AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೇಯಸ್ ಅಯ್ಯರ್​ಗೆ ಟಿ20 ತಂಡದ ನಾಯಕತ್ವ; ಯಾರಿಗೆ ಸಿಗಲಿದೆ ಉಪನಾಯಕತ್ವ?

Shreyas Iyer India T20 captain: ಭಾರತದ ಮುಂದಿನ ಟಿ20 ತಂಡದ ನಾಯಕರಾಗಿ ಶ್ರೇಯಸ್ ಅಯ್ಯರ್ ಅಧಿಕೃತವಾಗಿ ನೇಮಕಗೊಳ್ಳುವ ಸಾಧ್ಯತೆಯಿದೆ. ಜೂನ್ 6 ರಿಂದ ಪ್ರಾರಂಭವಾಗುವ ಐರ್ಲೆಂಡ್ ಹಾಗೂ ಇಂಗ್ಲೆಂಡ್ ಪ್ರವಾಸಗಳಿಗೆ ಅಯ್ಯರ್ ತಂಡವನ್ನು ಮುನ್ನಡೆಸಲಿದ್ದಾರೆ. ಸೂರ್ಯಕುಮಾರ್ ಯಾದವ್ ಬದಲಿಗೆ ಅಯ್ಯರ್ ಆಯ್ಕೆಯಾಗಲಿದ್ದು, ತಿಲಕ್ ವರ್ಮಾ ಉಪನಾಯಕತ್ವ ವಹಿಸಲಿದ್ದಾರೆ. ಐಪಿಎಲ್‌ನಲ್ಲಿ ಶ್ರೇಯಸ್ ಯಶಸ್ವಿ ನಾಯಕತ್ವದ ಅನುಭವ ಹೊಂದಿದ್ದಾರೆ. ಬಿಸಿಸಿಐನ ಅಂತಿಮ ನಿರ್ಧಾರ ಶೀಘ್ರದಲ್ಲೇ ಹೊರಬೀಳಲಿದೆ.

ಶ್ರೇಯಸ್ ಅಯ್ಯರ್​ಗೆ ಟಿ20 ತಂಡದ ನಾಯಕತ್ವ; ಯಾರಿಗೆ ಸಿಗಲಿದೆ ಉಪನಾಯಕತ್ವ?
Shreyas Iyer
ಪೃಥ್ವಿಶಂಕರ
|

Updated on:Jun 04, 2026 | 7:21 PM

Share

ಇದೇ ಜೂನ್ 6 ರಿಂದ ಅಫ್ಘಾನಿಸ್ತಾನ ಹಾಗೂ ಭಾರತದ ನಡುವೆ ಟೆಸ್ಟ್ ಹಾಗೂ ಏಕದಿನ ಸರಣಿ ಆರಂಭವಾಗಲಿದೆ. ಈ ಸರಣಿ ಮುಗಿದ ಬಳಿಕ ಜೂನ್ 26 ರಿಂದ ಐರ್ಲೆಂಡ್ ವಿರುದ್ಧ ಮತ್ತು ಜುಲೈ 1 ರಿಂದ ಇಂಗ್ಲೆಂಡ್ ವಿರುದ್ಧ ಟಿ20 ಸರಣಿಯನ್ನು ಆಡಬೇಕಾಗಿದೆ. ಈ ಸರಣಿಯಲ್ಲಿ ಟೀಂ ಇಂಡಿಯಾವನ್ನು (Team India) ಯಾರು ಮುನ್ನಡೆಸುತ್ತಾರೆ ಎಂಬುದು ಇದುವರೆಗೆ ಖಚಿತವಾಗಿಲ್ಲ. ಏಕೆಂದರೆ ಸೂರ್ಯಕುಮಾರ್ ಯಾದವ್ ಅವರನ್ನು ಟಿ20 ತಂಡದಿಂದ ಕೈಬಿಡುವ ಬಗ್ಗೆ ಬಿಸಿಸಿಐ ಚಿಂತಿಸುತ್ತಿದೆ. ಹೀಗಾಗಿ ಅವರ ಸ್ಥಾನದಲ್ಲಿ ಯಾರು ತಂಡವನ್ನು ಮುನ್ನಡೆಸಲಿದ್ದಾರೆ ಎಂಬುದು ಕೆಲವೇ ದಿನಗಳಲ್ಲಿ ಗೊತ್ತಾಗಲಿದೆ. ಆದರೆ ಅದಕ್ಕೂ ಮುನ್ನ ನಾಯಕನ ಸ್ಥಾನಕ್ಕೆ ಶ್ರೇಯಸ್ ಅಯ್ಯರ್ (Shreyas Iyer) ಅವರ ಹೆಸರು ಬಲವಾಗಿ ಕೇಳಿಬರುತ್ತಿದೆ.

ಶ್ರೇಯಸ್ ಅಯ್ಯರ್ ಟೀಂ ಇಂಡಿಯಾದ ಮುಂದಿನ ಟಿ20 ನಾಯಕರಾಗಲಿದ್ದು, ಈ ಬಗ್ಗೆ ಗುರುವಾರ ಅಧಿಕೃತ ಘೋಷಣೆ ಹೊರಬೀಳಬಹುದು ಎಂದು ವರದಿಯಾಗಿದೆ. ವರದಿಯ ಪ್ರಕಾರ, ಗುರುವಾರ ನಡೆಯಲಿರುವ ಬಿಸಿಸಿಐನ ಅಪೆಕ್ಸ್ ಕೌನ್ಸಿಲ್‌ನ ಆನ್‌ಲೈನ್ ಸಭೆಯಲ್ಲಿ ಶ್ರೇಯಸ್ ಅಯ್ಯರ್ ಅವರನ್ನು ಟಿ20 ನಾಯಕರನ್ನಾಗಿ ನೇಮಿಸುವ ಸಾಧತ್ಯೆಗಳಿವೆ.

ಶ್ರೇಯಸ್​ಗೆ ಟಿ20 ತಂಡದ ನಾಯಕತ್ವ

ಇನ್ನೊಂದು ವರದಿಯ ಪ್ರಕಾರ, ಟೀಂ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್, ಸಂಜು ಸ್ಯಾಮ್ಸನ್ ಅವರನ್ನು ಟಿ20 ನಾಯಕರನ್ನಾಗಿ ನೇಮಿಸುವ ಇರಾದೆಯಲ್ಲಿದ್ದರು. ಆದರೆ ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಇದಕ್ಕೆ ಒಪ್ಪಲಿಲ್ಲ ಎಂಬ ವರದಿಗಳಿವೆ. ಪರಸ್ಪರ ಒಪ್ಪಿಗೆಯ ಮೇರೆಗೆ, ಶ್ರೇಯಸ್ ಅಯ್ಯರ್ ಅವರನ್ನು ಭಾರತದ ಮುಂದಿನ ಟಿ20 ನಾಯಕನನ್ನಾಗಿ ನೇಮಿಸಲಾಗುತ್ತಿದೆ. ಹೀಗಾಗಿ ಅಯ್ಯರ್ ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸಗಳಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಈ ಎರಡೂ ಪ್ರವಾಸಗಳಿಗೆ ತಂಡದ ಆಯ್ಕೆ ಸಭೆಗಳು ಜೂನ್ 6 ರ ಶನಿವಾರ ನಡೆಯಲಿದ್ದು, ಶ್ರೇಯಸ್ ಅಯ್ಯರ್ ಹಾಜರಿರುವ ನಿರೀಕ್ಷೆಯಿದೆ.

ನಾಯಕನಾಗಿ ಅಯ್ಯರ್ ಪ್ರದರ್ಶನ

ಶ್ರೇಯಸ್ ಅಯ್ಯರ್ ಐಪಿಎಲ್‌ನ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರಾಗಿದ್ದು, 2018 ರಿಂದ ಐಪಿಎಲ್​ನ ಭಾಗವಾಗಿರುವ ಅಯ್ಯರ್ 101 ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದಾರೆ. ನಾಯಕನಾಗಿ 55 ಪಂದ್ಯಗಳನ್ನು ಗೆದ್ದಿರುವ ಅಯ್ಯರ್ 54.45 ರ ಗೆಲುವಿನ ಶೇಕಡಾವಾರು ಹೊಂದಿದ್ದಾರೆ. ಹಾಗೆಯೇ ಅಯ್ಯರ್ ನಾಯಕತ್ವದಲ್ಲಿ, ತಂಡವು 41 ಪಂದ್ಯಗಳನ್ನು ಸೋತಿದೆ, ಎರಡು ಪಂದ್ಯಗಳು ಟೈ ಆಗಿದ್ದರೆ, ಮೂರು ಪಂದ್ಯಗಳು ಡ್ರಾದೊಂದಿಗೆ ಕೊನೆಗೊಂಡಿವೆ. ಶ್ರೇಯಸ್ ಡೆಲ್ಲಿ ಕ್ಯಾಪಿಟಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳನ್ನು ಮುನ್ನಡೆಸಿದ್ದಾರೆ. ಹಾಗೆಯೇ ಅಯ್ಯರ್ ಅವರ ನಾಯಕತ್ವದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಐಪಿಎಲ್ 2024 ಪ್ರಶಸ್ತಿಯನ್ನು ಗೆದ್ದಿತು. ಇದಾದ ಬಳಿಕ 2025 ರ ಐಪಿಎಲ್‌ನಲ್ಲಿ ಅಯ್ಯರ್ ಪಂಜಾಬ್ ತಂಡವನ್ನು ಫೈನಲ್​ಗೇರಿಸಿದ್ದರು.

PBKS vs RCB: ಸತತ 5ನೇ ಪಂದ್ಯದಲ್ಲೂ ಫೇಲ್; ಆರ್​ಸಿಬಿ ವಿರುದ್ಧ ಯಶಸ್ಸಿನ ಹುಡುಕಾಟದಲ್ಲಿ ಶ್ರೇಯಸ್

ತಿಲಕ್​ಗೆ ಉಪನಾಯಕತ್ವ

ಮಾಧ್ಯಮ ವರದಿಗಳ ಪ್ರಕಾರ, ತಿಲಕ್ ವರ್ಮಾಗೆ ಉಪನಾಯತ್ವ ನೀಡುವುದು ಕೂಡ ಖಚಿತವಾಗಿದೆ. ಹೀಗಾಗಿ ತಿಲಕ್ ವರ್ಮಾ, ಅಕ್ಷರ್ ಪಟೇಲ್ ಬದಲಿಗೆ ತಂಡದ ಉಪನಾಯಕರಾಗಲಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:18 pm, Thu, 4 June 26

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ