AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಭಾರತ-ಸೌತ್ ಆಫ್ರಿಕಾ ಮೊದಲ ಟಿ20 ಪಂದ್ಯ ರದ್ದು

South Africa vs India: ಟಿ20 ಕ್ರಿಕೆಟ್​ನಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಇದುವರೆಗೆ 24 ಬಾರಿ ಮುಖಾಮುಖಿಯಾಗಿವೆ. ಈ ವೇಳೆ 13 ಪಂದ್ಯಗಳಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದರೆ, 10 ಮ್ಯಾಚ್​ಗಳಲ್ಲಿ ಸೌತ್ ಆಫ್ರಿಕಾ ಗೆಲುವು ಕಂಡಿದೆ. ಇನ್ನು 1 ಪಂದ್ಯವು ಕಾರಣಾಂತರಗಳಿಂದ ರದ್ದಾಗಿತ್ತು.

IND vs SA: ಭಾರತ-ಸೌತ್ ಆಫ್ರಿಕಾ ಮೊದಲ ಟಿ20 ಪಂದ್ಯ ರದ್ದು
South Africa vs India
TV9 Web
| Edited By: |

Updated on:Dec 10, 2023 | 9:34 PM

Share

ಸೌತ್ ಆಫ್ರಿಕಾ – ಭಾರತ (India vs South Africa) ನಡುವಣ ಮೊದಲ ಟಿ20 ಪಂದ್ಯವು ಮಳೆಯ ಕಾರಣ ರದ್ದಾಗಿದೆ. ಡರ್ಬನ್​ನಲ್ಲಿ ನಡೆಯಬೇಕಿದ್ದ ಈ ಪಂದ್ಯಕ್ಕೆ ಆರಂಭದಲ್ಲೇ ವರುಣ ಅಡ್ಡಿಪಡಿಸಿತ್ತು. ಇದರಿಂದ ಟಾಸ್ ಪ್ರಕ್ರಿಯೆ ಕೂಡ ನಡೆದಿರಲಿಲ್ಲ. ಇದಾಗ್ಯೂ ಓವರ್​ಗಳ ಕಡಿತದೊಂದಿಗೆ ಪಂದ್ಯ ಆರಂಭವಾಗುವ ನಿರೀಕ್ಷೆಯಿತ್ತು. ಆದರೆ ಬಿಡದೇ ಸುರಿದ ಮಳೆಯಿಂದಾಗಿ ಮೈದಾನವು ಸಂಪೂರ್ಣ ಒದ್ದೆಯಾಗಿದ್ದು, ಹೀಗಾಗಿ ಪಂದ್ಯವನ್ನು ರದ್ದುಪಡಿಸಲು ನಿರ್ಧರಿಸಲಾಗಿದೆ.

ಮೂರು ಪಂದ್ಯಗಳ ಈ ಸರಣಿಯ ಎರಡನೇ ಪಂದ್ಯವು ಡಿಸೆಂಬರ್ 12 ರಂದು ನಡೆಯಲಿದೆ. ಹಾಗೆಯೇ ಮೂರನೇ ಪಂದ್ಯವು ಡಿಸೆಂಬರ್ 14 ರಂದು ಜೋಹಾನ್ಸ್​ಬರ್ಗ್​ನಲ್ಲಿ ನಡೆಯಲಿದೆ. ಇದಾದ ಬಳಿಕ ಮೂರು ಪಂದ್ಯಗಳ ಏಕದಿನ ಸರಣಿ ಶುರುವಾಗಲಿದೆ.

ಟಿ20 ಕ್ರಿಕೆಟ್​ನಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಇದುವರೆಗೆ 24 ಬಾರಿ ಮುಖಾಮುಖಿಯಾಗಿವೆ. ಈ ವೇಳೆ 13 ಪಂದ್ಯಗಳಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದರೆ, 10 ಮ್ಯಾಚ್​ಗಳಲ್ಲಿ ಸೌತ್ ಆಫ್ರಿಕಾ ಗೆಲುವು ಕಂಡಿದೆ. ಇನ್ನು 1 ಪಂದ್ಯವು ಕಾರಣಾಂತರಗಳಿಂದ ರದ್ದಾಗಿತ್ತು.

ಭಾರತ-ಸೌತ್ ಆಫ್ರಿಕಾ ಟಿ20 ಸರಣಿ ವೇಳಾಪಟ್ಟಿ:

  1. ಡಿಸೆಂಬರ್ 12- ಎರಡನೇ ಟಿ20 ಪಂದ್ಯ (ಗೆಬರ್ಹ)
  2. ಡಿಸೆಂಬರ್ 14- ಮೂರನೇ ಟಿ20 ಪಂದ್ಯ (ಜೋಹಾನ್ಸ್​ಬರ್ಗ್​)

ಏಕದಿನ ಸರಣಿ ವೇಳಾಪಟ್ಟಿ:

  1. ಡಿಸೆಂಬರ್ 17- ಮೊದಲ ಏಕದಿನ ಪಂದ್ಯ (ಜೋಹಾನ್ಸ್​ಬರ್ಗ್​)
  2. ಡಿಸೆಂಬರ್ 19- ಎರಡನೇ ಏಕದಿನ ಪಂದ್ಯ (ಗೆಬರ್ಹ)
  3. ಡಿಸೆಂಬರ್ 21- ಮೂರನೇ ಏಕದಿನ ಪಂದ್ಯ (ಪಾರ್ಲ್​)

ಸೌತ್ ಆಫ್ರಿಕಾ ಟಿ20 ತಂಡ: ರೀಜಾ ಹೆಂಡ್ರಿಕ್ಸ್, ಮ್ಯಾಥ್ಯೂ ಬ್ರೀಟ್ಝ್​ಕ್, ಟ್ರಿಸ್ಟಾನ್ ಸ್ಟಬ್ಸ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಕ್ ಕ್ಲಾಸೆನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ಆಂಡಿಲ್ ಫೆಹ್ಲುಕ್ವಾಯೊ, ಕೇಶವ್ ಮಹಾರಾಜ್, ಜೆರಾಲ್ಡ್ ಕೊಯೆಟ್ಝಿ, ನಾಂಡ್ರೆ ಬರ್ಗರ್, ತಬ್ರೈಝ್ ಶಮ್ಸಿ, ಡೊನ್ಕೊ ಜಾರ್ಟನ್ಸ್, ಡೊನ್ಕೊ ಜಾರ್ಟನ್ಸ್ ಫೆರೇರಾ, ಲಿಜಾಡ್ ವಿಲಿಯಮ್ಸ್.

ಇದನ್ನೂ ಓದಿ: ಕ್ಲೀನ್ ಬೌಲ್ಡ್​…ಆದರೆ ನಾಟೌಟ್..!

ಭಾರತ ಟಿ20 ತಂಡ: ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ದೀಪಕ್ ಚಹರ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಇಶಾನ್ ಕಿಶನ್, ಮುಕೇಶ್ ಕುಮಾರ್, ವಾಷಿಂಗ್ಟನ್ ಸುಂದರ್ , ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಕುಲ್ದೀಪ್ ಯಾದವ್.

Published On - 9:28 pm, Sun, 10 December 23

Follow Us
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!