ಶರ್ಟ್ ಬಿಚ್ಚಿ ಸಂಭ್ರಮಿಸಲು ಸೂಚಿಸಿದ್ದ ಗಂಗೂಲಿ, ಎಲ್ಲರನ್ನು ತಡೆದ ಸಚಿನ್ ತೆಂಡೂಲ್ಕರ್..!

England vs India, Final: 2002ರ ನ್ಯಾಟ್​ವೆಸ್ಟ್ ಸರಣಿಯ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು 325 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 49.3 ಓವರ್​ಗಳಲ್ಲಿ ಗುರಿ ಮುಟ್ಟುವ ಮೂಲಕ 2 ವಿಕೆಟ್​ಗಳ ರೋಚಕ ಜಯ ಸಾಧಿಸಿತು. ಈ ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾ ನಾಯಕ ಸೌರವ್ ಗಂಗೂಲಿ ಟಿ-ಶರ್ಟ್ ಬೆಚ್ಚಿ ಸಂಭ್ರಮಿಸಿದ್ದರು.

ಶರ್ಟ್ ಬಿಚ್ಚಿ ಸಂಭ್ರಮಿಸಲು ಸೂಚಿಸಿದ್ದ ಗಂಗೂಲಿ, ಎಲ್ಲರನ್ನು ತಡೆದ ಸಚಿನ್ ತೆಂಡೂಲ್ಕರ್..!
Sourav Ganguly - Sachin
Follow us
ಝಾಹಿರ್ ಯೂಸುಫ್
|

Updated on:Feb 04, 2025 | 11:56 AM

ಅದು 2002, ಲಾರ್ಡ್ಸ್​ ಮೈದಾನದಲ್ಲಿ ನಡೆದ ನ್ಯಾಟ್​​ವೆಸ್ಟ್ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿದ್ದವು. ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು 50 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 325 ರನ್ ಕಲೆಹಾಕಿತು. 326 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ 146 ರನ್​ಗಳಿಗೆ 6 ವಿಕೆಟ್ ಕಳೆದುಕೊಂಡು ಸೋಲಿನತ್ತ ಮುಖ ಮಾಡಿತ್ತು. ಆದರೆ ಆಗಷ್ಟೇ ಭಾರತ ತಂಡದಲ್ಲಿ ಕಾಣಿಸಿಕೊಂಡಿದ್ದ ಯುವ ತರುಣರಿಬ್ಬರು ಕೆಚ್ಚೆದೆಯ ಹೋರಾಟ ಪ್ರದರ್ಶಿಸಿದರು.

ಅನುಭವಿ ಇಂಗ್ಲೆಂಡ್ ಬೌಲರ್​ಗಳ ದಾಳಿಯ ಮುಂದೆ ಸೆಟೆದು ನಿಂತರು. ಈ ಮೂಲಕ 7ನೇ ವಿಕೆಟ್​ಗೆ ಯುವರಾಜ್ ಸಿಂಗ್ ಹಾಗೂ ಮೊಹಮ್ಮದ್ ಕೈಫ್ 121 ರನ್​ಗಳ ಜೊತೆಯಾಟವಾಡಿದರು. ಇದರ ಬೆನ್ನಲ್ಲೇ 63 ಎಸೆತಗಳಲ್ಲಿ 69 ರನ್ ಬಾರಿಸಿದ ಯುವರಾಜ್ ಸಿಂಗ್ ಔಟಾದರು.

ಇದಾಗ್ಯೂ ಏಕಾಂಗಿ ಹೋರಾಟ ಮುಂದುವರೆಸಿದ ಮೊಹಮ್ಮದ್ ಕೈಫ್ 75 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ ಅಜೇಯ 87 ರನ್ ಬಾರಿಸಿ, 49.3 ಓವರ್​ಗಳಲ್ಲಿ ಗುರಿ ಮುಟ್ಟಿಸಿದರು. ಈ ಮೂಲಕ ಭಾರತ ತಂಡವು 2 ವಿಕೆಟ್​ಗಳ ರೋಚಕ ಜಯ ಸಾಧಿಸಿತು.

ಗೆಲುವಿನ ಬೆನ್ನಲ್ಲೇ ಲಾರ್ಡ್ಸ್​ ಬಾಲ್ಕನಿಯಲ್ಲಿ ನಿಂತು ಅಂದಿನ ಟೀಮ್ ಇಂಡಿಯಾ ನಾಯಕ ಸೌರವ್ ಗಂಗೂಲಿ ಶರ್ಟ್ ಬಿಚ್ಚಿ ಸಂಭ್ರಮಿಸಿದ್ದರು. ಇದುವೇ ದಾದಾ ಸ್ಟೈಲ್ ಸೆಲೆಬ್ರೇಷನ್ ಆಗಿ ಗುರುತಿಸಿಕೊಂಡಿತು. ಇಂತಹದೊಂದು ಸಂಭ್ರಮಕ್ಕೆ ಮುಖ್ಯ ಕಾರಣ ಆಂಡ್ರ್ಯೂ ಫ್ಲಿಂಟಾಫ್.

ಇದಕ್ಕೂ ಮುನ್ನ ಭಾರತದಲ್ಲಿ ನಡೆದ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಸೋಲಿಸಿ ಆಂಡ್ರ್ಯೂ ಫ್ಲಿಂಟಾಫ್ ಶರ್ಟ್ ಬಿಚ್ಚಿ ವಾಂಖೆಡೆ ಮೈದಾನದಲ್ಲಿ ಓಡುತ್ತಾ ಸಂಭ್ರಮಿಸಿದ್ದರು. ಇದಕ್ಕೆ ಪ್ರತೀಕಾರವಾಗಿ ಸೌರವ್ ಗಂಗೂಲಿ ಕ್ರಿಕೆಟ್ ಕಾಶಿಯ ಬಾಲ್ಕನಿಯಲ್ಲಿ ನಿಂತು ತಿರುಗೇಟು ನೀಡಿದ್ದರು.

ದಾದಾ ಸಂಭ್ರಮ:

ಹೀಗೆ ತಿರುಗೇಟು ನೀಡಲು ಸೌರವ್ ಗಂಗೂಲಿ ಮೊದಲೇ ನಿರ್ಧರಿಸಿದ್ದರು ಎಂಬ ವಿಚಾರವನ್ನು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಬಹಿರಂಗಪಡಿಸಿದ್ದಾರೆ. ರಣವೀರ್ ಅಲ್ಲಾಬಾಡಿಯಾ ಅವರ ಪಾಡ್​ಕಾಸ್ಟ್​ನಲ್ಲಿ ಕಾಣಿಸಿಕೊಂಡ ರಾಜೀವ್ ಶುಕ್ಲಾ 2002ರ ನ್ಯಾಟ್​​ವೆಸ್ಟ್ ಸರಣಿ ಗೆಲುವನ್ನು ನೆನಪಿಸಿಕೊಂಡಿದ್ದಾರೆ.

ಈ ಬಗ್ಗೆ ಮಾತನಾಡಿದ ರಾಜೀವ್ ಶುಕ್ಲಾ, ಅಂದು ನಾನು ಟೀಮ್ ಇಂಡಿಯಾದ ಮ್ಯಾನೇಜರ್ ಆಗಿದ್ದೆ. ಲಾರ್ಡ್ಸ್​ನಲ್ಲಿ ನಾವು ಸೋಲುತ್ತೇವೆ ಎಂದೇ ಭಾವಿಸಿದ್ದೆ. ಏಕೆಂದರೆ ನಮ್ಮ ಮುಂದೆ 326 ರನ್​ಗಳ ಕಠಿಣ ಗುರಿ ನೀಡಲಾಗಿತ್ತು. ಹೀಗಾಗಿ ನಾನು ಒತ್ತಡಕ್ಕೊಳಗಾಗಿದ್ದೆ. ಅಲ್ಲದೆ ರಕ್ತದೊತ್ತಡವನ್ನು ನಿಯಂತ್ರಿಸಲು ಬಿಪಿ ಮಾತ್ರೆಗಳನ್ನು ಸೇವಿಸಿದ್ದೆ ಎಂದು ಶುಕ್ಲಾ ಹಳೆಯ ನೆನಪುಗಳನ್ನು ಮೆಲುಕು ಹಾಕಿದ್ದಾರೆ.

ಈ ಪಂದ್ಯದಲ್ಲಿ ಭಾರತ ತಂಡ ಗೆಲ್ಲುತ್ತೆ ಎಂಬ ಸಂಪೂರ್ಣ ವಿಶ್ವಾಸ ಸೌರವ್ ಗಂಗೂಲಿಗೆ ಇತ್ತು. ಟೀಮ್ ಇಂಡಿಯಾ ಗೆಲುವಿನತ್ತ ಸಾಗುತ್ತಿದ್ದಂತೆ ಎಲ್ಲರೂ ಶರ್ಟ್ ಬಿಚ್ಚಿ ಸಂಭ್ರಮಾಚರಣೆ ಮಾಡುವಂತೆ ದಾದಾ ಸಹ ಆಟಗಾರರಿಗೆ ತಿಳಿಸಿದ್ದರು.

ಆದರೆ ಇದಕ್ಕೆ ಸಚಿನ್ ತೆಂಡೂಲ್ಕರ್ ಒಪ್ಪಿರಲಿಲ್ಲ. ನನ್ನನ್ನು ಡ್ರೆಸ್ಸಿಂಗ್ ರೂಮ್​ನಲ್ಲಿ ಭೇಟಿಯಾದ ಸಚಿನ್, ಕ್ರಿಕೆಟ್ ಜಂಟಲ್​ಮ್ಯಾನ್ ಗೇಮ್. ಇಡೀ ತಂಡವನ್ನು ಶರ್ಟ್ ಬಿಚ್ಚಿ ಸಂಭ್ರಮಿಸಲು ಬಿಡಬೇಡಿ ಎಂದು ತಿಳಿಸಿದ್ದರು.

ಹೀಗಾಗಿ ನಾನು ಸೌರವ್ ಗಂಗೂಲಿಗೆ, ಈ ರೀತಿಯ ಸಂಭ್ರಮಾಚರಣೆ ಸರಿ ಕಾಣುವುದಿಲ್ಲ. ನೀವು ಶರ್ಟ್ ಬಿಚ್ಚಿ ಸಂಭ್ರಮಿಸುವುದಾದರೆ, ಅದನ್ನು ಮಾಡಿ ಎಂದಿದ್ದೆ. ಅದುವೇ ಸ್ಮರಣೀಯ ಸಂಭ್ರಮಾಚರಣೆಯಾಯಿತು ಎಂದು ರಾಜೀವ್ ಶುಕ್ಲಾ ತಿಳಿಸಿದ್ದಾರೆ.

ಈ ಒಂದು ಸಂಭ್ರಮಾಚರಣೆಯೊಂದಿಗೆ ಟೀಮ್ ಇಂಡಿಯಾ ಆಕ್ರಮಣಕಾರಿ ಕ್ರಿಕೆಟ್​ಗೆ ಮುನ್ನುಡಿ ಬರೆಯಿತು. ಅಲ್ಲದೆ ಭಾರತ ತಂಡದಲ್ಲಿ ಆಕ್ರಮಣಶೀಲತೆಯನ್ನು ತಂದ ಮೊದಲ ನಾಯಕ ಸೌರವ್ ಗಂಗೂಲಿ ಎಂದು ದಾದಾ ಅವರನ್ನು ರಾಜೀವ್ ಶುಕ್ಲಾ ಹಾಡಿ ಹೊಗಳಿದ್ದಾರೆ.

Published On - 11:55 am, Tue, 4 February 25

ಜಯಮಾಲಾ ಪುತ್ರಿ ಸೌಂದರ್ಯಾ ಮದುವೆಗೆ ಆಗಮಿಸಿದ ಯಶ್, ರಾಧಿಕಾ ಪಂಡಿತ್
ಜಯಮಾಲಾ ಪುತ್ರಿ ಸೌಂದರ್ಯಾ ಮದುವೆಗೆ ಆಗಮಿಸಿದ ಯಶ್, ರಾಧಿಕಾ ಪಂಡಿತ್
ಇನ್ನೆರಡು ವಾರಗಳಲ್ಲಿ ವರಿಷ್ಠರು ಎಲ್ಲವನ್ನೂ ಸರಿಮಾಡಲಿದ್ದಾರೆ: ಆರ್ ಅಶೋಕ
ಇನ್ನೆರಡು ವಾರಗಳಲ್ಲಿ ವರಿಷ್ಠರು ಎಲ್ಲವನ್ನೂ ಸರಿಮಾಡಲಿದ್ದಾರೆ: ಆರ್ ಅಶೋಕ
ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದು ಖುದ್ದು ಸ್ನೇಹಮಯಿ ಕೃಷ್ಣ: ಶಿವಣ್ಣ
ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದು ಖುದ್ದು ಸ್ನೇಹಮಯಿ ಕೃಷ್ಣ: ಶಿವಣ್ಣ
ರಾಜ್ಯದ ಮಂತ್ರಿಗಳು ಹಣಕಾಸು ಸಚಿವೆಯನ್ನು ಭೇಟಿಯಾಗಿದ್ದಾರೆ: ಶಿವಕುಮಾರ್
ರಾಜ್ಯದ ಮಂತ್ರಿಗಳು ಹಣಕಾಸು ಸಚಿವೆಯನ್ನು ಭೇಟಿಯಾಗಿದ್ದಾರೆ: ಶಿವಕುಮಾರ್
ಹಾವೇರಿ: ದೇವಸ್ಥಾನದ ಕಳಸಾರೋಹಣದ ವೇಳೆ ಮುರಿದ ಕ್ರೇನ್​ ಬಕೆಟ್​, ಓರ್ವ ಸಾವು
ಹಾವೇರಿ: ದೇವಸ್ಥಾನದ ಕಳಸಾರೋಹಣದ ವೇಳೆ ಮುರಿದ ಕ್ರೇನ್​ ಬಕೆಟ್​, ಓರ್ವ ಸಾವು
ಕಳೆದ ವರ್ಷ ಮಾರ್ಚ್​ನಲ್ಲಿ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ದೂರು
ಕಳೆದ ವರ್ಷ ಮಾರ್ಚ್​ನಲ್ಲಿ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ದೂರು
ಮದುವೆ ಮಂಟಪಕ್ಕೆ ತಮ್ಮ ರಾಣಾನ ಕರೆತಂದ ರಕ್ಷಿತಾ
ಮದುವೆ ಮಂಟಪಕ್ಕೆ ತಮ್ಮ ರಾಣಾನ ಕರೆತಂದ ರಕ್ಷಿತಾ
ಸಿಬಿಐಗೆ ರಾಜ್ಯಸರ್ಕಾರ ಅನುಮತಿಯ ಅವಶ್ಯಕತೆ ಇರುತ್ತದೆ: ಪರಮೇಶ್ವರ್
ಸಿಬಿಐಗೆ ರಾಜ್ಯಸರ್ಕಾರ ಅನುಮತಿಯ ಅವಶ್ಯಕತೆ ಇರುತ್ತದೆ: ಪರಮೇಶ್ವರ್
ಮಹಾಕುಂಭ ಮೇಳ: ಹರಿಹರಾನಂದ ಸ್ವಾಮೀಜಿ ಇದ್ದ ಟೆಂಟ್​ನಲ್ಲಿ ಅಗ್ನಿ ಅವಘಡ
ಮಹಾಕುಂಭ ಮೇಳ: ಹರಿಹರಾನಂದ ಸ್ವಾಮೀಜಿ ಇದ್ದ ಟೆಂಟ್​ನಲ್ಲಿ ಅಗ್ನಿ ಅವಘಡ
ಅರ್ಜಿ ವಜಾಗೊಂಡರೂ ಸಿದ್ದರಾಮಯ್ಯ ವಿರುದ್ಧದ ಪಟ್ಟು ಸಡಿಲಿಸದ ಸ್ನೇಹಮಯಿ ಕೃಷ್ಣ
ಅರ್ಜಿ ವಜಾಗೊಂಡರೂ ಸಿದ್ದರಾಮಯ್ಯ ವಿರುದ್ಧದ ಪಟ್ಟು ಸಡಿಲಿಸದ ಸ್ನೇಹಮಯಿ ಕೃಷ್ಣ