AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SL vs BAN: ಬಾಂಗ್ಲಾ ಪಡೆಯನ್ನು ಮಕಾಡೆ ಮಲಗಿಸಿದ ಲಂಕನ್ನರು

SL vs BAN: ಶ್ರೀಲಂಕಾ ಮತ್ತು ಬಾಂಗ್ಲಾದೇಶ್ ನಡುವಣ ಟೆಸ್ಟ್ ಸರಣಿಯು ಮುಕ್ತಾಯಗೊಂಡಿದೆ. ಕೊಲಂಬೊದಲ್ಲಿ ನಡೆದ ಈ ಸರಣಿಯಲ್ಲಿ ಆತಿಥೇಯ ಶ್ರೀಲಂಕಾ 1-0 ಅಂತರದಿಂದ ಗೆದ್ದುಕೊಂಡಿದೆ. ಈ ಗೆಲುವಿನೊಂದಿಗೆ ಲಂಕಾ ಪಡೆಯು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಸರಣಿಯ 4ನೇ ಆವೃತ್ತಿಯಲ್ಲಿ ಶುಭಾರಂಭ ಮಾಡಿದೆ.

SL vs BAN: ಬಾಂಗ್ಲಾ ಪಡೆಯನ್ನು ಮಕಾಡೆ ಮಲಗಿಸಿದ ಲಂಕನ್ನರು
Sri Lanka
ಝಾಹಿರ್ ಯೂಸುಫ್
|

Updated on: Jun 28, 2025 | 1:06 PM

Share

ಬಾಂಗ್ಲಾದೇಶ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ತಂಡವು ಭರ್ಜರಿ ಜಯ ಸಾಧಿಸಿದೆ. ಕೊಲಂಬೊದ ಆರ್ ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ್ ತಂಡವು ಮೊದಲು ಬ್ಯಾಟಿಂಗ್ ಮಾಡಿತು. ಅದರಂತೆ ಮೊದಲ ಇನಿಂಗ್ಸ್​ನಲ್ಲಿ ಬಾಂಗ್ಲಾ 241 ರನ್​ಗಳಿಸಿ ಆಲೌಟ್ ಆಗಿದ್ದರು. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆಡಿದ ಶ್ರೀಲಂಕಾ ಪರ ಆರಂಭಿಕ ದಾಂಡಿಗ ಪಾತುಮ್ ನಿಸ್ಸಂಕಾ 158 ರನ್​​ಗಳ ಭರ್ಜರಿ ಇನಿಂಗ್ಸ್ ಆಡಿದರು.

ಆ ಬಳಿಕ ಬಂದ ದಿನೇಶ್ ಚಂಡಿಮಲ್ 93 ರನ್​ಗಳಿಸಿದರೆ, ಕುಸಾಲ್ ಮೆಂಡಿಸ್ 84 ರನ್​ ಬಾರಿಸಿದರು. ಈ ಮೂಲಕ ಶ್ರೀಲಂಕಾ ತಂಡವು ಮೊದಲ ಇನಿಂಗ್ಸ್​ನಲ್ಲಿ 458 ರನ್​ ಕಲೆಹಾಕಿತು.

300 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಬಾಂಗ್ಲಾದೇಶ್ ತಂಡವು ಪ್ರಭಾತ್ ಜಯಸೂರ್ಯರ ಸ್ಪಿನ್ ದಾಳಿಗೆ ಪೆವಿಲಿಯನ್ ಪರೇಡ್ ನಡೆಸಿದ್ದಾರೆ. ಒಬ್ಬರ ಹಿಂದೆ ಒಬ್ಬರಂತೆ ವಿಕೆಟ್ ಒಪ್ಪಿಸಿದ ಬಾಂಗ್ಲಾ ಬ್ಯಾಟರ್​ಗಳು ಅಂತಿಮವಾಗಿ 133 ರನ್​ಗಳಿಗೆ ಆಲೌಟ್ ಆಗಿದ್ದಾರೆ. ಈ ಮೂಲಕ ಶ್ರೀಲಂಕಾ ತಂಡವು ಇನಿಂಗ್ಸ್ ಹಾಗೂ 78 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಶ್ರೀಲಂಕಾ ಪರ ಪ್ರಭಾತ್ ಜಯಸೂರ್ಯ 18 ಓವರ್​ಗಳಲ್ಲಿ 58 ರನ್ ನೀಡಿ 5 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

ಈ ಗೆಲುವಿನೊಂದಿಗೆ ಶ್ರೀಲಂಕಾ ತಂಡವು 2 ಪಂದ್ಯಗಳ ಟೆಸ್ಟ್ ಸರಣಿಯನ್ನು 1-0 ಅಂತರದಿಂದ ಗೆದ್ದುಕೊಂಡಿದೆ. ಇದಕ್ಕೂ ಮುನ್ನ ನಡೆದ ಮೊದಲ ಟೆಸ್ಟ್ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿತ್ತು. ಇದೀಗ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಅಮೋಘ ಗೆಲುವು ದಾಖಲಿಸುವ ಮೂಲಕ ಶ್ರೀಲಂಕಾ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಸರಣಿಯ 4ನೇ ಆವೃತ್ತಿಯಲ್ಲಿ ಶುಭಾರಂಭ ಮಾಡಿದೆ.

ಶ್ರೀಲಂಕಾ ಪ್ಲೇಯಿಂಗ್ 11: ಪಾತುಮ್ ನಿಸ್ಸಾಂಕ , ಲಹಿರು ಉದಾರ , ದಿನೇಶ್ ಚಂಡಿಮಲ್ , ಕಮಿಂದು ಮೆಂಡಿಸ್ , ಧನಂಜಯ ಡಿ ಸಿಲ್ವಾ (ನಾಯಕ) , ಕುಸಾಲ್ ಮೆಂಡಿಸ್ ( ವಿಕೆಟ್ ಕೀಪರ್ ) , ಸೋನಾಲ್ ದಿನುಶಾ , ತಾರಿಂದು ರತ್ನಾಯಕೆ , ವಿಶ್ವ ಫೆರ್ನಾಂಡೋ , ಪ್ರಭಾತ್ ಜಯಸೂರ್ಯ , ಅಸಿತ ಫರ್ನಾಂಡೋ.

ಇದನ್ನೂ ಓದಿ: 6,6,6,6,6,6,6,6: ಪೂರನ್ ಪವರ್​ಫುಲ್ ಶತಕ

ಬಾಂಗ್ಲಾದೇಶ್ ಪ್ಲೇಯಿಂಗ್ 11: ಶಾದ್ಮನ್ ಇಸ್ಲಾಂ , ಅನಾಮುಲ್ ಹಕ್ , ಮೊಮಿನುಲ್ ಹಕ್ , ನಜ್ಮುಲ್ ಹೊಸೈನ್ ಶಾಂತೊ (ನಾಯಕ) , ಮುಶ್ಫಿಕರ್ ರಹೀಮ್ , ಲಿಟ್ಟನ್ ದಾಸ್ (ವಿಕೆಟ್ ಕೀಪರ್) , ಮೆಹಿದಿ ಹಸನ್ ಮಿರಾಜ್ , ನಯೀಮ್ ಹಸನ್ , ತೈಜುಲ್ ಇಸ್ಲಾಂ , ಎಬಾಡೋತ್ ಹೊಸೈನ್ , ನಹಿದ್ ರಾಣಾ.

Follow Us
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!