AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಸಿವಿಎಲ್ ಆಸ್ಪತ್ರೆಗೆ ಭಾರಿ ಮೊತ್ತದ ದೇಣಿಗೆ ನೀಡಿದ ಶುಭ್​ಮನ್ ಗಿಲ್

Shubman Gill: ಐಪಿಎಲ್ 2025ರಲ್ಲಿ ಗುಜರಾತ್ ಟೈಟನ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯಕ್ಕೂ ಮುನ್ನ, ಶುಭ್ಮನ್ ಗಿಲ್ ಮೊಹಾಲಿ ಸಿವಿಲ್ ಆಸ್ಪತ್ರೆಗೆ 35 ಲಕ್ಷ ರೂಪಾಯಿ ಮೌಲ್ಯದ ವೈದ್ಯಕೀಯ ಉಪಕರಣಗಳನ್ನು ದಾನ ಮಾಡಿದ್ದಾರೆ. ಇದು ವೆಂಟಿಲೇಟರ್‌ಗಳು, ಐಸಿಯು ಹಾಸಿಗೆಗಳು ಮತ್ತು ಇತರ ಅಗತ್ಯ ವಸ್ತುಗಳನ್ನು ಒಳಗೊಂಡಿದೆ. ಗಿಲ್ ಅವರ ಈ ಉದಾರ ಕಾರ್ಯಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

IPL 2025: ಸಿವಿಎಲ್ ಆಸ್ಪತ್ರೆಗೆ ಭಾರಿ ಮೊತ್ತದ ದೇಣಿಗೆ ನೀಡಿದ ಶುಭ್​ಮನ್ ಗಿಲ್
Shubman Gill
Follow us
ಪೃಥ್ವಿಶಂಕರ
|

Updated on: Mar 29, 2025 | 8:07 PM

ಐಪಿಎಲ್ 2025 (IPL 2025) ರ 9ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಹಾಗೂ ಮುಂಬೈ ಇಂಡಿಯನ್ಸ್ (GT vs MI) ತಂಡಗಳು ಮುಖಾಮುಖಿಯಾಗಿವೆ. ಈ ಎರಡು ತಂಡಗಳು ಮೊದಲ ಪಂದ್ಯವನ್ನು ಸೋತಿರುವ ಕಾರಣ ಮೊದಲ ಗೆಲುವಿನ ಹುಡುಕಾಟದಲ್ಲಿವೆ. ಈ ನಡುವೆ ಗುಜರಾತ್ ತಂಡದ ನಾಯಕ ಶುಭ್​ಮನ್ ಗಿಲ್ (Shubman Gill) ತನ್ನ ತವರು ನೆಲದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸುವುದಕ್ಕೂ ಮುನ್ನ ತಮ್ಮ ಸಾಮಾಜಿಕ ಕಳಕಳಿಯ ಮೂಲಕ ಸುದ್ದಿಯಾಗಿದ್ದಾರೆ. ವಾಸ್ತವವಾಗಿ ಗಿಲ್, ಮೊಹಾಲಿಯ ಸಿವಿಲ್ ಆಸ್ಪತ್ರೆಗೆ ಸುಮಾರು 35 ಲಕ್ಷ ರೂ. ಮೌಲ್ಯದ ವೈದ್ಯಕೀಯ ಉಪಕರಣಗಳನ್ನು ದಾನ ಮಾಡಿದ್ದಾರೆ. ಗಿಲ್ ಅವರ ಈ ಸಮಾಜ ಸೇವೆಯನ್ನು ಸ್ಮರಿಸಿರುವ ಆಸ್ಪತ್ರೆ ಆಡಳಿತ ಮಂಡಳಿ, ಗಿಲ್‌ಗೆ ಕೃತಜ್ಞತೆ ಸಲ್ಲಿಸಿದ್ದು, ಇದು ರೋಗಿಗಳ ಅಗತ್ಯಗಳನ್ನು ಪೂರೈಸಲು ಸಹಾಯ ಮಾಡುತ್ತದೆ ಎಂದು ಹೇಳಿದೆ.

ವೈದ್ಯಕೀಯ ಉಪಕರಣಗಳ ದಾನ

ಶುಭ್​ಮನ್ ಗಿಲ್ ಆಸ್ಪತ್ರೆಗೆ ವೆಂಟಿಲೇಟರ್‌ಗಳು, ಸಿರಿಂಜ್ ಪಂಪ್‌ಗಳು, ಆಪರೇಷನ್ ಥಿಯೇಟರ್ ಟೇಬಲ್‌ಗಳು, ಐಸಿಯು ಹಾಸಿಗೆಗಳು, ಎಕ್ಸ್-ರೇ ಯಂತ್ರಗಳು ಮತ್ತು ಸೀಲಿಂಗ್ ಲೈಟ್‌ಗಳಂತಹ 35 ಲಕ್ಷ ರೂ. ಮೌಲ್ಯದ ಅಗತ್ಯ ಉಪಕರಣಗಳನ್ನು ಒದಗಿಸಿಕೊಟ್ಟಿದ್ದಾರೆ. ಇವುಗಳಲ್ಲಿ ಗಂಭೀರವಾಗಿ ಅಸ್ವಸ್ಥರಾದ ರೋಗಿಗಳಿಗೆ ಚಿಕಿತ್ಸೆ ನೀಡಲು ಬಳಸಲಾಗುವ ಅನೇಕ ವಸ್ತುಗಳು ಸೇರಿವೆ. ಮಾಧ್ಯಮ ವರದಿಗಳ ಪ್ರಕಾರ, ಗಿಲ್ ತಮ್ಮ ಆಪ್ತ ಸಂಬಂಧಿಯೊಬ್ಬರು, ಸ್ವತಃ ವೈದ್ಯಕೀಯ ವೃತ್ತಿಪರರ ಮೂಲಕ ಈ ದೇಣಿಗೆ ನೀಡಿದ್ದಾರೆ. ಗಿಲ್ ಅವರ ಈ ನಡೆಯನ್ನು ಅಭಿಮಾನಿಗಳು ಮೆಚ್ಚಿಕೊಂಡಿದ್ದು, ಗಿಲ್ ಅವರ ಈ ಉದಾತ್ತ ಕೆಲಸಕ್ಕಾಗಿ ಸಾಮಾಜಿಕ ಜಾಲತಾಣಗಳಲ್ಲಿ ಶ್ಲಾಘಿಸಿದ್ದಾರೆ.

ಇದನ್ನೂ ಓದಿ
Image
2ನೇ ಪಂದ್ಯದಲ್ಲೂ ಸೋತ ಮುಂಬೈ; ಗೆಲುವಿನ ಖಾತೆ ತೆರೆದ ಗುಜರಾತ್
Image
ಐಸಿಸಿ ಫೆಬ್ರವರಿ ತಿಂಗಳ ಆಟಗಾರ ಪ್ರಶಸ್ತಿಗೆ ಗಿಲ್ ಭಾಜನ
Image
0.78 ಸೆಕೆಂಡುಗಳಲ್ಲಿ ಗಿಲ್ ಆಟಕ್ಕೆ ಅಂತ್ಯ ಹಾಡಿದ ಫಿಲಿಫ್ಸ್; ವಿಡಿಯೋ ನೋಡಿ
Image
ಶುಭ್​ಮನ್ ಗಿಲ್​ಗೆ ಅಂಪೈರ್ ಎಚ್ಚರಿಕೆ ನೀಡಿದ್ದು ಏಕೆ?

ಮೊಹಾಲಿಯೊಂದಿಗೆ ಗಿಲ್ ಸಂಪರ್ಕ

ವಾಸ್ತವವಾಗಿ ಶುಭ್​ಮನ್ ಗಿಲ್ ಪಂಜಾಬ್‌ನ ಫಜಿಲ್ಕಾ ಜಿಲ್ಲೆಯ ಜೈಮಲ್ ಸಿಂಗ್ ವಾಲಾ ಗ್ರಾಮದವರು. ಆದಾಗ್ಯೂ ಗಿಲ್​ಗೂ ಮೊಹಾಲಿಯೊಂದಿಗೆ ಅವಿನಾಭಾವ ಸಂಬಂಧವಿದೆ. ವಾಸ್ತವವಾಗಿ, ಗಿಲ್ ಅವರ ತಂದೆ ಕ್ರಿಕೆಟ್ ಕಲಿಸಲು ಹಳ್ಳಿಯಿಂದ ಮೊಹಾಲಿಗೆ ಸ್ಥಳಾಂತರಗೊಂಡಿದ್ದರು. ಇದಾದ ನಂತರ ಗಿಲ್ ಈ ನಗರದಲ್ಲಿ ಬೆಳೆದರು. ಅವರು ಇಲ್ಲಿಂದಲೇ ಅಧ್ಯಯನ ಮಾಡಿ ಕ್ರಿಕೆಟ್‌ನ ಎ, ಬಿ, ಸಿ, ಡಿ ಕಲಿತರು. ಇತ್ತೀಚೆಗೆ, ಅವರು ಮೊಹಾಲಿಯಲ್ಲಿ ತನಗಾಗಿ ಒಂದು ಐಷಾರಾಮಿ ಮನೆಯನ್ನು ನಿರ್ಮಿಸಲು ಪ್ರಾರಂಭಿಸಿದ್ದಾರೆ. ಲೋಕಸಭಾ ಚುನಾವಣೆಗೂ ಮುನ್ನ, ಚುನಾವಣಾ ಆಯೋಗವು ಶುಭ್‌ಮನ್ ಗಿಲ್ ಅವರನ್ನು ಪಂಜಾಬ್‌ನ ರಾಜ್ಯದ ಐಕಾನ್ ಆಗಿ ಮಾಡಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್