AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SA vs NZ: ಮಳೆಯಿಂದ ಪಂದ್ಯ ರದ್ದಾದರೆ ಯಾರು ಫೈನಲ್​ಗೆ?

South Africa and New zealand: ಚಾಂಪಿಯನ್ಸ್ ಟ್ರೋಫಿಯ ಮೊದಲ ಸೆಮಿಫೈನಲ್​ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಸೋಲಿಸಿ ಟೀಮ್ ಇಂಡಿಯಾ ಫೈನಲ್​ಗೇರಿದೆ. ಇದೀಗ ದ್ಚಿತೀಯ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗುತ್ತಿದೆ. ಈ ಪಂದ್ಯದಲ್ಲಿ ಗೆದ್ದ ತಂಡ ಮಾರ್ಚ್ 9 ರಂದು ಭಾರತ ತಂಡವನ್ನು ಎದುರಿಸಲಿದೆ.

SA vs NZ: ಮಳೆಯಿಂದ ಪಂದ್ಯ ರದ್ದಾದರೆ ಯಾರು ಫೈನಲ್​ಗೆ?
Sa Vs Nz
ಝಾಹಿರ್ ಯೂಸುಫ್
|

Updated on:Mar 06, 2025 | 6:26 AM

Share

ಚಾಂಪಿಯನ್ಸ್ ಟ್ರೋಫಿಯ ಎರಡನೇ ಸೆಮಿಫೈನಲ್​ಗೆ ವೇದಿಕೆ ಸಿದ್ಧವಾಗಿದೆ. ಇಂದು (ಮಾ.5) ಲಾಹೋರ್​ನ ಗದ್ದಾಫಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​ಗೇರಲಿದೆ. ಆದರೆ ಈ ಪಂದ್ಯಕ್ಕೆ ಮಳೆಯ ಭೀತಿ ಇಲ್ಲದಿಲ್ಲ. ಏಕೆಂದರೆ ಲಾಹೋರ್​ನನಲ್ಲಿ ನಡೆದ ಅಫ್ಘಾನಿಸ್ತಾನ್ ಹಾಗೂ ಆಸ್ಟ್ರೇಲಿಯಾ ನಡುವಣ ಪಂದ್ಯವು ಮಳೆಯ ಕಾರಣ ರದ್ದಾಗಿತ್ತು.

ಒಂದು ವೇಳೆ ಸೆಮಿಫೈನಲ್​ ಪಂದ್ಯಕ್ಕೆ ಮಳೆ ಅಡಚಣೆಯನ್ನು ಉಂಟು ಮಾಡಿದರೆ, ಅಥವಾ ಮಳೆಯ ಕಾರಣ ಪಂದ್ಯ ರದ್ದಾದರೆ ಫಲಿತಾಂಶ ನಿರ್ಣಯಿಸುವುದು ಹೇಗೆ ಎಂಬ ಪ್ರಶ್ನೆ ಮೂಡುವುದು ಸಹಜ. ನಿಮ್ಮೆಲ್ಲಾ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ…

  • ಸೆಮಿಫೈನಲ್ ಪಂದ್ಯಗಳ ವೇಳೆ ಮಳೆ ಬಂದು ಮ್ಯಾಚ್ ರದ್ದಾದರೆ, ಮೀಸಲು ದಿನದಾಟದಲ್ಲಿ ಪಂದ್ಯ ಮುಂದುವರೆಯಲಿದೆ. ಉದಾಹರಣೆಗೆ, ಮಾರ್ಚ್ 4 ರಂದು ನಿಗದಿಯಾಗಿರುವ ಸೌತ್ ಆಫ್ರಿಕಾ ಮತ್ತು ನ್ಯೂಝಿಲೆಂಡ್ ನಡುವಣ ಸೆಮಿಫೈನಲ್ ಪಂದ್ಯಕ್ಕೆ ಮಳೆ ಅಡಚಣೆಯನ್ನು ಉಂಟು ಮಾಡಿದರೆ, ಮಾರ್ಚ್ 6 ರಂದು ಪಂದ್ಯವನ್ನು ಮುಂದುವರೆಸಲಾಗುತ್ತದೆ.
  • ಮೀಸಲು ದಿನದಾಟದಲ್ಲೂ ಸೆಮಿಫೈನಲ್​ ಪಂದ್ಯವನ್ನು ಆಯೋಜಿಸಲು ಸಾಧ್ಯವಾಗದೇ ಇದ್ದರೆ, ಲೀಗ್ ಹಂತದ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿರುವ ತಂಡ ಫೈನಲ್​ಗೆ ಅರ್ಹತೆ ಪಡೆಯಲಿದೆ.
  • ಅಂದರೆ ಸೌತ್ ಆಫ್ರಿಕಾ ಮತ್ತು ನ್ಯೂಝಿಲೆಂಡ್ ನಡುವಣ ಪಂದ್ಯವು ಮಳೆಯ ಕಾರಣ ಅಥವಾ ಇನ್ನಿತರೆ ಕಾರಣಗಳಿಂದ ರದ್ದಾದರೆ, ಗ್ರೂಪ್-ಬಿ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿರುವ ಸೌತ್ ಆಫ್ರಿಕಾ ತಂಡದ ಫೈನಲ್​ಗೆ ಅರ್ಹತೆ ಪಡೆಯಲಿದೆ.
  • ಇನ್ನು ಫೈನಲ್ ಪಂದ್ಯಕ್ಕೆ ಮಳೆ ಅಡಚಣೆ ಉಂಟು ಮಾಡಿದರೆ, ಅಥವಾ ಹವಾಮಾನ ವೈಪರೀತ್ಯದಿಂದಾಗಿ ಪಂದ್ಯವನ್ನು ಆಯೋಜಿಸಲು ಸಾಧ್ಯವಾಗದೇ ಇದ್ದರೆ, ಪಂದ್ಯವನ್ನು ಮಾರ್ಚ್ 10 ಕ್ಕೆ ಮುಂದೂಡಲಾಗುತ್ತದೆ.
  • ಮಾರ್ಚ್ 10 ರಂದು ಸಹ ಫೈನಲ್ ಪಂದ್ಯ ಆಯೋಜಿಸಲು ಸಾಧ್ಯವಾಗದಿದ್ದರೆ, ಉಭಯ ತಂಡಗಳನ್ನು ಜಂಟಿ ವಿಜೇತರೆಂದು ಘೋಷಿಸಲಾಗುತ್ತದೆ.

ಉಭಯ ತಂಡಗಳು:

ನ್ಯೂಝಿಲೆಂಡ್: ಮಿಚೆಲ್ ಸ್ಯಾಂಟ್ನರ್ (ನಾಯಕ), ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಡೆವೊನ್ ಕಾನ್ವೇ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್, ಡೇರಿಲ್ ಮಿಚೆಲ್, ವಿಲ್ ಒರೂಕ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ನಾಥನ್ ಸ್ಮಿತ್, ಕೇನ್ ವಿಲಿಯಮ್ಸನ್, ವಿಲ್ ಯಂಗ್, ಜಾಕೋಬ್ ಡಫಿ.

ಇದನ್ನೂ ಓದಿ: Virat Kohli: ಮಾಸ್ಟರ್ ಚೇಸ್ ಮಾಸ್ಟರ್​ನ ವಿಶ್ವ ದಾಖಲೆ

ಸೌತ್ ಆಫ್ರಿಕಾ: ಟೆಂಬಾ ಬವುಮಾ (ನಾಯಕ), ಟೋನಿ ಡಿ ಝೋರ್ಝಿ, ಮಾರ್ಕೊ ಯಾನ್ಸೆನ್, ಹೆನ್ರಿಕ್ ಕ್ಲಾಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಲುಂಗಿ ಎನ್‌ಗಿಡಿ, ಕಗಿಸೊ ರಬಾಡಾ, ರಿಯಾನ್ ರಿಕೆಲ್ಟನ್, ತಬ್ರೇಝ್ ಶಮ್ಸಿ, ಟ್ರಿಸ್ಟಾನ್ ಸ್ಟಬ್ಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್​, ಕಾರ್ಬಿನ್ ಬಾಷ್.

Published On - 1:04 pm, Wed, 5 March 25

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು