AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shreyas Iyer: ವಾಟ್ ಎ ಕ್ಯಾಚ್: ಶ್ರೇಯಸ್ ಅಯ್ಯರ್ ಹಿಡಿದ ಅದ್ಭುತ ಕ್ಯಾಚ್ ವಿಡಿಯೋ ವೈರಲ್

Shreyas Iyer’s Catch: ಶ್ರೇಯಸ್ ಅಯ್ಯರ್ ಅವರ ಫೆಂಟಾಸ್ಟಿಕ್ ಕ್ಯಾಚ್ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೆ ಅದ್ಭುತ ಡೈವಿಂಗ್ ಕ್ಯಾಚ್ ಬಗ್ಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

Shreyas Iyer: ವಾಟ್ ಎ ಕ್ಯಾಚ್: ಶ್ರೇಯಸ್ ಅಯ್ಯರ್ ಹಿಡಿದ ಅದ್ಭುತ ಕ್ಯಾಚ್ ವಿಡಿಯೋ ವೈರಲ್
ಕ್ಯಾಚ್
TV9 Web
| Edited By: |

Updated on: Dec 04, 2021 | 5:37 PM

Share

ಭಾರತ-ನ್ಯೂಜಿಲೆಂಡ್ (India vs New Zealand) ನಡುವಣ 2ನೇ ಟೆಸ್ಟ್​ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಭರ್ಜರಿ ಬೌಲಿಂಗ್​ ಪ್ರದರ್ಶಿಸಿದೆ. ಮೊದಲ ಇನಿಂಗ್ಸ್​ನಲ್ಲಿ 325 ರನ್​ಗಳಿಗೆ ಆಲೌಟ್ ಆಗಿದ್ದ ಭಾರತ ತಂಡವು ನ್ಯೂಜಿಲೆಂಡ್ ತಂಡವನ್ನು ಕೇವಲ 62 ರನ್​ಗಳಿಗೆ ಕಟ್ಟಿಹಾಕಿರುವುದು ವಿಶೇಷ. ಟೀಮ್ ಇಂಡಿಯಾ ಪರ ರವಿಚಂದ್ರನ್ ಅಶ್ವಿನ್ 4 ವಿಕೆಟ್ ಪಡೆದರೆ, ಮೊಹಮ್ಮದ್ ಸಿರಾಜ್ 3 ವಿಕೆಟ್ ಉರುಳಿಸಿದ್ದರು. ಇನ್ನು ಅಕ್ಷರ್ ಪಟೇಲ್ 2 ಹಾಗೂ ಜಯಂತ್ ಯಾದವ್ 1 ವಿಕೆಟ್ ಪಡೆದರು. ಈ ಮೂಲಕ ಭಾರತದ ಬೌಲರುಗಳು ನ್ಯೂಜಿಲೆಂಡ್ ತಂಡವನ್ನು ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಕಡಿಮೆಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾಗಿದ್ದರು.

ಈ ಇನಿಂಗ್ಸ್​ನಲ್ಲಿ ಮೊದಲ ವಿಕೆಟ್​ ಮೊಹಮ್ಮದ್ ಸಿರಾಜ್ ಉರುಳಿಸಿದರೆ, ಕೊನೆಯ ವಿಕೆಟ್ ಅಕ್ಷರ್ ಪಟೇಲ್ ಪಡೆದಿದ್ದರು. ಅದರಲ್ಲೂ ಅಂತಿಮ ವಿಕೆಟ್​ ಪಡೆದಿರುವುದು ಅದ್ಭುತವಾಗಿ ಎಂಬುದು ವಿಶೇಷ. ನ್ಯೂಜಿಲೆಂಡ್ ತಂಡವು 62 ರನ್​ಗಳಿಗೆ 9 ವಿಕೆಟ್ ಕಳೆದುಕೊಂಡಿದ್ದ ವೇಳೆ ಕೈಲ್ ಜೇಮಿಸನ್ ಹಾಗೂ ಎಜಾಝ್ ಪಟೇಲ್ ಕ್ರೀಸ್​ನಲ್ಲಿದ್ದರು.

ಈ ವೇಳೆ ದಾಳಿಗಿಳಿದ ಅಕ್ಷರ್ ಪಟೇಲ್ ಎಸೆತದಲ್ಲಿ ಕೈಲ್ ಜೇಮಿಸನ್ ಭರ್ಜರಿ ಹೊಡೆತಕ್ಕೆ ಮುಂದಾದರು. ಆದರೆ ಬ್ಯಾಟ್​ ಬದಿಗೆ ತಗುಲಿದ ಚೆಂಡು ವಿಕೆಟ್ ಕೀಪರ್​ನತ್ತ ಮುನ್ನುಗ್ಗಿತು. ಆದರೆ ವಿಕೆಟ್ ಕೀಪರ್ ಸಾಹ ಚೆಂಡನ್ನು ಗುರುತಿಸುವಲ್ಲಿ ಎಡವಿದರು. ಚೆಂಡು ಸಾಹ ಕಾಲಿಗೆ ತಗುಲಿ ಚಿಮ್ಮಿತು. ಅತ್ತ ಸಿಲ್ಲಿ ಪಾಯಿಂಟ್​ನಲ್ಲಿ ಫೀಲ್ಡಿಂಗ್​ನಲ್ಲಿದ್ದ ಶ್ರೇಯಸ್ ಅಯ್ಯರ್ ಕ್ಷಣಾರ್ಧದಲ್ಲೇ ಚೆಂಡನ್ನು ಗುರುತಿಸಿ ಅದ್ಭುತವಾಗಿ ಡೈವ್ ಹೊಡೆದರು. ಅಷ್ಟೇ ಅಲ್ಲದೆ ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿಯುವ ಮೂಲಕ ಜೇಮಿಸನ್ ಔಟ್ ಆಗಲು ಪ್ರಮುಖ ಕಾರಣರಾದರು. ಅದರಂತೆ ನ್ಯೂಜಿಲೆಂಡ್ ತಂಡವು ಕೇವಲ 62 ರನ್​ಗಳಿಗೆ ಇನಿಂಗ್ಸ್​ ಅಂತ್ಯಗೊಳಿಸುವಂತಾಯಿತು.

ಶ್ರೇಯಸ್ ಅಯ್ಯರ್ ಅವರ ಫೆಂಟಾಸ್ಟಿಕ್ ಕ್ಯಾಚ್ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೆ ಅದ್ಭುತ ಡೈವಿಂಗ್ ಕ್ಯಾಚ್ ಬಗ್ಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: IPL 2022: ದುಡ್ಡಿಗಿಂತ RCB ತಂಡವೇ ಮುಖ್ಯ: ವಿರಾಟ್ ಕೊಹ್ಲಿಗೆ ಅಭಿಮಾನಿಗಳಿಂದ ಬಹುಪರಾಕ್

ಇದನ್ನೂ ಓದಿ: 8 ಫ್ರಾಂಚೈಸಿ ಉಳಿಸಿಕೊಂಡ ಆಟಗಾರರ ಪಟ್ಟಿ ಹೀಗಿದೆ

ಇದನ್ನೂ ಓದಿ: IPL 20222: ಇವರೇ RCB ತಂಡದ ಮುಂದಿನ ಕ್ಯಾಪ್ಟನ್ ಎಂದ ಮಾಜಿ ಆರ್​ಸಿಬಿ ನಾಯಕ

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ