AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Venkatesh Iyer: ಸ್ಪೋಟಕ ಅರ್ಧಶತಕ, 6 ವಿಕೆಟ್: ವೆಂಕಿಯ ಬೆಂಕಿ ಪ್ರದರ್ಶನ..!

Syed Mushtaq Ali Trophy 2022: ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವೆಂಕಟೇಶ್ ಅಯ್ಯರ್ ಪಂದ್ಯದ ಚಿತ್ರಣವನ್ನೇ ಬದಲಿಸಿಬಿಟ್ಟರು ಎಂದರೆ ತಪ್ಪಾಗಲಾರದು.

Venkatesh Iyer: ಸ್ಪೋಟಕ ಅರ್ಧಶತಕ, 6 ವಿಕೆಟ್: ವೆಂಕಿಯ ಬೆಂಕಿ ಪ್ರದರ್ಶನ..!
Venkatesh Iyer
TV9 Web
| Edited By: |

Updated on: Oct 12, 2022 | 3:09 PM

Share

ಸೈಯದ್ ಮುಷ್ತಾಕ್ ಅಲಿ (SMAT 2022) ಟೂರ್ನಿಯ ರೌಂಡ್-1 ನಲ್ಲಿ ನಡೆದ ಪಂದ್ಯದಲ್ಲಿ ಮಧ್ಯಪ್ರದೇಶದ ಆಟಗಾರ ವೆಂಕಟೇಶ್ ಅಯ್ಯರ್ (Venkatesh Iyer) ಅತ್ಯಾಧ್ಬುತ ಆಲ್​ರೌಂಡರ್ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾರೆ. ರಾಜ್​ಕೋಟ್​ನಲ್ಲಿ ನಡೆದ ಈ ಪಂದ್ಯದಲ್ಲಿ ರಾಜಸ್ಥಾನ್ ಹಾಗೂ ಮಧ್ಯಪ್ರದೇಶ ತಂಡಗಳು ಮುಖಾಮುಖಿಯಾಗಿತ್ತು. ಟಾಸ್ ಗೆದ್ದ ಮಧ್ಯಪ್ರದೇಶ ತಂಡದ ನಾಯಕ ಪಾರ್ಥ್ ಸಹಾನಿ ಬ್ಯಾಟಿಂಗ್ ಆಯ್ದುಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ಮಧ್ಯಪ್ರದೇಶದ ಆರಂಭಿಕರಾದ ಚಂಚಲ್ ರಾಥೋಡ್ ಹಾಗೂ ಕುಲ್ದೀಪ್ ಗೇಹಿ ನಾಯಕನ ನಿರೀಕ್ಷೆಯನ್ನು ಹುಸಿಗೊಳಿಸಲಿಲ್ಲ. ಮೊದಲ ವಿಕೆಟ್​ಗೆ 64 ರನ್​ಗಳ ಜೊತೆಯಾಟವಾಡುವ ಮೂಲಕ ತಂಡಕ್ಕೆ ಭರ್ಜರಿ ಆರಂಭಕ್ಕೆ ಒದಗಿಸಿದ್ದರು.

ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವೆಂಕಟೇಶ್ ಅಯ್ಯರ್ ಪಂದ್ಯದ ಚಿತ್ರಣವನ್ನೇ ಬದಲಿಸಿಬಿಟ್ಟರು ಎಂದರೆ ತಪ್ಪಾಗಲಾರದು. ಕಣಕ್ಕಿಳಿಯುತ್ತಿದ್ದಂತೆ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿದ ವೆಂಕಿ 4 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ನೊಂದಿಗೆ ಕೇವಲ 31 ಎಸೆತಗಳಲ್ಲಿ ಅಜೇಯ 62 ರನ್ ಚಚ್ಚಿದರು.  ಪರಿಣಾಮ ನಿಗದಿತ 20 ಓವರ್​ಗಳಲ್ಲಿ ಮಧ್ಯಪ್ರದೇಶ ತಂಡವು 5 ವಿಕೆಟ್ ನಷ್ಟಕ್ಕೆ 173 ರನ್​ ಕಲೆಹಾಕಿತು.

ಈ ಬೃಹತ್ ಗುರಿ ಬೆನ್ನತ್ತಿದ ರಾಜಸ್ಥಾನ್ ತಂಡಕ್ಕೆ ಮತ್ತೆ ಮುಳುವಾಗಿದ್ದು ವೆಂಕಟೇಶ್ ಅಯ್ಯರ್ ಎಂಬುದು ವಿಶೇಷ. ಬ್ಯಾಟಿಂಗ್ ಬಳಿಕ ಬೌಲಿಂಗ್​ನಲ್ಲೂ ಪರಾಕ್ರಮ ಮೆರೆದ ಅಯ್ಯರ್ ರಾಜಸ್ಥಾನ್ ತಂಡದ ಆರಂಭಿಕ ಬ್ಯಾಟ್ಸ್​ಮನ್​ಗಳಿಗೆ ಪೆವಿಲಿಯನ್ ಹಾದಿ ತೋರಿಸಿದರು.

ಇದನ್ನೂ ಓದಿ
Image
Team India: ಟೀಮ್ ಇಂಡಿಯಾದ ಮೊದಲ ಟಿ20 ತಂಡದಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
David Miller: ಕಿಲ್ಲರ್ ಮಿಲ್ಲರ್ ಆರ್ಭಟಕ್ಕೆ ಧೋನಿ ದಾಖಲೆ ಧೂಳೀಪಟ
Image
Dinesh Karthik: ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಹೊಸ ವಿಶ್ವ ದಾಖಲೆ ಬರೆದ DK
Image
Virat Kohli: ಸ್ಪೋಟಕ ಬ್ಯಾಟಿಂಗ್ ಮೂಲಕ ಹೊಸ ದಾಖಲೆ ಬರೆದ ಕಿಂಗ್ ಕೊಹ್ಲಿ

ಇದಾಗ್ಯೂ ಸಲ್ಮಾನ್ ಖಾನ್ ಅವರ 44 ರನ್​ಗಳಿಂದ ಚೇತರಿಸಿಕೊಂಡ ರಾಜಸ್ಥಾನ್ ತಂಡಕ್ಕೆ ಮತ್ತೆ ವೆಂಕಿ ಆಘಾತ ನೀಡಿದರು. ಸಲ್ಮಾನ್​ರನ್ನು ಔಟ್ ಮಾಡುವ ಮೂಲಕ ನಿರ್ಣಾಯಕ ಹಂತದಲ್ಲಿ ವೆಂಕಟೇಶ್ ಅಯ್ಯರ್ ತಂಡಕ್ಕೆ ಯಶಸ್ಸು ತಂದುಕೊಟ್ಟರು. ಅಂತಿಮವಾಗಿ ವೆಂಕಟೇಶ್ ಅಯ್ಯರ್ ದಾಳಿಗೆ ನಲುಗಿದ ರಾಜಸ್ಥಾನ್ ತಂಡವು 19.2 ಓವರ್​ಗಳಲ್ಲಿ 135 ರನ್​ಗಳಿಗೆ ಸರ್ವಪತನ ಕಂಡಿತು. ಮಧ್ಯಪ್ರದೇಶ ತಂಡದ ಪರ 4 ಓವರ್​ಗಳಲ್ಲಿ ಕೇವಲ 20 ರನ್ ನೀಡುವ ಮೂಲಕ ವೆಂಕಟೇಶ್ ಅಯ್ಯರ್ 6 ವಿಕೆಟ್ ಕಬಳಿಸಿ ಗೆಲುವಿನ ರೂವಾರಿ ಎನಿಸಿಕೊಂಡರು.

ಮಧ್ಯಪ್ರದೇಶ ಪ್ಲೇಯಿಂಗ್ 11: ಪಾರ್ಥ್ ಸಹಾನಿ (ನಾಯಕ) , ಕುಲದೀಪ್ ಗೇಹಿ , ಶುಭಂ ಎಸ್ ಶರ್ಮಾ , ವೆಂಕಟೇಶ್ ಅಯ್ಯರ್ , ಅಕ್ಷತ್ ರಘುವಂಶಿ , ಕುಮಾರ್ ಕಾರ್ತಿಕೇಯ , ಪುನೀತ್ ದಾತೆ , ಅಶ್ವಿನ್ ದಾಸ್ , ಕುಲದೀಪ್ ಸೇನ್ , ಕಮಲ್ ತ್ರಿಪಾಠಿ , ಚಂಚಲ್ ರಾಥೋರ್ , ಅಮನ್ ಭಡೋರಿಯಾ

ರಾಜಸ್ಥಾನ್ ಪ್ಲೇಯಿಂಗ್ 11: ಅಶೋಕ್ ಮೆನಾರಿಯಾ (ನಾಯಕ) , ಯಶ್ ಕೊಠಾರಿ , ಸಲ್ಮಾನ್ ಖಾನ್ , ಮಹಿಪಾಲ್ ಲೊಮ್ರೋರ್ , ಅರ್ಜಿತ್ ಗುಪ್ತಾ , ಕಮಲೇಶ್ ನಾಗರಕೋಟಿ , ಮಾನವ್ ಸುತಾರ್ , ರಾಹುಲ್ ಚಹರ್ , ಕುನಾಲ್ ಸಿಂಗ್ ರಾಥೋರ್, ಅನಿಕೇತ್ ಚೌಧರಿ , ತನ್ವೀರ್ ಉಲ್-ಹಕ್ , ಅನಿರುದ್ ಸಿಂಗ್.

ರಾಯರ ಸನ್ನಿಧಿಯಲ್ಲಿ ತಂದೆಗೆ ಗೌರವ ಡಾಕ್ಟರೇಟ್: ಯುವ ರಾಜ್​ಕುಮಾರ್ ಸಂತಸ
ರಾಯರ ಸನ್ನಿಧಿಯಲ್ಲಿ ತಂದೆಗೆ ಗೌರವ ಡಾಕ್ಟರೇಟ್: ಯುವ ರಾಜ್​ಕುಮಾರ್ ಸಂತಸ
ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ