Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶತಕ ಗಳಿಸಲು ಕಾರಣವಾಯ್ತು ಆ ಒಂದು ಸಂದೇಶ: ಪಂದ್ಯದ ಬಳಿಕ ರಹಸ್ಯ ಬಿಚ್ಚಿಟ್ಟ ಶುಭಮನ್ ಗಿಲ್

ಚಾಂಪಿಯನ್ಸ್ ಟ್ರೋಫಿಯ ಮೊದಲ ಪಂದ್ಯದಲ್ಲೇ ಶುಭ್​ಮನ್ ಗಿಲ್ ಅದ್ಭುತ ಶತಕ ಗಳಿಸಿದರು. ಅವರು ಬಾಂಗ್ಲಾದೇಶ ವಿರುದ್ಧ ಅಜೇಯ 101 ರನ್‌ಗಳ ಇನ್ನಿಂಗ್ಸ್ ಆಡಿದರು. ಇದರಿಂದಾಗಿ ಟೀಮ್ ಇಂಡಿಯಾ 6 ವಿಕೆಟ್‌ಗಳಿಂದ ಜಯಗಳಿಸಿತು. ಅವರು ಶತಕಗಳಿಸಲು ಆ ಒಂದು ಸಂದೇಶ ಕಾರಣವಾಯ್ತಂತೆ! ಪೋಸ್ಟ್ ಮ್ಯಾಚ್ ಪ್ರಸೆಂಟೇಷನ್​ನಲ್ಲಿ ಅವರು ಹೇಳಿದ್ದೇನೆಂದು ತಿಳಿಯಲು ಮುಂದೆ ಓದಿ.

ಶತಕ ಗಳಿಸಲು ಕಾರಣವಾಯ್ತು ಆ ಒಂದು ಸಂದೇಶ: ಪಂದ್ಯದ ಬಳಿಕ ರಹಸ್ಯ ಬಿಚ್ಚಿಟ್ಟ ಶುಭಮನ್ ಗಿಲ್
ಶುಭ್​ಮನ್ ಗಿಲ್
Follow us
Ganapathi Sharma
|

Updated on:Feb 21, 2025 | 8:06 AM

2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾ ಗೆಲುವಿನೊಂದಿಗೆ ಶುಭಾರಂಭ ಮಾಡಿದೆ. ದುಬೈನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಭಾರತ ಬಾಂಗ್ಲಾದೇಶವನ್ನು 6 ವಿಕೆಟ್‌ಗಳಿಂದ ಮಣಿಸಿದೆ. ಈ ಮಹತ್ವದ ಗೆಲುವಿನಲ್ಲಿ ಶುಭ್​ಮನ್ ಗಿಲ್ ದೊಡ್ಡ ಪಾತ್ರವಹಿಸಿದ್ದಾರೆ. ಅವರ ಅಜೇಯ 101 ರನ್‌ಗಳ ಇನ್ನಿಂಗ್ಸ್‌ನಿಂದಾಗಿ ಟೀಮ್ ಇಂಡಿಯಾ ಗೆಲುವು ಸಾಧಿಸುವುದು ಸುಲಭವಾಯಿತು.

ಒಂದು ಹಂತದಲ್ಲಿ ಟೀಮ್ ಇಂಡಿಯಾ ಒತ್ತಡಕ್ಕೆ ಒಳಗಾದಾಗ ನೆಲಕಚ್ಚಿ ನಿಂತು ಗಿಲ್ ಮಾಡಿದ ಬ್ಯಾಟಿಂಗ್ ಪಂದ್ಯದ ಚಿತ್ರಣವನ್ನೇ ಬದಲಾಯಿಸಿತು. ಒಂದು ಹಂತದಲ್ಲಿ ಪ್ರಮುಖ ವಿಕೆಟ್​​ಗಳನ್ನು ಕಳೆದುಕೊಂಡು ತಂಡವು ಸಂಕಷ್ಟಕ್ಕೆ ಸಿಲುಕಿದ್ದಾಗ ಗಿಲ್‌ಗೆ ಡ್ರಸಿಂಗ್ ರೂಮ್​ನಿಂದ ಒಂದು ಸಂದೇಶ ಬಂದಿತ್ತಂತೆ. ಆ ಬಳಿಕ ಅವರು ವಿಕೆಟ್ ಉಳಿಸಿಕೊಂಡು ಆಟವಾಡಿ ಗೆಲುವಿನಲ್ಲಿ ಮುಖ್ಯ ಪಾತ್ರವಹಿಸಿದರು. ಶತಕ ಗಳಿಸಿದ್ದಲ್ಲದೆ, ಕೊನೆಯವರೆಗೂ ಆಟವಾಡಿ ಭಾರತ ತಂಡವನ್ನು ಗೆಲುವಿನ ದಡ ಸೇರಿಸಿದರು.

ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ್ದ ಬಾಂಗ್ಲಾದೇಶ ಕೇವಲ 35 ರನ್‌ಗಳಿಗೆ 5 ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ ನಂತರ ಚೇತರಿಸಿಕೊಂಡು, 229 ರನ್‌ಗಳ ಗುರಿಯನ್ನು ಟೀಮ್ ಇಂಡಿಯಾಕ್ಕೆ ನಿಗದಿಪಡಿಸಿತು. ಇದನ್ನು ಬೆನ್ನಟ್ಟಿದ ರೋಹಿತ್ ಶರ್ಮಾ ಮತ್ತು ಶುಭ್​ಮನ್ ಗಿಲ್ ಮೊದಲ 10 ಓವರ್‌ಗಳಲ್ಲಿ 69 ರನ್ ಗಳಿಸಿದರು. ಅಲ್ಲಿಯವರೆಗೂ ಟೀಮ್ ಇಂಡಿಯಾ ನಿರಾಯಾಸವಾಗಿ ಪಂದ್ಯ ಗೆಲ್ಲಲಿದೆ ಎಂದೇ ಕ್ರಿಕೆಟ್ ಅಭಿಮಾನಿಗಳು ಭಾವಿಸಿದ್ದರು.

ಒತ್ತಡಕ್ಕೆ ಸಿಲುಕಿದ್ದ ಟೀಮ್ ಇಂಡಿಯಾ

ಆದರೆ, ಬರುತ್ತಾ ಬರುತ್ತಾ ನಿಧಾನಗತಿಯ ವಿಕೆಟ್‌ನಿಂದಾಗಿ ರನ್ ಗಳಿಸುವುದು ಕಷ್ಟಕರವಾಗಿತ್ತು. ಈ ಹಂತದಲ್ಲಿ ಟೀಮ್ ಇಂಡಿಯಾ ನಿಯಮಿತವಾಗಿ ವಿಕೆಟ್‌ಗಳನ್ನು ಕಳೆದುಕೊಳ್ಳಲಾರಂಭಿಸಿತು. ತಂಡದ ಮೊತ್ತ 144 ರನ್‌ ಆಗುವಾಗ ರೋಹಿತ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ ಮತ್ತು ಅಕ್ಷರ್ ಪಟೇಲ್ ಪೆವಿಲಿಯನ್‌ಗೆ ಮರಳಿದ್ದರು. ಇದರಿಂದಾಗಿ ಟೀಮ್ ಇಂಡಿಯಾ ಒತ್ತಡಕ್ಕೆ ಸಿಲುಕಿತು. ಆದಾಗ್ಯೂ, ಗಿಲ್ ಇನ್ನೂ ಕ್ರೀಸ್‌ನಲ್ಲಿದ್ದರು.

ಗಿಲ್​ಗೆ ಗಂಭೀರ್, ರೋಹಿತ್ ಕಳುಹಿಸಿದ್ದ ಸಂದೇಶವೇನು?

ಭಾರತ ಇನ್ನೂ 95 ರನ್ ಗಳಿಸಬೇಕಾಗಿತ್ತು. ಈ ಹಂತದಲ್ಲಿ ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ನಾಯಕ ರೋಹಿತ್ ಕೊನೆಯವರೆಗೂ ಬ್ಯಾಟಿಂಗ್ ಮಾಡಲು ಪ್ರಯತ್ನಿಸಬೇಕು ಎಂದು ಗಿಲ್​ಗೆ ಸಂದೇಶ ಕಳುಹಿಸಿದರು. ಈ ಸಲಹೆಯನ್ನು ಪಾಲಿಸಿದ್ದರಿಂದಾಗಿ ಶತಕ ಗಳಿಸುವುದು ಮತ್ತು ತಂಡವನ್ನು ಗೆಲುವಿನತ್ತ ಕೊಂಡೊಯ್ಯುವುದು ಸಾಧ್ಯವಾಯಿತು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರೋಹಿತ್- ಹಾರ್ದಿಕ್ ಮಾಡಿದ ತಪ್ಪಿಗೆ 154 ರನ್ ದಂಡ ತೆತ್ತ ಟೀಂ ಇಂಡಿಯಾ

ಸ್ಕೋರ್ ವಿವರ

ಬಾಂಗ್ಲಾದೇಶ 49.4 ಓವರ್​​ಗಳಲ್ಲಿ 228 ರನ್​ಗಳಿಗೆ ಆಲೌಟ್ ಆಯಿತು. ಗುರಿ ಬೆನ್ನಟ್ಟಿದ ಟೀಮ್ ಇಂಡಿಯಾ 46.3 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗೆಲುವು ಸಾಧಿಸಿತು. ಭಾರತ ಪರ ಮೊಹಮ್ಮದ್ ಶಮಿ 5 ವಿಕೆಟ್ ಕಬಳಿಸಿದರು.

Published On - 8:03 am, Fri, 21 February 25

ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ಹೋರಿ ಹಬ್ಬ ಅವಳಿಗೆ ಪಂಚಪ್ರಾಣ: ಕೊಲೆಯಾದ ಸ್ವಾತಿ ನೆನೆದು ಗೆಳತಿ ಕಣ್ಣೀರು
ಹೋರಿ ಹಬ್ಬ ಅವಳಿಗೆ ಪಂಚಪ್ರಾಣ: ಕೊಲೆಯಾದ ಸ್ವಾತಿ ನೆನೆದು ಗೆಳತಿ ಕಣ್ಣೀರು
ಚಕ್ರಗಳನ್ನು ಕದಿಯಲು ಕಳ್ಳರು ಬಂದಿದ್ದು ಇನ್ನೋವಾ ಕಾರಲ್ಲಂತೆ!
ಚಕ್ರಗಳನ್ನು ಕದಿಯಲು ಕಳ್ಳರು ಬಂದಿದ್ದು ಇನ್ನೋವಾ ಕಾರಲ್ಲಂತೆ!