AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌರವ್ ಗಂಗೂಲಿ ಕಾರು ಭೀಕರ ಅಪಘಾತ: ಎಕ್ಸ್‌ಪ್ರೆಸ್‌ವೇಯಲ್ಲಿ ಲಾರಿ, ಬೆಂಗಾವಲು ಪಡೆ ವಾನಹಗಳು ಡಿಕ್ಕಿ

Sourav Ganguly Car Accident: ಬಿಸಿಸಿಐ ಮಾಜಿ ಅಧ್ಯಕ್ಷ, ಟೀಮ್ ಇಂಡಿಯಾದ ಮಾಜಿ ಕ್ಯಾಪ್ಟನ್ ಸೌರವ್ ಗಂಗೂಲಿ ಅವರ ಕಾರು ಗುರುವಾರ ಪಶ್ಚಿಮ ಬಂಗಾಳದ ಬುರ್ದ್ವಾನ್​ಗೆ ಹೋಗುತ್ತಿದ್ದಾಗ ಅಪಘಾತಕ್ಕೀಡಾಗಿದೆ. ದುರ್ಗಾಪುರ ಎಕ್ಸ್‌ಪ್ರೆಸ್‌ವೇಯ ದಂತನ್‌ಪುರ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದ್ದು, ಅವರ ರೇಂಜ್ ರೋವರ್ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದು, ನಂತರ ಬೆಂಗಾವಲು ಪಡೆ ವಾನಹಗಳು ಡಿಕ್ಕಿಯಾಗಿವೆ.

ಸೌರವ್ ಗಂಗೂಲಿ ಕಾರು ಭೀಕರ ಅಪಘಾತ: ಎಕ್ಸ್‌ಪ್ರೆಸ್‌ವೇಯಲ್ಲಿ ಲಾರಿ, ಬೆಂಗಾವಲು ಪಡೆ ವಾನಹಗಳು ಡಿಕ್ಕಿ
ಸೌರವ್ ಗಂಗೂಲಿ
Ganapathi Sharma
|

Updated on:Feb 21, 2025 | 7:06 AM

Share

ಕೋಲ್ಕತ್ತಾ, ಫೆಬ್ರವರಿ 21: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರ ಕಾರು ಗುರುವಾರ ರಾತ್ರಿ ಪಶ್ಚಿಮ ಬಂಗಾಳದ ದುರ್ಗಾಪುರ ಎಕ್ಸ್‌ಪ್ರೆಸ್‌ವೇಯ ದಂತನ್‌ಪುರ ಪ್ರದೇಶದಲ್ಲಿ ಅಪಘಾತಕ್ಕೀಡಾಗಿದೆ. ಬುರ್ದ್ವಾನ್‌ನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಪ್ರಯಾಣಿಸುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಸೌರವ್ ಗಂಗೂಲಿ ಅವರ ಕಾರು ದುರ್ಗಾಪುರ ಎಕ್ಸ್‌ಪ್ರೆಸ್‌ವೇ ಮೂಲಕ ಹಾದುಹೋಗುವಾಗ ಸಿಂಗೂರ್ ಬಳಿ, ಇದ್ದಕ್ಕಿದ್ದಂತೆ ವೇಗವಾಗಿ ಬಂದ ಲಾರಿ ಅವರ ಕಾರಿಗೆ ಡಿಕ್ಕಿ ಹೊಡೆದಿದೆ.

ಬೆಂಗಾವಲು ಪಡೆಯ ವಾಹನಗಳೆಲ್ಲ ಗಂಗೂಲಿ ಕಾರಿಗೆ ಡಿಕ್ಕಿ

ಲಾರಿ ಡಿಕ್ಕಿಯಾಗುತ್ತಿದ್ದಂತೆಯೇ ಸೌರವ್ ಗಂಗೂಲಿ ಅವರ ಕಾರಿನ ಚಾಲಕ ಕಾರಿನ ನಿಯಂತ್ರಣ ಪಡೆಯಲು ತಕ್ಷಣ ಬ್ರೇಕ್ ಹಾಕಿದರು. ಪರಿಣಾಮವಾಗಿ ಬೆಂಗಾವಲು ಪಡೆಯ ಎಲ್ಲಾ ವಾಹನಗಳು ಒಂದರ ನಂತರ ಒಂದರಂತೆ ಸೌರವ್ ಗಂಗೂಲಿ ಅವರ ಕಾರಿಗೆ ಡಿಕ್ಕಿ ಹೊಡೆದವು. ಆದರೆ, ಸೌರವ್ ಈ ಭೀಕರ ಅಪಘಾತದಿಂದ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ. ಬೆಂಗಾವಲು ಪಡೆಯಲ್ಲಿದ್ದ ವಾಹನಗಳಿಗೆ ಹಾನಿಯಾಗಿದೆ. ಸ್ವಲ್ಪ ಹೊತ್ತು ರಸ್ತೆಯಲ್ಲಿ ಕಾದ ನಂತರ ಗಂಗೂಲಿ ಬೇರೆ ವಾಹನದಲ್ಲಿ ಸಮಾರಂಭಕ್ಕೆ ತೆರಳಿದ್ದಾರೆ.

ಕೂದಲೆಳೆ ಅಂತರದಲ್ಲಿ ಪಾರಾದ ಸೌರವ್ ಗಂಗೂಲಿ

ಅದೃಷ್ಟವಶಾತ್ ಗಂಗೂಲಿ ಅವರಿಗಾಗಲಿ, ಅವರ ಬೆಂಗಾವಲು ಪಡೆಯಲ್ಲಿದ್ದ ಯಾರಿಗೂ ಗಾಯಗಳಾಗಿಲ್ಲ. ಆದಾಗ್ಯೂ, ಬೆಂಗಾವಲು ಪಡೆಯಲ್ಲಿದ್ದ ಎರಡು ವಾಹನಗಳು ಜಖಂಗೊಂಡವು. ಅಪಘಾತದ ನಂತರ, ಸೌರವ್ ಗಂಗೂಲಿ ಸುಮಾರು 10 ನಿಮಿಷಗಳ ಕಾಲ ಸ್ಥಳದಲ್ಲೇ ಇದ್ದರು. ನಂತರ ಅವರು ಬರ್ಧಮಾನ್ ವಿಶ್ವವಿದ್ಯಾಲಯದ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಿದರು. ಈ ಅಪಘಾತದಲ್ಲಿ ಸೌರವ್ ಕೂದಲೆಳೆ ಅಂತರದಲ್ಲಿ ಪಾರಾಗಿದ್ದರಿಂದ, ದೊಡ್ಡ ಅನಾಹುತವೊಂದು ತಪ್ಪಿದೆ.

ಇದನ್ನೂ ಓದಿ: ರೋಹಿತ್- ಹಾರ್ದಿಕ್ ಮಾಡಿದ ತಪ್ಪಿಗೆ 154 ರನ್ ದಂಡ ತೆತ್ತ ಟೀಂ ಇಂಡಿಯಾ

ದಾರಿಯಲ್ಲಿ ಅಪಘಾತದಿಂದಾಗಿ ಆತಂಕಕ್ಕೊಳಗಾಗಿದ್ದರೂ, ನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸಿ ಗಂಗೂಲಿ ಮಾತನಾಡಿದರು. ಬಂಗಾಳ ತಂಡದಲ್ಲಿ ಈಗ ಅನೇಕ ಕ್ರಿಕೆಟಿಗರು ಹೊರಹೊಮ್ಮುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಅನೇಕ ಕ್ರಿಕೆಟಿಗರು ಹೊರಹೊಮ್ಮಲಿ ಎಂದು ಸೌರವ್ ಆಶಿಸಿದ್ದಾರೆ. ಬುರ್ದ್ವಾನ್‌ನಲ್ಲಿನ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ನಂತರ, ಸೌರವ್ ಕೋಲ್ಕತ್ತಾಗೆ ಮರಳಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:50 am, Fri, 21 February 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ