Sourav Ganguly ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆಯೇ ಸೌರವ್ ಗಂಗೂಲಿ?; ಸಂದೇಹ ಹುಟ್ಟುಹಾಕಿದ ಟ್ವೀಟ್

Sourav Ganguly Resigns ನನ್ನ ಪಯಣದಲ್ಲಿ ಭಾಗವಾದ, ಬೆಂಬಲ ನೀಡಿದ, ನಾನು ಈಗ ಇರುವ ಸ್ಥಿತಿಗೆ ಮುಟ್ಟಲು ಕಾರಣವಾದ ಪ್ರತಿಯೊಬ್ಬ ವ್ಯಕ್ತಿಗೂ ನಾನು ಧನ್ಯವಾದಗಳನ್ನು ಹೇಳುತ್ತೇವೆ. ಇವತ್ತು ನಾನು ಹೊಸತೊಂದನ್ನು ಆರಂಭಿಸಲು ಯೋಚಿಸುತ್ತಿದ್ದೇನೆ, ಇದರಿಂದ ಬಹಳಷ್ಟು ಜನರಿಗೆ ಸಹಾಯ ಮಾಡಬಲ್ಲೆ ಎಂದು ನಾನು ಭಾವಿಸುತ್ತೇನೆ

Sourav Ganguly ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆಯೇ ಸೌರವ್ ಗಂಗೂಲಿ?;  ಸಂದೇಹ ಹುಟ್ಟುಹಾಕಿದ ಟ್ವೀಟ್
ಸೌರವ್ ಗಂಗೂಲಿ
Follow us
| Updated By: ರಶ್ಮಿ ಕಲ್ಲಕಟ್ಟ

Updated on:Jun 01, 2022 | 6:31 PM

ಬಿಸಿಸಿಐ (BCCI) ಅಧ್ಯಕ್ಷ ಸೌರವ್ ಗಂಗೂಲಿ (Sourav Ganguly) ಅವರು ಬುಧವಾರ ಮಂಡಳಿಯ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡುವ ಸುಳಿವು ನೀಡಿದ್ದಾರೆ. ಬಹುಶಃ ಬಹಳಷ್ಟು ಜನರಿಗೆ ಸಹಾಯ ಮಾಡುತ್ತದೆ ಎಂದು ನಾನು ಭಾವಿಸುವ ಏನನ್ನಾದರೂ ಪ್ರಾರಂಭಿಸಲು ನಾನು ಯೋಜಿಸುತ್ತಿದ್ದೇನೆ” ಎಂದು ಸೌರವ್ ಗಂಗೂಲಿ ಟ್ವೀಟ್ ಮಾಡಿದ್ದು, ಇದು ಗಂಗೂಲಿ ರಾಜಕೀಯ ಸೇರಲಿದ್ದಾರೆಯೇ ಎಂಬ ಊಹಾಪೋಹಕ್ಕೆ ಕಾರಣವಾಗಿದೆ.  ಬುಧವಾರ ಸಂಜೆ 5 ಗಂಟೆಗೆ ಟ್ವೀಟ್ ಮಾಡಿರುವ ಸೌರವ್ ಗಂಗೂಲಿ, 1992ರಲ್ಲಿ ನನ್ನ ಕ್ರಿಕೆಟ್ ಪಯಣ ಆರಂಭಿಸಿದ್ದು 2022ಕ್ಕೆ 30 ವರ್ಷಗಳು ಪೂರೈಸಲಿದೆ. ಅಲ್ಲಿಂದ ಇಲ್ಲಿಯವರೆಗೆ ಕ್ರಿಕೆಟ್ ನನಗೆ ಬಹಳಷ್ಟು ನೀಡಿದೆ. ಮುಖ್ಯವಾಗಿ ಅದು ನನಗೆ ನಿಮ್ಮೆಲ್ಲರ ಬೆಂಬಲವನ್ನು ನೀಡಿದೆ. ನನ್ನ ಪಯಣದಲ್ಲಿ ಭಾಗವಾದ, ಬೆಂಬಲ ನೀಡಿದ, ನಾನು ಈಗ ಇರುವ ಸ್ಥಿತಿಗೆ ಮುಟ್ಟಲು ಕಾರಣವಾದ ಪ್ರತಿಯೊಬ್ಬ ವ್ಯಕ್ತಿಗೂ ನಾನು ಧನ್ಯವಾದಗಳನ್ನು ಹೇಳುತ್ತೇವೆ. ಇವತ್ತು ನಾನು ಹೊಸತೊಂದನ್ನು ಆರಂಭಿಸಲು ಯೋಚಿಸುತ್ತಿದ್ದೇನೆ, ಇದರಿಂದ ಬಹಳಷ್ಟು ಜನರಿಗೆ ಸಹಾಯ ಮಾಡಬಲ್ಲೆ ಎಂದು ನಾನು ಭಾವಿಸುತ್ತೇನೆ. ನಾನು ನನ್ನ ಬದುಕಿನ ಹೊಸ ಅಧ್ಯಾಯಕ್ಕೆ ಪ್ರವೇಶಿಸುವ ಈ ಹೊತ್ತಲ್ಲಿಯೂ ನೀವು ನನ್ನನ್ನು ಬೆಂಬಲಿಸುತ್ತೀರಿ ಎಂದು ನಾನು ಭಾವಿಸುತ್ತೇನೆ ಎಂದು ಸೌರವ್ ತಮ್ಮ ಟ್ವೀಟ್​ನಲ್ಲಿ ಬರೆದಿದ್ದಾರೆ.

ಕಳೆದ ತಿಂಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಬಂಗಾಳದಲ್ಲಿ ಸೌರವ್ ಗಂಗೂಲಿ ರಾತ್ರಿ ಭೋಜನದ ಆತಿಥ್ಯ ವಹಿಸಿದ್ದರು. ಅಮಿತ್ ಶಾ ಅವರಿಗೆ ಆತಿಥ್ಯ ವಹಿಸಿದರ ಬಗ್ಗೆ ತೃಣಮೂಲ ಕಾಂಗ್ರಸ್ ಟೀಕಾ ಪ್ರಹಾರ ಮಾಡಿದಾಗ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಜತೆ ಕೂಡಾ ತಾನು ಉತ್ತಮ ಸಂಬಂಧ ಹೊಂದಿರುವುದಾಗಿ ಗಂಗೂಲಿ ಹೇಳಿದ್ದರು. “ನಮ್ಮ ಗೌರವಾನ್ವಿತ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನನಗೆ ತುಂಬಾ ಹತ್ತಿರದ ವ್ಯಕ್ತಿ. ಈ ಸಂಸ್ಥೆಗೆ ಸಹಾಯ ಮಾಡಲು ನಾನು ಅವರನ್ನು ಸಂಪರ್ಕಿಸಿದ್ದೆ” ಎಂದು ಗಂಗೂಲಿ ಮಾಧ್ಯಮದವರಲ್ಲಿ ಹೇಳಿದ್ದಾರೆ.

ಅಮಿತ್ ಶಾ ಔತಣಕೂಟದ ಊಹಾಪೋಹಗಳಿಗೆ ಪ್ರತಿಕ್ರಿಯಿಸಿದ ಸೌರವ್ “ಊಹಾಪೋಹಗಳು ಹರಿದಾಡುತ್ತಿವೆ. ಆದರೆ ನಾನು ಅಮಿತ್ ಶಾ ಅವರನ್ನು  2008 ರಿಂದ ಬಲ್ಲೆ. ಆಟವಾಡುವಾಗ ನಾನು ಅವರನ್ನು ಭೇಟಿಯಾಗುತ್ತಿದ್ದೆ. ಅದಕ್ಕಿಂತ ಹೆಚ್ಚೇನೂ ಇಲ್ಲ” ಎಂದು ಪ್ರತಿಕ್ರಿಯಿಸಿದ್ದರು.

ಇತರ ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 5:54 pm, Wed, 1 June 22

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು