AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shubman Gill: ಸಚಿನ್ ದಾಖಲೆ ಮುರಿದ ಗಿಲ್: ಕೊಹ್ಲಿ ರೆಕಾರ್ಡ್​ ಸೇಫ್

IND vs WI: ವೆಸ್ಟ್ ಇಂಡೀಸ್ ವಿರುದ್ದದ ಮೊದಲ ಏಕದಿನ ಪಂದ್ಯದಲ್ಲಿ 3 ರನ್​ಗಳ ರೋಚಕ ಜಯ ಸಾಧಿಸಿರುವ ಟೀಮ್ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.

Shubman Gill: ಸಚಿನ್ ದಾಖಲೆ ಮುರಿದ ಗಿಲ್: ಕೊಹ್ಲಿ ರೆಕಾರ್ಡ್​ ಸೇಫ್
Virat Kohli-Shubhman-Sachin
TV9 Web
| Edited By: |

Updated on: Jul 23, 2022 | 4:24 PM

Share

ವೆಸ್ಟ್ ಇಂಡೀಸ್ (India vs West Indies) ವಿರುದ್ಧದ ಸರಣಿಯ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾದ ಯುವ ಆರಂಭಿಕ ಆಟಗಾರ ಶುಭಮನ್ ಗಿಲ್ (Shubman Gill) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಶುಕ್ರವಾರ ಪೋರ್ಟ್ ಆಫ್ ಸ್ಪೇನ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಗಿಲ್ ಕೇವಲ 36 ಎಸೆತಗಳಲ್ಲಿ ತಮ್ಮ ಚೊಚ್ಚಲ ಏಕದಿನ ಅರ್ಧಶತಕವನ್ನು ಪೂರ್ಣಗೊಳಿಸಿದರು. ವಿಶೇಷ ಎಂದರೆ 2019 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪಾದರ್ಪಣೆ ಮಾಡಿದ್ದ ಗಿಲ್​ 2 ವರ್ಷಗಳ ಬಳಿಕ ಕಂಬ್ಯಾಕ್ ಮಾಡಿದ ಪಂದ್ಯದಲ್ಲೇ ಹಾಫ್ ಸೆಂಚುರಿ ಸಿಡಿಸಿ ಮಿಂಚಿದ್ದಾರೆ. ಇನ್ನು ಈ ಅರ್ಧಶತಕದೊಂದಿಗೆ ಶುಭ್​ಮನ್ ಗಿಲ್ ವಿಶೇಷ ದಾಖಲೆಯನ್ನು ಕೂಡ ಬರೆದರು. ಅದು ಕೂಡ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

ಹೌದು, ವೆಸ್ಟ್ ಇಂಡೀಸ್​​ನಲ್ಲಿ ಟೀಮ್ ಇಂಡಿಯಾ ಪರ ಅರ್ಧಶತಕ ಬಾರಿಸಿದ ಅತ್ಯಂತ ಕಿರಿಯ ಬ್ಯಾಟ್ಸ್​ಮನ್​ಗಳ ಪಟ್ಟಿಯಲ್ಲಿ ಇದೀಗ ಶುಭ್​ಮನ್ ಗಿಲ್ 2ನೇ ಸ್ಥಾನಕ್ಕೇರಿದ್ದಾರೆ. ಇದಕ್ಕೂ ಮುನ್ನ ಸಚಿನ್ ತೆಂಡೂಲ್ಕರ್ ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದರು. ತಮ್ಮ 24 ವಯಸ್ಸಿನಲ್ಲಿ ಸಚಿನ್ ತೆಂಡೂಲ್ಕರ್ ವೆಸ್ಟ್ ಇಂಡೀಸ್​ನಲ್ಲಿ ಅರ್ಧಶತಕ ಬಾರಿಸಿ ದಾಖಲೆ ಬರೆದಿದ್ದರು.

ಇದೀಗ 22ನೇ ವಯಸ್ಸಿನಲ್ಲಿ ಶುಭ್​ಮನ್​ ಗಿಲ್ ಹಾಫ್ ಸೆಂಚುರಿ ಸಿಡಿಸುವ ಮೂಲಕ ಸಚಿನ್ ತೆಂಡೂಲ್ಕರ್ ಬರೆದಿಟ್ಟಿದ್ದ  ದಾಖಲೆಯನ್ನು ಅಳಿಸಿ ಹಾಕಿದ್ದಾರೆ. ಇದಾಗ್ಯೂ ಈ ಪಟ್ಟಿಯಲ್ಲಿರುವ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಲು ಸಾಧ್ಯವಾಗಿಲ್ಲ. ಅಂದರೆ ವೆಸ್ಟ್ ಇಂಡೀಸ್​ನಲ್ಲಿ ಏಕದಿನ ಕ್ರಿಕೆಟ್​ನಲ್ಲಿ ಅರ್ಧಶತಕ ಬಾರಿಸಿದ ಭಾರತದ ಅತ್ಯಂತ ಕಿರಿಯ ಬ್ಯಾಟ್ಸ್​ಮನ್ ಎಂಬ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ.

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ವಿರಾಟ್ ಕೊಹ್ಲಿ 22 ವರ್ಷ, 215 ದಿನಗಳ ಹರೆಯದಲ್ಲಿ ವೆಸ್ಟ್ ಇಂಡೀಸ್​ ಅಂಗಳದಲ್ಲಿ ಹಾಫ್ ಸೆಂಚುರಿ ಸಿಡಿಸಿ ಈ ದಾಖಲೆ ಬರೆದಿದ್ದರು. ಇದೀಗ ಶುಭ್​ಮನ್ ಗಿಲ್ 22 ವರ್ಷ, 317 ದಿನಗಳ ವಯಸ್ಸಿನಲ್ಲಿ ಅರ್ಧಶತಕ ಬಾರಿಸುವ ಮೂಲಕ ಈ ಪಟ್ಟಿಯಲ್ಲಿ 2ನೇ ಸ್ಥಾನ ಅಲಂಕರಿಸಿದ್ದಾರೆ. ಶುಭ್​ಮನ್ ಗಿಲ್ ಅವರ ಈ ಹಾಫ್​ಸೆಂಚುರಿಯ ಹೊರತಾಗಿಯೂ, ಅತ್ತ 22 ವರ್ಷ, 215 ದಿನಗಳಲ್ಲಿ ಅರ್ಧಶತಕ ಸಿಡಿಸಿ ಹೊಸ ಇತಿಹಾಸ ಬರೆದಿದ್ದ ವಿರಾಟ್ ಕೊಹ್ಲಿಯ ದಾಖಲೆ ಇನ್ನೂ ಕೂಡ ಅಚ್ಚಾಗಿ ಉಳಿದಿರುವುದು ವಿಶೇಷ.

2019 ರಲ್ಲಿ ಏಕದಿನ ಪಂದ್ಯದ​ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ​ಪಾದಾರ್ಪಣೆ ಮಾಡಿದ ಶುಭಮನ್ ಗಿಲ್, ದೇಶೀಯ ಕ್ರಿಕೆಟ್‌ನಲ್ಲಿ ಪಂಜಾಬ್ ಅನ್ನು ಪ್ರತಿನಿಧಿಸುತ್ತಾರೆ. ಗಿಲ್ ಟೀಮ್ ಇಂಡಿಯಾ ಪರ 3 ಏಕದಿನ ಮತ್ತು 11 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಟೆಸ್ಟ್ ನಲ್ಲಿ 30.47ರ ಸರಾಸರಿಯಲ್ಲಿ ಒಟ್ಟು 579 ರನ್ ಗಳಿಸಿದ್ದಾರೆ. ಇನ್ನು 4 ಏಕದಿನ ಪಂದ್ಯಗಳಿಂದ ಒಟ್ಟು 113 ರನ್​ ಕಲೆಹಾಕಿದ್ದಾರೆ.

ಸರಣಿಯಲ್ಲಿ ಭಾರತಕ್ಕೆ ಮುನ್ನಡೆ:

ವೆಸ್ಟ್ ಇಂಡೀಸ್ ವಿರುದ್ದದ ಮೊದಲ ಏಕದಿನ ಪಂದ್ಯದಲ್ಲಿ 3 ರನ್​ಗಳ ರೋಚಕ ಜಯ ಸಾಧಿಸಿರುವ ಟೀಮ್ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ. ನಾಯಕ ಶಿಖರ್ ಧವನ್ (Shikhar Dhawan) ಅವರ 97 ರನ್, ಶುಭ್ಮನ್ ಗಿಲ್ 64 ಹಾಗೂ ಶ್ರೇಯಸ್ ಅಯ್ಯರ್ ಅವರ 54 ರನ್​ಗಳ ನೆರವಿನಿಂದ ಭಾರತ 50 ಓವರ್​ಗಳಲ್ಲಿ 308 ರನ್ ಕಲೆಹಾಕಿತು.  ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ವೆಸ್ಟ್ ಇಂಡೀಸ್ ಜಯಕ್ಕೆ ಕಠಿಣ ಹೋರಾಟ ನಡೆಸಿತು. ಕೈಲ್ ಮೇಯರ್ಸ್ 75 ರನ್ ಸಿಡಿಸಿ ಏಕಾಂಗಿ ಹೋರಾಟ ನಡೆಸಿದರು. ಆದರೆ, ಕೊನೆಯ ಓವರ್​ನಲ್ಲಿ ಮೊಹಮ್ಮದ್ ಸಿರಾಜ್ (Mohammed Siraj) 15 ರನ್​ಗಳನ್ನು ತಡೆಯುವಲ್ಲಿ ಯಶಸ್ವಿಯಾಗುವ ಮೂಲಕ ಟೀಮ್ ಇಂಡಿಯಾಗೆ 3 ರನ್​ಗಳ ರೋಚಕ ಜಯ ತಂದುಕೊಟ್ಟರು.

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್