AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೀಗಾದ್ರೆ ಸೌತ್ ಆಫ್ರಿಕಾ ಕೂಡ ವಿಶ್ವಕಪ್‌ನಿಂದ ಹೊರ ಬೀಳಬಹುದು!

T20 World Cup 2026: ಟಿ20 ವಿಶ್ವಕಪ್​ ಸೂಪರ್-8 ಸುತ್ತಿನ ಗ್ರೂಪ್-1 ಅಂಕ ಪಟ್ಟಿಯಲ್ಲಿ ವೆಸ್ಟ್ ಇಂಡೀಸ್ ತಂಡವು ಅಗ್ರಸ್ಥಾನದಲ್ಲಿದ್ದರೆ, ಸೌತ್ ಆಫ್ರಿಕಾ ತಂಡ ದ್ವಿತೀಯ ಸ್ಥಾನದಲ್ಲಿದೆ. ಇನ್ನು ಭಾರತ ಮೂರನೇ ಸ್ಥಾನದಲ್ಲಿದ್ದರೆ, ಝಿಂಬಾಬ್ವೆ ನಾಲ್ಕನೇ ಸ್ಥಾನ ಅಲಂಕರಿಸಿದೆ. ಇದಾಗ್ಯೂ ಗ್ರೂಪ್-1 ರಿಂದ ಯಾವುದೇ ತಂಡ ಸೆಮಿಫೈನಲ್​ಗೆ ಪ್ರವೇಶಿಸಿಲ್ಲ.

ಹೀಗಾದ್ರೆ ಸೌತ್ ಆಫ್ರಿಕಾ ಕೂಡ ವಿಶ್ವಕಪ್‌ನಿಂದ ಹೊರ ಬೀಳಬಹುದು!
South Africa
ಝಾಹಿರ್ ಯೂಸುಫ್
|

Updated on: Feb 25, 2026 | 9:09 AM

Share

T20 World Cup 2026: ಸೂಪರ್-8 ಸುತ್ತಿನ ಮೊದಲ ಪಂದ್ಯಗಳ ಮುಕ್ತಾಯದ ಬೆನ್ನಲ್ಲೇ ಸೆಮಿಫೈನಲ್ ಲೆಕ್ಕಾಚಾರಗಳು ಶುರುವಾಗಿದೆ. ಈಗಾಗಲೇ ಗ್ರೂಪ್-2 ರಿಂದ ಇಂಗ್ಲೆಂಡ್ ತಂಡ ಸೆಮಿಫೈನಲ್​ಗೆ ಪ್ರವೇಶಿಸಿದರೆ, ಗ್ರೂಪ್-1 ರಲ್ಲಿ ಪೈಪೋಟಿ ಮುಂದುವರೆದಿದೆ. ಅದರಲ್ಲೂ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಜಯ ಸಾಧಿಸಿರುವ ಸೌತ್ ಆಫ್ರಿಕಾ ತಂಡವು ಸೆಮಿಫೈನಲ್​ಗೇರುವ ವಿಶ್ವಾಸದಲ್ಲಿದೆ. ಆದರೆ ಚೋಕರ್ಸ್ ಹಣೆಪಟ್ಟಿ ಹೊಂದಿರುವ ಆಫ್ರಿಕಾ ಪಡೆ ಮುಂದಿನ ಪಂದ್ಯಗಳಲ್ಲಿ ಗೆಲ್ಲಲಿದೆಯಾ ಎಂಬುದೇ ಪ್ರಶ್ನೆ.

ಏಕೆಂದರೆ ಒಂದೆಡೆ ವೆಸ್ಟ್ ಇಂಡೀಸ್ ತಂಡವು ಪ್ರಚಂಡ ಪ್ರದರ್ಶನ ನೀಡುತ್ತಿದೆ. ಮತ್ತೊಂದೆಡೆ ಝಿಂಬಾಬ್ವೆ ತಂಡವನ್ನು ಯಾವುದೇ ಕಾರಣಕ್ಕೂ ಕಡೆಗಣಿಸುವಂತಿಲ್ಲ. ಏಕೆಂದರೆ ಬಲಿಷ್ಠ ಆಸ್ಟ್ರೇಲಿಯಾ ತಂಡಕ್ಕೇ ಸೋಲುಣಿಸಿ ಈ ಬಾರಿ ಝಿಂಬಾಬ್ವೆ ಪಡೆ ದ್ವಿತೀಯ ಸುತ್ತಿಗೆ ಪ್ರವೇಶಿಸಿದೆ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ಗೆಲ್ಲುವುದಿಲ್ಲ ಎಂದು ಷರಾ ಬರೆಯುವಂತಿಲ್ಲ.

ಹೀಗಾಗಿಯೇ ಚೋಕರ್ಸ್ ಹಣೆಪಟ್ಟಿ ಹೊಂದಿರುವ ಸೌತ್ ಆಫ್ರಿಕಾ ಸೆಮಿಫೈನಲ್​ಗೆ ಪ್ರವೇಶಿಸುತ್ತಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಮುಂದಿನ ಪಂದ್ಯಗಳಲ್ಲಿ ಲೆಕ್ಕಾಚಾರಗಳು ಬುಡಮೇಲಾದರೆ ಸೌತ್ ಆಫ್ರಿಕಾ ತಂಡ ವಿಶ್ವಕಪ್​ನಿಂದ ಹೊರಬೀಳಲಿದೆ. ಅಂದರೆ ಈ ಕೆಳಗಿನ ಸಂದರ್ಭಗಳು ಸಂಭವಿಸಿದಲ್ಲಿ ಆಫ್ರಿಕಾ ಪಡೆ ಟೂರ್ನಿಯಿಂದ ಹೊರಬೀಳಬಹುದು…

  •  2  ಸೋಲು: ಸೌತ್ ಆಫ್ರಿಕಾ ತಂಡವು ತನ್ನ ಮುಂದಿನ ಪಂದ್ಯಗಳಲ್ಲಿ ಝಿಂಬಾಬ್ವೆ ಮತ್ತು ವೆಸ್ಟ್ ಇಂಡೀಸ್ ವಿರುದ್ಧ ಸೋತರೆ, ಅವರು ಕೇವಲ 2 ಅಂಕಗಳೊಂದಿಗೆ ಟೂರ್ನಿಯಿಂದ ಹೊರಬೀಳಲಿದ್ದಾರೆ.
  • 4 ಅಂಕಗಳು: ಸೌತ್ ಆಫ್ರಿಕಾ ತಂಡ ಮುಂದಿನ ಪಂದ್ಯಗಳಲ್ಲಿ ಸೋತು, ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳು 4 ಅಂಕಗಳನ್ನು ಪಡೆದುಕೊಂಡರೆ ಆಫ್ರಿಕಾ ಪಡೆ ಹೊರಬೀಳುವುದು ಖಚಿತವಾಗಲಿದೆ.
  •  1 ಗೆಲುವು: ಒಂದು ವೇಳೆ ಸೌತ್ ಆಫ್ರಿಕಾ ಮುಂದಿನ ಎರಡು ಪಂದ್ಯಗಳಲ್ಲಿ ಒಂದನ್ನು ಮಾತ್ರ ಗೆದ್ದರೆ, ಅವರು 4 ಅಂಕಗಳನ್ನು ಪಡೆಯುತ್ತಾರೆ. ಆಗ ಭಾರತ ಅಥವಾ ವೆಸ್ಟ್ ಇಂಡೀಸ್ ಕೂಡ 4 ಅಂಕಗಳನ್ನು ಹೊಂದಿದ್ದರೆ, ನೆಟ್ ರನ್ ರೇಟ್ ಆಧಾರದ ಮೇಲೆ ಫಲಿತಾಂಶ ನಿರ್ಧಾರವಾಗುತ್ತದೆ. ಸದ್ಯ ಸೌತ್ ಆಫ್ರಿಕಾ ತಂಡವು +3.800 ನೆಟ್ ರನ್ ಹೊಂದಿದ್ದರೂ ಮುಂದಿನ ಪಂದ್ಯಗಳಲ್ಲಿ ಹೀನಾಯವಾಗಿ ಸೋತರೆ ಸಂಕಷ್ಟಕ್ಕೆ ಸಿಲುಕಲಿದೆ.
  • ಪಂದ್ಯ ರದ್ದು: ಸೌತ್ ಆಫ್ರಿಕಾ ತಂಡದ ಪಂದ್ಯಗಳು ಮಳೆಯಿಂದಾಗಿ ರದ್ದಾದರೆ ತಲಾ 1 ಅಂಕ ಹಂಚಿಕೆಯಾಗುತ್ತದೆ. ಇದು ರನ್ ರೇಟ್ ಹೆಚ್ಚಿಸಿಕೊಳ್ಳಲು ಅಡ್ಡಿಯಾಗಬಹುದು. ಇತರ ತಂಡಗಳು ಪಂದ್ಯಗಳನ್ನು ಗೆದ್ದು ಹೆಚ್ಚಿನ ಅಂಕ ಪಡೆದರೆ ಸೌತ್ಆ ಫ್ರಿಕಾ ತಂಡಕ್ಕೆ ಹಿನ್ನಡೆಯಾಗಬಹುದು.

ಇದನ್ನೂ ಓದಿ: ಅಳಿಯಲಿದೆಯಾ, ಉಳಿಯಲಿದೆಯಾ ವಿರಾಟ್ ಕೊಹ್ಲಿಯ ವಿಶ್ವ ದಾಖಲೆ

ಅಂದರೆ ಇಲ್ಲಿ ಮೊದಲ ಪಂದ್ಯದಲ್ಲಿ 76 ರನ್​ಗಳ ಭರ್ಜರಿ ಜಯ ಸಾಧಿಸಿದರೂ ಸೌತ್ ಆಫ್ರಿಕಾ ತಂಡ ಸೆಮಿಫೈನಲ್ ಆಡುವುದು ಇನ್ನೂ ಸಹ ಖಚಿತವಾಗಿಲ್ಲ. ಈ ಮೇಲಿನ ಸಂದರ್ಭಗಳು ಎದುರಾದರೆ ಆಫ್ರಿಕಾ ಪಡೆ ಟಿ20 ವಿಶ್ವಕಪ್​ನಿಂದಲೇ ಹೊರಬೀಳಬಹುದು. ಒಂದೊಮ್ಮೆ ಸೌತ್ ಆಫ್ರಿಕಾ ಹೀಗೆ ಅನಿರೀಕ್ಷಿತವಾಗಿ ಹೊರಬಿದ್ದರೆ ಚೋಕರ್ಸ್ ಹಣೆಪಟ್ಟಿ ಮುಂದುವರೆಯಲಿದೆ.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ