AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC World Cup: ವಿಶ್ವಕಪ್ ಮೊದಲ ಪಂದ್ಯಕ್ಕೂ ಮುನ್ನ ಭಾರತಕ್ಕೆ ಶಾಕ್: ಶುಭ್​ಮನ್ ಗಿಲ್​ಗೆ ಡೆಂಗ್ಯೂ ಸೋಂಕು ದೃಢ

Shubman Gill is suffering from dengue: ಭಾರತ ತಂಡದ ಸ್ಟಾರ್ ಇನ್​-ಫಾರ್ಮ್​ ಬ್ಯಾಟರ್ ಶುಭ್​ಮನ್ ಗಿಲ್ ಅವರಿಗೆ ಡೆಂಘೀ ಸೋಂಕು ದೃಢ ಪಟ್ಟಿದೆ. 24ರ ಹರೆಯದ ಗಿಲ್ ಏಕದಿನ ವಿಶ್ವಕಪ್​ನಲ್ಲಿ ಭಾನುವಾರ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ವಿಶ್ವಕಪ್ ಪಂದ್ಯದಲ್ಲಿ ಆಡುವ ಸಾಧ್ಯತೆಯಿಲ್ಲ ಎಂದು ಹೇಳಲಾಗಿದೆ.

ICC World Cup: ವಿಶ್ವಕಪ್ ಮೊದಲ ಪಂದ್ಯಕ್ಕೂ ಮುನ್ನ ಭಾರತಕ್ಕೆ ಶಾಕ್: ಶುಭ್​ಮನ್ ಗಿಲ್​ಗೆ ಡೆಂಗ್ಯೂ ಸೋಂಕು ದೃಢ
Shubman Gill
Follow us
Vinay Bhat
|

Updated on:Oct 06, 2023 | 8:46 AM

ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಚಾಲನೆ ಸಿಕ್ಕಾಗಿದೆ. ಭಾರತ ತಂಡ ಅಕ್ಟೋಬರ್ 8 ರಂದು ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ. ಆದರೆ, ಈ ಮೊದಲ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾಕ್ಕೆ ದೊಡ್ಡ ಆಘಾತ ಉಂಟಾಗಿದೆ. ತಂಡದ ಸ್ಟಾರ್ ಇನ್​-ಫಾರ್ಮ್​ ಬ್ಯಾಟರ್ ಶುಭ್​ಮನ್ ಗಿಲ್ (Shubman Gill) ಅವರಿಗೆ ಡೆಂಘೀ ಸೋಂಕು ದೃಢ ಪಟ್ಟಿದೆ. 24ರ ಹರೆಯದ ಗಿಲ್ ಭಾನುವಾರ ಆಸ್ಟ್ರೇಲಿಯಾ ವಿರುದ್ಧದ ಮೊದಲ ವಿಶ್ವಕಪ್ ಪಂದ್ಯದಲ್ಲಿ ಆಡುವ ಸಾಧ್ಯತೆಯಿಲ್ಲ ಎಂದು ಹೇಳಲಾಗಿದೆ. ನಿನ್ನೆ ತರಬೇತಿ ಅವಧಿಯಲ್ಲಿ ಗಿಲ್ ಅವರು ಡೆಂಗ್ಯೂನಿಂದ ಬಳಲುತ್ತಿದ್ದರು ಎಂದು ವರದಿ ಆಗಿದೆ.

2023 ರ ಏಕದಿನ ಕ್ರಿಕೆಟ್​ನಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಗಿಲ್, ವಿಶ್ವಕಪ್ ಮೊದಲ ಪಂದ್ಯದಿಂದ ಮಾರಕವಾಗಲಿದ್ದಾರೆ ಎಂದು ನಂಬಲಾಗಿತ್ತು. ಆದರೀಗ ಇವರ ಅನುಪಸ್ಥಿತಿ ತಂಡಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಇವರ ಬದಲು ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯದಲ್ಲಿ ಇಶಾನ್ ಕಿಶನ್ ಆಡುವ ಸಾಧ್ಯತೆ ಇದೆ.

ICC World Cup: ಕ್ಯಾಪ್ಟನ್ಸಿ ಡೇಯಲ್ಲಿ ಗರಂ ಆದ ರೋಹಿತ್: ವರದಿಗಾರರ ಪ್ರಶ್ನೆಗೆ ಹಿಟ್​ಮ್ಯಾನ್ ಖಡಕ್ ಉತ್ತರ

ಇದನ್ನೂ ಓದಿ
Image
ಭಾರತದ ಬೌಲಿಂಗ್ ದಾಳಿಗೆ ಬಾಂಗ್ಲಾ ತತ್ತರ: ರುತುರಾಜ್ ಪಡೆಗೆ ಸುಲಭ ಟಾರ್ಗೆಟ್
Image
ಟೀಮ್ ಇಂಡಿಯಾ ಟ್ರೈನಿಂಗ್ ಸೆಷನ್​ನಿಂದ ಬಯಲಾಯಿತು ದೊಡ್ಡ ಸುದ್ದಿ
Image
ವಿಶ್ವಕಪ್​ನಲ್ಲಿಂದು ಪಾಕಿಸ್ತಾನ-ನೆದರ್ಲೆಂಡ್ಸ್ ಮುಖಾಮುಖಿ
Image
ಏಷ್ಯನ್ ಗೇಮ್ಸ್ ಸೆಮಿ ಫೈನಲ್: ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ

ಗಿಲ್ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ಗಿಲ್ ಅವರನ್ನು ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಿಂದ ಕೈಬಿಡುವ ಮೊದಲು ಇಂದು ಮತ್ತೊಮ್ಮೆ ಡೆಂಗ್ಯೂ ಪರೀಕ್ಷೆಗೆ ಒಳಗಾಗಲಿದ್ದಾರೆ. ಜ್ವರ ತೀವ್ರವಾಗಿದ್ದರೆ ಗಿಲ್ ಮೊದಲ ಎರಡು ಪಂದ್ಯಗಳನ್ನು ಕಳೆದುಕೊಳ್ಳಬಹುದು. “ಚೆನ್ನೈಗೆ ಬಂದಿಳಿದ ನಂತರ ಶುಭ್‌ಮನ್‌ಗೆ ತೀವ್ರ ಜ್ವರವಿತ್ತು. ಈ ಕುರಿತು ಪರೀಕ್ಷೆಗಳು ನಡೆಯುತ್ತಿವೆ. ಶುಕ್ರವಾರ ಟೆಸ್ಟ್ ನಡೆಸಿ ಆರಂಭಿಕ ಪಂದ್ಯದಲ್ಲಿ ಭಾಗವಹಿಸುವ ಕುರಿತು ಅಂತಿಮ ಕರೆ ತೆಗೆದುಕೊಳ್ಳಲಾಗುವುದು” ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ದೇಶಾದ್ಯಂತ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ತಿಂಗಳ ಆರಂಭದಲ್ಲಿ ಇದರ ಬಗ್ಗೆ ಭಾರತದ ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರು ಉನ್ನತ ಮಟ್ಟದ ಸಭೆ ನಡೆಸಿ ಮುಂಜಾಗ್ರತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು.

ವಿಶ್ವಕಪ್​ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪ ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಇಶಾನ್ ಕಿಶನ್, ಸೂರ್ಯ ಕುಮಾರ್ ಯಾದವ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:31 am, Fri, 6 October 23

ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ