AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಕಪ್​ಗಾಗಿ ತಯಾರಿಯಲ್ಲಿದ್ದ ಗಿಲ್​​ಗೆ ಬಿಗ್ ಶಾಕ್ ನೀಡಿದ ಬಿಸಿಸಿಐ

India Squad For T20 World Cup 2026: ಫೆಬ್ರವರಿ 7 ರಿಂದ ಶುರುವಾಗಲಿರುವ ಟಿ20 ವಿಶ್ವಕಪ್​ಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಿದರೆ, ಉಪನಾಯಕನಾಗಿ ಅಕ್ಷರ್ ಪಟೇಲ್ ಕಾಣಿಸಿಕೊಳ್ಳಲಿದ್ದಾರೆ. ಅಂದರೆ ಈ ಹಿಂದೆ ವೈಸ್ ಕ್ಯಾಪ್ಟನ್ ಆಗಿ ಕಾಣಿಸಿಕೊಂಡಿದ್ದ ಶುಭ್​​ಮನ್ ಗಿಲ್ ಅವರನ್ನು ಭಾರತ ತಂಡದಿಂದ ಕೈ ಬಿಡಲಾಗಿದೆ.

ವಿಶ್ವಕಪ್​ಗಾಗಿ ತಯಾರಿಯಲ್ಲಿದ್ದ ಗಿಲ್​​ಗೆ ಬಿಗ್ ಶಾಕ್ ನೀಡಿದ ಬಿಸಿಸಿಐ
Shubman Gill
ಝಾಹಿರ್ ಯೂಸುಫ್
|

Updated on: Dec 22, 2025 | 12:57 PM

Share

ಟಿ20 ವಿಶ್ವಕಪ್​ಗಾಗಿ ಬಲಿಷ್ಠ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ತಂಡದಲ್ಲಿ ಶುಭ್​ಮನ್ ಗಿಲ್​ಗೆ ಸ್ಥಾನ ನೀಡಲಾಗಿಲ್ಲ ಎಂಬುದೇ ವಿಶೇಷ. ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಭಾರತ ತಂಡದ ಉಪನಾಯಕನಾಗಿ ಗಿಲ್ ಕಣಕ್ಕಿಳಿದಿದ್ದರು. ಹೀಗಾಗಿ ಅವರು ಮುಂಬರುವ ಟಿ20 ವಿಶ್ವಕಪ್​ನಲ್ಲೂ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದರು. ಅಷ್ಟೇ ಅಲ್ಲದೆ ನ್ಯೂಝಿಲೆಂಡ್ ಸರಣಿ ಹಾಗೂ ಟಿ20 ವಿಶ್ವಕಪ್​ಗಾಗಿ ಮಾನಸಿಕವಾಗಿ ತಯಾರಿಯನ್ನೂ ಸಹ ಆರಂಭಿಸಿದ್ದರು. ಆದರೆ ಭಾರತ ತಂಡದ ಘೋಷಣೆಗೂ ಕೆಲವೇ ನಿಮಿಷಗಳ ಮೊದಲು ಬಿಸಿಸಿಐ ಗಿಲ್​ಗೆ ಬಿಗ್ ಶಾಕ್ ನೀಡಿರುವ ವಿಚಾರ ಇದೀಗ ಬಹಿರಂಗವಾಗಿದೆ.

ಭಾರತ ತಂಡದ ಘೋಷಣೆಗೂ ಮುನ್ನ ಮುಂಬೈನಲ್ಲಿರುವ ಬಿಸಿಸಿಐ ಕಚೇರಿಯಲ್ಲಿ ಸಭೆ ಸೇರಲಾಗಿತ್ತು. ಈ ಸಭೆಯಲ್ಲಿ ಆಯ್ಕೆ ಸಮಿತಿ ಸದಸ್ಯರು ಹಾಗೂ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಭಾಗವಹಿಸಿದ್ದರು. ಈ ವೇಳೆಯೇ ಶುಭ್​ಮನ್ ಗಿಲ್ ಅವರನ್ನು ತಂಡದಿಂದ ಕೈ ಬಿಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ.

ಅಂದರೆ ಅದಕ್ಕೂ ಮುನ್ನ ಶುಭ್​ಮನ್ ಗಿಲ್ ಭಾರತ ಟಿ20 ತಂಡದ ಭಾಗವಾಗಿಯೇ ಇದ್ದರು. ಆದರೆ ತಂಡದ ಘೋಷಣೆಗೂ ಕೆಲವೇ ನಿಮಿಷಗಳ ಮೊದಲು ಗಿಲ್ ಅವರನ್ನು ಕೈ ಬಿಟ್ಟು ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಇಶಾನ್ ಕಿಶನ್ ಅವರನ್ನು ಆಯ್ಕೆ ಮಾಡಲು ನಿರ್ಧರಿಸಲಾಗಿದೆ.

ಅದರಂತೆ ಪತ್ರಿಕಾಗೋಷ್ಠಿಗೂ ನಿಮಿಷಗಳ ಮೊದಲು ಶುಭ್​ಮನ್ ಗಿಲ್​ಗೆ ಕರೆ ಮಾಡಿ ತಂಡದಿಂದ ಕೈ ಬಿಟ್ಟಿರುವ ವಿಚಾರವನ್ನು ತಿಳಿಸಲಾಗಿದೆ. ಅತ್ತ ಗಿಲ್ ಮುಂಬರುವ ನ್ಯೂಝಿಲೆಂಡ್ ವಿರುದ್ಧದ ಸರಣಿಗೆ ಹಾಗೂ ಟಿ20 ವಿಶ್ವಕಪ್​ಗಾಗಿ ಮಾನಸಿಕವಾಗಿ ತಯಾರಿಯಲ್ಲಿದ್ದರು.

ಇದಾಗ್ಯೂ ಅವರಿಗೆ ಪರಿಸ್ಥಿತಿಯನ್ನು ಮನವರಿಕೆ ಮಾಡಲಾಯಿತು. ಈ ಮೂಲಕ ಶುಭ್​ಮನ್ ಗಿಲ್ ಅವರನ್ನು ಭಾರತ ಟಿ20 ತಂಡದಿಂದ ಹೊರಗಿಡಲಾಗಿದೆ. ಹೀಗಾಗಿ ಮುಂಬರುವ ಟಿ20 ಸರಣಿಯಲ್ಲಿ ಶುಭ್​ಮನ್ ಗಿಲ್ ಭಾರತದ ಪರ ಕಣಕ್ಕಿಳಿಯುವುದಿಲ್ಲ. ಹಾಗೆಯೇ ಟಿ20 ವಿಶ್ವಕಪ್​ನಲ್ಲೂ ಕಾಣಿಸಿಕೊಳ್ಳುವುದಿಲ್ಲ.

ಇದನ್ನೂ ಓದಿ: IPL 2026: ಈ ಆಟಗಾರನನ್ನು ಖರೀದಿಸಿದ್ದೇ ಕೆಎಲ್ ರಾಹುಲ್​ಗಾಗಿ..!

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!