AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ಭರ್ಜರಿ ಸಿಕ್ಸರ್​ಗಳೊಂದಿಗೆ ಸ್ಪೋಟಕ ಸೆಂಚುರಿ ಸಿಡಿಸಿದ ಶ್ರೇಯಸ್ ಅಯ್ಯರ್

Vijay Hazare Trophy 2024-25: ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಶ್ರೇಯಸ್ ಅಯ್ಯರ್ ಇದೀಗ ವಿಜಯ ಹಝಾರೆ ಟೂರ್ನಿಯ ಮೊದಲ ಮ್ಯಾಚ್​ನಲ್ಲೇ ಅಬ್ಬರಿಸಿದ್ದಾರೆ. ಅದು ಕೂಡ ಸ್ಪೋಟಕ ಸೆಂಚುರಿ ಸಿಡಿಸುವ ಮೂಲಕ ಎಂಬುದು ವಿಶೇಷ. ಈ ಶತಕದೊಂದಿಗೆ ಮುಂಬೈ ತಂಡ ಕರ್ನಾಟಕ ವಿರುದ್ಧ ಬೃಹತ್ ಮೊತ್ತ ಪೇರಿಸಿದೆ.

10 ಭರ್ಜರಿ ಸಿಕ್ಸರ್​ಗಳೊಂದಿಗೆ ಸ್ಪೋಟಕ ಸೆಂಚುರಿ ಸಿಡಿಸಿದ ಶ್ರೇಯಸ್ ಅಯ್ಯರ್
Shreyas Iyer
ಝಾಹಿರ್ ಯೂಸುಫ್
|

Updated on: Dec 21, 2024 | 1:23 PM

Share

ವಿಜಯ ಹಝಾರೆ ಟೂರ್ನಿಯ ಮೊದಲ ಪಂದ್ಯದಲ್ಲೇ ಶ್ರೇಯಸ್ ಅಯ್ಯರ್ ಸ್ಪೋಟಕ ಸೆಂಚುರಿ ಸಿಡಿಸಿದ್ದಾರೆ. ಅಹದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನ ಬಿ ಗ್ರೌಂಡ್​ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ ತಂಡದ ನಾಯಕ ಮಯಾಂಕ್ ಅಗರ್ವಾಲ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ಮುಂಬೈ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ.

ಆರಂಭಿಕನಾಗಿ ಕಣಕ್ಕಿಳಿದ ಅಂಗ್​ಕ್ರಿಶ್ ರಘುವಂಶಿ ಕೇವಲ 6 ರನ್​ಗಳಿಸಿ ವಿದ್ಯಾಧರ್ ಪಾಟೀಲ್​ಗೆ ವಿಕೆಟ್ ಒಪ್ಪಿಸಿದ್ದರು. ಈ ವೇಳೆ ಜೊತೆಗೂಡಿ ಆಯುಷ್ ಮ್ಹಾತ್ರೆ (78) ಹಾಗೂ ಹಾರ್ದಿಕ್ ತಮೋರ್ (84) 2ನೇ ವಿಕೆಟ್​ಗೆ 141 ರನ್​ಗಳ ಜೊತೆಯಾಟವಾಡಿದರು.

ಅಯ್ಯರ್ ಅಬ್ಬರ ಸಿಡಿಲಬ್ಬರ:

ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಯಕ ಶ್ರೇಯಸ್ ಅಯ್ಯರ್ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ್ದ ಅಯ್ಯರ್ ಕರ್ನಾಟಕ ಬೌಲರ್​ಗಳನ್ನು ಹಿಗ್ಗಮುಗ್ಗಾ ದಂಡಿಸಿದರು. ಪರಿಣಾಮ ಶ್ರೇಯಸ್ ಬ್ಯಾಟ್​ನಿಂದ 10 ಭರ್ಜರಿ ಸಿಕ್ಸ್​ಗಳು ಮೂಡಿಬಂದವು.

ಈ ಸಿಡಿಲಬ್ಬರದೊಂದಿಗೆ ಶ್ರೇಯಸ್ ಅಯ್ಯರ್ ಕೇವಲ 51 ಎಸೆತಗಳಲ್ಲಿ ಶತಕ ಪೂರೈಸಿದರು. ಇನ್ನು ಶತಕದ ಬಳಿಕ ಕೂಡ ಅಬ್ಬರ ಮುಂದುವರೆಸಿದ ಅಯ್ಯರ್ 55 ಎಸೆತಗಳಲ್ಲಿ 5 ಫೋರ್ ಹಾಗೂ 10 ಸಿಕ್ಸ್​ಗಳೊಂದಿಗೆ ಅಜೇಯ 114 ರನ್ ಬಾರಿಸಿದರು. ಈ ಭರ್ಜರಿ ಶತಕದ ನೆರವಿನೊಂದಿಗೆ ಮುಂಬೈ ತಂಡವು 50 ಓವರ್​​ಗಳಲ್ಲಿ 4 ವಿಕೆಟ್ ಕಳೆದುಕೊಂಡು 382 ರನ್ ಕಲೆಹಾಕಿದೆ.

ಈ ಪಂದ್ಯವನ್ನು ಗೆಲ್ಲಲು ಕರ್ನಾಟಕ ತಂಡವು 50 ಓವರ್​ಗಳಲ್ಲಿ 382 ರನ್​ ಕಲೆಹಾಕಬೇಕಿದೆ. ಈ ಮೊತ್ತವನ್ನು ಚೇಸ್ ಮಾಡಿದರೆ ಕರ್ನಾಟಕ ತಂಡದ ಹೆಸರಿಗೆ ಹೊಸ ದಾಖಲೆ ಸೇರ್ಪಡೆಯಾಗಲಿದೆ.

ಮುಂಬೈ ಪ್ಲೇಯಿಂಗ್ 11: ಅಂಗ್​ಕ್ರಿಶ್ ರಘುವಂಶಿ , ಆಯುಷ್ ಮ್ಹಾತ್ರೆ , ಶ್ರೇಯಸ್ ಅಯ್ಯರ್ (ನಾಯಕ) , ಸೂರ್ಯಕುಮಾರ್ ಯಾದವ್ , ಹಾರ್ದಿಕ್ ತಮೋರೆ (ವಿಕೆಟ್ ಕೀಪರ್) , ಶಿವಂ ದುಬೆ , ಸೂರ್ಯಾಂಶ್ ಶೆಡ್ಗೆ , ಅಥರ್ವ ಅಂಕೋಲೇಕರ್ , ತನುಷ್ ಕೋಟ್ಯಾನ್ , ಶಾರ್ದೂಲ್ ಠಾಕೂರ್ , ಜುನೇದ್ ಖಾನ್.

ಇದನ್ನೂ ಓದಿ: ಒಂದೇ ವರ್ಷ ಟೀಮ್ ಇಂಡಿಯಾದ 11 ಆಟಗಾರರು ನಿವೃತ್ತಿ..!

ಕರ್ನಾಟಕ ಪ್ಲೇಯಿಂಗ್ 11: ಮಯಾಂಕ್ ಅಗರವಾಲ್ (ನಾಯಕ) , ಅನೀಶ್ ಕೆವಿ , ನಿಕಿನ್ ಜೋಸ್ , ಸ್ಮರಣ್ ರವಿಚಂದ್ರನ್ , ಅಭಿನವ್ ಮನೋಹರ್ , ಕೃಷ್ಣನ್ ಶ್ರೀಜಿತ್ (ವಿಕೆಟ್ ಕೀಪರ್) , ಶ್ರೇಯಸ್ ಗೋಪಾಲ್ , ವೈಶಾಕ್ ವಿಜಯಕುಮಾರ್ , ಪ್ರವೀಣ್ ದುಬೆ , ವಾಸುಕಿ ಕೌಶಿಕ್ , ವಿದ್ಯಾಧರ್ ಪಾಟೀಲ್.

ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು