AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SMAT 2022: ಸಿಡಿಲಬ್ಬರದ ಸೆಂಚುರಿ ಸಿಡಿಸಿ ಮಿಂಚಿದ ರುತುರಾಜ್ ಗಾಯಕ್ವಾಡ್

SMAT 2022: ಸ್ಪರ್ಧಾತ್ಮಕ ಗುರಿ ಪಡೆದ ಕೇರಳ ಪರ ರೋಹನ್ (58) ಉತ್ತಮ ಆರಂಭ ಒದಗಿಸಿದರೂ, ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ.

SMAT 2022: ಸಿಡಿಲಬ್ಬರದ ಸೆಂಚುರಿ ಸಿಡಿಸಿ ಮಿಂಚಿದ ರುತುರಾಜ್ ಗಾಯಕ್ವಾಡ್
Ruturaj Gaikwad
TV9 Web
| Edited By: |

Updated on:Oct 19, 2022 | 8:51 PM

Share

Syed Mushtaq Ali Trophy 2022: ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಸೈಯದ್ ಮುಷ್ತಾಕ್ ಅಲಿ ಟೂರ್ನಿಯ ಗ್ರೂಪ್-ಸಿ ಪಂದ್ಯದಲ್ಲಿ ಮಹಾರಾಷ್ಟ್ರ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿ ಯುವ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ (Ruturaj Gaikwad). ಕೇರಳ ವಿರುದ್ಧ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಮಹಾರಾಷ್ಟ್ರ ತಂಡವು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ರುತುರಾಜ್ ಹಾಗೂ ಪವನ್​ ಶಾ ತಂಡಕ್ಕೆ ಉತ್ತಮ ಆರಂಭ ಒದಗಿಸಿದ್ದರು.

ಮೊದಲ ವಿಕೆಟ್​ಗೆ 84 ರನ್​ಗಳ ಜೊತೆಯಾಟವಾಡಿದ ಈ ಜೋಡಿಯು ಬೃಹತ್ ಮೊತ್ತಕ್ಕೆ ಉತ್ತಮ ಅಡಿಪಾಯ ಹಾಕಿಕೊಟ್ಟಿದ್ದರು. ಈ ಹಂತದಲ್ಲಿ ಪವನ್ ಶಾ (31) ಔಟಾದರೆ, ಇದರ ಬೆನ್ನಲ್ಲೇ ರಾಹುಲ್ ತ್ರಿಪಾಠಿ ಶೂನ್ಯಕ್ಕೆ ಬೌಲ್ಡ್ ಆದರು. ಆ ಬಳಿಕ ಆಝಿಂ (14) ಕೂಡ ಹೆಚ್ಚು ಹೊತ್ತು ನಿಲ್ಲಲಿಲ್ಲ.

ಇದಾಗ್ಯೂ ಮತ್ತೊಂದೆಡೆ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ರುತುರಾಜ್ ಕೇರಳ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದರು. ಪರಿಣಾಮ ಯುವ ದಾಂಡಿಗನ ಬ್ಯಾಟ್​ನಿಂದ 7 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ಗಳು ಮೂಡಿಬಂತು. ಅಲ್ಲದೆ ಕೇವಲ 68 ಎಸೆತಗಳಲ್ಲಿ 114 ರನ್​ಗಳ ಭರ್ಜರಿ ಶತಕ ಸಿಡಿಸುವ ಮೂಲಕ ತಂಡದ ಮೊತ್ತವನ್ನು 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 167 ಕ್ಕೇರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಇದನ್ನೂ ಓದಿ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ವಿದೇಶಿ ತಂಡದ ಪರ ಆಡುತ್ತಿರುವ ಭಾರತೀಯ ಮೂಲದವರು ಯಾರೆಲ್ಲಾ ಗೊತ್ತಾ?
Image
T20 World Cup 2022 All Squad: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳ ಆಟಗಾರರ ಸಂಪೂರ್ಣ ಪಟ್ಟಿ ಇಲ್ಲಿದೆ
Image
T20 World Cup 2022: ಭಾರತ-ಪಾಕ್ ಅಲ್ಲ, ಈ ಬಾರಿ ಸೂರ್ಯ vs ರಿಜ್ವಾನ್..!
Image
Team India: ಟೀಮ್ ಇಂಡಿಯಾದ ಮೊದಲ ಟಿ20 ತಂಡದಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?

168 ರನ್​ಗಳ ಸ್ಪರ್ಧಾತ್ಮಕ ಗುರಿ ಪಡೆದ ಕೇರಳ ಪರ ರೋಹನ್ (58) ಉತ್ತಮ ಆರಂಭ ಒದಗಿಸಿದರೂ, ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಅದರಲ್ಲೂ ನಾಯಕ ಸಂಜು ಸ್ಯಾಮ್ಸನ್ ಕೇವಲ 3 ರನ್​ಗಳಿಗೆ ಔಟಾಗಿದ್ದರು. ಅಂತಿಮವಾಗಿ ಕೇರಳ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 127 ರನ್​ಗಳಿಸಲಷ್ಟೇ ಶಕ್ತರಾದರು. ಅದರಂತೆ ಮಹರಾಷ್ಟ್ರ ತಂಡವು 40 ರನ್​ಗಳ ಭರ್ಜರಿ ಜಯ ಸಾಧಿಸಿತು.

ಈ ಬಾರಿ ಸೈಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ 2 ಭರ್ಜರಿ ಶತಕ ಸಿಡಿಸಿರುವ ರುತುರಾಜ್ ಗಾಯಕ್ವಾಡ್ 4 ಪಂದ್ಯಗಳಿಂದ ಒಟ್ಟು 276 ರನ್​ ಕಲೆಹಾಕಿದ್ದಾರೆ.

ಕೇರಳ ಪ್ಲೇಯಿಂಗ್ 11: ಸಂಜು ಸ್ಯಾಮ್ಸನ್ (ನಾಯಕ) , ಸಚಿನ್ ಬೇಬಿ , ವಿಷ್ಣು ವಿನೋದ್ , ರೋಹನ್ ಕುನ್ನುಮ್ಮಲ್ , ಮೊಹಮ್ಮದ್ ಅಜರುದ್ದೀನ್ , ಶೋನ್ ರೋಜರ್ , ಅಬ್ದುಲ್ ಬಸಿತ್ , ಸುಧೇಶನ್ ಮಿಧುನ್ , ಉನ್ನಿಕೃಷ್ಣನ್ ಮನುಕೃಷ್ಣನ್ , ಕೆಎಂ ಆಸಿಫ್ , ವೈಶಾಕ್ ಚಂದ್ರನ್

ಮಹಾರಾಷ್ಟ್ರ ಪ್ಲೇಯಿಂಗ್ 11: ರುತುರಾಜ್ ಗಾಯಕ್ವಾಡ್ (ನಾಯಕ) , ರಾಹುಲ್ ತ್ರಿಪಾಠಿ , ಅಝೀಂ ಕಾಜಿ , ಪವನ್ ಶಾ , ದಿವ್ಯಾಂಗ್ ಹಿಂಗಾನೇಕರ್ , ರಾಜವರ್ಧನ್ ಹಂಗರ್ಗೇಕರ್ , ಮನೋಜ್ ಇಂಗಳೆ , ಸತ್ಯಜೀತ್ ಬಚಾವ್ , ಶಂಶುಜಾಮ ಕಾಜಿ , ವಿಕ್ಕಿ ಓಸ್ತ್ವಾಲ್ , ಯಶ್ ಕ್ಷೀರಸಾಗರ್

Published On - 8:31 pm, Wed, 19 October 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ