AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಸೋಲಿಗೆ ಆ ಮೂರು ಓವರ್‌ಗಳೇ ಕಾರಣ: ಶುಭ್​ಮನ್ ಗಿಲ್ ಬೇಸರ

IPL 2026 RCB vs GT: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 205 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ತಂಡ 18.5 ಓವರ್​ಗಳಲ್ಲಿ 206 ರನ್​ ಬಾರಿಸಿ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ನಮ್ಮ ಸೋಲಿಗೆ ಆ ಮೂರು ಓವರ್‌ಗಳೇ ಕಾರಣ: ಶುಭ್​ಮನ್ ಗಿಲ್ ಬೇಸರ
Shubman Gill
ಝಾಹಿರ್ ಯೂಸುಫ್
|

Updated on: Apr 25, 2026 | 9:02 AM

Share

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 34ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಗುಜರಾತ್ ಟೈಟಾನ್ಸ್ (GT) ತಂಡ ಸೋಲನುಭವಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 205 ರನ್​ ಕಲೆಹಾಕಿದ್ದರು. ಈ ಗುರಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18.5 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಆರ್​ಸಿಬಿ 5 ವಿಕೆಟ್​ಗಳ ಗೆಲುವು ದಾಖಲಿಸಿದೆ.

ಈ ಸೋಲಿನ ಬಳಿಕ ಮಾತನಾಡಿದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​ಮನ್ ಗಿಲ್, ನಿರ್ಣಾಯಕ ಹಂತದಲ್ಲಿ ಬೌಂಡರಿಗಳನ್ನು ಬಾರಿಸಲು ವಿಫಲರಾದದ್ದು ಮತ್ತು ಮಧ್ಯಂತರ ಓವರ್‌ಗಳಲ್ಲಿ ವಿಕೆಟ್ ಪಡೆಯದಿದ್ದದ್ದು ಸೋಲಿಗೆ ಮುಖ್ಯ ಕಾರಣ ಎಂದು ಅಭಿಪ್ರಾಯಪಟ್ಟಿದ್ದಾರೆ.

ನಮ್ಮ ಬ್ಯಾಟರ್​ಗಳಿಗೆ 16 ರಿಂದ 19ನೇ ಓವರ್‌ಗಳ ನಡುವೆ ನಾವು ಒಂದೂ ಬೌಂಡರಿ ಬಾರಿಸಲು ಸಾಧ್ಯವಾಗಲಿಲ್ಲ. ಈ ಮೂರು ಓವರ್‌ಗಳಲ್ಲಿ ನಾವು ನಿರೀಕ್ಷಿತ ರನ್ ಗಳಿಸಲಿಲ್ಲ, ಇದು ನಮ್ಮ ಪಾಲಿಗೆ ಬಹಳ ನಿರ್ಣಾಯಕವಾಯಿತು. ಪವರ್‌ಪ್ಲೇ ಅಂತ್ಯಕ್ಕೆ ನಾವು ಉತ್ತಮ ಸ್ಥಿತಿಯಲ್ಲಿದ್ದೆವು, ಆದರೆ ಅಂತಿಮ ಹಂತದಲ್ಲಿ ಲಯ ತಪ್ಪಿದೆವು. ಈ ಮೂರು ಓವರ್​ಗಳಲ್ಲಿ ಒಂದೇ ಒಂದು ಬೌಂಡರಿ ಬಾರಿಸದೇ ಇರುವುದು ಸೋಲಿಗೆ ಕಾರಣವಾಯ್ತು ಎಂದು ಶುಭ್​​ಮನ್ ಗಿಲ್ ಹೇಳಿದ್ದಾರೆ.

ಇದೇ ವೇಳೆ  ವಾಷಿಂಗ್ಟನ್ ಸುಂದರ್​ ಮೊದಲ ಓವರ್​ನಲ್ಲೇ ವಿರಾಟ್ ಕೊಹ್ಲಿಯ ಕ್ಯಾಚ್ ಕೈಬಿಟ್ಟ ಬಗ್ಗೆ ಪ್ರತಿಕ್ರಿಯಿಸಿದ ಗಿಲ್, ಫೀಲ್ಡರ್ ಆಗಿ ಅದು ಕಷ್ಟದ ಸಮಯ. ಇಂತಹ ಅವಕಾಶವನ್ನು ಕೈ ಚೆಲ್ಲಿದ ಬಳಿಕ ನಾವು ಪಂದ್ಯದಲ್ಲಿ ಹೇಗೆ ಕಂಬ್ಯಾಕ್ ಮಾಡುತ್ತೇವೆ ಎಂಬುದು ಮುಖ್ಯ. ಬೌಲಿಂಗ್‌ನಲ್ಲಿ ನಾವು ಕೆಲವು ಉತ್ತಮ ಕ್ಷಣಗಳನ್ನು ಹೊಂದಿದ್ದರೂ, ಈ ಪಿಚ್​ನಲ್ಲಿ ಅಗತ್ಯವಿದ್ದ ‘ಲೆಂತ್ ಬಾಲ್’ಗಳನ್ನು ನಿರಂತರವಾಗಿ ಎಸೆಯಲು ನಮಗೆ ಸಾಧ್ಯವಾಗಲಿಲ್ಲ.

ಇದಾಗ್ಯೂ ಮಾನವ್ ಸುತಾರ್ ಉತ್ತಮ ಓವರ್​ ಎಸೆದಿದ್ದರು. ಅವರಿಗೆ ಚೆಂಡು ನೀಡಲು ಮುಖ್ಯ ಕಾರಣ, ನಾನು ಬ್ಯಾಟಿಂಗ್ ಮಾಡುತ್ತಿದ್ದಾಗ ಕೃನಾಲ್ ಪಾಂಡ್ಯ ಎಸೆದ ನಿಧಾನಗತಿಯ ಎಸೆತಗಳು ಸ್ವಲ್ಪ ಗ್ರಿಪ್ ಆಗುತ್ತಿದ್ದವು. ಹಾಗಾಗಿ ಸುತಾರ್ ಮೂಲಕ ಒಂದು ಪ್ರಯತ್ನ ನಡೆಸಿದೆವು. ಒಂದು ವೇಳೆ ಅಲ್ಲಿ ಒಂದೆರಡು ವಿಕೆಟ್ ಬಿದ್ದಿದ್ದರೆ ಪಂದ್ಯದ ಚಿತ್ರಣ ಬದಲಾಗುತ್ತಿತ್ತು ಎಂದು ಶುಭ್​ಮನ್ ಗಿಲ್ ಅಭಿಪ್ರಾಯಪಟ್ಟಿದ್ದಾರೆ.

ಇದೇ ವೇಳೆ ಸಾಯಿ ಸುದರ್ಶನ್ ಬ್ಯಾಟಿಂಗ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಶುಭ್​​ಮನ್ ಗಿಲ್, ಕಳೆದ ಕೆಲವು ಪಂದ್ಯಗಳ ವೈಫಲ್ಯದಿಂದ ಸಾಯಿ ಬೇಸರಗೊಂಡಿದ್ದರು, ಆದರೆ ಈ ಪಂದ್ಯದಲ್ಲಿ ಅವರು ಉತ್ತಮವಾಗಿ ಆಡಿದ್ದಾರೆ. ಆದರೆ ಮುಂದಿನ ಪಂದ್ಯಗಳಲ್ಲಿ ಪವರ್‌ಪ್ಲೇ ಅವಧಿಯಲ್ಲಿ ಅವರು ನನಗೆ ಇನ್ನಷ್ಟು ಸ್ಟ್ರೈಕ್ ನೀಡುತ್ತಾರೆಂದು ಭಾವಿಸುತ್ತೇನೆ” ಎಂದು ಹಾಸ್ಯಮಯವಾಗಿ ಮಾತು ಮುಗಿಸಿದರು.

ಇದನ್ನೂ ಓದಿ: IPL 2026: RCB ಜಸ್ಟ್ 3 ಪಂದ್ಯ ಗೆದ್ದರೆ ಸಾಕು!

ಸದ್ಯ ಮೊದಲಾರ್ಧ ಮುಗಿಸಿರುವ ಗುಜರಾತ್ ಟೈಟಾನ್ಸ್ ತಂಡವು 3 ಗೆಲುವುಗಳೊಂದಿಗೆ ಅಂಕ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ದ್ವಿತೀಯಾರ್ಧದಲ್ಲಿ ಕನಿಷ್ಠ 5 ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೆ ಮಾತ್ರ ಗುಜರಾತ್ ಟೈಟಾನ್ಸ್ ತಂಡವು ನೇರವಾಗಿ ಪ್ಲೇಆಫ್​ಗೇರಬಹುದು.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!