AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಗೂಲಿ ಅಥವಾ ಧೋನಿ ಈ ಇಬ್ಬರಲ್ಲಿ ಯಾರು ಅತ್ಯುತ್ತಮ ನಾಯಕ? ಒಂದೇ ಪದದಲ್ಲಿ ಉತ್ತರಿಸಿದ ಸೆಹ್ವಾಗ್

ಧೋನಿಗೆ ಉತ್ತಮ ಆಟಗಾರರು ಸಿಕ್ಕಿದ್ದರಿಂದ ಅವರಿಗೆ ಹೊಸ ಆಟಗಾರರ ಹುಡುಕಾಟದ ಅಗತ್ಯವಿರಲಿಲ್ಲ. ಆದರೆ ಗಂಗೂಲಿ ಒಂದು ತಂಡವನ್ನು ರಚಿಸಬೇಕಾಯಿತು. ಹಾಗಾಗಿ ನಾನು ಧೋನಿ ಮತ್ತು ಗಂಗೂಲಿ ನಡುವೆ ಅತ್ಯುತ್ತಮ ನಾಯಕನನ್ನು ಆಯ್ಕೆ ಮಾಡಲು ಬಯಸಿದರೆ

ಗಂಗೂಲಿ ಅಥವಾ ಧೋನಿ ಈ ಇಬ್ಬರಲ್ಲಿ ಯಾರು ಅತ್ಯುತ್ತಮ ನಾಯಕ? ಒಂದೇ ಪದದಲ್ಲಿ ಉತ್ತರಿಸಿದ ಸೆಹ್ವಾಗ್
ಧೋನಿ, ಸೆಹ್ವಾಗ್, ಗಂಗೂಲಿ
TV9 Web
| Updated By: ಪೃಥ್ವಿಶಂಕರ|

Updated on: Sep 15, 2021 | 6:58 PM

Share

ಟೀಂ ಇಂಡಿಯಾ ನಾಯಕ ಸೌರವ್ ಗಂಗೂಲಿ ಮತ್ತು ಎಂಎಸ್ ಧೋನಿ ಅವರನ್ನು ಭಾರತದ ಅತ್ಯಂತ ಯಶಸ್ವಿ ನಾಯಕರೆಂದು ಪರಿಗಣಿಸಲಾಗಿದೆ. ಈ ಇಬ್ಬರು ಟೀಮ್ ಇಂಡಿಯಾವನ್ನು ವಿಭಿನ್ನ ಎತ್ತರಕ್ಕೆ ಕೊಂಡೊಯ್ದರು. ಅವರ ನಾಯಕತ್ವದಲ್ಲಿ, ಭಾರತವು ಅನೇಕ ಮೈಲಿಗಲ್ಲುಗಳನ್ನು ತಲುಪಿತು. ಟೀಮ್ ಇಂಡಿಯಾ ವಿದೇಶದಲ್ಲಿ ಗೆಲ್ಲಬಹುದು ಎಂಬುದನ್ನು ಗಂಗೂಲಿ ಸಾಭೀತುಪಡಿಸಿದರು. ಧೋನಿ ನಾಯಕತ್ವದಲ್ಲಿ ಭಾರತ ಟಿ 20 ಹಾಗೂ ಏಕದಿನ ವಿಶ್ವಕಪ್ ಗೆದ್ದಿದೆ. ಇವರಿಬ್ಬರ ನಾಯಕತ್ವದಲ್ಲಿ ಟೀಂ ಇಂಡಿಯಾ ಮಾಜಿ ಸ್ಫೋಟಕ ಬ್ಯಾಟ್ಸ್‌ಮನ್ ವೀರೇಂದ್ರ ಸೆಹ್ವಾಗ್ ಕೂಡ ಆಡಿದ್ದಾರೆ. ಈಗ ಸೆಹ್ವಾಗ್, ಗಂಗೂಲಿ ಅಥವಾ ಧೋನಿ ಈ ಇಬ್ಬರಲ್ಲಿ ಯಾರು ಉತ್ತಮ ನಾಯಕ ಎಂಬ ಪ್ರಶ್ನೆಗೆ ಉತ್ತರಿಸಿದ್ದಾರೆ.

ವೀರೇಂದ್ರ ಸೆಹ್ವಾಗ್ ಸಂದರ್ಶನವೊಂದರಲ್ಲಿ ಈ ಪ್ರಶ್ನೆಗಳಿಗೆ ಉತ್ತರಿಸಿದರು. ಆರ್ ಜೆ ರೌನಕ್ ಅವರ ಯೂಟ್ಯೂಬ್ ಶೋನಲ್ಲಿ ಸೆಹ್ವಾಗ್ ನಿಸ್ಸಂದಿಗ್ಧವಾದ ಉತ್ತರಗಳನ್ನು ನೀಡಿದರು. ಗಂಗೂಲಿ ಮತ್ತು ಧೋನಿ ಇಬ್ಬರೂ ಮಹಾನ್ ನಾಯಕರು ಎಂದು ಸೆಹ್ವಾಗ್ ಹೇಳಿದ್ದಾರೆ. ಆದಾಗ್ಯೂ, ಗಂಗೂಲಿ ಮುನ್ನಡೆಸಿದ ಸಮಯ, ಆದ್ದರಿಂದ ಸೌರವ್ ಗಂಗೂಲಿ ಅತ್ಯುತ್ತಮ ನಾಯಕ ಎಂದು ವೀರೇಂದ್ರ ಸೆಹ್ವಾಗ್ ಹೇಳಿದರು. ಗಂಗೂಲಿ ಹೊಸ ಮತ್ತು ಪ್ರತಿಭಾವಂತ ಆಟಗಾರರಿಗೆ ಅವಕಾಶಗಳನ್ನು ನೀಡುವ ಮೂಲಕ ತಂಡವನ್ನು ಕಟ್ಟಿದರು. ಗಂಗೂಲಿ ಭಾರತವನ್ನು ವಿದೇಶದಲ್ಲಿ ಗೆಲುವಿನತ್ತ ಮುನ್ನಡೆಸಿದರು. ನಾವು ಟೆಸ್ಟ್ ಸರಣಿಯನ್ನು ಡ್ರಾ ಮತ್ತು ಗೆಲ್ಲಲು ಸಾಧ್ಯವಾಯಿತು ಎಂದು ಸೆಹ್ವಾಗ್ ಹೇಳಿದರು.

ಆರಂಭಿಕ ಟೆಸ್ಟ್​ಗಳಲ್ಲಿ ಸೆಹ್ವಾಗ್​ಗೆ ಬ್ಯಾಟಿಂಗ್ ಅವಕಾಶವನ್ನೂ ಗಂಗೂಲಿ ನೀಡಿದರು. ಹಾಗಾಗಿ ಸೆಹ್ವಾಗ್ ಮೂರು ಶತಕ ಬಾರಿಸಿದರು. ಧೋನಿಯ ನಾಯಕತ್ವದಲ್ಲಿ ಟೀಂ ಇಂಡಿಯಾ ಎರಡು ಬಾರಿ ವಿಶ್ವಕಪ್ ಗೆದ್ದಿದೆ ಎಂದು ಸೆಹ್ವಾಗ್ ನೆನಪಿಸಿದರು. ಗಂಗೂಲಿ ಯುವ ಮತ್ತು ಪ್ರತಿಭಾವಂತ ಆಟಗಾರರನ್ನು ಆಯ್ಕೆ ಮಾಡಿ ತಂಡವನ್ನು ಬಲಪಡಿಸಿದರು. ಅವರ ನಾಯಕತ್ವದಲ್ಲಿ, ಭಾರತೀಯ ಕ್ರಿಕೆಟ್​ನಲ್ಲಿ ಹೊಸ ಶಕೆ ಆರಂಭವಾಗಿದೆ ಎಂದು ಸೆಹ್ವಾಗ್ ಹೇಳಿದರು.

ಗಂಗೂಲಿ ಅತ್ಯುತ್ತಮ ಧೋನಿ ಉತ್ತಮ ಕೆಲಸ ಮಾಡಿದ್ದಾರೆ. ಅವರು ತಂಡವನ್ನು ಸರಿಯಾದ ದಿಕ್ಕಿನಲ್ಲಿ ಮುನ್ನಡೆಸಿದರು. ಧೋನಿ ಉತ್ತಮ ತಂಡವನ್ನು ಪಡೆದರು ಮತ್ತು ಅವರು ಆ ತಂಡದ ಬಲದಿಂದ ಯಶಸ್ವಿಯಾದರು ಎಂದು ಸೆಹ್ವಾಗ್ ಹೇಳಿದರು. ಧೋನಿಗೆ ಉತ್ತಮ ಆಟಗಾರರು ಸಿಕ್ಕಿದ್ದರಿಂದ ಅವರಿಗೆ ಹೊಸ ಆಟಗಾರರ ಹುಡುಕಾಟದ ಅಗತ್ಯವಿರಲಿಲ್ಲ. ಆದರೆ ಗಂಗೂಲಿ ಒಂದು ತಂಡವನ್ನು ರಚಿಸಬೇಕಾಯಿತು. ಹಾಗಾಗಿ ನಾನು ಧೋನಿ ಮತ್ತು ಗಂಗೂಲಿ ನಡುವೆ ಅತ್ಯುತ್ತಮ ನಾಯಕನನ್ನು ಆಯ್ಕೆ ಮಾಡಲು ಬಯಸಿದರೆ, ನಾನು ಗಂಗೂಲಿ ಹೆಸರನ್ನು ಹೇಳುತ್ತೇನೆ ಎಂದು ಸೆಹ್ವಾಗ್ ಹೇಳಿದರು.

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ