AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shreyas Iyer: ತಂಡದಿಂದ ಶ್ರೇಯಸ್ ಅಯ್ಯರ್ ಔಟ್?

India vs England Test Series: ಶ್ರೇಯಸ್ ಅಯ್ಯರ್ ಅವರನ್ನು ಇಂಗ್ಲೆಂಡ್ ಪ್ರವಾಸಕ್ಕೆ ಆಯ್ಕೆ ಮಾಡಲಾಗುವುದಿಲ್ಲ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಇದಕ್ಕೆ ಕಾರಣವನ್ನೂ ನೀಡಲಾಗಿದ್ದು, ಅವರು ಇನ್ನೂ ತಮ್ಮ ಕೆಂಪು ಚೆಂಡಿನ ಆಟದಲ್ಲಿ ಕೆಲಸ ಮಾಡಬೇಕಾಗಿದೆ. ಅಯ್ಯರ್ ಏಕದಿನ ಮಾದರಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ ಆದರೆ ಟೆಸ್ಟ್ ಕ್ರಿಕೆಟ್ ಬೇರೆಯದೇ ಆಟ ಎಂದು ಹೇಳಿದ್ದಾರೆ.

Shreyas Iyer: ತಂಡದಿಂದ ಶ್ರೇಯಸ್ ಅಯ್ಯರ್ ಔಟ್?
Shreyas Iyer (1)
Vinay Bhat
|

Updated on: May 17, 2025 | 9:42 AM

Share

ಬೆಂಗಳೂರು (ಮೇ. 17): ಒಂದೆಡೆ ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಪಂಜಾಬ್ ಕಿಂಗ್ಸ್ ಐಪಿಎಲ್ 2025 ರಲ್ಲಿ (IPL 2025) ಪ್ರಾಬಲ್ಯ ಸಾಧಿಸುತ್ತಿದ್ದರೆ, ಮತ್ತೊಂದೆಡೆ ಅವರ ಬಗ್ಗೆ ಬೇಸರದ ಸುದ್ದಿ ಹೊರಬಿದ್ದಿದೆ. ಶ್ರೇಯಸ್ ಅಯ್ಯರ್ ಅವರಿಗೆ ಟೀಮ್ ಇಂಡಿಯಾದಲ್ಲಿ ಸ್ಥಾನ ಸಿಗುವುದಿಲ್ಲ ಎಂಬ ವರದಿಗಳಿವೆ. ಬಿಸಿಸಿಐ ಮೂಲಗಳ ಪ್ರಕಾರ, ಶ್ರೇಯಸ್ ಅಯ್ಯರ್ ಅವರನ್ನು ಇಂಗ್ಲೆಂಡ್ ಪ್ರವಾಸಕ್ಕೆ ಆಯ್ಕೆ ಮಾಡಲಾಗುವುದಿಲ್ಲ. ಅಲ್ಲದೆ ಅವರಿಗೆ ಭಾರತ-ಎ ತಂಡದಲ್ಲೂ ಸ್ಥಾನ ಸಿಗುವುದಿಲ್ಲ. ಭಾರತಕ್ಕಾಗಿ ಮೂರು ಸ್ವರೂಪಗಳನ್ನು ಆಡಿರುವ ಇಂತಹ ಮಹಾನ್ ಬ್ಯಾಟ್ಸ್‌ಮನ್‌ನನ್ನು ಟೀಮ್ ಇಂಡಿಯಾ ಮತ್ತು ಬಿಸಿಸಿಐ ಈ ಬಾರಿ ಕೈಬಿಡಲು ಮುಂದಾಗಿದೆ ಎನ್ನಲಾಗಿದೆ.

ಶ್ರೇಯಸ್ ಅಯ್ಯರ್ ಟೆಸ್ಟ್ ತಂಡದಿಂದ ಔಟ್?:

ದಿ ಟೆಲಿಗ್ರಾಫ್‌ನಲ್ಲಿ ಪ್ರಕಟವಾದ ವರದಿಯ ಪ್ರಕಾರ, ಶ್ರೇಯಸ್ ಅಯ್ಯರ್ ಅವರನ್ನು ಇಂಗ್ಲೆಂಡ್ ಪ್ರವಾಸಕ್ಕೆ ಆಯ್ಕೆ ಮಾಡಲಾಗುವುದಿಲ್ಲ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಇದಕ್ಕೆ ಕಾರಣವನ್ನೂ ನೀಡಲಾಗಿದ್ದು, ಅವರು ಇನ್ನೂ ತಮ್ಮ ಕೆಂಪು ಚೆಂಡಿನ ಆಟದಲ್ಲಿ ಕೆಲಸ ಮಾಡಬೇಕಾಗಿದೆ. ಅಯ್ಯರ್ ಏಕದಿನ ಮಾದರಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ ಆದರೆ ಟೆಸ್ಟ್ ಕ್ರಿಕೆಟ್ ಬೇರೆಯದೇ ಆಟ. ಇಂಗ್ಲೆಂಡ್‌ನಲ್ಲಿ ಶಾರ್ಟ್ ಬಾಲ್ ಅಷ್ಟು ದೊಡ್ಡ ಸಮಸ್ಯೆಯಲ್ಲ ಆದರೆ ಚೆಂಡು ಅಲ್ಲಿ ಸ್ವಿಂಗ್ ಆಗುತ್ತದೆ, ಆದ್ದರಿಂದ ಚೆಂಡನ್ನು ಬಿಡುವುದು ಬಹಳ ಮುಖ್ಯ. ಅಯ್ಯರ್ ಆಕ್ರಮಣಕಾರಿ ಆಟಗಾರ ಮತ್ತು ಅವರು ವೇಗವಾಗಿ ರನ್ ಗಳಿಸಲು ಪ್ರಯತ್ನಿಸುತ್ತಾರೆ. ಹಾಗಾಗಿ ಇಂಗ್ಲೆಂಡ್‌ನಲ್ಲಿ ಅವರಿಗೆ ಸಮಸ್ಯೆ ಆಗಬಹುದು ಎಂದು ಹೇಳಲಾಗಿದೆ.

ಕೆಂಪು ಚೆಂಡಿನೊಂದಿಗೆ ಅಯ್ಯರ್ ಪ್ರದರ್ಶನ:

ಶ್ರೇಯಸ್ ಅಯ್ಯರ್ ಇದುವರೆಗೆ ಟೀಮ್ ಇಂಡಿಯಾ ಪರ 14 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಈ ಆಟಗಾರ 36.86 ಸರಾಸರಿಯಲ್ಲಿ 811 ರನ್ ಗಳಿಸಿದ್ದಾರೆ. ಅಯ್ಯರ್ ಟೆಸ್ಟ್ ಕ್ರಿಕೆಟ್‌ನಲ್ಲಿ ಒಂದು ಶತಕ ಮತ್ತು ಐದು ಅರ್ಧಶತಕಗಳನ್ನು ಗಳಿಸಿದ್ದಾರೆ. ಟೆಸ್ಟ್ ಕ್ರಿಕೆಟ್​ನಲ್ಲಿ ಅವರ ಫಾರ್ಮ್ ಬಗ್ಗೆ ಹೇಳುವುದಾದರೆ, ಈ ಆಟಗಾರ ಕಳೆದ ರಣಜಿ ಋತುವಿನಲ್ಲಿ ತಮ್ಮ ಶಕ್ತಿಯನ್ನು ತೋರಿಸಿದ್ದಾರೆ. 2024-25ರ ರಣಜಿ ಟ್ರೋಫಿ ಋತುವಿನಲ್ಲಿ ಮುಂಬೈ ಪರ ಶ್ರೇಯಸ್ ಅಯ್ಯರ್ 5 ಪಂದ್ಯಗಳಲ್ಲಿ 480 ರನ್ ಗಳಿಸಿದ್ದರು. ಅವರ ಸರಾಸರಿ 68 ಕ್ಕಿಂತ ಹೆಚ್ಚು. ಈ ಅವಧಿಯಲ್ಲಿ, ಅಯ್ಯರ್ 2 ಅತ್ಯುತ್ತಮ ಶತಕಗಳನ್ನು ಗಳಿಸಿದರು. ರಣಜಿ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ನಂತರವೂ, ಬಿಸಿಸಿಐ ಅಥವಾ ಆಯ್ಕೆದಾರರು ಅಯ್ಯರ್ ಅವರಿಗೆ ಕೆಂಪು ಚೆಂಡಿನ ಕ್ರಿಕೆಟ್ ಆಡುವ ಸಾಮರ್ಥ್ಯವಿಲ್ಲ ಎಂದು ಭಾವಿಸುತ್ತ ಎಂಬುದು ಕೆಲವೇ ದಿನಗಳಲ್ಲಿ ತಿಳಿದುಬರಲಿದೆ.

ಇದನ್ನೂ ಓದಿ
Image
ಐಪಿಎಲ್ ಮರುಪ್ರಾರಂಭದ ಮೊದಲ ಪಂದ್ಯಕ್ಕೆ ಆರ್‌ಸಿಬಿ ಪ್ಲೇಯಿಂಗ್ XI
Image
8 ಆಫ್ರಿಕಾ ಆಟಗಾರರು ಲೀಗ್ ಹಂತದ ನಂತರ ದೇಶಕ್ಕೆ ವಾಪಸ್
Image
ಇಂಗ್ಲೆಂಡ್ ಪ್ರವಾಸಕ್ಕೆ ಭಾರತ ಎ ತಂಡವನ್ನು ಪ್ರಕಟಿಸಿದ ಬಿಸಿಸಿಐ
Image
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ

RCB vs KKR, IPL 2025: ಯಾರು ಇನ್, ಯಾರಿಗೆ ಸ್ಥಾನ?: ಐಪಿಎಲ್ ಮರುಪ್ರಾರಂಭದ ಮೊದಲ ಪಂದ್ಯಕ್ಕೆ ಆರ್‌ಸಿಬಿ ಪ್ಲೇಯಿಂಗ್ XI ಹೇಗಿರಲಿದೆ?

ಈಗಾಗಲೇ ಇಂಗ್ಲೆಂಡ್ ಪ್ರವಾಸಕ್ಕೆ ಭಾರತ-ಎ ತಂಡ ಪ್ರಕಟವಾಗಿದೆ. ನಾಯಕತ್ವವನ್ನು ಅನುಭವಿ ಬ್ಯಾಟ್ಸ್‌ಮನ್ ಅಭಿಮನ್ಯು ಈಶ್ವರನ್ ಅವರಿಗೆ ವಹಿಸಲಾಗಿದ್ದು, ನಿರೀಕ್ಷೆಯಂತೆ ಕನ್ನಡಿಗ ಕರುಣ್ ನಾಯರ್​ಗೆ ಈ ತಂಡದಲ್ಲಿ ಅವಕಾಶ ನೀಡಲಾಗಿದೆ. ಇವರಲ್ಲದೆ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಕೂಡ ತಂಡಕ್ಕೆ ಮರಳಿದ್ದಾರೆ.

ಇಂಗ್ಲೆಂಡ್ ಪ್ರವಾಸಕ್ಕೆ ಭಾರತ-ಎ ತಂಡ:

ಅಭಿಮನ್ಯು ಈಶ್ವರನ್ (ನಾಯಕ), ಯಶಸ್ವಿ ಜೈಸ್ವಾಲ್, ಕರುಣ್ ನಾಯರ್, ಧ್ರುವ್ ಜುರೆಲ್ (ಉಪನಾಯಕ ಮತ್ತು ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ಶಾರ್ದೂಲ್ ಠಾಕೂರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಮಾನವ್ ಸುತಾರ್, ಶಮ್ಸ್ ಮುಲಾನಿ, ಮುಕೇಶ್ ಕುಮಾರ್, ಆಕಾಶ್ ದೀಪ್, ರುತುರಾಜ್ ಗಾಯಕ್ವಾಡ್, ಸರ್ಫರಾಜ್ ಖಾನ್, ಹರ್ಷಿತ್ ರಾಣಾ, ತುಷಾರ್ ದೇಶಪಾಂಡೆ, ಹರ್ಷ್ ದುಬೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ