AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೇತೇಶ್ವರ ಪೂಜಾರ ಸಹ ಆಟಗಾರ ಈಗ ಟೀಮ್ ಇಂಡಿಯಾ ಕೋಚ್..!

Sitanshu Kotak: ಸಿತಾಂಶು ಕೊಟಕ್ ಸೌರಾಷ್ಟ್ರ ಮೂಲದ ಮಾಜಿ ಕ್ರಿಕೆಟಿಗ. ಈ ಹಿಂದೆ ಭಾರತ ಎ ತಂಡದ ಮುಖ್ಯ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದರು. ಅಷ್ಟೇ ಅಲ್ಲದೆ ಎನ್‌ಸಿಎನಲ್ಲಿ ಬ್ಯಾಟಿಂಗ್ ಕೋಚ್ ಆಗಿ ಸೇವೆ ಸಲ್ಲಿಸಿದ್ದಾರೆ.

ಚೇತೇಶ್ವರ ಪೂಜಾರ ಸಹ ಆಟಗಾರ ಈಗ ಟೀಮ್ ಇಂಡಿಯಾ ಕೋಚ್..!
Ranji Team
TV9 Web
| Edited By: |

Updated on: Aug 13, 2023 | 9:03 PM

Share

ಭಾರತ-ಐರ್ಲೆಂಡ್ ನಡುವಣ 3 ಪಂದ್ಯಗಳ ಟಿ20 ಸರಣಿ ಆಗಸ್ಟ್ 18 ರಿಂದ ಶುರುವಾಗಲಿದೆ. ಐರ್ಲೆಂಡ್​ನ ಮಲಾಹೈಡ್​ ಕ್ರಿಕೆಟ್ ಕ್ಲಬ್ ಮೈದಾನದಲ್ಲಿ ನಡೆಯಲಿರುವ ಈ ಸರಣಿಗಾಗಿ ಟೀಮ್ ಇಂಡಿಯಾ ಆಗಸ್ಟ್ 15 ರಂದು ಪ್ರಯಾಣ ಬೆಳೆಸಲಿದೆ. ಆದರೆ ಸರಣಿಯಲ್ಲಿ ಟೀಮ್ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ಕಾಣಿಸಿಕೊಳ್ಳುವುದಿಲ್ಲ. ಬದಲಾಗಿ ಸಿತಾಂಶು ಕೊಟಕ್ ಅವರನ್ನು ಭಾರತ ತಂಡದೊಂದಿಗೆ ಕಳುಹಿಸಲು ಬಿಸಿಸಿಐ ನಿರ್ಧರಿಸಿದೆ.

ಮುಂಬರುವ ಏಷ್ಯಾಕಪ್​ ಹಿನ್ನಲೆಯಲ್ಲಿ ಐರ್ಲೆಂಡ್ ವಿರುದ್ಧದ ಸರಣಿಯಿಂದ ಪ್ರಮುಖ ಆಟಗಾರರು ಹೊರಗುಳಿದಿದ್ದಾರೆ. ಹಾಗೆಯೇ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರಿಗೂ ವಿಶ್ರಾಂತಿ ನೀಡಲಾಗಿದೆ. ಇತ್ತ ಹಂಗಾಮಿ ಕೋಚ್ ಆಗಿ ವಿವಿಎಸ್​ ಲಕ್ಷ್ಮಣ್ ಐರ್ಲೆಂಡ್ ಪ್ರವಾಸದಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಹೊಸ ಕೋಚ್ ಆಗಿ ಮಾಜಿ ಆಟಗಾರ ಸಿತಾಂಶು ಕೊಟಕ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ವರದಿಯಾಗಿದೆ.

ಯಾರು ಈ ಸಿತಾಂಶು ಕೊಟಕ್?

ಸಿತಾಂಶು ಕೊಟಕ್ ಸೌರಾಷ್ಟ್ರ ಮೂಲದ ಮಾಜಿ ಕ್ರಿಕೆಟಿಗ. ಈ ಹಿಂದೆ ಭಾರತ ಎ ತಂಡದ ಮುಖ್ಯ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದರು. ಅಷ್ಟೇ ಅಲ್ಲದೆ ಎನ್‌ಸಿಎನಲ್ಲಿ ಬ್ಯಾಟಿಂಗ್ ಕೋಚ್ ಆಗಿ ಸೇವೆ ಸಲ್ಲಿಸಿದ್ದಾರೆ.

ಸಿತಾಂಶು ಕೊಟಕ್

ಸಿತಾಂಶು ಕೊಟಕ್

ಇನ್ನು ದೇಶೀಯ ಅಂಗಳದಲ್ಲಿ 130 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿರುವ ಸಿತಾಂಶು ಒಟ್ಟು 8061 ರನ್ ಕಲೆಹಾಕಿದ್ದಾರೆ. ಹಾಗೆಯೇ 89 ಲಿಸ್ಟ್ ಎ ಪಂದ್ಯಗಳಲ್ಲಿ 3083 ರನ್ ಮತ್ತು 9 ಟಿ20 ಪಂದ್ಯಗಳಲ್ಲಿ 133 ರನ್ ಗಳಿಸಿದ್ದಾರೆ. ಇದಲ್ಲದೆ 124 ವಿಕೆಟ್​ಗಳನ್ನು ಕಬಳಿಸಿದ್ದಾರೆ.

ಪೂಜಾರ-ಜಯದೇವ್ ಸಹ ಆಟಗಾರ:

ಸಿತಾಂಶು ಕೊಟಕ್ 2013 ರಲ್ಲಿ ಕೊನೆಯ ಬಾರಿ ಆಟಗಾರನಾಗಿ ಕಾಣಿಸಿಕೊಂಡಿದ್ದರು. ಮುಂಬೈ ವಿರುದ್ಧದ ರಣಜಿ ಟ್ರೋಫಿ ಫೈನಲ್​ ಪಂದ್ಯದಲ್ಲಿ ಸೌರಾಷ್ಟ್ರ ಪರ ಕಣಕ್ಕಿಳಿದಿದ್ದರು. ಅಂದು ತಂಡದಲ್ಲಿ ಚೇತೇಶ್ವರ ಪೂಜಾರಾ ಹಾಗೂ ಜಯದೇವ್ ಉನಾದ್ಕಟ್ ಕೂಡ ಇದ್ದರು ಎಂಬುದು ವಿಶೇಷ.

ಇದನ್ನೂ ಓದಿ: ಪೂರನ್ ಪವರ್​ಗೆ ಹಳೆಯ ದಾಖಲೆ ಉಡೀಸ್​: ಟೀಮ್ ಇಂಡಿಯಾ ವಿರುದ್ದ ಹೊಸ ರೆಕಾರ್ಡ್

ಹಾಗೆಯೇ ಆ ಫೈನಲ್ ಪಂದ್ಯದಲ್ಲಿ ಮುಂಬೈ ಪರ ಸಚಿನ್ ತೆಂಡೂಲ್ಕರ್ ಕೂಡ ಆಡಿದ್ದರು. ಇದೀಗ ಹೊಸ ಇನಿಂಗ್ಸ್ ಆರಂಭಿಸಿರುವ ಸಿತಾಂಶು ಕೊಟಕ್ ಐರ್ಲೆಂಡ್ ಸರಣಿಯಲ್ಲಿ ಟೀಮ್ ಇಂಡಿಯಾದ ಹಂಗಾಮಿ ಕೋಚ್ ಆಗಿ ಕಾಣಿಸಿಕೊಳ್ಳಲಿದ್ದಾರೆ.

ಐರ್ಲೆಂಡ್ ಸರಣಿಗೆ ಟೀಮ್ ಇಂಡಿಯಾ ಹೀಗಿದೆ:

ಜಸ್​ಪ್ರೀತ್ ಬುಮ್ರಾ (ನಾಯಕ), ರುತುರಾಜ್ ಗಾಯಕ್ವಾಡ್ (ಉಪನಾಯಕ), ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಶಹಬಾಝ್ ಅಹ್ಮದ್, ರವಿ ಬಿಷ್ಣೋಯ್, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್, ಅವೇಶ್ ಖಾನ್.

ಭಾರತ-ಐರ್ಲೆಂಡ್ ಟಿ20 ಸರಣಿ ವೇಳಾಪಟ್ಟಿ:

  1. ಆಗಸ್ಟ್ 18: ಮೊದಲ ಟಿ20 ಪಂದ್ಯ (ಮಲಾಹೈಡ್ ಕ್ರಿಕೆಟ್ ಸ್ಟೇಡಿಯಂ)
  2. ಆಗಸ್ಟ್ 20: ಎರಡನೇ ಟಿ20 ಪಂದ್ಯ (ಮಲಾಹೈಡ್ ಕ್ರಿಕೆಟ್ ಸ್ಟೇಡಿಯಂ)
  3. ಆಗಸ್ಟ್ 22: ಮೂರನೇ ಟಿ20 ಪಂದ್ಯ (ಮಲಾಹೈಡ್ ಕ್ರಿಕೆಟ್ ಸ್ಟೇಡಿಯಂ)
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ