AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದ 2ನೇ ಪಂದ್ಯಕ್ಕೂ ಶುಭ್​ಮನ್ ಗಿಲ್ ಅಲಭ್ಯ

Shubman Gill: ಶುಭ್​ಮನ್ ಗಿಲ್ ಅನುಪಸ್ಥಿತಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಶಾನ್ ಕಿಶನ್ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಹೀಗಾಗಿ ಅಫ್ಘಾನಿಸ್ತಾನ್ ವಿರುದ್ಧದ ಪಂದ್ಯದಲ್ಲೂ ಟೀಮ್ ಇಂಡಿಯಾ ಓಪನರ್ ಆಗಿ ಎಡಗೈ ದಾಂಡಿಗ ಕಿಶನ್ ಅವರೇ ಕಣಕ್ಕಿಳಿಯಲಿದ್ದಾರೆ.

ಟೀಮ್ ಇಂಡಿಯಾದ 2ನೇ ಪಂದ್ಯಕ್ಕೂ ಶುಭ್​ಮನ್ ಗಿಲ್ ಅಲಭ್ಯ
Shubman Gill
TV9 Web
| Edited By: |

Updated on: Oct 09, 2023 | 9:03 PM

Share

ಭಾರತ ತಂಡದ ಯುವ ಆರಂಭಿಕ ಆಟಗಾರ ಶುಭ್​ಮನ್ ಗಿಲ್ (Shubman Gill) ಅಫ್ಘಾನಿಸ್ತಾನ್ ವಿರುದ್ಧದ ಪಂದ್ಯದಿಂದಲೂ ಹೊರಗುಳಿದಿದ್ದಾರೆ. ಡೆಂಗಿ ಜ್ವರದ ಕಾರಣ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದ ಗಿಲ್ 2ನೇ ಪಂದ್ಯಕ್ಕಾಗಿ ದೆಹಲಿಗೆ ತೆರಳಿಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ.

ಶುಭ್‌ಮನ್ ಗಿಲ್ ಅವರು 9 ಅಕ್ಟೋಬರ್ 2023 ರಂದು ದೆಹಲಿಗೆ ತಂಡದೊಂದಿಗೆ ಪ್ರಯಾಣಿಸಿಲ್ಲ. ಅವರು ಚೆನ್ನೈನಲ್ಲಿ ಉಳಿದಿದ್ದಾರೆ. ಅಲ್ಲದೆ ಅಲ್ಲೇ ವೈದ್ಯಕೀಯ ತಂಡದ ಮೇಲ್ವಿಚಾರಣೆಯಲ್ಲಿರಲಿದ್ದಾರೆ. ಹೀಗಾಗಿ ಅಫ್ಘಾನಿಸ್ತಾನ್​ ವಿರುದ್ಧದ ಪಂದ್ಯದಿಂದಲೂ ಶುಭ್​ಮನ್ ಗಿಲ್ ಹೊರಗುಳಿದಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.

ಇನ್ನು ಶುಭ್​ಮನ್ ಗಿಲ್ ಅನುಪಸ್ಥಿತಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಶಾನ್ ಕಿಶನ್ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಹೀಗಾಗಿ ಅಫ್ಘಾನಿಸ್ತಾನ್ ವಿರುದ್ಧದ ಪಂದ್ಯದಲ್ಲೂ ಎಡಗೈ ದಾಂಡಿಗ ಕಿಶನ್ ಅವರೇ ಕಣಕ್ಕಿಳಿಯಲಿದ್ದಾರೆ.

ಭಾರತ-ಅಫ್ಘಾನಿಸ್ತಾನ್ ಅಕ್ಟೋಬರ್ 11 ರಂದು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಲಿದ್ದು, ಈ ಪಂದ್ಯದಲ್ಲೂ ಗೆಲ್ಲುವ ಮೂಲಕ ಗೆಲುವಿನ ಲಯ ಮುಂದುವರೆಸುವ ಇರಾದೆಯಲ್ಲಿದೆ ಟೀಮ್ ಇಂಡಿಯಾ.

ಏಕೆಂದರೆ ಈ ಪಂದ್ಯದ ಬಳಿಕ ಟೀಮ್ ಇಂಡಿಯಾದ ಮುಂದಿನ ಎದುರಾಳಿ ಪಾಕಿಸ್ತಾನ್. ಅಕ್ಟೋಬರ್ 14 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಇದೀಗ ಕ್ರಿಕೆಟ್​ ಪ್ರೇಮಿಗಳ ಕುತೂಹಲದ ಕೇಂದ್ರವಾಗಿ ಮಾರ್ಪಟ್ಟಿದೆ. ಗಾಗಿ ಅಫ್ಘಾನಿಸ್ತಾನ್ ವಿರುದ್ಧ ಭರ್ಜರಿ ಪ್ರದರ್ಶನ ನೀಡುವ ಮೂಲಕ ಪಾಕ್ ವಿರುದ್ದದ ಪಂದ್ಯಕ್ಕೆ ಟೀಮ್ ಇಂಡಿಯಾ ಸಜ್ಜಾಗಲಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: ಭರ್ಜರಿ ಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಶುಭ್​ಮನ್ ಗಿಲ್

ಅಫ್ಘಾನಿಸ್ತಾನ ತಂಡ: ಹಶ್ಮತುಲ್ಲಾ ಶಾಹಿದಿ (ನಾಯಕ), ರಹಮಾನುಲ್ಲಾ ಗುರ್ಬಾಝ್, ಇಬ್ರಾಹಿಂ ಝದ್ರಾನ್, ರಿಯಾಜ್ ಹಸನ್, ರಹಮತ್ ಷಾ, ನಜೀಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಇಕ್ರಮ್ ಅಲಿಖಿಲ್, ಅಜ್ಮತುಲ್ಲಾ ಒಮರ್​ಝೈ, ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ನೂರ್ ಅಹ್ಮದ್, ಫಝಲ್ಹಕ್ ಫಾರೂಖಿ, ಅಬ್ದುಲ್ ರಹಮಾನ್, ನವೀನ್ ಉಲ್ ಹಕ್.

Follow Us
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ