AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೇಯಸ್ ಅಯ್ಯರ್​ಗೆ ನಾಯಕತ್ವ: ಏಕದಿನ ಸರಣಿಯಿಂದ ಔಟ್

2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಸೆಪ್ಟೆಂಬರ್ 19 ರಿಂದ ಅಕ್ಟೋಬರ್ 4 ರವರೆಗೆ ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯಲಿದೆ. ಕ್ರಿಕೆಟ್ ಪ್ರೇಮಿಗಳಲ್ಲಿ ತೀವ್ರ ಕುತೂಹಲ ಮೂಡಿಸಿರುವ ಟಿ20 ಕ್ರಿಕೆಟ್ ಪಂದ್ಯಗಳು ಸೆಪ್ಟೆಂಬರ್ 17 ರಿಂದಲೇ ಆರಂಭವಾಗಲಿವೆ. ಮೊದಲಿಗೆ ಮಹಿಳಾ ಟಿ20 ಟೂರ್ನಿ ಶುರುವಾಗಲಿದ್ದು, ಆ ಬಳಿಕ ಪುರುಷರ ಕ್ರಿಕೆಟ್ ಪಂದ್ಯಗಳು ಸೆಪ್ಟೆಂಬರ್ 24 ರಿಂದ ಅಕ್ಟೋಬರ್ 3ರವರೆಗೆ ಜಪಾನ್‌ನ ಕೊರೋಗಿ ಸ್ಪೋರ್ಟ್ಸ್ ಪಾರ್ಕ್‌ನಲ್ಲಿ ನಡೆಯಲಿವೆ.

ಶ್ರೇಯಸ್ ಅಯ್ಯರ್​ಗೆ ನಾಯಕತ್ವ: ಏಕದಿನ ಸರಣಿಯಿಂದ ಔಟ್
ಶ್ರೇಯಸ್ ಅಯ್ಯರ್Image Credit source: BCCI
ಝಾಹಿರ್ ಯೂಸುಫ್
|

Updated on: Sep 09, 2026 | 2:01 PM

Share

ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಹಾಗೂ ಕ್ರಿಕೆಟ್ ಪ್ರೇಮಿಗಳು ಅಪರೂಪದ ವೇಳಾಪಟ್ಟಿ ಸಂಘರ್ಷಕ್ಕೆ ಸಾಕ್ಷಿಯಾಗಲಿದ್ದಾರೆ. 2026ರ ಏಷ್ಯನ್ ಗೇಮ್ಸ್ ಪಂದ್ಯಾವಳಿ ಮತ್ತು ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿ ಏಕಕಾಲದಲ್ಲಿ ಎದುರಾಗಿರುವುದರಿಂದ, ಭಾರತ ಏಕದಿನ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ ವೆಸ್ಟ್ ಇಂಡೀಸ್ ವಿರುದ್ಧದ 3 ಪಂದ್ಯಗಳ ಸರಣಿಯಿಂದ ಸಂಪೂರ್ಣವಾಗಿ ಹೊರಗುಳಿಯಲಿದ್ದಾರೆ.

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್‌ನ ಟಿ20 ಕ್ರಿಕೆಟ್ ಸರಣಿಗೆ ಬಿಸಿಸಿಐ ಶ್ರೇಯಸ್ ಅಯ್ಯರ್ ಅವರನ್ನು ಭಾರತ ತಂಡದ ನಾಯಕನನ್ನಾಗಿ ನೇಮಿಸಿರುವುದು ಈ ಮಹತ್ವದ ಬದಲಾವಣೆಗೆ ಪ್ರಮುಖ ಕಾರಣವಾಗಿದೆ.

ಅಪರೂಪದ ಸರಣಿ ಸಂಘರ್ಷ:

2026ರ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಿನಲ್ಲಿ ಭಾರತೀಯ ಕ್ರಿಕೆಟ್ ಒಂದೇ ಸಮಯದಲ್ಲಿ ಎರಡು ವಿಭಿನ್ನ ದೇಶಗಳಲ್ಲಿ ಕಣಕ್ಕಿಳಿಯಬೇಕಾದ ಅನಿವಾರ್ಯತೆ ಎದುರಾಗಿದೆ.

  • ವೆಸ್ಟ್ ಇಂಡೀಸ್ ಏಕದಿನ ಸರಣಿ: ಸೆಪ್ಟೆಂಬರ್ 27 ರಿಂದ ಅಕ್ಟೋಬರ್ 3, 2026 ರವರೆಗೆ ಭಾರತದಲ್ಲಿ ನಡೆಯಲಿದೆ.
  • ಏಷ್ಯನ್ ಗೇಮ್ಸ್ ಕ್ರಿಕೆಟ್: ಸೆಪ್ಟೆಂಬರ್ ಕೊನೆಯ ವಾರದಿಂದ ಆರಂಭವಾಗಲಿದ್ದು, ಪದಕದ ಸುತ್ತಿನ (ಫೈನಲ್) ಪಂದ್ಯಗಳು ಅಕ್ಟೋಬರ್ 3, 2026 ರಂದು ಜಪಾನ್‌ನಲ್ಲಿ ನಡೆಯಲಿವೆ

ಒಂದು ವೇಳೆ ಶ್ರೇಯಸ್ ಅಯ್ಯರ್ ನೇತೃತ್ವದ ಟಿ20 ತಂಡವು ಏಷ್ಯನ್ ಗೇಮ್ಸ್‌ನಲ್ಲಿ ಫೈನಲ್ ತಲುಪಿದರೆ, ಬಿಸಿಸಿಐ ಅಕ್ಟೋಬರ್ 3 ರ ಒಂದೇ ದಿನ ಎರಡು ಸೀನಿಯರ್ ಭಾರತೀಯ ತಂಡಗಳನ್ನು (ಒಂದು ನ್ಯೂ ಚಂಡೀಗಢದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ, ಮತ್ತೊಂದು ಜಪಾನ್‌ನಲ್ಲಿ) ಮೈದಾನಕ್ಕಿಳಿಸಲಿದೆ.

ರುತುರಾಜ್‌ಗೆ ಚಾನ್ಸ್?

ಶ್ರೇಯಸ್ ಅಯ್ಯರ್ ಅಲಭ್ಯತೆಯಿಂದಾಗಿ ಭಾರತ ಏಕದಿನ ತಂಡದ ಅತ್ಯಂತ ಜವಾಬ್ದಾರಿಯುತ 4ನೇ ಕ್ರಮಾಂಕದ ಬ್ಯಾಟಿಂಗ್ ಸ್ಥಾನವು ತೆರವಾಗಲಿದೆ. ಸದ್ಯದ ಮಾಹಿತಿ ಪ್ರಕಾರ, ಭರವಸೆಯ ಬ್ಯಾಟರ್ ರುತುರಾಜ್ ಗಾಯಕ್ವಾಡ್ ಅವರಿಗೆ ಮಧ್ಯಮ ಕ್ರಮಾಂಕದಲ್ಲಿ ತಮ್ಮ ಬ್ಯಾಟಿಂಗ್ ಚಾಕಚಕ್ಯತೆಯನ್ನು ನಿರೂಪಿಸಲು ಬಿಸಿಸಿಐ ಈ ಸರಣಿಯಲ್ಲಿ ದೊಡ್ಡ ಜವಾಬ್ದಾರಿ ನೀಡುವ ಸಾಧ್ಯತೆ ದಟ್ಟವಾಗಿದೆ. ಹೀಗಾಗಿ, ಅಯ್ಯರ್ ಅವರ ಸ್ಥಾನದಲ್ಲಿ ರುತುರಾಜ್ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

ಇದನ್ನೂ ಓದಿ: ನ್ಯೂಝಿಲೆಂಡ್​ನಲ್ಲಿ ‘ಟೀಮ್ ಇಂಡಿಯಾ ಎಫೆಕ್ಟ್​’

ಏಷ್ಯನ್ ಗೇಮ್ಸ್​ಗೆ ಭಾರತ ಟಿ20 ತಂಡ: ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪಾನಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ನಿತೀಶ್ ಕುಮಾರ್ ರೆಡ್ಡಿ, ಜಸ್​ಪ್ರೀತ್ ಬುಮ್ರಾ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವರುಣ್ ಚಕ್ರವರ್ತಿ, ವೈಭವ್ ಸೂರ್ಯವಂಶಿ.

Follow Us
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ