AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಸ್ಟ್ ಕ್ರಿಕೆಟ್ ಆಡದಿರಲು ನಿರ್ಧರಿಸಿದ ಶ್ರೇಯಸ್ ಅಯ್ಯರ್; ಕಾರಣ ಕೂಡ ಬಹಿರಂಗ

Shreyas Iyer Takes Break from Test Cricket: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಟೆಸ್ಟ್ ಸರಣಿಗೆ ಆಯ್ಕೆಯಾಗುವ ನಿರೀಕ್ಷೆಯಲ್ಲಿದ್ದ ಶ್ರೇಯಸ್ ಅಯ್ಯರ್, ದೀರ್ಘಕಾಲದ ಬೆನ್ನು ನೋವು ಮತ್ತು ಆಯಾಸದಿಂದಾಗಿ ಈ ಸ್ವರೂಪದಿಂದ ವಿರಾಮ ತೆಗೆದುಕೊಳ್ಳುವುದಾಗಿ ಘೋಷಿಸಿದ್ದಾರೆ. ಬಿಸಿಸಿಐಗೆ ಇಮೇಲ್ ಮೂಲಕ ತಿಳಿಸಿರುವ ಅವರು, ಟೆಸ್ಟ್ ಮತ್ತು ರೆಡ್-ಬಾಲ್ ಕ್ರಿಕೆಟ್‌ನಿಂದ ಸ್ವಲ್ಪ ಸಮಯ ವಿರಾಮ ಪಡೆದು ಸಂಪೂರ್ಣ ಚೇತರಿಕೆ ಕಂಡುಕೊಳ್ಳಲು ಬಯಸುತ್ತಾರೆ ಎಂದು ಹೇಳಿದ್ದಾರೆ.

ಟೆಸ್ಟ್ ಕ್ರಿಕೆಟ್ ಆಡದಿರಲು ನಿರ್ಧರಿಸಿದ ಶ್ರೇಯಸ್ ಅಯ್ಯರ್; ಕಾರಣ ಕೂಡ ಬಹಿರಂಗ
Shreyas Iyer
ಪೃಥ್ವಿಶಂಕರ
|

Updated on: Sep 23, 2025 | 10:50 PM

Share

ಅಕ್ಟೋಬರ್ 2 ರಿಂದ ಪ್ರಾರಂಭವಾಗುವ ಭಾರತ ಮತ್ತು ವೆಸ್ಟ್ ಇಂಡೀಸ್ (India vs West Indies) ನಡುವಿನ ಟೆಸ್ಟ್ ಸರಣಿಗೆ ಟೀಂ ಇಂಡಿಯಾವನ್ನು ಇದೇ ಸೆಪ್ಟೆಂಬರ್ 24 ರಂದು ಪ್ರಕಟಿಸಬಹುದು ಎಂದು ವರದಿಯಾಗಿದೆ. ಆದರೆ ಈ ಆಯ್ಕೆ ಸಭೆಗೆ ಸ್ವಲ್ಪ ಮೊದಲು, ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ (Shreyas Iyer) ಅಚ್ಚರಿಯ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ವಾಸ್ತವವಾಗಿ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಅಯ್ಯರ್ ಅವರನ್ನು ಆಯ್ಕೆ ಮಾಡುವುದು ಖಚಿತ ಎನ್ನಲಾಗುತ್ತಿತ್ತು. ಆದರೆ ಅಯ್ಯರ್ ಈ ಸ್ವರೂಪದಿಂದ ವಿರಾಮ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ. ವರದಿಯ ಪ್ರಕಾರ, ದೀರ್ಘ ಸ್ವರೂಪಗಳಿಂದ (ಟೆಸ್ಟ್ ಮತ್ತು ದೇಶೀಯ ರೆಡ್-ಬಾಲ್ ಕ್ರಿಕೆಟ್) ವಿರಾಮ ತೆಗೆದುಕೊಳ್ಳುವ ನಿರ್ಧಾರದ ಬಗ್ಗೆ ಅಯ್ಯರ್, ಬಿಸಿಸಿಐಗೆ ಇಮೇಲ್ ಮೂಲಕ ತಿಳಿಸಿದ್ದಾರೆ.

ಅಯ್ಯರ್ ಈ ನಿರ್ಧಾರ ತೆಗೆದುಕೊಂಡ ಕಾರಣ?

ಇಂಡಿಯನ್ ಎಕ್ಸ್‌ಪ್ರೆಸ್‌ನ ವರದಿಯ ಪ್ರಕಾರ, ಅಯ್ಯರ್ ಬಿಸಿಸಿಐಗೆ ಇಮೇಲ್ ಬರೆದು, ಕೆಂಪು ಚೆಂಡಿನ ಕ್ರಿಕೆಟ್‌ನಿಂದ ಸ್ವಲ್ಪ ಸಮಯದವರೆಗೆ ವಿರಾಮ ತೆಗೆದುಕೊಳ್ಳಲು ಬಯಸುವುದಾಗಿ ಹೇಳಿದ್ದಾರೆ. ಶ್ರೇಯಸ್ ಅಯ್ಯರ್ ತಮ್ಮ ನಿರ್ಧಾರಕ್ಕೆ ದೀರ್ಘಕಾಲದ ಬೆನ್ನು ನೋವು ಮತ್ತು ಆಯಾಸ ಕಾರಣ ಎಂದು ಉಲ್ಲೇಖಿಸಿ, ಅದರಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಬಯಸುವುದಾಗಿ ಹೇಳಿದ್ದಾರೆ, ಅದಕ್ಕಾಗಿಯೇ ಅವರು ಸ್ವರೂಪದಿಂದ ವಿರಾಮ ತೆಗೆದುಕೊಳ್ಳುತ್ತಿದ್ದಾರೆ. ವರದಿಯ ಪ್ರಕಾರ, ಅಯ್ಯರ್ ತಮ್ಮ ನಿರ್ಧಾರದ ಬಗ್ಗೆ ಆಯ್ಕೆದಾರರಿಗೆ ತಿಳಿಸಿದ್ದು, ಆ ಬಳಿಕ ಔಪಚಾರಿಕ ಇಮೇಲ್ ಮೂಲಕ ಮಂಡಳಿಗೆ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.

30 ವರ್ಷದ ಅಯ್ಯರ್ ಬೆನ್ನು ನೋವು ಸಮಸ್ಯೆಯಿಂದ ಬಳಲುತ್ತಿದ್ದು, ಪ್ರಸ್ತುತ ಐದು ದಿನಗಳ ಟೆಸ್ಟ್ ಕ್ರಿಕೆಟ್ ಅಥವಾ ರೆಡ್-ಬಾಲ್ ಕ್ರಿಕೆಟ್ ಅನ್ನು ಸಂಪೂರ್ಣವಾಗಿ ನಿಭಾಯಿಸಲು ಸಾಧ್ಯವಾಗುತ್ತಿಲ್ಲ ಎಂದು ಆಯ್ಕೆದಾರರಿಗೆ ತಿಳಿಸಿದ್ದಾರೆ ಎಂದು ವರದಿ ಬಹಿರಂಗಪಡಿಸಿದೆ. ವರದಿಯ ಪ್ರಕಾರ, ನಾಲ್ಕು ದಿನಗಳ ಪಂದ್ಯಗಳಲ್ಲಿ ವಿರಾಮ ತೆಗೆದುಕೊಳ್ಳಲು ಸಾಧ್ಯವಾದ ಕಾರಣ ಈ ವರ್ಷ ರಣಜಿ ಟ್ರೋಫಿಯಲ್ಲಿ ಆಡುತ್ತಿದ್ದೇನೆ, ಆದರೆ ಟೆಸ್ಟ್ ಕ್ರಿಕೆಟ್ ಆಡುವಾಗ ಅಥವಾ ಭಾರತ ಎ ಪರ ಆಡುವಾಗ ಹಾಗೆ ಮಾಡಲು ಸಾಧ್ಯವಿಲ್ಲ ಎಂದು ಅಯ್ಯರ್ ಸ್ಪಷ್ಟಪಡಿಸಿದ್ದಾರೆ. ಆದ್ದರಿಂದ, ನನ್ನ ದೇಹವು ಮತ್ತೆ ಟೆಸ್ಟ್ ಕ್ರಿಕೆಟ್‌ನ ಸವಾಲುಗಳನ್ನು ಎದುರಿಸಲು ಸಂಪೂರ್ಣವಾಗಿ ಸಿದ್ಧವಾಗುವವರೆಗೆ ಅವರು ಈ ಮಾದರಿಯಿಂದ ದೂರವಿರಲು ನಿರ್ಧರಿಸಿರುವುದಾಗಿ ಅಯ್ಯರ್ ತಿಳಿಸಿದ್ದಾರೆ.

ಪ್ರವಾಹ ಪೀಡಿತ ಪಂಜಾಬ್‌ ನೆರವಿಗೆ ಬರುವಂತೆ ಶ್ರೇಯಸ್ ಅಯ್ಯರ್ ಮನವಿ; ವಿಡಿಯೋ

ಭಾರತ-ಎ ತಂಡವನ್ನು ತೊರೆದ ಅಯ್ಯರ್

ಆಸ್ಟ್ರೇಲಿಯಾ ಎ ವಿರುದ್ಧ ಎರಡು ಅನಧಿಕೃತ ಟೆಸ್ಟ್ ಪಂದ್ಯಗಳನ್ನು ಆಡುತ್ತಿರುವ ಭಾರತ ಎ ತಂಡದ ನಾಯಕನಾಗಿ ಅಯ್ಯರ್ ಇತ್ತೀಚೆಗೆ ನೇಮಕಗೊಂಡಿದ್ದರು. ಸರಣಿಯ ಮೊದಲ ಪಂದ್ಯವನ್ನು ಮುನ್ನಡೆಸಿದ್ದ ಅಯ್ಯರ್, ಕೇವಲ ಒಂದು ಇನ್ನಿಂಗ್ಸ್‌ನಲ್ಲಿ ಮಾತ್ರ ಬ್ಯಾಟಿಂಗ್ ಮಾಡಿ ಬೇಗನೇ ಔಟಾಗಿದ್ದರು. ಇದೀಗ ಸೆ. 23 ರಿಂದ ಆರಂಭವಾಗಿರುವ ಸರಣಿಯ ಅಂತಿಮ ಟೆಸ್ಟ್ ಪಂದ್ಯದಿಂದ ಅಯ್ಯರ್ ಹಿಂದೆ ಸರಿದಿದ್ದಾರೆ. ವೈಯಕ್ತಿಕ ಕಾರಣಗಳಿಂದ ಅಯ್ಯರ್ ಪಂದ್ಯದಿಂದ ಹಿಂದೆ ಸರಿದಿದ್ದಾರೆ ಎಂದು ವರದಿಯಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ