AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SL vs AUS: 6 ಎಸೆತ, 19 ರನ್ ಬೇಕು; 3 ಬೌಂಡರಿ ಬಾರಿಸಿದ ಆಸೀಸ್! ಕೊನೆಯ ಓವರ್ ರೋಚಕತೆ ಹೇಗಿತ್ತು ಗೊತ್ತಾ?

SL vs AUS: ಆಸ್ಟ್ರೇಲಿಯಾ ಗೆಲುವಿಗೆ ಕೊನೆಯ 3 ಎಸೆತಗಳಲ್ಲಿ 13 ರನ್‌ಗಳ ಅಗತ್ಯವಿತ್ತು. ಇಂತಹ ಪರಿಸ್ಥಿತಿಯಲ್ಲಿ ಎಲ್ಲರೂ ಸಿಕ್ಸರ್ ನಿರೀಕ್ಷೆಯಲ್ಲಿದ್ದರು. ಆದರೆ ಇಲ್ಲಿ ಸಿಕ್ಸರ್ ಬರಲಿಲ್ಲ, ಆದರೆ ಬ್ಯಾಕ್ ಟು ಬ್ಯಾಕ್ ಎರಡು ಬೌಂಡರಿಗಳು ಬಂದವು.

SL vs AUS: 6 ಎಸೆತ, 19 ರನ್ ಬೇಕು; 3 ಬೌಂಡರಿ ಬಾರಿಸಿದ ಆಸೀಸ್! ಕೊನೆಯ ಓವರ್ ರೋಚಕತೆ ಹೇಗಿತ್ತು ಗೊತ್ತಾ?
ಶ್ರೀಲಂಕಾ ಕ್ರಿಕೆಟ್ ತಂಡ
TV9 Web
| Updated By: ಪೃಥ್ವಿಶಂಕರ|

Updated on: Jun 22, 2022 | 11:54 AM

Share

ಆಸ್ಟ್ರೇಲಿಯಾ (Australia) ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ ಶ್ರೀಲಂಕಾ (Sri Lanka) ಗೆಲುವು ಸಾಧಿಸಿದೆ. ಇದರೊಂದಿಗೆ 5 ಏಕದಿನ ಪಂದ್ಯಗಳ ಸರಣಿಯಲ್ಲಿ 3-1 ಮುನ್ನಡೆ ಸಾಧಿಸಿದೆ. ಆದರೆ, ಇಲ್ಲಿ ಮಾತನಾಡುತ್ತಿರುವುದು ಸೋಲು-ಗೆಲುವಿನ ಬಗ್ಗೆ ಅಲ್ಲ, ಪಂದ್ಯದ ಕೊನೆಯ ಓವರ್‌ನಲ್ಲಿ ಒಂದಲ್ಲ, ಎರಡಲ್ಲ,, ಬರೋಬ್ಬರಿ ಮೂರು ರೋಚಕ ಕ್ಷಣಗಳ ಬಗ್ಗೆ. ಈ 3 ರೋಚಕ ಕ್ಷಣಗಳು ಅಭಿಮಾನಿಗಳ ಹೃದಯ ಗೆದ್ದ ಕ್ಷಣಗಳಾಗಿವೆ. ಪಂದ್ಯದ ಕೊನೆಯ ಓವರ್ ಅಂದರೆ ಆಸ್ಟ್ರೇಲಿಯಾದ ಇನಿಂಗ್ಸ್​ನ ಕೊನೆಯ 6 ಎಸೆತಗಳು ಈ ರೋಚಕತೆಗೆ ಸಾಕ್ಷಿಯಾದವು. ಆ 6 ಎಸೆತಗಳಲ್ಲಿ ಆಸ್ಟ್ರೇಲಿಯಾ 19 ರನ್ ಗಳಿಸಬೇಕಿತ್ತು. ಕೈಯಲ್ಲಿ ಒಂದು ವಿಕೆಟ್ ಮಾತ್ರ ಉಳಿದಿತ್ತು. ಶ್ರೀಲಂಕಾ ಮೇಲುಗೈ ಸಾಧಿಸಿತು.

ಆಸ್ಟ್ರೇಲಿಯ ವಿರುದ್ಧದ 4ನೇ ಏಕದಿನ ಪಂದ್ಯದಲ್ಲಿ ಶ್ರೀಲಂಕಾ 4 ರನ್‌ಗಳ ಜಯ ಸಾಧಿಸಿದೆ. ಚರಿತ್ ಅಸಲಂಕಾ ಅವರ ಶತಕದ ಆಧಾರದ ಮೇಲೆ ಮೊದಲು ಆಡಿದ ಶ್ರೀಲಂಕಾ ನಾಲ್ಕನೇ ಏಕದಿನ ಪಂದ್ಯದಲ್ಲಿ 258 ರನ್ ಗಳಿಸಿತು. ಇದಕ್ಕುತ್ತರವಾಗಿ 259 ರನ್ ಬೆನ್ನತ್ತಿದ ಆಸ್ಟ್ರೇಲಿಯಾ ತಂಡ 254 ರನ್ ಗಳಿಸಲಷ್ಟೇ ಶಕ್ತವಾಯಿತು. ಆಸೀಸ್ ಪರ ಡೇವಿಡ್ ವಾರ್ನರ್ ಗರಿಷ್ಠ 99 ರನ್ ಗಳಿಸಿದರು.

ಇದನ್ನೂ ಓದಿ:SL vs AUS: ಲಂಕಾ ವಿರುದ್ಧದ ಮೊದಲ ಟಿ20ಗೆ ಆಸೀಸ್ ತಂಡ ಪ್ರಕಟ; ಐಪಿಎಲ್ ಫ್ಲಾಪ್ ಸ್ಟಾರ್​ಗಳಿಗೆ ತಂಡದಲ್ಲಿ ಸ್ಥಾನ

ಇದನ್ನೂ ಓದಿ
Image
Virat Kohli Covid-19: ಮಾಲ್ಡೀವ್ಸ್​ಗೆ ತೆರಳಿದ್ದ ವಿರಾಟ್ ಕೊಹ್ಲಿಗೆ ಕೊರೊನಾ ಪಾಸಿಟಿವ್..!
Image
Team India: ಇಂಗ್ಲೆಂಡ್ ಸರಣಿಯಿಂದ ಟೀಮ್ ಇಂಡಿಯಾದ ಪ್ರಮುಖ ಆಟಗಾರ ಔಟ್..!
Image
T20 Blast: ಬ್ಯಾಟ್ಸ್​ಮನ್​ಗೆ ಚೆಂಡೆಸೆದು 5 ರನ್​ಗಳ ಶಿಕ್ಷೆಗೊಳಗಾದ ಬ್ರಾಥ್​ವೇಟ್

ಕೊನೆಯ ಓವರ್‌ನ ಮೊದಲ ರೋಚಕತೆ

ಶ್ರೀಲಂಕಾ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯ ಕೊನೆಯ ಓವರ್‌ನಲ್ಲಿ ಸಿಕ್ಕಿಹಾಕಿಕೊಂಡಿತು. ಕೊನೆಯ 6 ಎಸೆತಗಳಲ್ಲಿ ಅತಿಥಿ ಆಸ್ಟ್ರೇಲಿಯಾ ಗೆಲುವಿಗೆ 19 ರನ್‌ಗಳ ಅಗತ್ಯವಿತ್ತು. ಆ ಕೊನೆಯ ಓವರ್‌ನಲ್ಲಿ ಶ್ರೀಲಂಕಾದ ಬೌಲಿಂಗ್‌ ಜವಬ್ದಾರಿಯನ್ನು ನಾಯಕ ಶನಕ ವಹಿಸಿಕೊಂಡರು. ಮೊದಲ ಚೆಂಡು ಡಾಟ್ ಆಗಿತ್ತು. ಎರಡನೇ ಎಸೆತವನ್ನು ಬೌಂಡರಿ ಬಾರಿಸಲಾಯಿತು. ಮೂರನೇ ಎಸೆತದಲ್ಲಿ 2 ರನ್‌ಗಳು ಬಂದವು. ಅಂದರೆ, ಓವರ್‌ನ ಮೊದಲ 3 ಎಸೆತಗಳಲ್ಲಿ 6 ರನ್‌ಗಳು ಬಂದವು.

ಕೊನೆಯ ಓವರ್‌ನ 2ನೇ ರೋಚಕತೆ

ಆಸ್ಟ್ರೇಲಿಯಾ ಗೆಲುವಿಗೆ ಕೊನೆಯ 3 ಎಸೆತಗಳಲ್ಲಿ 13 ರನ್‌ಗಳ ಅಗತ್ಯವಿತ್ತು. ಇಂತಹ ಪರಿಸ್ಥಿತಿಯಲ್ಲಿ ಎಲ್ಲರೂ ಸಿಕ್ಸರ್ ನಿರೀಕ್ಷೆಯಲ್ಲಿದ್ದರು. ಆದರೆ ಇಲ್ಲಿ ಸಿಕ್ಸರ್ ಬರಲಿಲ್ಲ, ಆದರೆ ಬ್ಯಾಕ್ ಟು ಬ್ಯಾಕ್ ಎರಡು ಬೌಂಡರಿಗಳು ಬಂದವು. ಅದರ ನಂತರ ಆಸ್ಟ್ರೇಲಿಯಾ ಕೊನೆಯ ಎಸೆತದಲ್ಲಿ 5 ರನ್ ಗಳಿಸಬೇಕಿತ್ತು. ಅಂದರೆ, ಒಂದು ಸಿಕ್ಸರ್ ಈಗ ತಂಡದ ಗೆಲುವಿಗೆ ಅನಿವಾರ್ಯವಾಯಿತು. ಕನಿಷ್ಠ ಪಕ್ಷ ಒಂದು ಫೋರ್ ಬಂದಿದ್ದರೂ ಪಂದ್ಯ ಟೈ ಆಗುತ್ತಿತ್ತು.

ಕೊನೆಯ ಓವರ್‌ನ 3ನೇ ರೋಚಕತೆ

ಕೊನೆಯ ಎಸೆತ ಬೌಲಿಂಗ್ ಮಾಡಿದ ಶ್ರೀಲಂಕಾ ತಂಡದ ನಾಯಕ ಯಾವುದೇ ರನ್ ನೀಡದೆ ಆಸ್ಟ್ರೇಲಿಯಾದ ಕೊನೆಯ ವಿಕೆಟ್ ಉರುಳಿಸಿದರು. ಈ ಮೂಲಕ ಸಂಕಷ್ಟಕ್ಕೆ ಸಿಲುಕಿದ್ದ ಪಂದ್ಯ ಇದೀಗ 4 ರನ್​ಗಳ ಅಂತರದಲ್ಲಿ ಶ್ರೀಲಂಕಾದ ಪಾಲಾಯಿತು. ಹೀಗಾಗಿ ಸರಣಿಯನ್ನು ಶ್ರೀಲಂಕಾ ವಶಪಡಿಸಿಕೊಂಡಿದೆ.

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ