AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಟೀಮ್ ಇಂಡಿಯಾ ವಿರುದ್ಧ ಸೌತ್ ಆಫ್ರಿಕಾಗೆ ಭರ್ಜರಿ ಜಯ

South Africa vs India: ಆ ಬಳಿಕ ಬಂದ ಎಡಗೈ ದಾಂಡಿಗ ತಿಲಕ್ ವರ್ಮಾ 20 ಎಸೆತಗಳಲ್ಲಿ 29 ರನ್ ಬಾರಿಸಿದರೂ ಹೆಚ್ಚು ಹೊತ್ತು ಕ್ರೀಸ್​ನಲ್ಲಿರಲಿಲ್ಲ. ಈ ಹಂತದಲ್ಲಿ ಜೊತೆಗೂಡಿದ ಸೂರ್ಯಕುಮಾರ್ ಯಾದವ್ ಹಾಗೂ ರಿಂಕು ಸಿಂಗ್ ಟೀಮ್ ಇಂಡಿಯಾಗೆ ಆಸರೆಯಾಗಿ ನಿಂತರು.

IND vs SA: ಟೀಮ್ ಇಂಡಿಯಾ ವಿರುದ್ಧ ಸೌತ್ ಆಫ್ರಿಕಾಗೆ ಭರ್ಜರಿ ಜಯ
South Africa Batters
TV9 Web
| Edited By: |

Updated on: Dec 13, 2023 | 12:26 AM

Share

ಗೆಬ್ಬೆಗಾದ ಸೇಂಟ್ ಜಾರ್ಜ್​ ಪಾರ್ಕ್​ ಸ್ಟೇಡಿಯಂನಲ್ಲಿ ನಡೆದ ಟೀಮ್ ಇಂಡಿಯಾ (Team India) ವಿರುದ್ಧದ  2ನೇ ಟಿ20 ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡದ ನಾಯಕ ಐಡೆನ್ ಮಾರ್ಕ್ರಾಮ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ.

ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (0) ಮಾರ್ಕೊ ಯಾನ್ಸೆನ್ ಎಸೆದ ಮೊದಲ ಓವರ್​ನ 3ನೇ ಎಸೆತದಲ್ಲಿ ಕ್ಯಾಚ್ ನೀಡಿ ಔಟಾದರು. ಇದರ ಬೆನ್ನಲ್ಲೇ ವಿಲಿಯಮ್ಸ್ ಎಸೆತದಲ್ಲಿ ಶುಭ್​ಮನ್ ಗಿಲ್ (0) ಎಲ್​ಬಿಡಬ್ಲ್ಯೂ ಆಗಿ ನಿರ್ಗಮಿಸಿದರು.

ಆ ಬಳಿಕ ಬಂದ ಎಡಗೈ ದಾಂಡಿಗ ತಿಲಕ್ ವರ್ಮಾ 20 ಎಸೆತಗಳಲ್ಲಿ 29 ರನ್ ಬಾರಿಸಿದರೂ ಹೆಚ್ಚು ಹೊತ್ತು ಕ್ರೀಸ್​ನಲ್ಲಿರಲಿಲ್ಲ. ಈ ಹಂತದಲ್ಲಿ ಜೊತೆಗೂಡಿದ ಸೂರ್ಯಕುಮಾರ್ ಯಾದವ್ ಹಾಗೂ ರಿಂಕು ಸಿಂಗ್ ಟೀಮ್ ಇಂಡಿಯಾಗೆ ಆಸರೆಯಾಗಿ ನಿಂತರು.

ಒಂದೆಡೆ ಸೂರ್ಯಕುಮಾರ್ ಯಾದವ್ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರೆ ರಿಂಕು ಸಿಂಗ್ ಉತ್ತಮ ಸಾಥ್ ನೀಡಿದರು. ಪರಿಣಾಮ ಕೇವಲ 29 ಎಸೆತಗಳಲ್ಲಿ ಸೂರ್ಯಕುಮಾರ್ ಅರ್ಧಶತಕ ಪೂರೈಸಿದರು. ಆ ಬಳಿಕ ಕೂಡ ಸ್ಪೋಟಕ ಬ್ಯಾಟಿಂಗ್ ಮುಂದುವರೆಸಿದ ಸೂರ್ಯ 36 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 56 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

ನಾಯಕ ನಿರ್ಗಮಿಸುತ್ತಿದ್ದಂತೆ ರಿಂಕು ಸಿಂಗ್ ಅಬ್ಬರ ಶುರು ಮಾಡಿದ್ದರು. ಅಂತಿಮ ಓವರ್​ಗಳಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ರಿಂಕು ಸಿಂಗ್ 30 ಎಸೆತಗಳಲ್ಲಿ ಚೊಚ್ಚಲ ಅರ್ಧಶತಕ ಪೂರೈಸಿದರು.

ಅರ್ಧಶತಕ ಬಳಿಕ ಹೊಡಿಬಡಿ ಆಟಕ್ಕೆ ಒತ್ತು ನೀಡಿದ ರಿಂಕು ಸಿಂಗ್ ಕೇವಲ 39 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 68 ರನ್​ ಚಚ್ಚಿದರು. ಟೀಮ್ ಇಂಡಿಯಾ 19.3 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 180 ರನ್​ಗಳಿಸಿದ್ದ ವೇಳೆ ಮಳೆ ಬಂದಿದ್ದರಿಂದ ಪಂದ್ಯವನ್ನು ಸ್ಥಗಿತಗೊಳಿಸಲಾಯಿತು.

ಇನ್ನು ಮಳೆ ನಿಂತ ಬಳಿಕ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ ಓವರ್​ ಕಡಿತಗಳೊಂದಿಗೆ ಸೌತ್ ಆಫ್ರಿಕಾ ತಂಡಕ್ಕೆ 15 ಓವರ್​ಗಳಲ್ಲಿ 152 ರನ್​ಗಳ ಗುರಿ ನೀಡಲಾಯಿತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡಕ್ಕೆ ರೀಝ ಹೆಂಡ್ರಿಕ್ಸ್ ಹಾಗೂ ಮ್ಯೂಥ್ಯೂ ಬ್ರೀಟ್ಝ್​ಕೆ ಸ್ಪೋಟಕ ಆರಂಭ ಒದಗಿಸಿದ್ದರು. ಮೊದಲ 2 ಓವರ್​ಗಳಲ್ಲಿ 38 ರನ್ ಬಾರಿಸಿ ಬೃಹತ್ ಮೊತ್ತದ ಚೇಸಿಂಗ್​ಗೆ ಉತ್ತಮ ಅಡಿಪಾಯ ಹಾಕಿಕೊಂಡಿದ್ದರು.

ಉತ್ತಮ ಆರಂಭದ ಬೆನ್ನಲ್ಲೇ ಮ್ಯಾಥ್ಯೂ ಬ್ರೀಟ್ಝ್​​ಕೆ (17) ರನೌಟ್​ಗೆ ಬಲಿಯಾದರು. ಇದಾಗ್ಯೂ ಮೊದಲ 5 ಓವರ್​ಗಳಲ್ಲಿ 68 ರನ್​ ಬಾರಿಸಿ ಸೌತ್ ಆಫ್ರಿಕಾ ಬ್ಯಾಟರ್​ಗಳು ಅಬ್ಬರಿಸಿದರು. ಈ ಹಂತದಲ್ಲಿ ಹೆಂಡ್ರಿಕ್ಸ್ ಜೊತೆಗೂಡಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಐಡೆನ್ ಮಾರ್ಕ್ರಾಮ್ (30) ಔಟಾದರು. ಆದರೆ ಅಷ್ಟರಲ್ಲಾಗಲೇ ಸೌತ್ ಆಫ್ರಿಕಾ ತಂಡವು 8 ಓವರ್​ಗಳಲ್ಲಿ 98 ರನ್ ಕಲೆಹಾಕಿತ್ತು.

ಈ ಹಂತದಲ್ಲಿ ಪಂದ್ಯದ ಮೇಲೆ ಹಿಡಿತ ಸಾಧಿಸಿದ ಟೀಮ್ ಇಂಡಿಯಾ ಬೌಲರ್​ಗಳು ರೀಝ ಹೆಂಡ್ರಿಕ್ಸ್ (49) ಹಾಗೂ ಹೆನ್ರಿಕ್ ಕ್ಲಾಸೆನ್ (7) ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಆದರೆ ಐದನೇ ವಿಕೆಟ್​ಗೆ ಜೊತೆಗೂಡಿದ ಡೇವಿಡ್ ಮಿಲ್ಲರ್ ಹಾಗೂ ಟ್ರಿಸ್ಟಾನ್ ಸ್ಟಬ್ಸ್​ ಉತ್ತಮ ಜೊತೆಯಾಟ ಪ್ರದರ್ಶಿಸಿದರು.

ಅಂತಿಮವಾಗಿ ಸೌತ್ ಆಫ್ರಿಕಾ ತಂಡವು 13.5 ಓವರ್​ಗಳಲ್ಲಿ 5 ವಿಕೆಟ್​ ಕಳೆದುಕೊಂಡು 154 ರನ್ ಬಾರಿಸುವ ಮೂಲಕ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಸೌತ್ ಆಫ್ರಿಕಾ (ಪ್ಲೇಯಿಂಗ್ XI): ಮ್ಯಾಥ್ಯೂ ಬ್ರೀಟ್ಝ್​ಕೆ, ರೀಝ ಹೆಂಡ್ರಿಕ್ಸ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಕ್ ಕ್ಲಾಸೆನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ಮಾರ್ಕೊ ಜಾನ್ಸೆನ್, ಆಂಡಿಲ್ ಫೆಹ್ಲುಕ್ವಾಯೊ, ಜೆರಾಲ್ಡ್ ಕೊಯೆಟ್ಜಿ, ಲಿಜಾಡ್ ವಿಲಿಯಮ್ಸ್, ತಬ್ರೇಝ್ ಶಮ್ಸಿ.

ಇದನ್ನೂ ಓದಿ: ವಿರಾಟ್ ಕೊಹ್ಲಿಯ ದಾಖಲೆ ಸರಿಗಟ್ಟಿದ ಸೂರ್ಯಕುಮಾರ್ ಯಾದವ್

ಭಾರತ (ಪ್ಲೇಯಿಂಗ್ XI): ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಮುಕೇಶ್ ಕುಮಾರ್.

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ