AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG 3rd Test: ಲಾರ್ಡ್ಸ್ ಟೆಸ್ಟ್ ಪಂದ್ಯದ ಆರಂಭದಲ್ಲಿ ಟೀಮ್ ಇಂಡಿಯಾಗೆ ಕೆಟ್ಟ ಸುದ್ದಿ

England vs India 3rd Test Toss: ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತದ ನಾಯಕ ಶುಭ್ಮನ್ ಗಿಲ್ ಟಾಸ್ ಸೋತರು. ಗಿಲ್ ಟಾಸ್ ಸೋತ ನಂತರ, ಭಾರತ ಹೊಸ ದಾಖಲೆಯನ್ನು ಸೃಷ್ಟಿಸಿದೆ. ಅಚ್ಚರಿಯ ವಿಷಯವೆಂದರೆ ಈ ದಾಖಲೆ ಟೀಮ್ ಇಂಡಿಯಾಕ್ಕೆ ತುಂಬಾ ಕೆಟ್ಟದಾಗಿದೆ.

IND vs ENG 3rd Test: ಲಾರ್ಡ್ಸ್ ಟೆಸ್ಟ್ ಪಂದ್ಯದ ಆರಂಭದಲ್ಲಿ ಟೀಮ್ ಇಂಡಿಯಾಗೆ ಕೆಟ್ಟ ಸುದ್ದಿ
Eng Vs Ind Toss
ಮಾಲಾಶ್ರೀ ಅಂಚನ್​
| Edited By: |

Updated on:Jul 16, 2025 | 6:36 PM

Share

ಬೆಂಗಳೂರು (ಜು. 10): ಪ್ರತಿಷ್ಠಿತ ಲಾರ್ಡ್ಸ್ ಮೈದಾನದಲ್ಲಿ ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯ ನಡೆಯುತ್ತಿದೆ. ಇದರಲ್ಲಿ ಟೀಮ್ ಇಂಡಿಯಾ (Team India) ಉತ್ತಮ ಆರಂಭವನ್ನು ಮಾಡಿದೆ. ಆದರೆ, ಲಾರ್ಡ್ಸ್ ಟೆಸ್ಟ್ ಪಂದ್ಯದ ಆರಂಭದಲ್ಲಿ ಟೀಮ್ ಇಂಡಿಯಾಗೆ ಕೆಟ್ಟ ಸುದ್ದಿಯೊಂದು ಬಂದಿತು. ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತದ ನಾಯಕ ಶುಭ್​ಮನ್ ಗಿಲ್ ಟಾಸ್ ಸೋತರು. ಗಿಲ್ ಟಾಸ್ ಸೋತ ನಂತರ, ಭಾರತ ಹೊಸ ದಾಖಲೆಯನ್ನು ಸೃಷ್ಟಿಸಿದೆ. ಅಚ್ಚರಿಯ ವಿಷಯವೆಂದರೆ ಈ ದಾಖಲೆ ಟೀಮ್ ಇಂಡಿಯಾಕ್ಕೆ ತುಂಬಾ ಕೆಟ್ಟದಾಗಿದೆ.

ನಿರಂತರವಾಗಿ ಟಾಸ್ ಸೋಲುತ್ತಿರುವ ಟೀಮ್ ಇಂಡಿಯಾ

ಜನವರಿ 31, 2025 ರಿಂದ ಭಾರತ ಸತತ 13 ಬಾರಿ ಟಾಸ್ ಸೋತಿದೆ. ಇದಕ್ಕೂ ಮೊದಲು, ಈ ದಾಖಲೆ ವೆಸ್ಟ್ ಇಂಡೀಸ್ ಹೆಸರಿನಲ್ಲಿತ್ತು. ಫೆಬ್ರವರಿ 2, 1999 ಮತ್ತು ಏಪ್ರಿಲ್ 21, 1999 ರ ನಡುವೆ ವೆಸ್ಟ್ ಇಂಡೀಸ್ ಸತತ 12 ಟಾಸ್ ಸೋತಿದೆ. ಈ ಪಟ್ಟಿಯಲ್ಲಿ ಇಂಗ್ಲೆಂಡ್ ಮೂರನೇ ಸ್ಥಾನದಲ್ಲಿದೆ. ಡಿಸೆಂಬರ್ 17, 2022 ಮತ್ತು ಮಾರ್ಚ್ 12, 2023 ರ ನಡುವೆ ಇಂಗ್ಲೆಂಡ್ ಸತತ 11 ಟಾಸ್ ಸೋತಿದೆ.

ಟಾಸ್ ಗೆದ್ದ ಬೆನ್ ಸ್ಟೋಕ್ಸ್

ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಲಂಡನ್‌ನಲ್ಲಿ ಹವಾಮಾನ ತುಂಬಾ ಚೆನ್ನಾಗಿದೆ, ಬಿಸಿಲು ಶುರುವಾಗಿದೆ. ಎರಡೂ ತಂಡಗಳು ತಮ್ಮ ಆಡುವ XI ನಲ್ಲಿ ತಲಾ ಒಂದು ಬದಲಾವಣೆಯನ್ನು ಮಾಡಿವೆ. ಜೋಶ್ ಟಂಗ್ ಬದಲಿಗೆ ಇಂಗ್ಲೆಂಡ್ ತಂಡವು ಜೋಫ್ರಾ ಆರ್ಚರ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಅದೇ ಸಮಯದಲ್ಲಿ, ಪ್ರಸಿದ್ಧ್ ಕೃಷ್ಣ ಬದಲಿಗೆ ಜಸ್ಪ್ರೀತ್ ಬುಮ್ರಾ ಅವರನ್ನು ಭಾರತ ತಂಡಕ್ಕೆ ಸೇರಿಸಿಕೊಂಡಿದೆ.

ಇದನ್ನೂ ಓದಿ
Image
ದಿಢೀರನೆ ಇಂಗ್ಲೆಂಡ್ ತಲುಪಿದ ರೋಹಿತ್ ಶರ್ಮಾ: ವೈರಲ್ ಆಗುತ್ತಿದೆ ಫೋಟೋ
Image
ಒಂದೇ ಓವರ್​ನಲ್ಲಿ 3 ವಿಕೆಟ್ ಪಡೆಯುವ ಅವಕಾಶ ಕೈಚೆಲ್ಲಿದ ಗಿಲ್
Image
ಟಾಸ್ ಗೆದ್ದ ಇಂಗ್ಲೆಂಡ್‌; ಉಭಯ ತಂಡಗಳಲ್ಲಿ ಒಂದೊಂದು ಬದಲಾವಣೆ
Image
IND vs ENG: ಲಾರ್ಡ್ಸ್​ನಲ್ಲಿ ನಂಬರ್ ಒನ್​ಗಳ ಮುಖಾಮುಖಿ

Rohit Sharma: ದಿಢೀರನೆ ಇಂಗ್ಲೆಂಡ್ ತಲುಪಿದ ರೋಹಿತ್ ಶರ್ಮಾ: ವೈರಲ್ ಆಗುತ್ತಿದೆ ಫೋಟೋ

ಭಾರತಕ್ಕೆ ಭರ್ಜರಿ ಆರಂಭ

ಟಾಸ್ ಸೋತ ನಂತರ, ಗಿಲ್ ಟಾಸ್ ಗೆದ್ದಿದ್ದರೆ ಏನು ಮಾಡುತ್ತಿದ್ದೆನೋ ಎಂಬ ಚಿಂತೆಯಲ್ಲಿದ್ದರು ಎಂದು ಹೇಳಿದರು. ಬಳಿಕ ಟಾಸ್ ಗೆದ್ದಿದ್ದರೆ ಮೊದಲು ಬೌಲಿಂಗ್ ಮಾಡುತ್ತಿದ್ದೆ ಎಂದು ಹೇಳಿದರು. ಬ್ಯಾಟಿಂಗ್​ಗೆ ಬಂದ ಇಂಗ್ಲೆಂಡ್ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಇಂಗ್ಲೆಂಡ್‌ನ ಆರಂಭಿಕ ಬ್ಯಾಟ್ಸ್‌ಮನ್‌ಗಳಾದ ಬೆನ್ ಡಕೆಟ್ ಮತ್ತು ಜ್ಯಾಕ್ ಕ್ರೌಲಿ ಆರಂಭದಲ್ಲಿ ಎಚ್ಚರಿಕೆಯಿಂದ ಆಡಿದರು. ಆದರೆ ನಂತರ ನಿತೀಶ್ ಕುಮಾರ್ ರೆಡ್ಡಿ 13 ನೇ ಓವರ್‌ನಲ್ಲಿ ಇಬ್ಬರನ್ನೂ ಔಟ್ ಮಾಡಿದರು.

ಒಂದೇ ಓವರ್​ನಲ್ಲಿ ಎರಡು ವಿಕೆಟ್ ಕೀಳುವ ಮೂಲಕ ನಿತೀಶ್ ಕುಮಾರ್ ರೆಡ್ಡಿ ವಿಶೇಷ ಸಾಧನೆ ಕೂಡ ಮಾಡಿದ್ದಾರೆ. 2002 ರಿಂದ ಸುಮಾರು 23 ವರ್ಷಗಳಲ್ಲಿ ಭಾರತದ ವೇಗಿಯೊಬ್ಬರು ಪಂದ್ಯದ ಮೊದಲ ಓವರ್‌ನಲ್ಲಿ ಎರಡು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿರುವುದು ಇದು ಎರಡನೇ ಬಾರಿ. 2006 ರ ಆರಂಭದಲ್ಲಿ, ಇರ್ಫಾನ್ ಪಠಾಣ್ ಕರಾಚಿಯಲ್ಲಿ ಪಾಕಿಸ್ತಾನ ವಿರುದ್ಧ ಈ ಸಾಧನೆ ಮಾಡಿದ್ದರು. ಇರ್ಫಾನ್ ಮೂರು ವಿಕೆಟ್‌ಗಳನ್ನು ಪಡೆದು ಹ್ಯಾಟ್ರಿಕ್ ಅನ್ನು ಸಹ ಪೂರ್ಣಗೊಳಿಸಿದರು. ಈ ಬಾರಿ ನಿತೀಶ್ ಕುಮಾರ್ ರೆಡ್ಡಿ ಎರಡು ವಿಕೆಟ್‌ಗಳನ್ನು ಪಡೆದು ಸಾಧನೆ ಮಾಡಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:28 pm, Thu, 10 July 25

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ