AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಇಬ್ಬರು ಯುವ ಆಟಗಾರರ ಪ್ರದರ್ಶನಕ್ಕೆ ಗಂಗೂಲಿ ಫಿದಾ..!

Sourav Ganguly: ಟಿ ನಟರಾಜನ್ ಮತ್ತೆ ಕಮ್ ಬ್ಯಾಕ್ ಮಾಡಿದ್ದಾರೆ. ನಮ್ಮಲ್ಲಿ ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಶಮಿ ಇದ್ದಾರೆ. ಹಾಗಾಗಿ ಯಾರಿಗೆ ಮಣೆ ಹಾಕಬೇಕೆಂಬುದು ಆಯ್ಕೆದಾರರು ನಿರ್ಧರಿಸುತ್ತಾರೆ.

IPL 2022: ಇಬ್ಬರು ಯುವ ಆಟಗಾರರ ಪ್ರದರ್ಶನಕ್ಕೆ ಗಂಗೂಲಿ ಫಿದಾ..!
Sourav Ganguly
TV9 Web
| Updated By: ಝಾಹಿರ್ ಯೂಸುಫ್|

Updated on: May 16, 2022 | 6:28 PM

Share

IPL 2022: ಐಪಿಎಲ್​ ಎಂಬುದು ಯುವ ಆಟಗಾರರಿಗೆ ಉತ್ತಮ ವೇದಿಕೆ. ಇಲ್ಲಿ ಮಿಂಚಿದ ಅನೇಕ ಆಟಗಾರರು ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಪ್ರಸ್ತುತ ಟೀಮ್ ಇಂಡಿಯಾದಲ್ಲಿರುವ ಜಸ್​ಪ್ರೀತ್ ಬುಮ್ರಾ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾರಂತಹ ಆಟಗಾರರು ಐಪಿಎಲ್​ನಲ್ಲಿನ ಅದ್ಭುತ ಪ್ರದರ್ಶನದಿಂದ​ ಟೀಮ್ ಇಂಡಿಯಾದಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದರು. ಈ ಬಾರಿ ಕೂಡ ಅನೇಕ ಯುವ ಆಟಗಾರರು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಅವರಲ್ಲಿ ಕೆಲವರು ಟೀಮ್ ಇಂಡಿಯಾ ಆಯ್ಕೆಗಾರರ ಗಮನ ಸೆಳೆದಿದ್ದಾರೆ. ಇನ್ನು ಕೆಲವರ ಪ್ರದರ್ಶನದಿಂದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ (Sourav Ganguly) ಅವರೇ ಪ್ರಭಾವಿತರಾಗಿದ್ದಾರೆ. ಹೀಗಾಗಿ ಎಲ್ಲರ ನಡುವೆ ಇಬ್ಬರು ಅನ್​ಕ್ಯಾಪ್ಡ್ ಆಟಗಾರರ ಪ್ರದರ್ಶನಕ್ಕೆ ಖುದ್ದು ಟೀಮ್ ಇಂಡಿಯಾದ ಮಾಜಿ ನಾಯಕ ಗಂಗೂಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿರುವ ಗಂಗೂಲಿ, ಈ ಬಾರಿಯ ಐಪಿಎಲ್​ನಲ್ಲಿ ಬೌಲರ್‌ಗಳ ಪ್ರಾಬಲ್ಯವನ್ನು ನೋಡಿ ನನಗೆ ತುಂಬಾ ಸಂತೋಷವಾಗಿದೆ. ಮುಂಬೈ ಮತ್ತು ಪುಣೆಯಲ್ಲಿನ ವಿಕೆಟ್‌ಗಳು ಉತ್ತಮವಾಗಿವೆ. ಬೌಲರ್​ಗಳು ಉತ್ತಮ ಬೌನ್ಸ್ ಎಸೆಯುತ್ತಿದ್ದಾರೆ. ಸ್ಪಿನ್ನರ್‌ಗಳು ಕೂಡ ಉತ್ತಮವಾಗಿ ಬೌಲಿಂಗ್ ಮಾಡುತ್ತಿದ್ದಾರೆ. ಅಲ್ಲದೆ ಯುವ ವೇಗಿಗಳೂ ಕೂಡ ಗಮನಾರ್ಹ ಪ್ರದರ್ಶನ ನೀಡಿದ್ದಾರೆ. ಅದರಲ್ಲೂ ಸನ್​ರೈಸರ್ಸ್​ ಹೈದರಾಬಾದ್ ತಂಡದ ಯುವ ವೇಗಿ ಉಮ್ರಾನ್ ಮಲಿಕ್ ಅವರ ಬೌಲಿಂಗ್​ನಿಂದ ನಾನು ಪ್ರಭಾವಿತನಾಗಿದ್ದೇನೆ ಎಂದು ಗಂಗೂಲಿ ತಿಳಿಸಿದ್ದಾರೆ. ವೇಗದಿಂದ ವೇಗಕ್ಕೆ ಅವರು ಮುನ್ನಡೆಯುತ್ತಿರುವುದು ಮತ್ತು ವಿಕೆಟ್ ತೆಗೆದುಕೊಳ್ಳುವ ಸಾಮರ್ಥ್ಯವು ಅದ್ಭುತ. 150 ಕಿಮೀ ವೇಗದಲ್ಲಿ ಎಷ್ಟು ಮಂದಿ ಬೌಲ್ ಮಾಡಬಹುದು? ಬಹಳಷ್ಟಿಲ್ಲ ಎಂಬುದು ನನ್ನ ಅನಿಸಿಕೆ. ಹೀಗಾಗಿ ಉಮ್ರಾನ್ ಮಲಿಕ್ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾದರೆ ನನಗೆ ಆಶ್ಚರ್ಯವಿಲ್ಲ ಎಂದು ಸೌರವ್ ಗಂಗೂಲಿ ಹೇಳಿದ್ದಾರೆ.

ಉಮ್ರಾನ್ ಮಲಿಕ್ ಅಲ್ಲದೆ, ನನಗೆ ಕುಲದೀಪ್ ಸೇನ್ ಅವರ ಬೌಲಿಂಗ್ ಕೂಡ ಅದ್ಭುತವಾಗಿದೆ. ರಾಜಸ್ಥಾನ್ ರಾಯಲ್ಸ್ ಪರ ಆಡುತ್ತಿರುವ ಕುಲದೀಪ್ ಸೇನ್ ಸೀಸನ್​ನಲ್ಲಿ ಏಳು ಪಂದ್ಯಗಳಲ್ಲಿ 8 ವಿಕೆಟ್ ಪಡೆದಿದ್ದಾರೆ. ಆದರೆ ವಿಶೇಷವಾಗಿ ಡೆತ್ ಓವರ್​ಗಳಲ್ಲಿ ಪ್ರಭಾವಶಾಲಿಯಾಗಿದ್ದಾರೆ. ಈ ಇಬ್ಬರು ಅನ್​ಕ್ಯಾಪ್ಡ್​ ಬೌಲರ್​ಗಳ ಪ್ರದರ್ಶನಕ್ಕೆ ನಾನು ಫಿದಾ ಆಗಿದ್ದೇನೆ ಎಂದು ಸೌರವ್ ಗಂಗೂಲಿ ಹೇಳಿದ್ದಾರೆ.

ಇದನ್ನೂ ಓದಿ
Image
Virat Kohli: ಕಳಪೆ ಫಾರ್ಮ್​ ನಡುವೆಯೂ 2 ದಾಖಲೆ ಬರೆದ ಕಿಂಗ್ ಕೊಹ್ಲಿ
Image
IPL 2022: RCB ತಂಡದ ಸೋಲಿಗೆ ಇವರಿಬ್ಬರೇ ಕಾರಣ..!
Image
IPL 2022: ಸೋಲುತ್ತೆ ನಿಜ, ಆದರೆ ಇದು?, LSG ಆಟಗಾರರ ವಿರುದ್ದ ಗಂಭೀರ್ ಗರಂ
Image
IPL 2022: ಅಂದು ಲಯನ್ಸ್, ಇಂದು ಟೈಟನ್ಸ್: ಗುಜರಾತ್ ತಂಡದ ಫ್ಯಾನ್ಸ್​ಗೆ ಹೊಸ ಚಿಂತೆ ಶುರು..!

ಇದಾಗ್ಯೂ ಈ ಯುವ ಬೌಲರ್​ಗಳನ್ನು ಬಳಸುವಾಗ ನಾವು ಜಾಗರೂಕರಾಗಿರಬೇಕು. ಏಕೆಂದರೆ ಇಬ್ಬರಿಗೂ ಅನುಭವದ ಕೊರತೆಯಿದೆ. ಹೀಗಾಗಿ ಅವರನ್ನು ಉತ್ತಮ ಬಳಸಿಕೊಳ್ಳುವ ಮೂಲಕ ಭವಿಷ್ಯದ ಸ್ಟಾರ್ ಬೌಲರ್​ಗಳಾಗಿ ರೂಪಿಸಿಕೊಳ್ಳಬಹುದು ಎಂದು ಸೌರವ್ ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಈ ಇಬ್ಬರು ಬೌಲರ್​ಗಳನ್ನು ಟೀಮ್ ಇಂಡಿಯಾಗೆ ಆಯ್ಕೆ ಮಾಡುವುದು ಆಯ್ಕೆದಾರರಿಗೆ ಬಿಟ್ಟ ವಿಷಯ ಎಂದಿದ್ದಾರೆ. ಏಕೆಂದರೆ ಟಿ ನಟರಾಜನ್ ಮತ್ತೆ ಕಮ್ ಬ್ಯಾಕ್ ಮಾಡಿದ್ದಾರೆ. ನಮ್ಮಲ್ಲಿ ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಶಮಿ ಇದ್ದಾರೆ. ಹಾಗಾಗಿ ಯಾರಿಗೆ ಮಣೆ ಹಾಕಬೇಕೆಂಬುದು ಆಯ್ಕೆದಾರರು ನಿರ್ಧರಿಸುತ್ತಾರೆ ಎಂದು ಗಂಗೂಲಿ ಹೇಳಿದರು.

ಈ ಬಾರಿ ಐಪಿಎಲ್​ನಲ್ಲಿ ಜಮ್ಮು ಕಾಶ್ಮೀರದ ಯುವ ವೇಗಿ ಉಮ್ರಾನ್ ಮಲಿಕ್ 12 ಪಂದ್ಯಗಳಲ್ಲಿ 18 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಅದರಲ್ಲೂ 157 ಕಿ.ಮೀ ವೇಗದಲ್ಲಿ ಚೆಂಡೆಸೆಯುವ ಮೂಲಕ ಈ ಬಾರಿಯ ಐಪಿಎಲ್​ನಲ್ಲಿ ಗರಿಷ್ಠ ವೇಗದಲ್ಲಿ ಬೌಲಿಂಗ್ ಮಾಡಿದ ಬೌಲರ್ ಎನಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಈ ಸೀಸನ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಅನ್​ಕ್ಯಾಪ್ಡ್​ ಬೌಲರ್ ಎಂಬ ದಾಖಲೆ ಕೂಡ ಉಮ್ರಾನ್ ಮಲಿಕ್ ಹೆಸರಿನಲ್ಲಿದೆ. ಹೀಗಾಗಿಯೇ ಸುನಿಲ್ ಗಾವಸ್ಕರ್ ಸೇರಿದಂತೆ ಅನೇಕ ಮಾಜಿ ಆಟಗಾರರು ಉಮ್ರಾನ್ ಮಲಿಕ್​ಗೆ ಟೀಮ್ ಇಂಡಿಯಾದಲ್ಲಿ ಚಾನ್ಸ್ ನೀಡಬೇಕೆಂದು ಅಭಿಪ್ರಾಯಪಟ್ಟಿದ್ದಾರೆ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ