AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PBKS vs RCB: ಇದು ನಾಚಿಕೆಗೇಡು… ಶ್ರೇಯಸ್ ಅಯ್ಯರ್ ಸಹೋದರಿ ಆಕ್ರೋಶ..!

IPL 2025 PBKS vs RCB: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 37ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 157 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 18.5 ಎಸೆತಗಳಲ್ಲಿ ಗುರಿ ಮುಟ್ಟುವ ಮೂಲಕ ಭರ್ಜರಿ ಜಯ ಸಾಧಿಸಿದೆ.

PBKS vs RCB: ಇದು ನಾಚಿಕೆಗೇಡು... ಶ್ರೇಯಸ್ ಅಯ್ಯರ್ ಸಹೋದರಿ ಆಕ್ರೋಶ..!
Shresta Iyer
Follow us
ಝಾಹಿರ್ ಯೂಸುಫ್
|

Updated on: Apr 21, 2025 | 11:30 AM

IPL 2025: ಮಾರ್ಚ್ 20 ರಂದು ನಡೆದ ಐಪಿಎಲ್​ನ 37ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಪಂಜಾಬ್ ಕಿಂಗ್ಸ್ (PBKS) ತಂಡ ಸೋಲನುಭವಿಸಿದೆ. ಈ ಸೋಲಿನ ಬೆನ್ನಲ್ಲೇ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಅವರ ಸಹೋದರಿ ಶ್ರೇಷ್ಠಾ ಅಯ್ಯರ್ ವಿರುದ್ಧ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಮುಗಿಬಿದ್ದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತನ್ನ ಕುಟುಂಬದವರನ್ನು ಗುರಿಯಾಗಿಸಿದವರ ವಿರುದ್ಧ ಶ್ರೇಷ್ಠಾ ಅಯ್ಯರ್ ಪೋಸ್ಟ್ ಹಂಚಿಕೊಳ್ಳುವ ಮೂಲಕ ಆಕ್ರೋಶವನ್ನು ಹೊರಹಾಕಿದ್ದಾರೆ.

ಶ್ರೇಷ್ಠಾ ಅಯ್ಯರ್ ಹೇಳಿದ್ದೇನು?

ಪಂಜಾಬ್ ಕಿಂಗ್ಸ್ ತಂಡದ ಸೋಲಿನ ಬೆನ್ನಲ್ಲೇ ಇನ್​ಸ್ಟಾಗ್ರಾಮ್ ಸ್ಟೋರಿ ಹಂಚಿಕೊಂಡಿರುವ ಶ್ರೇಷ್ಠಾ, ಈ ಪರಾಜಯಕ್ಕೆ ನಮ್ಮ ಕುಟುಂಬವನ್ನು ದೂಷಿಸುತ್ತಿದ್ದಾರೆ. ನಿಜಕ್ಕೂ ಇದು ತುಂಬಾ ದುಃಖಕರ ವಿಷಯ. ನಾವು ದೈಹಿಕವಾಗಿ ಅಲ್ಲಿ ಇದ್ದರೂ ಅಥವಾ ಇಲ್ಲದಿದ್ದರೂ, ಪಂಜಾಬ್ ಕಿಂಗ್ಸ್​ ತಂಡಕ್ಕೆ ನಮ್ಮ ಬೆಂಬಲಕ್ಕೆ ಸಾಟಿಯಿಲ್ಲ.

ಇದನ್ನೂ ಓದಿ
Image
PSL 2025: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ RCB ಮಾಜಿ ಆಟಗಾರರು
Image
ಪ್ರಿಯಾಂಶ್ ಆರ್ಯನ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್
Image
ಕ್ರಿಸ್​ ಗೇಲ್ ದಾಖಲೆ ಜಸ್ಟ್ ಮಿಸ್: ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ
Image
ಉಲ್ಟಾ ಹೊಡೆದ RCB ಕಪ್ ಗೆಲ್ಲಬಾರದು ಎಂದಿದ್ದ ಅಂಬಾಟಿ ರಾಯುಡು

ಇದೀಗ ಸೋಲಿಗೆ ನನ್ನನ್ನೇ ದೂಷಿಸುತ್ತಿರುವವರೇ, ನಿಮ್ಮ ಆಲೋಚನೆ ನಗೆಪಾಟಲಿಗೆ ಈಡಾಗಿಸುವಂತಿದೆ. ಅಲ್ಲದೆ ನಾಚಿಕೆಗೇಡಿನ ಸಂಗತಿಯೂ ಆಗಿದೆ. ನಾನು ಈ ಹಿಂದೆ ಹಲವು ಪಂದ್ಯಗಳ ವೇಳೆ ಕಾಣಿಸಿಕೊಂಡಿದ್ದೇನೆ. ಅದು ಟೀಮ್ ಇಂಡಿಯಾ ಆಗಿರಲಿ ಅಥವಾ ಬೇರೆ ಯಾವುದೇ ಪಂದ್ಯವಾಗಿರಲಿ. ಈ ವೇಳೆ ನಾವು ಹೆಚ್ಚಿನದನ್ನು ಗೆದ್ದಿದ್ದೇವೆ. ನಿಮಗೆ ಸತ್ಯ ಬೇಕಿಲ್ಲ. ತೆರೆಮರೆಯಲ್ಲಿ ನಿಂತು ಟ್ರೋಲ್ ಮಾಡುವುದಷ್ಟೇ ನಿಮ್ಮ ಕೆಲಸವೆಂದು ಭಾವಿಸುತ್ತೇನೆ.

ನಾನು ಯಾವಾಗಲೂ ನನ್ನ ಸಹೋದರ ಮತ್ತು ಅವನ ತಂಡಕ್ಕೆ ಸಂಪೂರ್ಣ ಬೆಂಬಲ ಸೂಚಿಸುತ್ತೇನೆ.  ನಿಮ್ಮ ಅಸಂಬದ್ಧ ಹೇಳಿಕೆಗಳು ನನ್ನಲ್ಲಿ ಯಾವುದೇ ವ್ಯತ್ಯಾಸವನ್ನುಂಟು ಮಾಡುವುದಿಲ್ಲ. ಇದು ನಿಮ್ಮ ಉದ್ದೇಶವನ್ನು ತೋರಿಸುತ್ತದೆ. ತಂಡ ಗೆದ್ದರೂ ಸೋತರೂ ನನ್ನ ಬೆಂಬಲ ಅದರೊಂದಿಗಿದೆ. ಇದು ನಿಜವಾದ ಸಪೋರ್ಟ್​.

ಶ್ರೇಷ್ಠಾ ಅಯ್ಯರ್ ವಿಡಿಯೋ:

ಇವತ್ತು ಪಂಜಾಬ್ ಕಿಂಗ್ಸ್ ತಂಡದ ದಿನವಾಗಿರಲಿಲ್ಲ. ಆದರೆ ಗೆಲುವು ಮತ್ತು ಸೋಲು ಆಟದ ಒಂದು ಭಾಗ. ಆನ್‌ಲೈನ್‌ನಲ್ಲಿ ಟ್ರೋಲ್ ಮಾಡುವುದನ್ನು ಬಿಟ್ಟು ಬೇರೆ ಏನನ್ನಾದರೂ ಮಾಡುವ ಅಥವಾ ತಿಳಿದುಕೊಳ್ಳುವ ಬಗ್ಗೆ ನೀವು ಯೋಚಿಸಿ. ಆಗ ಮಾತ್ರ ನಿಮಗೆ ಕೆಲ  ವಿಷಯಗಳು ಅರ್ಥವಾಗುತ್ತವೆ. ಹಾಗಾಗಿ ಮುಂದಿನ ಬಾರಿ ಇಂತಹ ಕೆಲಸವನ್ನು ಮಾಡುವ ಮೊದಲು, ಯಾರು ಏನು ಮಾಡ್ತಿದ್ದಾರೆ, ಏನು ಮಾಡ್ತಿಲ್ಲ ಎಂಬುದನ್ನು ಎರಡು ಬಾರಿ ಯೋಚಿಸಿ ಇಂತಹ ಕಾಯಕಕ್ಕೆ ಕೈ ಹಾಕಿ ಎಂದು ಶ್ರೇಷ್ಠಾ ಅಯ್ಯರ್ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು:

ಮುಲ್ಲನ್​ಪುರ್​ನ ಎಂವೈಎಸ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 156 ರನ್ ಕಲೆಹಾಕಿತು.

ಇದನ್ನೂ ಓದಿ: VIDEO: RCB ಅಭಿಮಾನಿಗಳ ಗಮನಕ್ಕೆ: ನೀವು ಸುಳ್ಳಿಗೆ ಮರುಳಾಗಿದ್ದೀರಿ

ಈ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 18.5 ಓವರ್​ಗಳಲ್ಲಿ 159 ರನ್ ಬಾರಿಸಿ 7 ವಿಕೆಟ್​ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್​ಸಿಬಿ ತಂಡ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದೆ.

ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ