AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sourav Ganguly: ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಗಂಗೂಲಿ ರಾಜೀನಾಮೆ ನೀಡಿಲ್ಲ; ದಾದಾ ರಾಜೀನಾಮೆ ವದಂತಿಗೆ ತೆರೆ ಎಳೆದ ಜೈ ಶಾ

Sourav Ganguly: ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಗಂಗೂಲಿ ರಾಜೀನಾಮೆ ಸುದ್ದಿಯನ್ನು ಕಟುವಾಗಿ ನಿರಾಕರಿಸಿದ್ದಾರೆ. ಜೊತೆಗೆ ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ಎಂಬುದನ್ನು ಜೈ ಶಾ ಖಚಿತ ಪಡಿಸಿರುವದಾಗಿ ಸುದ್ದಿ ಸಂಸ್ಥೆ ಎಎನ್ಐ ಟ್ವಿಟ್ ಮಾಡುವ ಮೂಲಕ ಎಲ್ಲಾ ವದಂತಿಗಳಿಗೂ ತೆರೆ ಎಳಿದಿದೆ.

Sourav Ganguly: ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಗಂಗೂಲಿ ರಾಜೀನಾಮೆ ನೀಡಿಲ್ಲ; ದಾದಾ ರಾಜೀನಾಮೆ ವದಂತಿಗೆ ತೆರೆ ಎಳೆದ ಜೈ ಶಾ
ಸೌರವ್ ಗಂಗೂಲಿ, ಜೈ ಶಾ
TV9 Web
| Edited By: |

Updated on:Jun 01, 2022 | 6:47 PM

Share

ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ (Sourav Ganguly) ಬಿಸಿಸಿಐ (BCCI) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ಎಂಬುದನ್ನು ಮಂಡಳಿಯ ಕಾರ್ಯದರ್ಶಿ ಜಯ್ ಶಾ (Jay Shah) ಇದನ್ನು ಖಚಿತಪಡಿಸಿದ್ದಾರೆ. ಸೌರವ್ ಗಂಗೂಲಿ ಅವರ ಟ್ವಿಟರ್ ಪೋಸ್ಟ್ ನಂತರ, ಗಂಗೂಲಿ ಬಿಸಿಸಿಐ ಅಧ್ಯಕ್ಷ ಸ್ಥಾನವನ್ನು ತೊರೆದಿದ್ದಾರೆ ಎಂಬ ಸುದ್ದಿ ಹರಡಿತು. ಇದರ ಜೊತೆಗೆ ಗಂಗೂಲಿ ಅವರು ರಾಜ್ಯಸಭೆಗೆ ಹೋಗಲಿದ್ದಾರೆ ಎಂಬ ಸುದ್ದಿ ಹರಿದಾಡಲಾರಂಭಿಸಿತ್ತು. ಆದರೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಗಂಗೂಲಿ ರಾಜೀನಾಮೆ ಸುದ್ದಿಯನ್ನು ಕಟುವಾಗಿ ನಿರಾಕರಿಸಿದ್ದಾರೆ. ಜೊತೆಗೆ ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ಎಂಬುದನ್ನು ಜೈ ಶಾ ಖಚಿತ ಪಡಿಸಿರುವದಾಗಿ ಸುದ್ದಿ ಸಂಸ್ಥೆ ಎಎನ್ಐ ಟ್ವಿಟ್ ಮಾಡುವ ಮೂಲಕ ಎಲ್ಲಾ ವದಂತಿಗಳಿಗೂ ತೆರೆ ಎಳಿದಿದೆ. ಸೌರವ್ ಗಂಗೂಲಿ 2019 ರಲ್ಲಿ ಬಿಸಿಸಿಐ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಅಂದಿನಿಂದ ಅವರು ಈ ಹುದ್ದೆಯಲ್ಲಿದ್ದಾರೆ.

ಟ್ವಿಟರ್​ನಲ್ಲಿ ಗಂಗೂಲಿ ಪೋಸ್ಟ್ ಮಾಡಿದ್ದೇನು?

ಸೌರವ್ ಗಂಗೂಲಿ ಟ್ವಿಟರ್‌ನಲ್ಲಿ, ಬಹುಶಃ ಬಹಳಷ್ಟು ಜನರಿಗೆ ಸಹಾಯ ಮಾಡುತ್ತದೆ ಎಂದು ನಾನು ಭಾವಿಸುವ ಏನನ್ನಾದರೂ ಪ್ರಾರಂಭಿಸಲು ನಾನು ಯೋಜಿಸುತ್ತಿದ್ದೇನೆ. 1992ರಲ್ಲಿ ನನ್ನ ಕ್ರಿಕೆಟ್ ಪಯಣ ಆರಂಭಿಸಿದ್ದು 2022ಕ್ಕೆ 30 ವರ್ಷಗಳು ಪೂರೈಸಲಿದೆ. ಅಲ್ಲಿಂದ ಇಲ್ಲಿಯವರೆಗೆ ಕ್ರಿಕೆಟ್ ನನಗೆ ಬಹಳಷ್ಟು ನೀಡಿದೆ. ಮುಖ್ಯವಾಗಿ ಅದು ನನಗೆ ನಿಮ್ಮೆಲ್ಲರ ಬೆಂಬಲವನ್ನು ನೀಡಿದೆ. ನನ್ನ ಪಯಣದಲ್ಲಿ ಭಾಗವಾದ, ಬೆಂಬಲ ನೀಡಿದ, ನಾನು ಈಗ ಇರುವ ಸ್ಥಿತಿಗೆ ಮುಟ್ಟಲು ಕಾರಣವಾದ ಪ್ರತಿಯೊಬ್ಬ ವ್ಯಕ್ತಿಗೂ ನಾನು ಧನ್ಯವಾದಗಳನ್ನು ಹೇಳುತ್ತೇವೆ. ಇವತ್ತು ನಾನು ಹೊಸತೊಂದನ್ನು ಆರಂಭಿಸಲು ಯೋಚಿಸುತ್ತಿದ್ದೇನೆ, ಇದರಿಂದ ಬಹಳಷ್ಟು ಜನರಿಗೆ ಸಹಾಯ ಮಾಡಬಲ್ಲೆ ಎಂದು ನಾನು ಭಾವಿಸುತ್ತೇನೆ. ನಾನು ನನ್ನ ಬದುಕಿನ ಹೊಸ ಅಧ್ಯಾಯಕ್ಕೆ ಪ್ರವೇಶಿಸುವ ಈ ಹೊತ್ತಲ್ಲಿಯೂ ನೀವು ನನ್ನನ್ನು ಬೆಂಬಲಿಸುತ್ತೀರಿ ಎಂದು ನಾನು ಭಾವಿಸುತ್ತೇನೆ ಎಂದು ಸೌರವ್ ತಮ್ಮ ಟ್ವೀಟ್​ನಲ್ಲಿ ಬರೆದಿದ್ದಾರೆ.

ಗಂಗೂಲಿ ಭೇಟಿಯಾಗಿದ್ದ ಅಮಿತ್ ಶಾ

ಕಕಳೆದ ತಿಂಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಬಂಗಾಳದಲ್ಲಿ ಸೌರವ್ ಗಂಗೂಲಿ ರಾತ್ರಿ ಭೋಜನದ ಆತಿಥ್ಯ ವಹಿಸಿದ್ದರು. ಅಮಿತ್ ಶಾ ಅವರಿಗೆ ಆತಿಥ್ಯ ವಹಿಸಿದರ ಬಗ್ಗೆ ತೃಣಮೂಲ ಕಾಂಗ್ರಸ್ ಟೀಕಾ ಪ್ರಹಾರ ಮಾಡಿದಾಗ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಜತೆ ಕೂಡಾ ತಾನು ಉತ್ತಮ ಸಂಬಂಧ ಹೊಂದಿರುವುದಾಗಿ ಗಂಗೂಲಿ ಹೇಳಿದ್ದರು. ನಮ್ಮ ಗೌರವಾನ್ವಿತ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನನಗೆ ತುಂಬಾ ಹತ್ತಿರದ ವ್ಯಕ್ತಿ. ಈ ಸಂಸ್ಥೆಗೆ ಸಹಾಯ ಮಾಡಲು ನಾನು ಅವರನ್ನು ಸಂಪರ್ಕಿಸಿದ್ದೆ ಎಂದು ಗಂಗೂಲಿ ಮಾಧ್ಯಮದವರಲ್ಲಿ ಹೇಳಿದ್ದಾರೆ.

ಅಮಿತ್ ಶಾ ಔತಣಕೂಟದ ಊಹಾಪೋಹಗಳಿಗೆ ಪ್ರತಿಕ್ರಿಯಿಸಿದ ಸೌರವ್ “ಊಹಾಪೋಹಗಳು ಹರಿದಾಡುತ್ತಿವೆ. ಆದರೆ ನಾನು ಅಮಿತ್ ಶಾ ಅವರನ್ನು 2008 ರಿಂದ ಬಲ್ಲೆ. ಆಟವಾಡುವಾಗ ನಾನು ಅವರನ್ನು ಭೇಟಿಯಾಗುತ್ತಿದ್ದೆ. ಅದಕ್ಕಿಂತ ಹೆಚ್ಚೇನೂ ಇಲ್ಲ ಎಂದು ಪ್ರತಿಕ್ರಿಯಿಸಿದ್ದರು.

Published On - 6:45 pm, Wed, 1 June 22

ಡಿ ಕ್ಲರ್ಕ್ ಆಟಕ್ಕೆ ಸಲಾಂ ಹೊಡೆದ ಕ್ರಿಕೆಟ್ ಜಗತ್ತು; ವಿಡಿಯೋ
ಡಿ ಕ್ಲರ್ಕ್ ಆಟಕ್ಕೆ ಸಲಾಂ ಹೊಡೆದ ಕ್ರಿಕೆಟ್ ಜಗತ್ತು; ವಿಡಿಯೋ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ