AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shubman Gill: ಸುದ್ದಿಗೋಷ್ಠಿಯಲ್ಲಿ ಇಂಗ್ಲೆಂಡ್ ಪತ್ರಕರ್ತನ ಮೈಚಳಿ ಬಿಡಿಸಿದ ಶುಭ್​ಮನ್ ಗಿಲ್

England vs India Second Test: ಎರಡನೇ ಟೆಸ್ಟ್‌ನಲ್ಲಿ ಜಯಗಳಿಸಿದ ನಂತರ ಶುಭ್ಮನ್ ಪತ್ರಿಕಾಗೋಷ್ಠಿಗೆ ಬಂದಾಗ, ಇಂಗ್ಲೆಂಡ್ ಪತ್ರಕರ್ತನಿಗೆ ಸರಿಯಾಗಿ ಟಾಂಗ್ ಕೊಟ್ಟಿದ್ದಾರೆ. ಪಂದ್ಯಕ್ಕೂ ಆರಂಭಕ್ಕೂ ಮೊದಲು ಎಡ್ಜ್‌ಬಾಸ್ಟನ್‌ನಲ್ಲಿ ಭಾರತದ ದಾಖಲೆಯ ಬಗ್ಗೆ ಕೇಳುತ್ತಿದ್ದ ಪತ್ರಕರ್ತನ ಬಗ್ಗೆ ಶುಭ್​ಮನ್ ಗಿಲ್ ಅವರೀಗೆ ಎಲ್ಲಿದ್ದಾರೆ ಎಂದು ಕೇಳಿದರು.

Shubman Gill: ಸುದ್ದಿಗೋಷ್ಠಿಯಲ್ಲಿ ಇಂಗ್ಲೆಂಡ್ ಪತ್ರಕರ್ತನ ಮೈಚಳಿ ಬಿಡಿಸಿದ ಶುಭ್​ಮನ್ ಗಿಲ್
Shubman Gill Press Conference
Vinay Bhat
|

Updated on: Jul 07, 2025 | 8:30 AM

Share

ಬೆಂಗಳೂರು (ಜು. 07): ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ, ಭಾರತೀಯ ನಾಯಕನನ್ನು ಇಂಗ್ಲಿಷ್ ಪತ್ರಕರ್ತರೊಬ್ಬರು ಕೆಣಕಿದರು. ಎಡ್ಜ್‌ಬಾಸ್ಟನ್‌ನಲ್ಲಿ ಟೀಮ್ ಇಂಡಿಯಾ ಎಂದಿಗೂ ಗೆದ್ದಿಲ್ಲ ಎಂದು ಪತ್ರಿಕಾಗೋಷ್ಠಿಯಲ್ಲಿ ಶುಭ್​ಮನ್ ಗಿಲ್ (Shubman Gill) ಅವರನ್ನು ಕೇಳಲಾಗಿತ್ತು. ಅಂತಹ ಪರಿಸ್ಥಿತಿಯಲ್ಲಿ, ಭಾರತ ತಂಡವು ಈಗ ಎರಡನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಅನ್ನು 336 ರನ್‌ಗಳಿಂದ ಸೋಲಿಸಿದಾಗ, ಮತ್ತೊಮ್ಮೆ ಶುಭ್​ಮನ್ ಗಿಲ್ ಪತ್ರಿಕಾಗೋಷ್ಠಿಗೆ ಬಂದಾಗ, ಇಂಗ್ಲೆಂಡ್ ಪತ್ರಕರ್ತನಿಗೆ ಸರಿಯಾಗಿ ಟಾಂಗ್ ಕೊಟ್ಟಿದ್ದಾರೆ. ಪಂದ್ಯಕ್ಕೂ ಆರಂಭಕ್ಕೂ ಮೊದಲು ಎಡ್ಜ್‌ಬಾಸ್ಟನ್‌ನಲ್ಲಿ ಭಾರತದ ದಾಖಲೆಯ ಬಗ್ಗೆ ಕೇಳುತ್ತಿದ್ದ ಪತ್ರಕರ್ತನ ಬಗ್ಗೆ ಶುಭ್​ಮನ್ ಗಿಲ್ ಅವರೀಗೆ ಎಲ್ಲಿದ್ದಾರೆ ಎಂದು ಕೇಳಿದರು.

ಎರಡನೇ ಟೆಸ್ಟ್‌ನಲ್ಲಿ ಜಯಗಳಿಸಿದ ನಂತರ ಶುಭ್​ಮನ್ ಪತ್ರಿಕಾಗೋಷ್ಠಿಗೆ ಬಂದಾಗ, ‘ನನ್ನ ನೆಚ್ಚಿನ ಪತ್ರಕರ್ತನನ್ನು ನಾನು ನೋಡುತ್ತಿಲ್ಲ. ಅವರು ಎಲ್ಲಿದ್ದಾರೆ? ನಾನು ಅವರನ್ನು ನೋಡಲು ಬಯಸಿದ್ದೆ’ ಎಂದು ಹೇಳಿದರು. ಇದರ ನಂತರ ಅವರು, ‘ಟೆಸ್ಟ್ ಪಂದ್ಯಕ್ಕೂ ಮುಂಚೆಯೇ ನಾನು ಇತಿಹಾಸ ಮತ್ತು ಅಂಕಿಅಂಶಗಳಲ್ಲಿ ಹೆಚ್ಚು ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದೆ. ಕಳೆದ ಸುಮಾರು 56 ವರ್ಷಗಳಲ್ಲಿ, ನಾವು ಒಂಬತ್ತು ಪಂದ್ಯಗಳನ್ನು ಆಡಿದ್ದೇವೆ. ವಿಭಿನ್ನ ತಂಡಗಳು ಇಲ್ಲಿಗೆ ಬಂದಿವೆ. ನಾವು ಇಂಗ್ಲೆಂಡ್‌ಗೆ ಬರುವ ಅತ್ಯುತ್ತಮ ತಂಡ ಎಂದು ನಾನು ನಂಬುತ್ತೇನೆ ಮತ್ತು ಅವರನ್ನು ಸೋಲಿಸುವ, ಇಲ್ಲಿಂದ ಸರಣಿಯನ್ನು ಗೆಲ್ಲುವ ಸಾಮರ್ಥ್ಯ ನಮಗಿದೆ. ನಾವು ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾ ಮತ್ತು ಹೋರಾಡುತ್ತಾ ಇದ್ದರೆ, ಇದು ನೆನಪಿನಲ್ಲಿಟ್ಟುಕೊಳ್ಳಬೇಕಾದ ಸರಣಿಗಳಲ್ಲಿ ಒಂದಾಗಿರುತ್ತದೆ ಎಂದು ನಾನು ಭಾವಿಸುತ್ತೇನೆ’ ಎಂಬುದು ಗಿಲ್ ಮಾತು.

ಶುಭ್​ಮನ್‌ಗೆ ಎಡ್ಜ್‌ಬಾಸ್ಟನ್ ಟೆಸ್ಟ್ ಸ್ಮರಣೀಯ

ಎಡ್ಜ್‌ಬಾಸ್ಟನ್ ಟೆಸ್ಟ್ ಪಂದ್ಯವು ಭಾರತೀಯ ತಂಡದ ನಾಯಕ ಶುಭ್​ಮನ್ ಗಿಲ್‌ಗೆ ಸ್ಮರಣೀಯವಾಗಿತ್ತು. ಗಿಲ್ ಟೀಮ್ ಇಂಡಿಯಾ ಪರ ಮೊದಲ ಇನ್ನಿಂಗ್ಸ್‌ನಲ್ಲಿ 269 ರನ್‌ಗಳು ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 161 ರನ್‌ಗಳನ್ನು ಗಳಿಸಿದರು. ಅವರ ಅದ್ಭುತ ಬ್ಯಾಟಿಂಗ್‌ನಿಂದಾಗಿ ಟೀಮ್ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 587 ರನ್‌ಗಳನ್ನು ಗಳಿಸಿತು. ಇದರ ನಂತರ, ಭಾರತ ತಂಡ ಎರಡನೇ ಇನ್ನಿಂಗ್ಸ್‌ನಲ್ಲಿ 427 ರನ್‌ಗಳನ್ನು ಗಳಿಸಿತು. ಈ ರೀತಿಯಾಗಿ, ಟೀಮ್ ಇಂಡಿಯಾ ಮೊದಲ ಬಾರಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಎರಡೂ ಇನ್ನಿಂಗ್ಸ್‌ಗಳಲ್ಲಿ ಸೇರಿ 1000 ಕ್ಕೂ ಹೆಚ್ಚು ರನ್‌ಗಳನ್ನು ಗಳಿಸಿದ ದಾಖಲೆಯನ್ನು ಮಾಡಿತು.

ಇದನ್ನೂ ಓದಿ
Image
ಮೂರನೇ ಟೆಸ್ಟ್​ ಪಂದ್ಯಕ್ಕೆ 16 ಸದಸ್ಯರ ತಂಡ ಪ್ರಕಟಿಸಿದ ಇಂಗ್ಲೆಂಡ್
Image
ಎಡ್ಜ್‌ಬಾಸ್ಟನ್ ಟೆಸ್ಟ್ ಗೆದ್ದ ಭಾರತ; ಡಬ್ಲ್ಯುಟಿಸಿ ಪಾಯಿಂಟ್‌ ಪಟ್ಟಿಯಲ್ಲಿ
Image
ಭಾರತದ ಐತಿಹಾಸಿಕ ಗೆಲುವಿಗೆ ಕಾರಣರಾದ 6 ಆಟಗಾರರಿವರು
Image
ಆಂಗ್ಲರ 58 ವರ್ಷಗಳ ಹೆಮ್ಮೆಯನ್ನು ಛಿದ್ರಗೊಳಿಸಿದ ಟೀಂ ಇಂಡಿಯಾ

IND vs ENG: ಸೋಲಿನ ಬೆನ್ನಲ್ಲೇ ಲಾರ್ಡ್ಸ್ ಟೆಸ್ಟ್​ಗೆ ತಂಡ ಪ್ರಕಟಿಸಿದ ಇಂಗ್ಲೆಂಡ್; ಘಾತುಕ ವೇಗಿಯ ಆಗಮನ

ಭಾರತ ವಿರುದ್ಧದ ಎಡ್ಜ್‌ಬಾಸ್ಟನ್ ಟೆಸ್ಟ್‌ನಲ್ಲಿನ ಸೋಲಿನ ನಂತರ, ಇಂಗ್ಲೆಂಡ್ ಆಯ್ಕೆದಾರರು ತಂಡದಲ್ಲಿ ಬದಲಾವಣೆಗಳನ್ನು ಮಾಡಿದ್ದಾರೆ. ಲಾರ್ಡ್ಸ್ ಟೆಸ್ಟ್‌ಗೆ ಇಂಗ್ಲೆಂಡ್ ತಂಡವು ತನ್ನ ಅತ್ಯಂತ ಅಪಾಯಕಾರಿ ಬೌಲರ್ ಅನ್ನು ಸೇರಿಸಿಕೊಂಡಿದೆ. ಜುಲೈ 10 ರಿಂದ ಲಾರ್ಡ್ಸ್‌ನಲ್ಲಿ ನಡೆಯಲಿರುವ ಭಾರತ ವಿರುದ್ಧದ ಮೂರನೇ ಟೆಸ್ಟ್‌ಗೆ ವೇಗದ ಬೌಲರ್ ಗಸ್ ಅಟ್ಕಿನ್ಸನ್ ಮರಳಿದ್ದಾರೆ. ಮೇ ತಿಂಗಳಲ್ಲಿ ಜಿಂಬಾಬ್ವೆ ವಿರುದ್ಧ ಇಂಗ್ಲೆಂಡ್ ಪರ ಅಟ್ಕಿನ್ಸನ್ ತಮ್ಮ ಕೊನೆಯ ಟೆಸ್ಟ್ ಪಂದ್ಯವನ್ನು ಆಡಿದರು. ಜಿಂಬಾಬ್ವೆ ಟೆಸ್ಟ್‌ನಲ್ಲಿ ಅನುಭವಿಸಿದ ಮಂಡಿರಜ್ಜು ಗಾಯದಿಂದ ಚೇತರಿಸಿಕೊಳ್ಳುತ್ತಿದ್ದರಿಂದ ಅವರು ಭಾರತದ ವಿರುದ್ಧದ ಟೆಸ್ಟ್ ಸರಣಿಗೆ ತಂಡಕ್ಕೆ ಬರಲು ಸಾಧ್ಯವಾಗಲಿಲ್ಲ, ಇದರಿಂದಾಗಿ ಅವರು ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಿಂದಲೂ ಹೊರಗುಳಿಯಬೇಕಾಯಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ