AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sourav Ganguly: ನೀವು ಕೇಳಿದ್ದು ಇಲ್ಲಿದೆ…ಸೌರವ್​ ಗಂಗೂಲಿ ಸರ್​ಪ್ರೈಸ್..!

Sourav Ganguly: ಹುಟ್ಟುಹಬ್ಬದಂದು ಸರ್​ಪ್ರೈಸ್ ನೀಡುವುದಾಗಿ ಸೌರವ್ ಗಂಗೂಲಿ ಸೋಷಿಯಲ್ ತಿಳಿಸಿದ್ದಾರೆ. ಇದರ ಬೆನ್ನಲ್ಲೇ ದಾದಾ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕೋಚ್ ಆಗಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

Sourav Ganguly: ನೀವು ಕೇಳಿದ್ದು ಇಲ್ಲಿದೆ...ಸೌರವ್​ ಗಂಗೂಲಿ ಸರ್​ಪ್ರೈಸ್..!
Sourav Ganguly
TV9 Web
| Edited By: |

Updated on: Jul 06, 2023 | 10:06 PM

Share

ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ (Sourav Ganguly) ಅವರು ತಮ್ಮ ಜನ್ಮದಿನವಾದ ಜುಲೈ 8, 2023 ರಂದು ವಿಶೇಷ ಘೋಷಣೆ ಮಾಡುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ತಮ್ಮ ಫೇಸ್‌ಬುಕ್ ಪ್ರೊಫೈಲ್‌ನಲ್ಲಿ ಫೋಟೋವನ್ನು ಹಂಚಿಕೊಂಡಿರುವ ದಾದಾ, ಶನಿವಾರದವರೆಗೆ ಕಾಯುವಂತೆ ಅಭಿಮಾನಿಗಳಲ್ಲಿ ಕೇಳಿಕೊಂಡಿದ್ದಾರೆ. ಜುಲೈ 8 ರಂದು ಸೌರವ್ ಗಂಗೂಲಿ 51ನೇ ವರ್ಷಕ್ಕೆ ಕಾಲಿಡಲಿದ್ದು, ಇದೇ ದಿನ ವಿಶೇಷ ವಿಚಾರವನ್ನು ಹಂಚಿಕೊಳ್ಳುವುದಾಗಿ ದಾದಾ ತಿಳಿಸಿದ್ದಾರೆ.

ನೀವು ಕೇಳಿದ್ದೀರಿ…ಅದು ಇಲ್ಲಿದೆ…ಜುಲೈ 8 ರಂದು ನನ್ನ ಜನ್ಮದಿನದಂದು ವಿಶೇಷ ಘೋಷಣೆ ಮಾಡುವುದಾಗಿ ಗಂಗೂಲಿ  ತಿಳಿಸಿದ್ದಾರೆ. ಈ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ದಾದಾ ಡೈರಿ ಬರೆಯುತ್ತಿರುವ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ.

ಈ ಫೋಟೋದಲ್ಲಿ ‘ಲೀಡಿಂಗ್ ವಿತ್…’  ಎಂದು ಬರೆದಿರುವುದನ್ನು ಕಾಣಬಹುದು. ಹೀಗಾಗಿ ಗಂಗೂಲಿ ಹೊಸ ಇನಿಂಗ್ಸ್​ ಶುರು ಮಾಡಲಿದ್ದಾರೆ ಎಂಬುದು ಸ್ಪಷ್ಟ.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕೋಚ್?

ಸೌರವ್ ಗಂಗೂಲಿ ಪ್ರಸ್ತುತ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೀಗ ಅವರ ಈ ಸರ್​ಪ್ರೈಸ್ ಬೆನ್ನಲ್ಲೇ ಕೋಚ್ ಆಗಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಸೋಷಿಯಲ್ ಮೀಡಿಯಾದಲ್ಲಿ ದಾದಾ ಹಂಚಿಕೊಂಡಿರುವ ಫೋಟೋದಲ್ಲಿ ಲೀಡಿಂಗ್ ವಿತ್ ಎಂದು ಬರೆದುಕೊಂಡಿರುವುದು ಹೊಸ ಮುನ್ನಡೆಸುವಿಕೆಯ ಸಂಕೇತ ಎಂದು ವಿಶ್ಲೇಷಿಸಲಾಗುತ್ತಿದೆ.

ಇತ್ತ ಕಳೆದ ಎರಡು ಸೀಸನ್​ಗಳಲ್ಲಿ ತಂಡದ ಕೋಚ್ ಆಗಿದ್ದ ರಿಕಿ ಪಾಂಟಿಂಗ್ ಅವರ ಕಾರ್ಯ ವೈಖರಿ ಬಗ್ಗೆ ಡೆಲ್ಲಿ ಕ್ಯಾಪಿಟಲ್ಸ್​ ಫ್ರಾಂಚೈಸಿಯು ಸಂಪೂರ್ಣ ಸಂತುಷ್ಟರಾಗಿಲ್ಲ ಎಂಬ ಸುದ್ದಿಗಳು ಕೂಡ ಹರಿದಾಡಿದ್ದವು. ಇದರ ಬೆನ್ನಲ್ಲೇ ಗಂಗೂಲಿಯನ್ನು ಕೋಚ್ ಆಗಿ ನೇಮಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು.

ಇದನ್ನೂ ಓದಿ: ವಿಶ್ವಕಪ್​ಗಿಂತ ಐಪಿಎಲ್​ ಟ್ರೋಫಿ ಗೆಲ್ಲುವುದು ಕಷ್ಟ, ರೋಹಿತ್ ಶರ್ಮಾ ಬೆಸ್ಟ್ ಕ್ಯಾಪ್ಟನ್: ಸೌರವ್ ಗಂಗೂಲಿ

ಇದೀಗ ಹುಟ್ಟುಹಬ್ಬದಂದು ಸರ್​ಪ್ರೈಸ್ ನೀಡುವುದಾಗಿ ಸೌರವ್ ಗಂಗೂಲಿ ಸೋಷಿಯಲ್ ತಿಳಿಸಿದ್ದಾರೆ. ಇದರ ಬೆನ್ನಲ್ಲೇ ದಾದಾ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕೋಚ್ ಆಗಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗಳಿಗೆ ಶನಿವಾರ ಸ್ಪಷ್ಟ ಉತ್ತರ ಸಿಗಲಿದ್ದು, ಅಲ್ಲಿಯವರೆಗೂ ಕಾಯಲೇಬೇಕು.

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ