AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GT vs LSG, IPL 2025: ಲಕ್ನೋ ವಿರುದ್ಧ ಸೋತರೂ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡ ಶುಭ್​ಮನ್ ಗಿಲ್

Shubman Gill Post Match presentation: ಲಕ್ನೋ ವಿರುದ್ಧದ ಸೋಲಿನ ನಂತರ ಶುಭ್ಮನ್ ಗಿಲ್ ತುಂಬಾ ನಿರಾಶೆಗೊಂಡಿದ್ದರು, ಆದರೆ ಮೊದಲು ಬೌಲಿಂಗ್ ಮಾಡುವ ನಿರ್ಧಾರದ ಬಗ್ಗೆ ಮಾತನಾಡಿದ ಅವರು, ಈ ನಿರ್ಧಾರ ತಪ್ಪಲ್ಲ ಎಂದು ಹೇಳಿದರು. ನಾವು ಬೌಲಿಂಗ್‌ನಲ್ಲಿ 15-20 ಹೆಚ್ಚುವರಿ ರನ್‌ಗಳನ್ನು ನೀಡಿದ್ದೇವೆ. ಅವರು 215-220 ರನ್ಗಳನ್ನು ಗಳಿಸುತ್ತಾರೆಂದು ನಾವು ನಿರೀಕ್ಷಿಸಿದ್ದೆವು ಎಂದಿದ್ದಾರೆ.

GT vs LSG, IPL 2025: ಲಕ್ನೋ ವಿರುದ್ಧ ಸೋತರೂ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡ ಶುಭ್​ಮನ್ ಗಿಲ್
Shubman Gill Post Match Presentation (1)
Vinay Bhat
|

Updated on: May 23, 2025 | 10:28 AM

Share

ಬೆಂಗಳೂರು (ಮೇ. 22): ಇಂಡಿಯನ್ ಪ್ರೀಮಿಯರ್ ಲೀಗ್ 2025 ರ 64 ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವು ಲಕ್ನೋ ಸೂಪರ್‌ಜೈಂಟ್ಸ್ (Gujarat Titans vs Lucknow Super Giants) ವಿರುದ್ಧ 33 ರನ್‌ಗಳ ಹೀನಾಯ ಸೋಲು ಅನುಭವಿಸಿತು. ಎರಡೂ ತಂಡಗಳ ನಡುವಿನ ಈ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿತ್ತು. ಪಂದ್ಯದಲ್ಲಿ, ಗುಜರಾತ್ ನಾಯಕ ಶುಭ್​ಮನ್ ಗಿಲ್ ಟಾಸ್ ಗೆದ್ದ ನಂತರ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು, ಆದರೆ ಅದು ಅಂದುಕೊಂಡಂತೆ ಸಾಗಲಿಲ್ಲ. ಹೀಗಿದ್ದರೂ ನಾಯಕ ಗಿಲ್ ಪಂದ್ಯದ ನಂತರ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಳ್ಳುತ್ತಿರುವುದು ಕಂಡುಬಂತು.

ಲಕ್ನೋ ವಿರುದ್ಧದ ಸೋಲಿನ ನಂತರ ಶುಭ್​ಮನ್ ಗಿಲ್ ತುಂಬಾ ನಿರಾಶೆಗೊಂಡಿದ್ದರು, ಆದರೆ ಮೊದಲು ಬೌಲಿಂಗ್ ಮಾಡುವ ನಿರ್ಧಾರದ ಬಗ್ಗೆ ಮಾತನಾಡಿದ ಅವರು, ಈ ನಿರ್ಧಾರ ತಪ್ಪಲ್ಲ ಎಂದು ಹೇಳಿದರು. ‘ನಾವು ಬೌಲಿಂಗ್‌ನಲ್ಲಿ 15-20 ಹೆಚ್ಚುವರಿ ರನ್‌ಗಳನ್ನು ನೀಡಿದ್ದೇವೆ. ಅವರು 215-220 ರನ್​ಗಳನ್ನು ಗಳಿಸುತ್ತಾರೆಂದು ನಾವು ನಿರೀಕ್ಷಿಸಿದ್ದೆವು. ಮೊದಲು ಬೌಲಿಂಗ್ ಮಾಡುವ ನಿರ್ಧಾರ ತಪ್ಪಾಗಿರಲಿಲ್ಲ ಮತ್ತು ನಾವು ಪವರ್‌ಪ್ಲೇನಲ್ಲಿ ಚೆನ್ನಾಗಿ ಬೌಲಿಂಗ್ ಮಾಡಿದೆವು. ಈ ಪಂದ್ಯದಲ್ಲಿ ಶಾರುಖ್ ಮತ್ತು ರುದರ್ಫೋರ್ಡ್ ಬ್ಯಾಟಿಂಗ್ ಮಾಡಿದ ರೀತಿ ನಮಗೆ ಸಕಾರಾತ್ಮಕವಾಗಿತ್ತು. ಮುಂದಿನ ಪಂದ್ಯದಲ್ಲಿ ನಾವು ಮತ್ತೆ ಹಳೆ ವೇಗ ಪಡೆಯಲು ಪ್ರಯತ್ನಿಸುತ್ತೇವೆ’’ ಎಂದು ಗಿಲ್ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ ವೇಳೆ ಹೇಳಿದ್ದಾರೆ.

235 ರನ್ ಗಳಿಸಿದ ಲಕ್ನೋ ತಂಡ

ಇದನ್ನೂ ಓದಿ
Image
RCB vs SRH: ಇಂದಿನ ಹೈವೋಲ್ಟೇಜ್ ಪಂದ್ಯಕ್ಕೆ ಮಳೆಯ ಕಾಟ ಇದೆಯೇ?
Image
ಆರ್​ಸಿಬಿಗೆ ಡಬಲ್ ಖುಷ್: ಈ ಆಟಗಾರ ಕೂಡ ಫಿಟ್, ಇಂದು ಕಣಕ್ಕೆ
Image
ಲಕ್ನೋ ವಿರುದ್ಧ 33 ರನ್​​ಗಳಿಂದ ಸೋತ ಗುಜರಾತ್
Image
ಐಪಿಎಲ್​ನಲ್ಲಿ ಮತ್ತೊಂದು ದಾಖಲೆ ಬರೆದ ಜಸ್ಪ್ರೀತ್ ಬುಮ್ರಾ

ಗುಜರಾತ್ ವಿರುದ್ಧದ ಈ ಪಂದ್ಯದಲ್ಲಿ, ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ತಂಡವು ಉತ್ತಮ ಆರಂಭವನ್ನು ಪಡೆಯಿತು. ಲಕ್ನೋ ಪರ, ಮಿಚೆಲ್ ಮಾರ್ಷ್ ಮತ್ತು ಐಡೆನ್ ಮಾರ್ಕ್ರಾಮ್ ಮೊದಲ ವಿಕೆಟ್‌ಗೆ 91 ರನ್‌ಗಳ ಜೊತೆಯಾಟ ಆಡಿದರು. ಮಾರ್ಕ್ರಾಮ್ 24 ಎಸೆತಗಳಲ್ಲಿ 36 ರನ್ ಗಳಿಸಿ ಔಟಾದರು, ಆದರೆ ಮಾರ್ಷ್ ಏಕಾಂಗಿಯಾಗಿ ತಂಡದ ಕೋಟೆಯನ್ನು ಹಿಡಿದು 56 ಎಸೆತಗಳಲ್ಲಿ ಶತಕ ಗಳಿಸಿದರು.

RCB vs SRH Weather Report: ಐಪಿಎಲ್​ನಲ್ಲಿಂದು ಆರ್​ಸಿಬಿ-ಎಸ್ಆರ್​ಹೆಚ್ ಮುಖಾಮುಖಿ: ಹೈವೋಲ್ಟೇಜ್ ಪಂದ್ಯಕ್ಕೆ ಮಳೆಯ ಕಾಟ ಇದೆಯೇ?

ಲಕ್ನೋ ಪರ ಮಿಚೆಲ್ ಮಾರ್ಷ್ 117 ರನ್ ಗಳಿಸಿ ಔಟಾದರು. ಅವರ ಇನ್ನಿಂಗ್ಸ್‌ನಲ್ಲಿ ಅವರು 64 ಎಸೆತಗಳನ್ನು ಎದುರಿಸಿದರು, ಇದರಲ್ಲಿ 10 ಬೌಂಡರಿಗಳು ಮತ್ತು 8 ಸಿಕ್ಸರ್‌ಗಳು ಸೇರಿವೆ. ಇದು ಐಪಿಎಲ್‌ನಲ್ಲಿ ಮಿಚೆಲ್ ಮಾರ್ಷ್ ಅವರ ಮೊದಲ ಶತಕವೂ ಆಗಿತ್ತು. ಮಾರ್ಷ್ ಹೊರತುಪಡಿಸಿ, ನಿಕೋಲಸ್ ಪೂರನ್ ಲಕ್ನೋ ಪರ 27 ಎಸೆತಗಳಲ್ಲಿ 56 ರನ್ ಗಳಿಸಿ ಅಜೇಯರಾಗುಳಿದರು, ಆದರೆ ನಾಯಕ ರಿಷಭ್ ಪಂತ್ 16 ರನ್ ಗಳಿಸಿದರು. ಈ ಮೂಲಕ ತಂಡವು ನಿಗದಿತ 20 ಓವರ್‌ಗಳಲ್ಲಿ 235 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಗುಜರಾತ್ ತಂಡ ಕೇವಲ 202 ರನ್ ಗಳಿಸಲಷ್ಟೇ ಶಕ್ತವಾಯಿತು.

ಈ ಹಿಂದೆ ಸಾಯಿ ಸುದರ್ಶನ್, ಶುಭ್​ಮನ್ ಗಿಲ್ ಮತ್ತು ಜೋಸ್ ಬಟ್ಲರ್ ಅವರನ್ನು ಔಟ್ ಮಾಡಿದರೆ ಎದುರಾಳಿ ಸುಲಭವಾಗಿ ಪಂದ್ಯವನ್ನು ಗೆಲ್ಲುತ್ತಾರೆ ಎಂದು ತೋರುತ್ತಿತ್ತು, ಆದರೆ ಶಾರುಖ್ ಖಾನ್ ಲಕ್ನೋ ಗೆಲುವಿನ ಮುಂದೆ ಗೋಡೆಯಂತೆ ನಿಂತರು. ಶಾರುಖ್ ಖಾನ್ ಸ್ವಲ್ಪ ಹೊತ್ತು ಕ್ರೀಸ್‌ನಲ್ಲಿ ಇದ್ದಿದ್ದರೆ, ಗುಜರಾತ್ ತಂಡ 236 ರನ್‌ಗಳ ಗುರಿಯನ್ನು ಸುಲಭವಾಗಿ ಸಾಧಿಸಬಹುದಿತ್ತು, ಆದರೆ ಅದು ಆಗಲಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ