17 ಎಸೆತಗಳಲ್ಲಿ 59 ರನ್​: ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ ಶ್ರೀಲಂಕಾ

SL vs AUS 3rd T20I: ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ದಸುನ್ ಶನಕ 25 ಎಸೆತಗಳಲ್ಲಿ 54 ರನ್ ಗಳಿಸಿ ಅಜೇಯರಾಗಿ ಉಳಿದರು. ಈ ವೇಳೆ ಅವರು 5 ಬೌಂಡರಿ ಹಾಗೂ 4 ಸಿಕ್ಸರ್‌ಗಳನ್ನು ಬಾರಿಸಿದ್ದರು. ಇನ್ನು ಉತ್ತಮ ಸಾಥ್ ನೀಡಿದ ಕರುಣಾರತ್ನೆ 10 ಎಸೆತಗಳಲ್ಲಿ 14 ರನ್ ಗಳಿಸಿದರು.

17 ಎಸೆತಗಳಲ್ಲಿ 59 ರನ್​: ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ ಶ್ರೀಲಂಕಾ
SL vs AUS 3rd T20I
Follow us
| Updated By: ಝಾಹಿರ್ ಯೂಸುಫ್

Updated on: Jun 12, 2022 | 2:07 PM

ಶನಿವಾರ ನಡೆದ ಆಸ್ಟ್ರೇಲಿಯಾ ವಿರುದ್ದದ ಅಂತಿಮ ಟಿ20 ಪಂದ್ಯದಲ್ಲಿ (SL vs AUS 3rd T20I) ಭರ್ಜರಿಯಾಗಿ ಗೆಲ್ಲುವ ಮೂಲಕ ಶ್ರೀಲಂಕಾ ತಂಡವು ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು 5 ವಿಕೆಟ್‌ ಕಳೆದುಕೊಂಡು 176 ರನ್ ಗಳಿಸಿತು. ಈ ಟಾರ್ಗೆಟ್ ಅನ್ನು ಬೆನ್ನತ್ತಿದ ಶ್ರೀಲಂಕಾ ತಂಡವು 108 ರನ್‌ಗಳಿಸುಷ್ಟರಲ್ಲಿ ಪ್ರಮುಖ 6 ವಿಕೆಟ್ ಕಳೆದುಕೊಂಡಿತು. ಆದರೆ ಏಕಾಂಗಿ ಹೋರಾಟ ಮುಂದುವರೆಸಿದ ಲಂಕಾ ನಾಯಕ ದಸುನ್ ಶನಕ (Dasun Shanaka) ಕೊನೆಯ ಮೂರು ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣವನ್ನೇ ಬದಲಿಸಿಬಿಟ್ಟರು.

17 ಓವರ್​ ಮುಕ್ತಾಯದ ವೇಳೆ ಶ್ರೀಲಂಕಾ ಸ್ಕೋರ್ 6 ವಿಕೆಟ್‌ಗೆ 118 ರನ್ ಆಗಿತ್ತು. ಕೊನೆಯ 18 ಎಸೆತಗಳಲ್ಲಿ 59 ರನ್ ಗಳಿಸಬೇಕಿತ್ತು. ಅಂದರೆ ಪ್ರತಿ ಓವರ್​ಗೆ 19.66 ರನ್​ಗಳ ಅವಶ್ಯಕತೆಯಿತ್ತು. 18ನೇ ಓವರ್ ಅನ್ನು ವೇಗಿ ಜೋಸ್ ಹ್ಯಾಝಲ್​ವುಡ್​ ಎಸೆದರು. ಚಮಿಕಾ ಕರುಣರತ್ನೆ ಮೊದಲ ಎಸೆತದಲ್ಲಿ ಒಂದು ರನ್ ಗಳಿಸಿದರು. ಎರಡನೇ ಎಸೆತದಲ್ಲಿ ಶನಕ ಲಾಂಗ್ ಆನ್​ನತ್ತ ಸಿಕ್ಸರ್ ಬಾರಿಸಿದರು. ಮೂರನೇ ಎಸೆತದಲ್ಲಿ ಮತ್ತೆ ಸಿಕ್ಸರ್ ಸಿಡಿಸಿದರು. 4ನೇ ಎಸೆತದಲ್ಲಿ ಕವರ್‌ನಲ್ಲಿ ಮತ್ತು 5ನೇ ಎಸೆತದಲ್ಲಿ ಲಾಂಗ್ ಆನ್‌ನಲ್ಲಿ ಬೌಂಡರಿ ಬಾರಿಸಿದರು. ಕೊನೆಯ ಎಸೆತದಲ್ಲಿ 1 ರನ್ ಗಳಿಸಿದರು. ಈ ಮೂಲಕ 18ನೇ ಓವರ್‌ನಲ್ಲಿ ಒಟ್ಟು 22 ರನ್‌ಗಳು ಕಲೆಹಾಕಿದರು. ಪರಿಣಾಮ ಕೊನೆಯ 12 ಎಸೆತಗಳಲ್ಲಿ 37 ರನ್‌ಗಳ ಅಗತ್ಯವಿತ್ತು.

ಈ ಬಾರಿ ಶನಕ ಸ್ಟ್ರೈಕ್​ನಲ್ಲಿದ್ದರು. ವೇಗದ ಬೌಲರ್ ಜ್ಯೆ ರಿಚರ್ಡ್‌ಸನ್ ಎಸೆದ 19ನೇ ಓವರ್‌ನ ಮೊದಲ ಎಸೆತದಲ್ಲಿ ಡೀಪ್ ಮಿಡ್‌ವಿಕೆಟ್‌ನತ್ತ ಸಿಕ್ಸ್ ಬಾರಿಸಿದರು. ಎರಡನೇ ಎಸೆತದಲ್ಲಿ 1 ರನ್ ಗಳಿಸಿದರು. ಮೂರನೇ ಎಸೆತದಲ್ಲಿ ಕರುಣಾರತ್ನೆ ಕವರ್‌ನಲ್ಲಿ ಬೌಂಡರಿ ಬಾರಿಸಿದರು. ನಾಲ್ಕನೇ ಎಸೆತದಲ್ಲಿ 1 ರನ್ ಗಳಿಸಿದರು. ಶನಕ 5ನೇ ಎಸೆತದಲ್ಲಿ ಡೀಪ್ ಮಿಡ್‌ವಿಕೆಟ್‌ನತ್ತ ಬೌಂಡರಿ ಬಾರಿಸಿದರು. ಮುಂದಿನ ಬಾಲ್ ವೈಡ್. ಕೊನೆಯ ಎಸೆತದಲ್ಲಿ 1 ರನ್ ಗಳಿಸಿದರು. ಈ ಮೂಲಕ 19ನೇ ಓವರ್‌ನಲ್ಲಿ 18 ರನ್‌ಗಳು ಕಲೆಹಾಕಿದರು. ಇದಾಗ್ಯೂ ಕೊನೆಯ 6 ಎಸೆತಗಳಲ್ಲಿ 19 ರನ್‌ಗಳ ಅವಶ್ಯಕತೆಯಿತ್ತು.

ಇದನ್ನೂ ಓದಿ
Image
KL Rahul: ಗಾಯ ಗಂಭೀರವಲ್ಲ..ಜಿಮ್​ನಲ್ಲಿ ಕಾಣಿಸಿಕೊಂಡ ಕೆಎಲ್ ರಾಹುಲ್..!
Image
Yash Next Movie: ಯಶ್ ಮುಂದಿನ ಚಿತ್ರಕ್ಕೆ ಸೌತ್ ಸುಂದರಿ ನಾಯಕಿ..?
Image
Hardik Pandya: ದಿನೇಶ್ ಕಾರ್ತಿಕ್ ವಿರುದ್ದ ಸೇಡು ತೀರಿಸಿಕೊಂಡ್ರಾ ಹಾರ್ದಿಕ್ ಪಾಂಡ್ಯ?
Image
Dinesh Karthik: ಟೀಮ್ ಇಂಡಿಯಾ ಪರ ಯಾರೂ ಮಾಡದ ದಾಖಲೆ ಬರೆದ ದಿನೇಶ್ ಕಾರ್ತಿಕ್

ಆಸ್ಟ್ರೇಲಿಯಾ ನಾಯಕ ಆರೋನ್ ಫಿಂಚ್ ವೇಗದ ಬೌಲರ್ ಕೇನ್ ರಿಚರ್ಡ್ಸನ್ ಅವರಿಗೆ ಚೆಂಡು ನೀಡಿದರು. ಕೇನ್ ರಿಚರ್ಡ್ಸನ್ ಮೊದಲ 2 ಎಸೆತಗಳನ್ನು ವೈಡ್ ಬೌಲ್ ಮಾಡಿದರು. ಆ ಬಳಿಕ ಮೊದಲ ಎಸೆತದಲ್ಲಿ ಶನಕ ಒಂದು ರನ್ ಗಳಿಸಿದರು. ಎರಡನೇ ಎಸೆತದಲ್ಲಿ ಕರುಣರತ್ನೆ ಲೆಗ್ ಬೈ ರೂಪದಲ್ಲಿ 1 ರನ್ ಓಡಿದರು. ಮೂರನೇ ಎಸೆತದಲ್ಲಿ ಶನಕ ಬ್ಯಾಕ್‌ವರ್ಡ್ ಪಾಯಿಂಟ್‌ನಲ್ಲಿ ಬೌಂಡರಿ ಬಾರಿಸಿದರು. ನಾಲ್ಕನೇ ಎಸೆತದಲ್ಲಿ ಲಾಂಗ್ ಆಫ್ ನಲ್ಲಿ ಮತ್ತೊಮ್ಮೆ ಬೌಂಡರಿ ಬಾರಿಸಿದರು. 5ನೇ ಎಸೆತದಲ್ಲಿ ಭರ್ಜರಿ ಸಿಕ್ಸರ್ ಬಾರಿಸಿದ ಶನಕ ತಂಡದ ಸ್ಕೋರ್ ಅನ್ನು ಸಮಬಲಗೊಳಿಸಿದರು. ಕೊನೆಯ ಎಸೆತದಲ್ಲಿ 1 ರನ್​ ಬೇಕಿತ್ತು. ಈ ವೇಳೆ ರಿಚರ್ಡ್ಸನ್ ವೈಡ್ ಬೌಲ್ ಎಸೆದರು. ಇದರೊಂದಿಗೆ 19.5 ಓವರ್​ಗಳಲ್ಲಿ 177 ರನ್​ಗಳನ್ನು ಚೇಸ್ ಮಾಡುವ ಶ್ರೀಲಂಕಾ ತಂಡವು ಭರ್ಜರಿ ಜಯ ಸಾಧಿಸಿತು.

ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ದಸುನ್ ಶನಕ 25 ಎಸೆತಗಳಲ್ಲಿ 54 ರನ್ ಗಳಿಸಿ ಅಜೇಯರಾಗಿ ಉಳಿದರು. ಈ ವೇಳೆ ಅವರು 5 ಬೌಂಡರಿ ಹಾಗೂ 4 ಸಿಕ್ಸರ್‌ಗಳನ್ನು ಬಾರಿಸಿದ್ದರು. ಇನ್ನು ಉತ್ತಮ ಸಾಥ್ ನೀಡಿದ ಕರುಣಾರತ್ನೆ 10 ಎಸೆತಗಳಲ್ಲಿ 14 ರನ್ ಗಳಿಸಿದರು. ಅಷ್ಟೇ ಅಲ್ಲದೆ ಈ ಜೋಡಿ ಕೊನೆಯ 4.1 ಓವರ್‌ಗಳಲ್ಲಿ 69 ರನ್‌ಗಳನ್ನು ಕಲೆಹಾಕಿದ್ದು ವಿಶೇಷ.

ಈ ಗೆಲುವಿನೊಂದಿಗೆ ಶ್ರೀಲಂಕಾ ತಂಡವು ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ಬರೆಯಿತು. ಕೊನೆಯ 17 ಭಎಸೆತಗಳಲ್ಲಿ ತಂಡ 59 ರನ್ ಗಳಿಸುವ ಮೂಲಕ ಕೊನೆಯ 3 ಓವರ್​ ಓವರ್​ಗಳಲ್ಲಿ ಅತ್ಯಧಿಕ ಮೊತ್ತ ಚೇಸ್ ಮಾಡಿದ ತಂಡ ಎನಿಸಿಕೊಂಡಿತು. ಅಂತಾರಾಷ್ಟ್ರೀಯ ಟಿ20ಯಲ್ಲಿ ಇದೊಂದು ಹೊಸ ದಾಖಲೆಯಾಗಿದೆ. ಈ ಹಿಂದೆ ಯಾವುದೇ ತಂಡ ಕೊನೆಯ 3 ಓವರ್​ಗಳಲ್ಲಿ ಇಷ್ಟೊಂದು ದೊಡ್ಡ ಮೊತ್ತವನ್ನು ಚೇಸ್ ಮಾಡಿರಲಿಲ್ಲ. ಇದೀಗ ದಸುನ್ ಶನಕ ಅವರ ಆರ್ಭಟದೊಂದಿಗೆ ಶ್ರೀಲಂಕಾ ತಂಡವು ಹೊಸ ಇತಿಹಾಸ ಬರೆದಿದೆ. ಇದಾಗ್ಯೂ ಈ ಸರಣಿಯನ್ನು ಆಸ್ಟ್ರೇಲಿಯಾ ತಂಡವು 2-1 ಅಂತರದಿಂದ ವಶಪಡಿಸಿಕೊಂಡಿದೆ.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು