AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋ ಯೋ ಟೆಸ್ಟ್​ನಲ್ಲಿ ವಿರಾಟ್ ಕೊಹ್ಲಿಯನ್ನೇ ಹಿಂದಿಕ್ಕಿದ ಶುಭ್​ಮನ್ ಗಿಲ್

Shubman Gill: ಏಷ್ಯಾಕಪ್​ಗೂ ಮುನ್ನ ಆಟಗಾರರ ಫಿಟ್​ನೆಸ್ ಸಾಮರ್ಥ್ಯವನ್ನು ಪರೀಕ್ಷಿಸಲು ಬಿಸಿಸಿಐ ಮುಂದಾಗಿದೆ. ಆದರೆ ಈ ಟೆಸ್ಟ್​ ನಡೆಸಿರುವುದು ಏಷ್ಯಾಕಪ್​ಗಾಗಿ​ ಅಲ್ಲ. ಬದಲಾಗಿ ಮುಂಬರುವ ಏಕದಿನ ವಿಶ್ವಕಪ್​ಗಾಗಿ ಎಂಬುದು ವಿಶೇಷ. ಅಂದರೆ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ಗಾಗಿ ಟೀಮ್ ಇಂಡಿಯಾ ಆಟಗಾರರ ಫಿಟ್​​ನೆಸ್ ಸಾಮರ್ಥ್ಯ ಹೇಗಿದೆ, ಯಾವ ವಿಭಾಗದಲ್ಲಿ ಬಲಿಷ್ಠರಾಗಬೇಕು ಎಂಬುದನ್ನು ತಿಳಿಯಲು ಇದೀಗ ಯೋ ಯೋ ಟೆಸ್ಟ್ ನಡೆಸಲಾಗಿದೆ

ಯೋ ಯೋ ಟೆಸ್ಟ್​ನಲ್ಲಿ ವಿರಾಟ್ ಕೊಹ್ಲಿಯನ್ನೇ ಹಿಂದಿಕ್ಕಿದ ಶುಭ್​ಮನ್ ಗಿಲ್
Shubman Gill - Virat Kohli
TV9 Web
| Edited By: |

Updated on: Aug 26, 2023 | 3:59 PM

Share

ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ನಡೆದ ಟೀಮ್ ಇಂಡಿಯಾ ಆಟಗಾರರ ಯೋ ಯೋ​ ಟೆಸ್ಟ್​ನಲ್ಲಿ ಶುಭ್​ಮನ್ ಗಿಲ್ (Shubman Gill)  ಅತ್ಯಧಿಕ ಅಂಕಗಳಿಸಿ ಅಗ್ರಸ್ಥಾನ ಅಲಂಕರಿಸಿದ್ದಾರೆ. ಹಲವು ವಿಭಾಗಗಳಲ್ಲಿ ನಡೆಸಲಾದ ಈ ಟೆಸ್ಟ್​ನಲ್ಲಿ ಗಿಲ್ ಒಟ್ಟು 18.7 ಅಂಕಗಳೊಂದಿಗೆ ಮೊದಲ ಸ್ಥಾನ ಅಲಂಕರಿಸಿದರೆ, ನಂತರದ ಸ್ಥಾನದಲ್ಲಿ ವಿರಾಟ್ ಕೊಹ್ಲಿ (Virat Kohli) ಕಾಣಿಸಿಕೊಂಡಿದ್ದಾರೆ.

ಕಿಂಗ್ ಕೊಹ್ಲಿಯನ್ನೇ ಹಿಂದಿಕ್ಕಿದ ಪ್ರಿನ್ಸ್​ ಶುಭ್​ಮನ್:

ಯೋ ಯೋ ಟೆಸ್ಟ್​ನಲ್ಲಿ ವಿರಾಟ್ ಕೊಹ್ಲಿ ಅದ್ಭುತ ಪ್ರದರ್ಶನ ನೀಡುತ್ತಾ ಬಂದಿದ್ದಾರೆ. ಫಿಟ್​ನೆಸ್ ವಿಷಯದಲ್ಲಿ ಇದುವರೆಗೆ ಕೊಹ್ಲಿಯೇ ಕಿಂಗ್ ಎನ್ನಲಾಗಿತ್ತು. ಅದರಂತೆ ಈ ಬಾರಿ ಕೂಡ 17.2 ಅಂಕಗಳಿಸುವಲ್ಲಿ ವಿರಾಟ್ ಕೊಹ್ಲಿ ಯಶಸ್ವಿಯಾಗಿದ್ದರು. ಆದರೆ ಶುಭ್​ಮನ್ ಗಿಲ್ ಸರದಿ ಬಂದಾಗ ಕಿಂಗ್ ಕೊಹ್ಲಿಯನ್ನೇ ಹಿಂದಿಕ್ಕಿದರು. ಎಲ್ಲಾ ವಿಭಾಗಗಳಲ್ಲೂ ಅತ್ಯುತ್ತಮ ಪ್ರದರ್ಶನ ನೀಡಿದ ಗಿಲ್ ಒಟ್ಟು 18.7 ಅಂಕಗಳಿಸಿ ಟೀಮ್ ಇಂಡಿಯಾದ ಫಿಟ್​​ನೆಸ್​ ಫ್ರೀಕ್ ಎನಿಸಿಕೊಂಡರು.

ಕಟ್ ಆಫ್ ಲೆವೆಲ್​:

ಯೋ ಯೋ ಟೆಸ್ಟ್​ನಲ್ಲಿ ಉತೀರ್ಣರಾಗಲು ಆಟಗಾರರು ಕನಿಷ್ಠ 16.5 ಅಂಕಗಳನ್ನು ಗಳಿಸಲೇಬೇಕು. ಮೊದಲ ಸುತ್ತಿನಲ್ಲಿ ವಿಫಲರಾದರೆ ಮತ್ತೆ ಅವಕಾಶಗಳನ್ನು ನೀಡಲಾಗುತ್ತದೆ. ಈ ಮೂಲಕ 16.5 ಅಂಕಗಳನ್ನು ಗಳಿಸಿದರೆ ಮಾತ್ರ ಯೋ ಯೋ ಟೆಸ್ಟ್​ನಲ್ಲಿ ಪಾಸ್ ಎಂದು ನಿರ್ಧರಿಸಲಾಗುತ್ತದೆ.

ಬಹುತೇಕ ಆಟಗಾರರು ಪಾಸ್:

ಈ ಬಾರಿಯ ಯೋ ಯೋ ಟೆಸ್ಟ್​ನಲ್ಲಿ ಭಾಗವಹಿಸಿದ್ದ ಟೀಮ್ ಇಂಡಿಯಾದ ಬಹುತೇಕ ಆಟಗಾರರು ಪಾಸ್ ಆಗಿದ್ದಾರೆ. ಈ ಪಟ್ಟಿಯಲ್ಲಿ ಅತ್ಯಧಿಕ ಅಂಕಗಳಿಸಿರುವುದು ಶುಭ್​ಮನ್ ಗಿಲ್. ಹಾಗೆಯೇ ಬಹುತೇಕ ಆಟಗಾರರು 16.5 ಹಾಗೂ 17 ರ ನಡುವೆ ಅಂಕಗಳಿಸಿ ತಮ್ಮ ಟಾಸ್ಕ್ ಪೂರೈಸಿದ್ದಾರೆ.​​

ಕೆಎಲ್ ರಾಹುಲ್​​ಗೆ ನೋ ಟೆಸ್ಟ್​:

ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ಏಷ್ಯಾ ಕಪ್‌ ಮೀಸಲು ಆಟಗಾರ) ಮತ್ತು ಕೆಎಲ್ ರಾಹುಲ್ ಅವರು ಯೋ ಯೋ ಟೆಸ್ಟ್​ನಲ್ಲಿ ಭಾಗವಹಿಸಿಲ್ಲ. ಇಲ್ಲಿ ಕೆಲ ಆಟಗಾರರು ಐರ್ಲೆಂಡ್ ಸರಣಿಯಿಂದ ಹಿಂತಿರುಗಿರುವ ಕಾರಣ ಅವರಿಗೆ ವಿನಾಯಿತಿ ನೀಡಲಾಗಿದೆ. ಇತ್ತ ಕೆಎಲ್ ರಾಹುಲ್ ಸಂಪೂರ್ಣ ಫಿಟ್​ ಆಗಿರದ ಕಾರಣ ಅವರು ಯೋ ಯೋ ಟೆಸ್ಟ್​​ನಲ್ಲಿ ಭಾಗವಹಿಸಿಲ್ಲ ಎಂದು ತಿಳಿದು ಬಂದಿದೆ.

ಏನಿದು ಯೋ ಯೋ ಟೆಸ್ಟ್?

ಟೀಮ್ ಇಂಡಿಯಾ ಆಟಗಾರರ ಫಿಟ್​ನೆಸ್​ ಟೆಸ್ಟ್​ ಹಲವು ದೈಹಿಕ ಪರೀಕ್ಷೆಗಳನ್ನು ಮಾಡಲಾಗುತ್ತದೆ. ಇದರಲ್ಲಿ ಮುಖ್ಯವಾಗಿ ಯೋ ಯೋ ಟೆಸ್ಟ್ ಪಾಸಾಗಲೇಬೇಕು. ಇಲ್ಲಿ ಕ್ರಮಬದ್ಧ ಹಾಗೂ ವೇಗವಾಗಿ ಓಡುವ ಮೂಲಕ ತಮ್ಮ ದೈಹಿಕ ಸಾಮರ್ಥ್ಯವನ್ನು ಪರೀಕ್ಷೆಗೆ ಒಳಪಡಿಸಲಾಗುತ್ತದೆ.

ಈ ಫಿಟ್‍ನೆಸ್ ಟೆಸ್ಟ್​ನಲ್ಲಿ 20 ಮೀಟರ್​ ಅಳತೆಯಲ್ಲಿ ಎರಡು ಕೋನಗಳನ್ನು ನೇರವಾಗಿ ಇರಿಸಲಾಗಿರುತ್ತದೆ. ಇಲ್ಲಿ ಆಟಗಾರನು ಓಟವನ್ನು ಆರಂಭಿಸಿ, ಎರಡು ಲೈನ್​​ಗಳಲ್ಲಿಟ್ಟಿರುವ ಕೋನಗಳ ಬೀಪ್ ಧ್ವನಿಯನ್ನು ಅನುಸರಿಸಿ ತನ್ನ ದೂರವನ್ನು ಕ್ರಮಿಸಬೇಕಾಗುತ್ತದೆ.

ಹಾಗೆಯೇ ಈ ಟೆಸ್ಟ್​ನಲ್ಲಿ 8.15 ನಿಮಿಷದೊಳಗೆ 2 ಕಿ. ಮೀಟರ್ ಓಡಬೇಕಾಗುತ್ತದೆ. ಒಂದು ವೇಳೆ ಇದು ಸಾಧ್ಯವಾಗದಿದ್ದರೆ ಫೇಲ್ ಎಂದು ಪರಿಗಣಿಸಲಾಗುತ್ತದೆ. ಇಲ್ಲಿ ಅಂಕಗಳು ತಂತ್ರಾಂಶ ಆಧಾರಿತವಾಗಿದ್ದು, ಹೀಗಾಗಿ ಯಾವುದೇ ಸುತ್ತಿನಲ್ಲಿ ಎಡವಿದರೂ ಮತ್ತೊಮ್ಮೆ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ. ಹೀಗಾಗಿಯೇ ಯೋ ಯೋ ಟೆಸ್ಟ್​ ಪಾಸಾಗುವುದು ಟೀಮ್ ಇಂಡಿಯಾ ಆಟಗಾರರ ಪಾಲಿಗೆ ಅಗ್ನಿ ಪರೀಕ್ಷೆ ಎಂದು ವಿಶ್ಲೇಷಿಸಲಾಗುತ್ತಿದೆ.

ಇದನ್ನೂ ಓದಿ: IPL 2024: ಮುಂಬೈ ಇಂಡಿಯನ್ಸ್ ಬಳಗಕ್ಕೆ ಮರಳಿದ ಲಸಿತ್ ಮಾಲಿಂಗ

ಈಗ ಯೋ ಯೋ ಟೆಸ್ಟ್ ಯಾಕೆ?

ಏಷ್ಯಾಕಪ್​ಗೂ ಮುನ್ನ ಆಟಗಾರರ ಫಿಟ್​ನೆಸ್ ಸಾಮರ್ಥ್ಯವನ್ನು ಪರೀಕ್ಷಿಸಲು ಬಿಸಿಸಿಐ ಮುಂದಾಗಿದೆ. ಆದರೆ ಈ ಟೆಸ್ಟ್​ ನಡೆಸಿರುವುದು ಏಷ್ಯಾಕಪ್​ಗಾಗಿ​ ಅಲ್ಲ. ಬದಲಾಗಿ ಮುಂಬರುವ ಏಕದಿನ ವಿಶ್ವಕಪ್​ಗಾಗಿ ಎಂಬುದು ವಿಶೇಷ. ಅಂದರೆ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ಗಾಗಿ ಟೀಮ್ ಇಂಡಿಯಾ ಆಟಗಾರರ ಫಿಟ್​​ನೆಸ್ ಸಾಮರ್ಥ್ಯ ಹೇಗಿದೆ, ಯಾವ ವಿಭಾಗದಲ್ಲಿ ಬಲಿಷ್ಠರಾಗಬೇಕು ಎಂಬುದನ್ನು ತಿಳಿಯಲು ಇದೀಗ ಯೋ ಯೋ ಟೆಸ್ಟ್ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

Follow Us
Web contact
Web contact

TV9 Kannada

Read More
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ