Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲ್ ಸೈನಿಕರಿಗೆ ಬೆಂಬಲ: ಸೌತ್ ಆಫ್ರಿಕಾ U19 ತಂಡದ ನಾಯಕ ವಜಾ..!

U19 World Cup 2024: ಈ ಬಾರಿಯ ಅಂಡರ್-19 ವಿಶ್ವಕಪ್ ಜನವರಿ 19 ರಿಂದ ಫ್ರೆಬ್ರವರಿ 11 ರವರೆಗೆ ಸೌತ್ ಆಫ್ರಿಕಾದಲ್ಲಿ ನಡೆಯಲಿದೆ. ಈ ಹಿಂದೆ ಶ್ರೀಲಂಕಾ ಅಂಡರ್-19 ವಿಶ್ವಕಪ್​ ಆಯೋಜನೆಯ ಹಕ್ಕನ್ನು ಹೊಂದಿತ್ತು. ಆದರೆ ನವೆಂಬರ್​ನಲ್ಲಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯನ್ನು ಐಸಿಸಿ ಅಮಾನತುಗೊಳಿಸಿದೆ. ಹೀಗಾಗಿ 15ನೇ ಆವೃತ್ತಿಯ ಕಿರಿಯರ ವಿಶ್ವಕಪ್​ನ್ನು ಸೌತ್ ಆಫ್ರಿಕಾಗೆ ಸ್ಥಳಾಂತರಿಸಲಾಗಿದೆ.

ಇಸ್ರೇಲ್ ಸೈನಿಕರಿಗೆ ಬೆಂಬಲ: ಸೌತ್ ಆಫ್ರಿಕಾ U19 ತಂಡದ ನಾಯಕ ವಜಾ..!
David Teeger
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jan 13, 2024 | 1:55 PM

ಸೌತ್ ಆಫ್ರಿಕಾ ಅಂಡರ್-19 ತಂಡದ ಕ್ಯಾಪ್ಟನ್ ಡೇವಿಡ್ ಟೀಗರ್ (David Teeger) ಅವರನ್ನು ನಾಯಕತ್ವದಿಂದ ವಜಾಗೊಳಿಸಲಾಗಿದೆ. ಇತ್ತೀಚೆಗೆ ಇಸ್ರೇಲ್ ಸೈನಿಕರನ್ನು ಹಾಡಿ ಹೊಗಳಿದ್ದ ಪರಿಣಾಮ ಇದೀಗ ತಂಡದ ನಾಯಕನ ಸ್ಥಾನದಿಂದ ಟೀಗರ್ ಅವರನ್ನು ಕೆಳಗಿಳಿಸಲಾಗಿದೆ. ಅಲ್ಲದೆ ಶೀಘ್ರದಲ್ಲೇ ತಂಡದ ನೂತನ ನಾಯಕನನ್ನು ಘೋಷಿಸುವುದಾಗಿ ಎಂದು ಕ್ರಿಕೆಟ್ ಸೌತ್ ಆಫ್ರಿಕಾ ತಿಳಿಸಿದೆ.

ಯಹೂದಿ ಅಚೀವರ್ ಅವಾರ್ಡ್ಸ್​ನಲ್ಲಿ ಭಾಗವಹಿಸಿದ್ದ ಡೇವಿಡ್ ಟೀಗರ್ ಪ್ರಶಸ್ತಿ ಪಡೆದು ಇಸ್ರೇಲ್ ಸೈನಿಕರನ್ನು ಹೊಗಳಿದ್ದರು. “ನಾನು ಈಗ ಉದಯೋನ್ಮುಖ ತಾರೆ. ಆದರೆ ನಿಜವಾದ ಉದಯೋನ್ಮುಖ ತಾರೆಗಳೆಂದರೆ ಇಸ್ರೇಲ್​ನ ಯುವ ಸೈನಿಕರು. ಈ ಪ್ರಶಸ್ತಿಯನ್ನು ನಾನು ಇಸ್ರೇಲ್​ಗಾಗಿ ಹೋರಾಡುತ್ತಿರುವ ಪ್ರತಿಯೊಬ್ಬ ಸೈನಿಕನಿಗೆ ಅರ್ಪಿಸಲು ಬಯಸುತ್ತೇನೆ ಎಂದು ತಿಳಿಸಿದ್ದರು.

ಡೇವಿಡ್ ಟೀಗರ್ ಅವರ ಈ ಹೇಳಿಕೆಗಳ ವಿರುದ್ಧ ವ್ಯಾಪಕ ಆಕ್ರೋಶಗಳು ವ್ಯಕ್ತವಾಗಿದ್ದವು. ಇದಕ್ಕೆ ಮುಖ್ಯ ಕಾರಣ ಗಾಝಾ ಪೆಟ್ಟಿಯಲ್ಲಿ ಇಸ್ರೇಲ್ ಸೈನಿಕರು ನಡೆಸುತ್ತಿರುವ ಮಾರಣಹೋಮ. ಅಲ್ಲದೆ ಆಟಗಾರನೊಬ್ಬ ಯುದ್ಧವನ್ನು ಬೆಂಬಲಿಸಿ ಮಾಡಿದ ಕಾಮೆಂಟ್​ಗಳ ಬಗ್ಗೆ ಸೌತ್ ಆಫ್ರಿಕಾದಲ್ಲಿ ಭಾರೀ ಟೀಕೆಗಳು ವ್ಯಕ್ತವಾಗಿತ್ತು.

ಈ ಬಗ್ಗೆ ಪ್ಯಾಲೆಸ್ತೀನ್ ಸಾಲಿಡಾರಿಟಿ ಅಲೈಯನ್ಸ್ (PSA) ಸಂಘಟನೆಯು, ಸೌತ್ ಆಫ್ರಿಕಾದ ಕ್ರೀಡಾ ಒಕ್ಕೂಟ ಮತ್ತು ಒಲಿಂಪಿಕ್ ಸಮಿತಿಗೆ (SASCOC) ದೂರು ಸಲ್ಲಿಸಿತ್ತು. ಇದೀಗ ಅಂಡರ್ 19 ವಿಶ್ವಕಪ್​ನಲ್ಲಿ ಸೌತ್ ಆಫ್ರಿಕಾ ತಂಡವನ್ನು ಮುನ್ನಡೆಸಲು ಸಜ್ಜಾಗಿರುವ ಯುವ ಆಟಗಾರನ ವಿರುದ್ಧ ಪ್ರತಿಭಟನೆಗಳು ನಡೆಯುವ ಸಾಧ್ಯತೆಗಳಿವೆ.

ಹೀಗಾಗಿ ತಂಡದ ನಾಯಕತ್ವದಿಂದ ಡೇವಿಡ್ ಟೀಗರ್ ಅವರನ್ನು ಕೆಳಗಿಳಿಸಲು ಸೌತ್ ಆಫ್ರಿಕಾ ಕ್ರಿಕೆಟ್ ಮಂಡಳಿ​ ನಿರ್ಧರಿಸಿದೆ. ಸದ್ಯ ಡೇವಿಡ್ ಟೀಗರ್ ಸೌತ್ ಆಫ್ರಿಕಾ ತಂಡದ ನಾಯಕತ್ವದಿಂದ ವಜಾಗೊಂಡಿದ್ದು, ಇದಾಗ್ಯೂ ಆಟಗಾರನಾಗಿ ಅಂಡರ್-19 ವಿಶ್ವಕಪ್​ನಲ್ಲಿ ಕಣಕ್ಕಿಳಿಯಲಿದ್ದಾರೆ ಎಂದು ಸೌತ್ ಆಫ್ರಿಕಾ ಕ್ರಿಕೆಟ್ ಮಂಡಳಿ ತಿಳಿಸಿದೆ.

ಅಂಡರ್-19 ವಿಶ್ವಕಪ್​:

ಈ ಬಾರಿಯ ಅಂಡರ್-19 ವಿಶ್ವಕಪ್ ಜನವರಿ 19 ರಿಂದ ಫ್ರೆಬ್ರವರಿ 11 ರವರೆಗೆ ಸೌತ್ ಆಫ್ರಿಕಾದಲ್ಲಿ ನಡೆಯಲಿದೆ. ಈ ಹಿಂದೆ ಶ್ರೀಲಂಕಾ ಅಂಡರ್-19 ವಿಶ್ವಕಪ್​ ಆಯೋಜನೆಯ ಹಕ್ಕನ್ನು ಹೊಂದಿತ್ತು. ಆದರೆ ನವೆಂಬರ್​ನಲ್ಲಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯನ್ನು ಐಸಿಸಿ ಅಮಾನತುಗೊಳಿಸಿದೆ. ಹೀಗಾಗಿ 15ನೇ ಆವೃತ್ತಿಯ ಕಿರಿಯರ ವಿಶ್ವಕಪ್​ನ್ನು ಸೌತ್ ಆಫ್ರಿಕಾಗೆ ಸ್ಥಳಾಂತರಿಸಲಾಗಿದೆ.

ಇದನ್ನೂ ಓದಿ: IPL 2024: RCB ಆಟಗಾರನಿಗೆ ಗಂಭೀರ ಗಾಯ: ಐಪಿಎಲ್​ಗೆ ಡೌಟ್..!

ಅದರಂತೆ ಇದೀಗ ಸೌತ್ ಆಫ್ರಿಕಾದ ಐದು ಸ್ಟೇಡಿಯಂಗಳಲ್ಲಿ ಟೂರ್ನಿಯನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಬ್ಲೋಮ್‌ಫಾಂಟೈನ್‌ನ ಮಂಗಾಂಗ್ ಓವಲ್ ಮೈದಾನ, ಪೂರ್ವ ಲಂಡನ್‌ನ ಬಫಲೋ ಪಾರ್ಕ್ ಸ್ಟೇಡಿಯಂ, ಕಿಂಬರ್ಲಿಯಲ್ಲಿ ಕಿಂಬರ್ಲಿ ಓವಲ್ ಮೈದಾನ, ಪಾಚೆಫ್‌ಸ್ಟ್ರೂಮ್‌ನ ಜೆಬಿ ಮಾರ್ಕ್ಸ್ ಓವಲ್ ಮತ್ತು ಬೆನೋನಿಯ ವಿಲೋಮೂರ್ ಪಾರ್ಕ್ ಸ್ಟೇಡಿಯಂಗಳಲ್ಲಿ ಒಟ್ಟು 41 ಪಂದ್ಯಗಳು ನಡೆಯಲಿದೆ.

ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ