AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GT vs RR, IPL 2025: ಟೇಬಲ್ ಟಾಪರ್ ಆದ ಗಿಲ್ ಪಡೆ: ಪೋಸ್ಟ್ ಮ್ಯಾಚ್​ನಲ್ಲಿ ಶುಭ್​ಮನ್ ಆಡಿದ ಮಾತುಗಳೇನು?

Shubman Gill Post Match Presentation: ಫಾರ್ಮ್‌ನಲ್ಲಿರುವ ಸಾಯಿ ಸುದರ್ಶನ್ ಅವರ ಅರ್ಧಶತಕದ ನಂತರ ಪ್ರಸಿದ್ಧ್ ಕೃಷ್ಣ ಮತ್ತು ಇತರ ಬೌಲರ್‌ಗಳ ಅದ್ಭುತ ಪ್ರದರ್ಶನದ ನೆರವಿನಿಂದ ಗುಜರಾತ್ ಟೈಟಾನ್ಸ್ ತಂಡ ರಾಜಸ್ಥಾನ್ ರಾಯಲ್ಸ್ ಅನ್ನು 58 ರನ್‌ಗಳಿಂದ ಸೋಲಿಸಿತು. ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ ವೇಳೆ ಮಾತನಾಡಿದ ಶುಭ್ಮನ್ ಗಿಲ್ ಕೆಲ ವಿಚಾರ ಹಂಚಿಕೊಂಡಿದ್ದಾರೆ.

GT vs RR, IPL 2025: ಟೇಬಲ್ ಟಾಪರ್ ಆದ ಗಿಲ್ ಪಡೆ: ಪೋಸ್ಟ್ ಮ್ಯಾಚ್​ನಲ್ಲಿ ಶುಭ್​ಮನ್ ಆಡಿದ ಮಾತುಗಳೇನು?
Shubman Gill Post Match Presentation
Follow us
Vinay Bhat
|

Updated on: Apr 10, 2025 | 8:14 AM

ಬೆಂಗಳೂರು (ಏ. 10): ಬುಧವಾರ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧದ ಗೆಲುವಿನ ನಂತರ ಗುಜರಾತ್ ಟೈಟಾನ್ಸ್ (Gujarat Titans vs Rajasthan Royals) ತಂಡದ ನಾಯಕ ಶುಭ್​ಮನ್ ಗಿಲ್ ತಮ್ಮ ಬ್ಯಾಟ್ಸ್‌ಮನ್‌ಗಳು ಮತ್ತು ಬೌಲರ್‌ಗಳ ಪ್ರದರ್ಶನವನ್ನು ಶ್ಲಾಘಿಸಿದ್ದಾರೆ. ಫಾರ್ಮ್‌ನಲ್ಲಿರುವ ಸಾಯಿ ಸುದರ್ಶನ್ (82) ಅರ್ಧಶತಕ ಮತ್ತು ಪ್ರಸಿದ್ಧ್ ಕೃಷ್ಣ (3-24) ಮತ್ತು ಇತರ ಬೌಲರ್‌ಗಳ ಅದ್ಭುತ ಪ್ರದರ್ಶನದ ನೆರವಿನಿಂದ ಗುಜರಾತ್ ಟೈಟಾನ್ಸ್ ತಂಡ ರಾಜಸ್ಥಾನ್ ರಾಯಲ್ಸ್ ಅನ್ನು 58 ರನ್‌ಗಳಿಂದ ಸೋಲಿಸಿ ಸತತ ನಾಲ್ಕನೇ ಗೆಲುವು ದಾಖಲಿಸಿತು.

ಪಂದ್ಯದ ನಂತರ ಶುಭ್​​ಮನ್ ಗಿಲ್ ಹೇಳಿದ್ದೇನು?

ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ ವೇಳೆ ಮಾತನಾಡಿದ ಶುಭ್​ಮನ್ ಗಿಲ್, ‘ಮೊದಲನೆಯದಾಗಿ ನಾವು ಉತ್ತಮ ಸ್ಕೋರ್ ಗಳಿಸಿದ್ದೇವೆ. ಜೋಸ್ ಬಟ್ಲರ್ ಮತ್ತು ಸಾಯಿ ಸುದರ್ಶನ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ನಂತರ ನಮ್ಮ ಬೌಲರ್‌ಗಳು ಉತ್ತಮವಾಗಿ ಬೌಲಿಂಗ್ ಕೂಡ ಮಾಡಿದರು. ಎಲ್ಲರೂ ಇದಕ್ಕೆ ಕೊಡುಗೆ ಸಲ್ಲಿಸಿದ್ದಾರೆ, ಇದು ಒಳ್ಳೆಯ ತಂಡದ ಸಂಕೇತ ಮತ್ತು ಇಂದು ಕೂಡ ನಾವು ಅದನ್ನೇ ಮುಂದುವರೆಸಿದ್ದೇವೆ’ ಎಂದು ಹೇಳಿದ್ದಾರೆ. ಈ ಗೆಲುವಿನೊಂದಿಗೆ ಗುಜರಾತ್ ಟೈಟಾನ್ಸ್ ಎಂಟು ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಸಂಜು ಸ್ಯಾಮ್ಸನ್ ಹೇಳಿದ್ದೇನು?

‘ಬೌಲಿಂಗ್‌ನಲ್ಲಿ ನಾವು ಸುಮಾರು 15-20 ರನ್‌ಗಳನ್ನು ಹೆಚ್ಚು ನೀಡಿದೆವು. ಪಂದ್ಯದಲ್ಲಿ ನಾವು ಆವೇಗವನ್ನು ಉಳಿಸಿಕೊಳ್ಳಲು ಬಯಸಿದಾಗಲೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡೆವು, ನಾನು ಮತ್ತು ಹೆಟ್ಮೆಯರ್ ಬ್ಯಾಟಿಂಗ್ ಮಾಡುವಾಗ ಪಂದ್ಯ ನಮ್ಮ ಕೈಯಲ್ಲೇ ಇತ್ತು. ಆದರೆ ನನ್ನ ವಿಕೆಟ್ ಆಟವನ್ನು ಬದಲಾಯಿಸಿತು. ಜೋಫ್ರಾ ಬೌಲಿಂಗ್ ಮಾಡಿದ ರೀತಿ ಮತ್ತು ಗಿಲ್ ವಿಕೆಟ್ ಪಡೆದ ರೀತಿ ಸ್ವಲ್ಪ ಉತ್ತಮವಾಗಿತ್ತು. ಆದರೆ ನಾವು ಡೆತ್‌ ಬೌಲಿಂಗ್​ನಲ್ಲಿ ಎಡವಿದೆವು. ನಾಳೆಯ (ಇಂದು) ಮೀಟಿಂಗ್​ನಲ್ಲಿ ಇದರ ಬಗ್ಗೆ ಚರ್ಚಿಸುತ್ತೇವೆ ಮತ್ತು ಉತ್ತಮವಾಗಿ ಹಿಂತಿರುಗುತ್ತೇವೆ. ನೀವು ಪಂದ್ಯಗಳನ್ನು ಸೋತಾಗ ನಾವು ಮೊದಲು ಚೇಸ್ ಮಾಡಬೇಕೇ ಅಥವಾ ಬ್ಯಾಟಿಂಗ್ ಮಾಡಬೇಕೇ ಎಂದು ನಾವು ಭಾವಿಸುತ್ತೇವೆ, ನಾವು ಈ ಪರಿಸ್ಥಿತಿಗಳನ್ನು ನಿರೀಕ್ಷಿಸುತ್ತಿದ್ದೆವು, ಇದು ನಿಜವಾಗಿಯೂ ಉತ್ತಮ ವಿಕೆಟ್’ ಎಂದು ಹೇಳಿದ್ದಾರೆ.

ಇದನ್ನೂ ಓದಿ
Image
IPLನಲ್ಲಿಂದು RCB ಪಂದ್ಯ: ರಜತ್ ಪಡೆ ಗೆದ್ದರೆ ಏನೆಲ್ಲ ಆಗಲಿದೆ ನೋಡಿ
Image
ಬೆಂಗಳೂರು ಸೇರಿ 11 ಕ್ರಿಕೆಟ್ ಸ್ಟೇಡಿಯಂಗಳಲ್ಲಿ ವಿಐ 5ಜಿ ಲಭ್ಯ
Image
ಸಿಕ್ಸ್ ಹೊಡೆಸಿಕೊಳ್ಳದೇ ಒಂದೇ ಎಸೆತದಲ್ಲಿ ರನ್ ನೀಡಿದ ಶಾರ್ದೂಲ್ ಠಾಕೂರ್
Image
2 ಬಾರಿ ಫೈನ್ ಕಟ್ಟಿದ ಬಳಿಕ ಹೊಸ ಸೆಲೆಬ್ರೇಷನ್ ಪರಿಚಯಿಸಿದ ದಿಗ್ವೇಶ್ ರಾಠಿ

RCB vs DC, IPL 2025: ಐಪಿಎಲ್​ನಲ್ಲಿಂದು ಆರ್​ಸಿಬಿ ಪಂದ್ಯ: ಬೆಂಗಳೂರಲ್ಲಿ ರಜತ್ ಪಡೆ ಗೆದ್ದರೆ ಏನೆಲ್ಲ ಆಗಲಿದೆ ನೋಡಿ

ಪಂದ್ಯ ಹೇಗಿತ್ತು?

ಫಾರ್ಮ್‌ನಲ್ಲಿರುವ ಸಾಯಿ ಸುದರ್ಶನ್ ಅವರ ಅರ್ಧಶತಕದ ನಂತರ ಪ್ರಸಿದ್ಧ್ ಕೃಷ್ಣ ಮತ್ತು ಇತರ ಬೌಲರ್‌ಗಳ ಅದ್ಭುತ ಪ್ರದರ್ಶನದ ನೆರವಿನಿಂದ ಗುಜರಾತ್ ಟೈಟಾನ್ಸ್ ಈ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು 58 ರನ್‌ಗಳಿಂದ ಸೋಲಿಸಿತು. ಸಾಯಿ ಸುದರ್ಶನ್ ಅವರ 53 ಎಸೆತಗಳಲ್ಲಿ ಎಂಟು ಬೌಂಡರಿ ಮತ್ತು ಮೂರು ಸಿಕ್ಸರ್‌ಗಳ ನೆರವಿನಿಂದ ಗುಜರಾತ್ ಟೈಟಾನ್ಸ್ ಆರು ವಿಕೆಟ್‌ಗಳಿಗೆ 217 ರನ್ ಗಳಿಸುವಲ್ಲಿ ಯಶಸ್ವಿಯಾಯಿತು. ಇದು ಸಾಯಿ ಸುದರ್ಶನ್ ಅವರ ಈ ಋತುವಿನ ಅತ್ಯುತ್ತಮ ಸ್ಕೋರ್ ಮತ್ತು ಅವರ ಮೂರನೇ ಅರ್ಧಶತಕವಾಗಿದೆ.

ಈ ಗುರಿಯನ್ನು ಬೆನ್ನಟ್ಟಲು ಬಂದ ರಾಜಸ್ಥಾನ್ ರಾಯಲ್ಸ್ ಬ್ಯಾಟ್ಸ್‌ಮನ್‌ಗಳು ಕಳಪೆ ಪ್ರದರ್ಶನದ ನೀಡಿದರು. ಶಿಮ್ರಾನ್ ಹೆಟ್ಮೆಯರ್ (52) ಅರ್ಧಶತಕದ ಹೊರತಾಗಿಯೂ, ತಂಡವು 19.2 ಓವರ್‌ಗಳಲ್ಲಿ 159 ರನ್‌ಗಳಿಗೆ ಆಲೌಟ್ ಆಯಿತು. ನಾಯಕ ಸಂಜು ಸ್ಯಾಮ್ಸನ್ (41) ಮತ್ತು ರಿಯಾನ್ ಪರಾಗ್ (26) ಸಾಧಾರಾಣ ಪ್ರದರ್ಶನ ನೀಡಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ