ಕ್ರಿಕೆಟ್ ಜೊತೆಗೆ ಪಾಕಿಸ್ತಾನದೊಂದಿಗಿನ ಎಲ್ಲಾ ಸಂಬಂಧಕ್ಕೂ ಅಂತ್ಯ ಹಾಡಬೇಕು; ಸೌರವ್ ಗಂಗೂಲಿ

Sourav Ganguly: ಪಹಲ್ಗಾಮ್‌ ಭಯೋತ್ಪಾದಕ ದಾಳಿಯ ನಂತರ, ಭಾರತದ ಮಾಜಿ ಕ್ರಿಕೆಟ್ ನಾಯಕ ಸೌರವ್ ಗಂಗೂಲಿ ಪಾಕಿಸ್ತಾನದೊಂದಿಗಿನ ಕ್ರಿಕೆಟ್ ಸಂಬಂಧವನ್ನು ಸಂಪೂರ್ಣವಾಗಿ ಕೊನೆಗೊಳಿಸಬೇಕೆಂದು ಆಗ್ರಹಿಸಿದ್ದಾರೆ. ಭಯೋತ್ಪಾದನೆಯನ್ನು ಸಹಿಸಲಾಗದು ಎಂದು ಅವರು ಹೇಳಿದ್ದಾರೆ. ಬಿಸಿಸಿಐ ಕೂಡ ಈ ದಾಳಿಯನ್ನು ಖಂಡಿಸಿ, ಐಪಿಎಲ್ ಪಂದ್ಯದಲ್ಲಿ ಶ್ರದ್ಧಾಂಜಲಿ ಸಲ್ಲಿಸಿದೆ. ಇತರ ಕ್ರಿಕೆಟಿಗರೂ ಸಹ ಗಂಗೂಲಿಯ ಅಭಿಪ್ರಾಯಕ್ಕೆ ಬೆಂಬಲ ನೀಡಿದ್ದಾರೆ.

ಕ್ರಿಕೆಟ್ ಜೊತೆಗೆ ಪಾಕಿಸ್ತಾನದೊಂದಿಗಿನ ಎಲ್ಲಾ ಸಂಬಂಧಕ್ಕೂ ಅಂತ್ಯ ಹಾಡಬೇಕು; ಸೌರವ್ ಗಂಗೂಲಿ
Sourav Ganguly

Updated on: Apr 26, 2025 | 6:59 PM

ಪಹಲ್ಗಾಮ್ ಭಯೋತ್ಪಾದಕ ದಾಳಿಯ (Pahalgam Terrorist Attack) ನಂತರ, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ (Sourav Ganguly) ಪಾಕಿಸ್ತಾನದೊಂದಿಗಿನ ಸಂಬಂಧದ ಬಗ್ಗೆ ಕಠಿಣ ನಿಲುವು ತೆಗೆದುಕೊಂಡಿದ್ದಾರೆ. ಪಾಕಿಸ್ತಾನದೊಂದಿಗಿನ ಸಂಬಂಧವನ್ನು 100 ಪ್ರತಿಶತ ಕೊನೆಗೊಳಿಸಬೇಕು ಕಠಿಣ ಕ್ರಮ ಕೈಗೊಳ್ಳುವುದು ಅಗತ್ಯ. ಪ್ರತಿ ವರ್ಷ ಇಂತಹ ಘಟನೆಗಳು ನಡೆಯುವುದು ತಮಾಷೆಯಲ್ಲ. ಭಯೋತ್ಪಾದನೆಯನ್ನು ಸಹಿಸಲಾಗುವುದಿಲ್ಲ ಎಂದು ಗಂಗೂಲಿ ಹೇಳಿಕೆ ನೀಡಿದ್ದಾರೆ.

ಇದು ತಮಾಷೆಯಲ್ಲ

ಉಗ್ರರ ದಾಳಿಯ ಬಗ್ಗೆ ಉಗ್ರವಾಗಿ ಪ್ರತಿಕ್ರಿಯಿಸಿದ ಸೌರವ್ ಗಂಗೂಲಿ, ‘ಪಹಲ್ಗಾಮ್ ಘಟನೆ ತಮಾಷೆಯಲ್ಲ. ಭಯೋತ್ಪಾದನೆಯನ್ನು ಸಹಿಸಲು ಸಾಧ್ಯವಿಲ್ಲ. ಇಡೀ ದೇಶದಾದ್ಯಂತ ಈ ದಾಳಿಯನ್ನು ಖಂಡಿಸಲಾಗುತ್ತಿದೆ. ಹೀಗಾಗಿ ಪಾಕಿಸ್ತಾನದ ವಿರುದ್ಧ ಐಸಿಸಿ ಮತ್ತು ಏಷ್ಯನ್ ಪಂದ್ಯಾವಳಿಗಳಲ್ಲಿಯೂ ಆಡಬಾರದು. ಕ್ರಿಕೆಟ್ ಜೊತೆಗೆ ಪಾಕಿಸ್ತಾನದೊಂದಿಗೆ ಯಾವ ಸಂಬಂಧವೂ ಬೇಡ ಎಂದು ಗಂಗೂಲಿ ಗುಡುಗಿದ್ದಾರೆ.

ಗಂಗೂಲಿ ಮಾತ್ರವಲ್ಲದೆ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಶ್ರೀವತ್ಸ್ ಗೋಸ್ವಾಮಿ ಪಾಕಿಸ್ತಾನದೊಂದಿಗಿನ ಕ್ರೀಡಾ ಸಂಬಂಧಗಳನ್ನು ಸಂಪೂರ್ಣವಾಗಿ ಕೊನೆಗೊಳಿಸಬೇಕೆಂದು ಒತ್ತಾಯಿಸಿದ್ದರು. ಪಾಕಿಸ್ತಾನದೊಂದಿಗೆ ಭಾರತ ಕ್ರಿಕೆಟ್ ಆಡಬಾರದು. ಈಗ ಮಾತ್ರವಲ್ಲ, ಎಂದಿಗೂ ಉಭಯ ತಂಡಗಳು ಪಂದ್ಯವನ್ನಾಡಬಾರದು. ಅಮಾಯಕ ಭಾರತೀಯರನ್ನು ಕೊಲ್ಲುವುದು ಪಾಕಿಸ್ತಾನದ ರಾಷ್ಟ್ರೀಯ ಕ್ರೀಡೆಯಾಗಿ ಮಾರ್ಪಟ್ಟಿದೆ. ಹೀಗಿರುವಾ ಭಾರತ ಬ್ಯಾಟ್ ಮತ್ತು ಚೆಂಡಿನಿಂದ ಅಲ್ಲ, ಶೂನ್ಯ ಸಹಿಷ್ಣುತೆಯಿಂದ ಪ್ರತಿಕ್ರಿಯಿಸಬೇಕು ಎಂದಿದ್ದಾರೆ.

IPL 2025: ರೋಹಿತ್ ಶರ್ಮಾಗೆ ವಿಶೇಷ ಸ್ಮರಣಿಕೆ ನೀಡಿ ಗೌರವಿಸಿದ ಬಿಸಿಸಿಐ; ವಿಡಿಯೋ ನೋಡಿ

ಬಿಸಿಸಿಐ ಶ್ರದ್ಧಾಂಜಲಿ

ಪಹಲ್ಗಾಮ್‌ನಲ್ಲಿ ನಡೆದ ಈ ಭಯೋತ್ಪಾದಕ ದಾಳಿಯ ನಂತರ, ಬಿಸಿಸಿಐ ಕೂಡ ಈ ವಿಷಯದಲ್ಲಿ ಕಟ್ಟುನಿಟ್ಟಾಗಿದೆ. ಈ ಹೇಡಿತನದ ದಾಳಿಯನ್ನು ಖಂಡಿಸಿರುವ ಬಿಸಿಸಿಐ, ಐಪಿಎಲ್ ಪಂದ್ಯದ ವೇಳೆ ಈ ದಾಳಿಯಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಸಿತು. ಹೈದರಾಬಾದ್-ಮುಂಬೈ ಇಂಡಿಯನ್ಸ್ ಪಂದ್ಯದ ವೇಳೆ ಒಂದು ನಿಮಿಷ ಮೌನಾಚರಣೆ ನಡೆಸಿದಲ್ಲದೆ ಆಟಗಾರರು ಕಪ್ಪು ಪಟ್ಟಿ ಧರಿಸಿ ಪಂದ್ಯವನ್ನು ಆಡಿದ್ದರು. ಈ ಪಂದ್ಯದಲ್ಲಿ ಯಾವುದೇ ಚಿಯರ್‌ಲೀಡರ್‌ಗಳಿರಲಿಲ್ಲ. ಜೊತೆಗೆ ಸಿಡಿಮದ್ದುಗಳನ್ನು ಸಿಡಿಸುವುದನ್ನು ನಿಷೇಧಿಸಲಾಗಿತ್ತು.

ಹಾಗೆಯೇ ಈ ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ್ದ ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ತೀವ್ರವಾಗಿ ಖಂಡಿಸಿದರು ಮತ್ತು ಭಾರತ ಸರ್ಕಾರ ಏನು ಹೇಳುತ್ತದೆಯೋ, ಬಿಸಿಸಿಐ ಅದನ್ನೇ ಮಾಡುತ್ತದೆ. ನಾವು ಪಾಕಿಸ್ತಾನದ ವಿರುದ್ಧ ಯಾವುದೇ ದ್ವಿಪಕ್ಷೀಯ ಸರಣಿಯನ್ನು ಆಡುವುದಿಲ್ಲ ಎಂಬುದನ್ನು ಖಚಿತಪಡಿಸಿದ್ದಾರೆ. ನಾವು ಅಮಾಯಕರೊಂದಿಗೆ ಇದ್ದು, ಇಡೀ ಘಟನೆಯನ್ನು ಖಂಡಿಸುತ್ತೇವೆ. ನಮ್ಮ ಸರ್ಕಾರ ಏನು ಹೇಳುತ್ತದೆಯೋ, ಅದನ್ನು ಮಾಡುತ್ತೇವೆ ಎಂದಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us