AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shubman Gill: 255 ರನ್​ಗಳನ್ನು ಚೇಸ್ ಮಾಡಬಹುದಿತ್ತು, ಆದರೆ..!

IPL 2026 RCB vs GT: ಐಪಿಎಲ್​ನ ಕ್ವಾಲಿಫೈಯರ್-1 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್​ಗಳಲ್ಲಿ 254 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡ 19.3 ಓವರ್​ಗಳಲ್ಲಿ 162 ರನ್​​ಗಳಿಗೆ ಆಲೌಟ್ ಆಗಿದ್ದಾರೆ. ಈ ಮೂಲಕ ಆರ್​ಸಿಬಿ ತಂಡ 92 ರನ್​ಗಳ ಭರ್ಜರಿ ಜಯ ಸಾಧಿಸಿದೆ.

Shubman Gill: 255 ರನ್​ಗಳನ್ನು ಚೇಸ್ ಮಾಡಬಹುದಿತ್ತು, ಆದರೆ..!
Shubman Gill
ಝಾಹಿರ್ ಯೂಸುಫ್
|

Updated on: May 27, 2026 | 10:02 AM

Share

IPL 2026: ಐಪಿಎಲ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ತಂಡ ಸೋಲನುಭವಿಸಿದೆ. ಧರ್ಮಶಾಲಾದ ಹೆಚ್​ಪಿಸಿಎ ಮೈದಾನದಲ್ಲಿ ನಡೆದ ಆರ್​ಸಿಬಿ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದು ಶುಭ್​ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 20 ಓವರ್​ಗಳಲ್ಲಿ ಬರೋಬ್ಬರಿ 254 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 19.3 ಓವರ್​ಗಳಲ್ಲಿ 162 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ 92 ರನ್​ಗಳಿಂದ ಹೀನಾಯವಾಗಿ ಸೋಲೊಪ್ಪಿಕೊಂಡಿದೆ.

ಈ ಸೋಲಿನ ಬಳಿಕ ಮಾತನಾಡಿದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​ಮನ್ ಗಿಲ್, ನಮ್ಮ ಸೋಲಿಗೆ ಕಳಪೆ ಫೀಲ್ಡಿಂಗ್ ಪ್ರಮುಖ ಕಾರಣ ಎಂದಿದ್ದಾರೆ. ಈ ಪಂದ್ಯದಲ್ಲಿ 12 ಅಥವಾ 13ನೇ ಓವರ್​ವರೆಗೆ ನಾವು ಉತ್ತಮ ಹಿಡಿತ ಸಾಧಿಸಿದ್ದೆವು. ಆದರೆ ಆ ಬಳಿಕ ನಮ್ಮ ಕಳಪೆ ಫೀಲ್ಡಿಂಗ್​ಗೆ ಭಾರೀ ಬೆಲೆ ತೆರಬೇಕಾಯಿತು.

ನಮ್ಮ ಫೀಲ್ಡಿಂಗ್​ ಅತ್ಯಂತ ಕಳಪೆ ಮಟ್ಟದಲ್ಲಿತ್ತು ಎಂಬುದನ್ನು ಒಪ್ಪಿಕೊಳ್ಳಲೇಬೇಕು. ಏಕೆಂದರೆ ಕೆಲ ಪ್ರಮುಖ ಕ್ಯಾಚ್​ಗಳನ್ನು ಕೈ ಬಿಟ್ಟೆವು. ಇದರ ಸಂಪೂರ್ಣ ಲಾಭ ಪಡೆದ ಆರ್​ಸಿಬಿ ಬ್ಯಾಟರ್​ಗಳು ಬೃಹತ್ ಮೊತ್ತ ಪೇರಿಸಿದ್ದಾರೆ. ಇದರಿಂದ ನಾವು ಸೋಲಬೇಕಾಯಿತು ಎಂದು ಗಿಲ್ ಹೇಳಿದ್ದಾರೆ.

ಇನ್ನು 255 ರನ್​ಗಳ ಗುರಿ ಬೆನ್ನತ್ತಲು ಸಾಧ್ಯವಿತ್ತೇ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಶುಭ್​ಮನ್ ಗಿಲ್, ನಾವು ಉತ್ತಮ ಆರಂಭ ಪಡೆದಿದ್ದರೆ ಖಂಡಿತವಾಗಿಯೂ ಸಾಧ್ಯವಿತ್ತು. ಏಕೆಂದರೆ ಪವರ್​ಪ್ಲೇನಲ್ಲಿ ಉತ್ತಮವಾಗಿ ರನ್​ ಗಳಿಸಿದ್ದರೆ ಈ ಗುರಿಯನ್ನು ಚೇಸ್ ಮಾಡುವುದು ಕಷ್ಟವಾಗಿರಲಿಲ್ಲ.

ಆದರೆ ನಮ್ಮ ಆರಂಭಿಕ ದಾಂಡಿಗ ಸಾಯಿ ಸುದರ್ಶನ್ ದುರಾದೃಷ್ಟಕರ ರೀತಿಯಲ್ಲಿ ಔಟಾದರು. ಇಂತಹ ಹಿಟ್ ವಿಕೆಟ್​ ಔಟ್​ಗಳು ಸಾಮಾನ್ಯವಾಗಿ ಕಾಣಿಸುವುದಿಲ್ಲ. ಆದರೆ ಇಂದು ದುರಾದೃಷ್ಟದಿಂದ ಅವರು ಬೇಗನೆ ವಿಕೆಟ್ ಒಪ್ಪಿಸಿದರು. ಇನ್ನು ನಮ್ಮ ಕಡೆಯಿಂದಲೂ ಉತ್ತಮ ಬ್ಯಾಟಿಂಗ್ ಬಂದಿರಲಿಲ್ಲ.

ಒಂದು ವೇಳೆ ಪವರ್​ಪ್ಲೇನಲ್ಲಿ ನಾವು ಉತ್ತಮವಾಗಿ ಬ್ಯಾಟ್ ಬೀಸಿದ್ದರೆ, 255 ರನ್ ಚೇಸ್ ಮಾಡುವುದು ಕಷ್ಟವೇನು ಆಗುತ್ತಿರಲಿಲ್ಲ. ಏಕೆಂದರೆ ಈ ಮೈದಾನವು ವೇಗದ ಔಟ್ ಫೀಲ್ಡ್​ ಹೊಂದಿದೆ. ಹೀಗಾಗಿ ದಾಖಲೆಯ ಮೊತ್ತವನ್ನು ಚೇಸ್ ಮಾಡಲು ಅವಕಾಶವಿತ್ತು. ಆದರೆ ನಾವು ಆರಂಭಿಕ ಆಘಾತಕ್ಕೆ ಒಳಗಾದ ಕಾರಣ ಸೋಲಬೇಕಾಯಿತು ಎಂದರು.

ಈ ಸೋಲಿನ ಹೊರತಾಗಿಯೂ ನಮಗೆ ಮತ್ತೊಂದು ಅವಕಾಶವಿದೆ. ದ್ವಿತೀಯ ಕ್ವಾಲಿಫೈಯರ್​ನಲ್ಲಿ ಗೆದ್ದು ಫೈನಲ್​ಗೇರಬಹುದು. ಹೀಗಾಗಿ ಈ ಸೋಲನ್ನು ನಾವು ಆದಷ್ಟು ಬೇಗ ಮರೆಯಬೇಕು ಎಂದು ಶುಭ್​ಮನ್ ಗಿಲ್ ಸಹ ಆಟಗಾರರಿಗೆ ಕಿವಿಮಾತು ಹೇಳಿದರು.

ಇದನ್ನೂ ಓದಿ: IPL 2026: ಪ್ಲೇಆಫ್ ಚರಿತ್ರೆಯನ್ನೇ ಬದಲಿಸಿದ RCB

ಅಲ್ಲದೆ ಮೊಹಾಲಿಯಲ್ಲಿ ನಡೆಯಲಿರುವ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಇಂದಿನ ತಪ್ಪುಗಳನ್ನು ತಿದ್ದುಕೊಂಡು ಕಣಕ್ಕಿಳಿಯಬೇಕಿದೆ. ಅಲ್ಲಿ ಹೊಸ ಆರಂಭ ಹಾಗೂ ಹೊಸ ಉತ್ಸಾಹದೊಂದಿಗೆ ಕಣಕ್ಕಿಳಿಯುವ ಮೂಲಕ ಗೆಲ್ಲುವ ವಿಶ್ವಾಸವಿದೆ. ಈ ಮೂಲಕ ಗುಜರಾತ್ ಟೈಟಾನ್ಸ್ ತಂಡವು ಫೈನಲ್​ಗೇರುವ ವಿಶ್ವಾಸವನ್ನು ಶುಭ್​ಮನ್ ಗಿಲ್ ವ್ಯಕ್ತಪಡಿಸಿದ್ದಾರೆ.

Follow Us
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ