AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2025: ಏಷ್ಯಾಕಪ್‌ ಬಗ್ಗೆ ಸಿಗ್ತು ಸಿಹಿ ಸುದ್ದಿ; ಈ ದೇಶದಲ್ಲಿ ಪಂದ್ಯಾವಳಿಯನ್ನು ಆಯೋಜಿಸಲಿದೆ ಬಿಸಿಸಿಐ

Asia Cup 2025: 2025ರ ಏಷ್ಯಾ ಕಪ್ ಪಂದ್ಯಾವಳಿಯು ಸೆಪ್ಟೆಂಬರ್ 8 ರಿಂದ ಪ್ರಾರಂಭವಾಗಲಿದೆ ಎಂದು ವರದಿಯಾಗಿದೆ. ಯುಎಇಯಲ್ಲಿ ಈ ಪಂದ್ಯಾವಳಿಯನ್ನು ನಡೆಸಲು ತೀರ್ಮಾನಿಸಲಾಗಿದ್ದು, ಇದರ ಆತಿಥ್ಯ ಬಿಸಿಸಿಐ ಬಳಿ ಇರಲಿದೆ. ಈ ಪಂದ್ಯಾವಳಿಯಲ್ಲಿ ಭಾರತ, ಪಾಕಿಸ್ತಾನ, ಶ್ರೀಲಂಕಾ ಸೇರಿದಂತೆ 8 ತಂಡಗಳು ಭಾಗವಹಿಸಲಿವೆ. ಟಿ20 ಸ್ವರೂಪದಲ್ಲಿ ನಡೆಯಲಿರುವ ಈ ಪಂದ್ಯಾವಳಿಯು ಸೆಪ್ಟೆಂಬರ್ 24 ರಂದು ಫೈನಲ್ ಪಂದ್ಯದೊಂದಿಗೆ ಮುಕ್ತಾಯಗೊಳ್ಳಲಿದೆ. ಬಿಸಿಸಿಐ ಪಂದ್ಯಾವಳಿಯ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ.

Asia Cup 2025: ಏಷ್ಯಾಕಪ್‌ ಬಗ್ಗೆ ಸಿಗ್ತು ಸಿಹಿ ಸುದ್ದಿ; ಈ ದೇಶದಲ್ಲಿ ಪಂದ್ಯಾವಳಿಯನ್ನು ಆಯೋಜಿಸಲಿದೆ ಬಿಸಿಸಿಐ
Asia Cup 2025
ಪೃಥ್ವಿಶಂಕರ
|

Updated on:Jul 25, 2025 | 6:39 PM

Share

2025 ರ ಏಷ್ಯಾಕಪ್ (Asia Cup 2025) ಪಂದ್ಯಾವಳಿ ನಡೆಯುವ ಬಗ್ಗೆ ಬಹಳ ಸಮಯದಿಂದ ಚರ್ಚೆ ನಡೆಯುತ್ತಿದೆ. ಆದಾಗ್ಯೂ, ಈಗ ಈ ಪಂದ್ಯಾವಳಿಯ ಆರಂಭದ ಬಗ್ಗೆ ಒಂದು ದೊಡ್ಡ ವರದಿ ಹೊರಬಿದ್ದಿದೆ. 2025 ರ ಏಷ್ಯಾಕಪ್ ಕುರಿತು ಢಾಕಾದಲ್ಲಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ಸಭೆ ನಡೆಯಬೇಕಿತ್ತು, ಆದರೆ ಬಿಸಿಸಿಐ (BCCI) ಈ ಸಭೆಗೆ ಹಾಜರಾಗಲು ನಿರಾಕರಿಸಿತ್ತು. ಆದಾಗ್ಯೂ, ಬಿಸಿಸಿಐ ಆನ್‌ಲೈನ್‌ನಲ್ಲಿ ಈ ಸಭೆಯಲ್ಲಿ ಭಾಗವಹಿಸಿದ್ದು, ಏಷ್ಯಾಕಪ್ ಆಯೋಜನೆಯ ಬಗ್ಗೆ ಚರ್ಚಿಸಲಾಗಿದೆ. ಅಲ್ಲದೆ ಪಂದ್ಯಾವಳಿಯನ್ನು ಆಯೋಜಿಸಲು ಒಮ್ಮತ ಮೂಡಿಬಂದಿದೆ ಎಂದು ಹೇಳಲಾಗುತ್ತಿದ್ದು, ಪಂದ್ಯಾವಳಿ ಸೆಪ್ಟೆಂಬರ್ 7 ರಿಂದ ಪ್ರಾರಂಭವಾಗಲಿದೆ ಎಂದು ವರದಿಯಾಗಿದೆ.

ಸೆಪ್ಟೆಂಬರ್ 7ರಿಂದ ಪಂದ್ಯಾವಳಿ ಆರಂಭ

ವರದಿಯ ಪ್ರಕಾರ, 2025 ರ ಏಷ್ಯಾಕಪ್ ಪಂದ್ಯಾವಳಿ ಸೆಪ್ಟೆಂಬರ್ 7 ರಿಂದ ಪ್ರಾರಂಭವಾಗಲಿದ್ದು, ಇದರ ಫೈನಲ್ ಪಂದ್ಯ ಸೆಪ್ಟೆಂಬರ್ 24 ರಂದು ನಡೆಯಲಿದೆ. 8 ತಂಡಗಳ ನಡುವೆ ಈ ಟೂರ್ನಿಯಲ್ಲಿ ಭಾರತ, ಅಫ್ಘಾನಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಪಾಕಿಸ್ತಾನ ಪೂರ್ಣ ಸದಸ್ಯತ್ವ ರಾಷ್ಟಗಳಾಗಿದ್ದರೆ, ಎಸಿಸಿ ಪ್ರೀಮಿಯರ್ ಕಪ್ ವಿಜೇತ ತಂಡ ಹಾಂಗ್ ಕಾಂಗ್, ಓಮನ್ ಮತ್ತು ಯುಎಇ ಕೂಡ ಇದರಲ್ಲಿ ಭಾಗವಹಿಸಲಿವೆ. ಮಾಹಿತಿಯ ಪ್ರಕಾರ, ಈ ಬಾರಿಯ ಏಷ್ಯಾಕಪ್ ಪಂದ್ಯಾವಳಿಯನ್ನು ಯುಎಇಯಲ್ಲಿ ಆಯೋಜಿಸಲಾಗುವುದು. ಆದಾಗ್ಯೂ, ಬಿಸಿಸಿಐ ಬಳಿ ಇದರ ಆತಿಥ್ಯದ ಹಕ್ಕು ಇರಲಿದ್ದು, ಶೀಘ್ರದಲ್ಲೇ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಿದೆ.

2026 ರ ಟಿ20 ವಿಶ್ವಕಪ್ ಅನ್ನು ಗಮನದಲ್ಲಿಟ್ಟುಕೊಂಡು, ಈ ಬಾರಿ ಏಷ್ಯಾಕಪ್ ಅನ್ನು ಟಿ20 ಸ್ವರೂಪದಲ್ಲಿ ನಡೆಸಲಾಗುವುದು. ಕಳೆದ ಬಾರಿ ಏಕದಿನ ವಿಶ್ವಕಪ್ ಇದ್ದಾಗ, ಈ ಪಂದ್ಯಾವಳಿಯನ್ನು ಏಕದಿನ ಸ್ವರೂಪದಲ್ಲಿ ಆಯೋಜಿಸಲಾಗಿತ್ತು. ಹೈಬ್ರಿಡ್ ಮಾದರಿಯಡಿಯಲ್ಲಿ ನಡೆದ ಈ ಟೂರ್ನಿಯನ್ನು ಪಾಕಿಸ್ತಾನ ಮತ್ತು ಶ್ರೀಲಂಕಾದಲ್ಲಿ ಆಯೋಜಿಸಲಾಗಿತ್ತು. ಶ್ರೀಲಂಕಾದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ, ಶ್ರೀಲಂಕಾವನ್ನು ಸೋಲಿಸಿ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು.

‘ಅದರಲ್ಲಿ ಯಾವುದೇ ಸತ್ಯವಿಲ್ಲ’; ಏಷ್ಯಾಕಪ್ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ಬಿಸಿಸಿಐ ಕಾರ್ಯದರ್ಶಿ

ಭಾರತ ಹಾಲಿ ಚಾಂಪಿಯನ್‌

ಏಷ್ಯಾಕಪ್‌ನ ಕೊನೆಯ ಸೀಸನ್ 2023 ರಲ್ಲಿ ನಡೆದಿತ್ತು. ಇದರ ಫೈನಲ್ ಪಂದ್ಯ ಕೊಲಂಬೊದಲ್ಲಿ ನಡೆದಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಶ್ರೀಲಂಕಾ ಕೇವಲ 50 ರನ್‌ಗಳಿಗೆ ಆಲೌಟ್ ಆಯಿತು. ಭಾರತದ ಪರ, ವೇಗಿ ಮೊಹಮ್ಮದ್ ಸಿರಾಜ್ ಮಾರಕ ಬೌಲಿಂಗ್ ಮಾಡಿ 7 ಓವರ್‌ಗಳಲ್ಲಿ 21 ರನ್‌ ನೀಡಿ 6 ವಿಕೆಟ್‌ಗಳನ್ನು ಕಬಳಿಸಿದರೆ, ಹಾರ್ದಿಕ್ ಪಾಂಡ್ಯ ಮೂರು ವಿಕೆಟ್‌ಗಳನ್ನು ಕಬಳಿಸಿದರು. ಟೀಂ ಇಂಡಿಯಾ ಕೇವಲ 6.1 ಓವರ್‌ಗಳಲ್ಲಿ 51 ರನ್‌ಗಳ ಗುರಿ ತಲುಪಿ ಟ್ರೋಫಿಯನ್ನು ಎತ್ತಿ ಹಿಡಿದಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:30 pm, Thu, 24 July 25

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ