ಇದೀಗ ವಿಜಯ ಹಝಾರೆ ಟೂರ್ನಿಯ ಮೊದಲ ಮ್ಯಾಚ್​ನಲ್ಲೇ ಅಬ್ಬರಿಸಿದ್ದಾರೆ. ಅದು ಕೂಡ ಸ್ಪೋಟಕ ಸೆಂಚುರಿ ಸಿಡಿಸುವ ಮೂಲಕ ಎಂಬುದು ವಿಶೇಷ. ಈ ಶತಕದೊಂದಿಗೆ ಮುಂಬೈ ತಂಡ ಕರ್ನಾಟಕ ವಿರುದ್ಧ ಬೃಹತ್ ಮೊತ್ತ ಪೇರಿಸಿದೆ.

10 ಭರ್ಜರಿ ಸಿಕ್ಸರ್​ಗಳೊಂದಿಗೆ ಸ್ಪೋಟಕ ಸೆಂಚುರಿ ಸಿಡಿಸಿದ ಶ್ರೇಯಸ್ ಅಯ್ಯರ್
Shreyas Iyer
ಝಾಹಿರ್ ಯೂಸುಫ್
|

Updated on: Dec 21, 2024 | 1:23 PM

Share

ವಿಜಯ ಹಝಾರೆ ಟೂರ್ನಿಯ ಮೊದಲ ಪಂದ್ಯದಲ್ಲೇ ಶ್ರೇಯಸ್ ಅಯ್ಯರ್ ಸ್ಪೋಟಕ ಸೆಂಚುರಿ ಸಿಡಿಸಿದ್ದಾರೆ. ಅಹದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನ ಬಿ ಗ್ರೌಂಡ್​ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ ತಂಡದ ನಾಯಕ ಮಯಾಂಕ್ ಅಗರ್ವಾಲ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ಮುಂಬೈ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ.

ಆರಂಭಿಕನಾಗಿ ಕಣಕ್ಕಿಳಿದ ಅಂಗ್​ಕ್ರಿಶ್ ರಘುವಂಶಿ ಕೇವಲ 6 ರನ್​ಗಳಿಸಿ ವಿದ್ಯಾಧರ್ ಪಾಟೀಲ್​ಗೆ ವಿಕೆಟ್ ಒಪ್ಪಿಸಿದ್ದರು. ಈ ವೇಳೆ ಜೊತೆಗೂಡಿ ಆಯುಷ್ ಮ್ಹಾತ್ರೆ (78) ಹಾಗೂ ಹಾರ್ದಿಕ್ ತಮೋರ್ (84) 2ನೇ ವಿಕೆಟ್​ಗೆ 141 ರನ್​ಗಳ ಜೊತೆಯಾಟವಾಡಿದರು.

ಅಯ್ಯರ್ ಅಬ್ಬರ ಸಿಡಿಲಬ್ಬರ:

ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಯಕ ಶ್ರೇಯಸ್ ಅಯ್ಯರ್ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ್ದ ಅಯ್ಯರ್ ಕರ್ನಾಟಕ ಬೌಲರ್​ಗಳನ್ನು ಹಿಗ್ಗಮುಗ್ಗಾ ದಂಡಿಸಿದರು. ಪರಿಣಾಮ ಶ್ರೇಯಸ್ ಬ್ಯಾಟ್​ನಿಂದ 10 ಭರ್ಜರಿ ಸಿಕ್ಸ್​ಗಳು ಮೂಡಿಬಂದವು.

ಈ ಸಿಡಿಲಬ್ಬರದೊಂದಿಗೆ ಶ್ರೇಯಸ್ ಅಯ್ಯರ್ ಕೇವಲ 51 ಎಸೆತಗಳಲ್ಲಿ ಶತಕ ಪೂರೈಸಿದರು. ಇನ್ನು ಶತಕದ ಬಳಿಕ ಕೂಡ ಅಬ್ಬರ ಮುಂದುವರೆಸಿದ ಅಯ್ಯರ್ 55 ಎಸೆತಗಳಲ್ಲಿ 5 ಫೋರ್ ಹಾಗೂ 10 ಸಿಕ್ಸ್​ಗಳೊಂದಿಗೆ ಅಜೇಯ 114 ರನ್ ಬಾರಿಸಿದರು. ಈ ಭರ್ಜರಿ ಶತಕದ ನೆರವಿನೊಂದಿಗೆ ಮುಂಬೈ ತಂಡವು 50 ಓವರ್​​ಗಳಲ್ಲಿ 4 ವಿಕೆಟ್ ಕಳೆದುಕೊಂಡು 382 ರನ್ ಕಲೆಹಾಕಿದೆ.

ಈ ಪಂದ್ಯವನ್ನು ಗೆಲ್ಲಲು ಕರ್ನಾಟಕ ತಂಡವು 50 ಓವರ್​ಗಳಲ್ಲಿ 382 ರನ್​ ಕಲೆಹಾಕಬೇಕಿದೆ. ಈ ಮೊತ್ತವನ್ನು ಚೇಸ್ ಮಾಡಿದರೆ ಕರ್ನಾಟಕ ತಂಡದ ಹೆಸರಿಗೆ ಹೊಸ ದಾಖಲೆ ಸೇರ್ಪಡೆಯಾಗಲಿದೆ.

ಮುಂಬೈ ಪ್ಲೇಯಿಂಗ್ 11: ಅಂಗ್​ಕ್ರಿಶ್ ರಘುವಂಶಿ , ಆಯುಷ್ ಮ್ಹಾತ್ರೆ , ಶ್ರೇಯಸ್ ಅಯ್ಯರ್ (ನಾಯಕ) , ಸೂರ್ಯಕುಮಾರ್ ಯಾದವ್ , ಹಾರ್ದಿಕ್ ತಮೋರೆ (ವಿಕೆಟ್ ಕೀಪರ್) , ಶಿವಂ ದುಬೆ , ಸೂರ್ಯಾಂಶ್ ಶೆಡ್ಗೆ , ಅಥರ್ವ ಅಂಕೋಲೇಕರ್ , ತನುಷ್ ಕೋಟ್ಯಾನ್ , ಶಾರ್ದೂಲ್ ಠಾಕೂರ್ , ಜುನೇದ್ ಖಾನ್.

ಇದನ್ನೂ ಓದಿ: ಒಂದೇ ವರ್ಷ ಟೀಮ್ ಇಂಡಿಯಾದ 11 ಆಟಗಾರರು ನಿವೃತ್ತಿ..!

ಕರ್ನಾಟಕ ಪ್ಲೇಯಿಂಗ್ 11: ಮಯಾಂಕ್ ಅಗರವಾಲ್ (ನಾಯಕ) , ಅನೀಶ್ ಕೆವಿ , ನಿಕಿನ್ ಜೋಸ್ , ಸ್ಮರಣ್ ರವಿಚಂದ್ರನ್ , ಅಭಿನವ್ ಮನೋಹರ್ , ಕೃಷ್ಣನ್ ಶ್ರೀಜಿತ್ (ವಿಕೆಟ್ ಕೀಪರ್) , ಶ್ರೇಯಸ್ ಗೋಪಾಲ್ , ವೈಶಾಕ್ ವಿಜಯಕುಮಾರ್ , ಪ್ರವೀಣ್ ದುಬೆ , ವಾಸುಕಿ ಕೌಶಿಕ್ , ವಿದ್ಯಾಧರ್ ಪಾಟೀಲ್.

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ