AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Smriti Mandhana: ಅಪ್ಪನಿಗೆ ಹೃದಯಾಘಾತ; ಇವತ್ತು ನಡೆಯಬೇಕಿದ್ದ ಸ್ಮೃತಿ ಮಂಧಾನ ಮದುವೆ ಮುಂದೂಡಿಕೆ

Smriti Mandhana's wedding ceremony postponed indefinitely: ಇವತ್ತು ನಡೆಯಬೇಕಿದ್ದ ಭಾರತ ಮಹಿಳಾ ಕ್ರಿಕೆಟ್ ತಂಡದ ಕ್ಯಾಪ್ಟನ್ ಸ್ಮೃತಿ ಮಂಧಾನ ಅವರ ಮದುವೆ ಕಾರ್ಯಕ್ರಮ ಮುಂದೂಡಿಕೆ ಆಗಿದೆ. ಸ್ಮೃತಿ ಮಂಧಾನ ಅವರ ತಂದೆ ಶ್ರೀನಿವಾಸ್​ಗೆ ಹೃದಯಾಘಾತವಾಗಿ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಸಾಂಗ್ಲಿಯ ತಮ್ಮ ಫಾರ್ಮ್ ಹೌಸ್​ನಲ್ಲಿ ಜರುಗಲಿದ್ದ ಮದವೆಯ ಕಾರ್ಯಕ್ರಮವನ್ನು ಮುಂದೂಡಲು ಸ್ಮೃತಿ ನಿರ್ಧರಿಸಿದರು.

Smriti Mandhana: ಅಪ್ಪನಿಗೆ ಹೃದಯಾಘಾತ; ಇವತ್ತು ನಡೆಯಬೇಕಿದ್ದ ಸ್ಮೃತಿ ಮಂಧಾನ ಮದುವೆ ಮುಂದೂಡಿಕೆ
ಪಲಾಶ್ ಹಾಗೂ ತಮ್ಮ ತಂದೆಯ ಜೊತೆ ಸ್ಮೃತಿ ಮಂಧಾನ ಪೋಸ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Nov 23, 2025 | 5:51 PM

Share

ಮುಂಬೈ, ನವೆಂಬರ್ 23: ಭಾರತದ ಸ್ಟಾರ್ ಕ್ರಿಕೆಟರ್ ಸ್ಮೃತಿ ಮಂಧಾನ (Smriti Mandhana) ಮತ್ತು ಸಂಗೀತ ನಿರ್ದೇಶಕ ಪಲಾಶ್ ಮುಚ್ಚಲ್ (Palash Muchhal) ಅವರಿಬ್ಬರ ವಿವಾಹ ಕಾರ್ಯಕ್ರಮ ಅನಿರ್ದಿಷ್ಟಾವಧಿಯವರೆಗೆ ಮುಂದೂಡಿಕೆ ಆಗಿದೆ ಎನ್ನಲಾಗಿದೆ. ವರದಿಗಳ ಪ್ರಕಾರ, ಸ್ಮೃತಿ ಮಂಧಾನಳ ತಂದೆ ಶ್ರೀನಿವಾಸ್ ಮಂಧಾನ ಅವರು ಅನಾರೋಗ್ಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕಾರಣಕ್ಕೆ ಮದುವೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಕ್ರಿಕೆಟ್ ಆಟಗಾರ್ತಿಯ ಮ್ಯಾನೇಜರ್ ಅವರು ಮಾಧ್ಯಮಗಳಿಗೆ ಈ ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಸಮದೋಲ್​ನಲ್ಲಿರುವ ಮಂಧಾನ ಫಾರ್ಮ್ ಹೌಸ್​ನಲ್ಲಿ ವಿವಾಹ ಮಹೋತ್ಸವಕ್ಕಾಗಿ ತಯಾರಿ ನಡೆದಿತ್ತು. ಇವತ್ತೇ ಕಾರ್ಯಕ್ರಮ ಇತ್ತು. ಆದರೆ, ಸ್ಮೃತಿ ಅವರ ತಂದೆ ಶ್ರೀನಿವಾಸ್ ಅವರಿಗೆ ಹೃದಯಾಘಾತಗೊಂಡಿದೆ. ಅವರನ್ನು ಸಾಂಗ್ಲಿಯಲ್ಲಿರುವ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.

ಇದನ್ನೂ ಓದಿ: ಸ್ಮೃತಿ – ಪಲಾಶ್ ಸಂಗೀತ್​ನಲ್ಲಿ ಟೀಮ್ ಇಂಡಿಯಾ ಆಟಗಾರ್ತಿಯರ ಭರ್ಜರಿ ಡ್ಯಾನ್ಸ್

‘ಇವತ್ತು ಬೆಳಗ್ಗೆ ಅವರು (ಶ್ರೀನಿವಾಸ್ ಮಂಧಾನ) ತಿಂಡಿ ತಿನ್ನುತ್ತಿರುವಾಗ ಆರೋಗ್ಯದಲ್ಲಿ ಏರುಪೇರಾಗತೊಡಗಿತು. ಅವರು ಚೇತರಿಸಿಕೊಳ್ಳಬಹುದು ಎಂದು ಸ್ವಲ್ಪ ಹೊತ್ತು ಕಾದೆವು. ಆದರೆ, ಆರೋಗ್ಯ ಮತ್ತಷ್ಟು ಬಿಗಡಾಯಿಸಲು ತೊಡಗಿತು. ಯಾವುದೇ ರಿಸ್ಕ್ ತೆಗೆದುಕೊಳ್ಳಲು ಸಾಧ್ಯವಿರಲಿಲ್ಲ. ಕೂಡಲೇ ಆಂಬುಲೆನ್ಸ್ ಕರೆದು ಅವರನ್ನು ಆಸ್ಪತ್ರೆಗೆ ಸಾಗಿಸಿದೆವು’ ಎಂದು ಸ್ಮೃತಿ ಮಂಧಾನ ಅವರ ಮ್ಯಾನೇಜರ್ ತುಹಿನ್ ಮಿಶ್ರಾ ಭಾನುವಾರ ಮಧ್ಯಾಹ್ನ ತಿಳಿಸಿದ್ದಾರೆ.

‘ಇಂಥ ಸಂದರ್ಭದಲ್ಲಿ ಮದುವೆಯಾಗುವುದು ಸ್ಮೃತಿ ಮಂಧಾನ ಅವರಿಗೆ ಇಷ್ಟ ಇರಲಿಲ್ಲ. ಹೀಗಾಗಿ, ಮದುವೆ ಕಾರ್ಯಕ್ರಮವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿಕೆ ಮಾಡಲು ನಿರ್ಧರಿಸಿದ್ದಾರೆ’ ಎಂದು ಮ್ಯಾನೇಜರ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮುಂದಿನ ವರ್ಷದವರೆಗೆ ಶುಭ್​ಮನ್ ಗಿಲ್ ತಂಡದಿಂದ ಔಟ್..!

ಸ್ಮೃತಿ ಮಂಧಾನ ಅವರಿಗೆ ಪಲಾಶ್ ಮುಚ್ಚಲ ಅವರು ಇವತ್ತು ತಾಳಿ ಕಟ್ಟುವುದಿತ್ತು. ಇವರಿಬ್ಬರ ವಿವಾಹ ಮಹೋತ್ಸವ ಹಲವು ದಿನಗಳಿಂದಲೂ ನಡೆಯುತ್ತಿದೆ. ಮೆಹಂದಿ, ಹಲ್ದಿ ಇತ್ಯಾದಿ ಶಾಸ್ತ್ರಗಳು ನಡೆದಿವೆ. ಸಂಗೀತ ಕಾರ್ಯಕ್ರಮಗಳೂ ಕೂಡ ದೊಡ್ಡ ಸುದ್ದಿಯಾದವು. ಸ್ಮೃತಿ, ಪಲಾಶ್ ಅವರು ಡ್ಯಾನ್ಸ್ ಮಾಡುತ್ತಿರುವ ವಿಡಿಯೋಗಳು ವೈರಲ್ ಆಗಿವೆ. ವಧು ಮತ್ತು ವರರ ತಂಡಗಳ ಮಧ್ಯೆ ಕ್ರಿಕೆಟ್ ಪಂದ್ಯವನ್ನೂ ಆಯೋಜಿಸಲಾಗಿತ್ತು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:30 pm, Sun, 23 November 25

ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು
ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!