AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Venkatesh Iyer: ಸ್ಪೋಟಕ ಅರ್ಧಶತಕ, 6 ವಿಕೆಟ್: ವೆಂಕಿಯ ಬೆಂಕಿ ಪ್ರದರ್ಶನ..!

Syed Mushtaq Ali Trophy 2022: ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವೆಂಕಟೇಶ್ ಅಯ್ಯರ್ ಪಂದ್ಯದ ಚಿತ್ರಣವನ್ನೇ ಬದಲಿಸಿಬಿಟ್ಟರು ಎಂದರೆ ತಪ್ಪಾಗಲಾರದು.

Venkatesh Iyer: ಸ್ಪೋಟಕ ಅರ್ಧಶತಕ, 6 ವಿಕೆಟ್: ವೆಂಕಿಯ ಬೆಂಕಿ ಪ್ರದರ್ಶನ..!
Venkatesh Iyer
TV9 Web
| Updated By: ಝಾಹಿರ್ ಯೂಸುಫ್|

Updated on: Oct 12, 2022 | 3:09 PM

Share

ಸೈಯದ್ ಮುಷ್ತಾಕ್ ಅಲಿ (SMAT 2022) ಟೂರ್ನಿಯ ರೌಂಡ್-1 ನಲ್ಲಿ ನಡೆದ ಪಂದ್ಯದಲ್ಲಿ ಮಧ್ಯಪ್ರದೇಶದ ಆಟಗಾರ ವೆಂಕಟೇಶ್ ಅಯ್ಯರ್ (Venkatesh Iyer) ಅತ್ಯಾಧ್ಬುತ ಆಲ್​ರೌಂಡರ್ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾರೆ. ರಾಜ್​ಕೋಟ್​ನಲ್ಲಿ ನಡೆದ ಈ ಪಂದ್ಯದಲ್ಲಿ ರಾಜಸ್ಥಾನ್ ಹಾಗೂ ಮಧ್ಯಪ್ರದೇಶ ತಂಡಗಳು ಮುಖಾಮುಖಿಯಾಗಿತ್ತು. ಟಾಸ್ ಗೆದ್ದ ಮಧ್ಯಪ್ರದೇಶ ತಂಡದ ನಾಯಕ ಪಾರ್ಥ್ ಸಹಾನಿ ಬ್ಯಾಟಿಂಗ್ ಆಯ್ದುಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ಮಧ್ಯಪ್ರದೇಶದ ಆರಂಭಿಕರಾದ ಚಂಚಲ್ ರಾಥೋಡ್ ಹಾಗೂ ಕುಲ್ದೀಪ್ ಗೇಹಿ ನಾಯಕನ ನಿರೀಕ್ಷೆಯನ್ನು ಹುಸಿಗೊಳಿಸಲಿಲ್ಲ. ಮೊದಲ ವಿಕೆಟ್​ಗೆ 64 ರನ್​ಗಳ ಜೊತೆಯಾಟವಾಡುವ ಮೂಲಕ ತಂಡಕ್ಕೆ ಭರ್ಜರಿ ಆರಂಭಕ್ಕೆ ಒದಗಿಸಿದ್ದರು.

ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವೆಂಕಟೇಶ್ ಅಯ್ಯರ್ ಪಂದ್ಯದ ಚಿತ್ರಣವನ್ನೇ ಬದಲಿಸಿಬಿಟ್ಟರು ಎಂದರೆ ತಪ್ಪಾಗಲಾರದು. ಕಣಕ್ಕಿಳಿಯುತ್ತಿದ್ದಂತೆ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿದ ವೆಂಕಿ 4 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ನೊಂದಿಗೆ ಕೇವಲ 31 ಎಸೆತಗಳಲ್ಲಿ ಅಜೇಯ 62 ರನ್ ಚಚ್ಚಿದರು.  ಪರಿಣಾಮ ನಿಗದಿತ 20 ಓವರ್​ಗಳಲ್ಲಿ ಮಧ್ಯಪ್ರದೇಶ ತಂಡವು 5 ವಿಕೆಟ್ ನಷ್ಟಕ್ಕೆ 173 ರನ್​ ಕಲೆಹಾಕಿತು.

ಈ ಬೃಹತ್ ಗುರಿ ಬೆನ್ನತ್ತಿದ ರಾಜಸ್ಥಾನ್ ತಂಡಕ್ಕೆ ಮತ್ತೆ ಮುಳುವಾಗಿದ್ದು ವೆಂಕಟೇಶ್ ಅಯ್ಯರ್ ಎಂಬುದು ವಿಶೇಷ. ಬ್ಯಾಟಿಂಗ್ ಬಳಿಕ ಬೌಲಿಂಗ್​ನಲ್ಲೂ ಪರಾಕ್ರಮ ಮೆರೆದ ಅಯ್ಯರ್ ರಾಜಸ್ಥಾನ್ ತಂಡದ ಆರಂಭಿಕ ಬ್ಯಾಟ್ಸ್​ಮನ್​ಗಳಿಗೆ ಪೆವಿಲಿಯನ್ ಹಾದಿ ತೋರಿಸಿದರು.

ಇದನ್ನೂ ಓದಿ
Image
Team India: ಟೀಮ್ ಇಂಡಿಯಾದ ಮೊದಲ ಟಿ20 ತಂಡದಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
David Miller: ಕಿಲ್ಲರ್ ಮಿಲ್ಲರ್ ಆರ್ಭಟಕ್ಕೆ ಧೋನಿ ದಾಖಲೆ ಧೂಳೀಪಟ
Image
Dinesh Karthik: ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಹೊಸ ವಿಶ್ವ ದಾಖಲೆ ಬರೆದ DK
Image
Virat Kohli: ಸ್ಪೋಟಕ ಬ್ಯಾಟಿಂಗ್ ಮೂಲಕ ಹೊಸ ದಾಖಲೆ ಬರೆದ ಕಿಂಗ್ ಕೊಹ್ಲಿ

ಇದಾಗ್ಯೂ ಸಲ್ಮಾನ್ ಖಾನ್ ಅವರ 44 ರನ್​ಗಳಿಂದ ಚೇತರಿಸಿಕೊಂಡ ರಾಜಸ್ಥಾನ್ ತಂಡಕ್ಕೆ ಮತ್ತೆ ವೆಂಕಿ ಆಘಾತ ನೀಡಿದರು. ಸಲ್ಮಾನ್​ರನ್ನು ಔಟ್ ಮಾಡುವ ಮೂಲಕ ನಿರ್ಣಾಯಕ ಹಂತದಲ್ಲಿ ವೆಂಕಟೇಶ್ ಅಯ್ಯರ್ ತಂಡಕ್ಕೆ ಯಶಸ್ಸು ತಂದುಕೊಟ್ಟರು. ಅಂತಿಮವಾಗಿ ವೆಂಕಟೇಶ್ ಅಯ್ಯರ್ ದಾಳಿಗೆ ನಲುಗಿದ ರಾಜಸ್ಥಾನ್ ತಂಡವು 19.2 ಓವರ್​ಗಳಲ್ಲಿ 135 ರನ್​ಗಳಿಗೆ ಸರ್ವಪತನ ಕಂಡಿತು. ಮಧ್ಯಪ್ರದೇಶ ತಂಡದ ಪರ 4 ಓವರ್​ಗಳಲ್ಲಿ ಕೇವಲ 20 ರನ್ ನೀಡುವ ಮೂಲಕ ವೆಂಕಟೇಶ್ ಅಯ್ಯರ್ 6 ವಿಕೆಟ್ ಕಬಳಿಸಿ ಗೆಲುವಿನ ರೂವಾರಿ ಎನಿಸಿಕೊಂಡರು.

ಮಧ್ಯಪ್ರದೇಶ ಪ್ಲೇಯಿಂಗ್ 11: ಪಾರ್ಥ್ ಸಹಾನಿ (ನಾಯಕ) , ಕುಲದೀಪ್ ಗೇಹಿ , ಶುಭಂ ಎಸ್ ಶರ್ಮಾ , ವೆಂಕಟೇಶ್ ಅಯ್ಯರ್ , ಅಕ್ಷತ್ ರಘುವಂಶಿ , ಕುಮಾರ್ ಕಾರ್ತಿಕೇಯ , ಪುನೀತ್ ದಾತೆ , ಅಶ್ವಿನ್ ದಾಸ್ , ಕುಲದೀಪ್ ಸೇನ್ , ಕಮಲ್ ತ್ರಿಪಾಠಿ , ಚಂಚಲ್ ರಾಥೋರ್ , ಅಮನ್ ಭಡೋರಿಯಾ

ರಾಜಸ್ಥಾನ್ ಪ್ಲೇಯಿಂಗ್ 11: ಅಶೋಕ್ ಮೆನಾರಿಯಾ (ನಾಯಕ) , ಯಶ್ ಕೊಠಾರಿ , ಸಲ್ಮಾನ್ ಖಾನ್ , ಮಹಿಪಾಲ್ ಲೊಮ್ರೋರ್ , ಅರ್ಜಿತ್ ಗುಪ್ತಾ , ಕಮಲೇಶ್ ನಾಗರಕೋಟಿ , ಮಾನವ್ ಸುತಾರ್ , ರಾಹುಲ್ ಚಹರ್ , ಕುನಾಲ್ ಸಿಂಗ್ ರಾಥೋರ್, ಅನಿಕೇತ್ ಚೌಧರಿ , ತನ್ವೀರ್ ಉಲ್-ಹಕ್ , ಅನಿರುದ್ ಸಿಂಗ್.

ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ