AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಟೀಮ್ ಇಂಡಿಯಾಗೆ ಭರ್ಜರಿ ಜಯ: ಸರಣಿ ಡ್ರಾನಲ್ಲಿ ಅಂತ್ಯ

India vs South Africa: ಎಡಗೈ ದಾಂಡಿಗ ಯಶಸ್ವಿ 41 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 60 ರನ್ ಬಾರಿಸಿ ಔಟಾದರು. ಇದರ ಬೆನ್ನಲ್ಲೇ ಸಿಡಿಲಬ್ಬರ ಶುರು ಮಾಡಿದ ಸೂರ್ಯಕುಮಾರ್ ಯಾದವ್ ಸೌತ್ ಆಫ್ರಿಕಾ ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ ಕೇವಲ 55 ಎಸೆತಗಳಲ್ಲಿ 8 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ ಸ್ಪೋಟಕ ಶತಕ ಪೂರೈಸಿದರು.

IND vs SA: ಟೀಮ್ ಇಂಡಿಯಾಗೆ ಭರ್ಜರಿ ಜಯ: ಸರಣಿ ಡ್ರಾನಲ್ಲಿ ಅಂತ್ಯ
Team India
TV9 Web
| Edited By: |

Updated on: Dec 14, 2023 | 11:50 PM

Share

ಜೋಹಾನ್ಸ್​ಬರ್ಗ್​ನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡದ ನಾಯಕ ಐಡೆನ್ ಮಾರ್ಕ್ರಾಮ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಶುಭ್​ಮನ್ ಗಿಲ್ 12 ರನ್​ಗಳಿಸಿ ಔಟಾದರೆ, ಇದರ ಬೆನ್ನಲ್ಲೇ ತಿಲಕ್ ವರ್ಮಾ ಶೂನ್ಯಕ್ಕೆ ಔಟಾಗಿ ನಿರ್ಗಮಿಸಿದರು. ಈ ಹಂತದಲ್ಲಿ ಜೊತೆಗೂಡಿದ ಯಶಸ್ವಿ ಜೈಸ್ವಾಲ್ ಹಾಗೂ ಸೂರ್ಯಕುಮಾರ್ ಯಾದವ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು.

ಎಡಗೈ ದಾಂಡಿಗ ಯಶಸ್ವಿ 41 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 60 ರನ್ ಬಾರಿಸಿ ಔಟಾದರು. ಇದರ ಬೆನ್ನಲ್ಲೇ ಸಿಡಿಲಬ್ಬರ ಶುರು ಮಾಡಿದ ಸೂರ್ಯಕುಮಾರ್ ಯಾದವ್ ಸೌತ್ ಆಫ್ರಿಕಾ ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ ಕೇವಲ 55 ಎಸೆತಗಳಲ್ಲಿ 8 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ ಸ್ಪೋಟಕ ಶತಕ ಪೂರೈಸಿದರು.

ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ಶತಕ ಬಾರಿಸಿದ ರೋಹಿತ್ ಶರ್ಮಾ ದಾಖಲೆಯನ್ನು ಸೂರ್ಯಕುಮಾರ್ ಯಾದವ್ ಸರಿಗಟ್ಟಿದ್ದಾರೆ. ಹಿಟ್​ಮ್ಯಾನ್ ಟಿ20 ಕ್ರಿಕೆಟ್​ನಲ್ಲಿ 4 ಶತಕಗಳನ್ನು ಬಾರಿಸಿದ್ದರು. ಇನ್ನು ಸೂರ್ಯಕುಮಾರ್ ಯಾದವ್ (100) ಅವರ ಈ ಶತಕದ ನೆರವಿನಿಂದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 201 ರನ್ ಕಲೆಹಾಕಿತು.

202 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಮ್ಯಾಥ್ಯೂ ಬ್ರೀಟ್​ಝ್ಕೆ 4 ರನ್​ಗಳಿಸಿ ಔಟಾದರೆ, ರೀಝ ಹೆಂಡ್ರಿಕ್ಸ್​ 8 ರನ್​ಗಳಿಸಿ ಇನಿಂಗ್ಸ್ ಅಂತ್ಯಗೊಳಿಸಿದರು. ಇನ್ನು ನಾಯಕ ಐಡೆನ್ ಮಾರ್ಕ್ರಾಮ್ 25 ರನ್​ ಬಾರಿಸಿ ತಂಡಕ್ಕೆ ಆಸರೆಯಾಗಿ ನಿಂತರು.

ಆದರೆ ಜಡೇಜಾ ಎಸೆತದಲ್ಲಿ ಬಿರುಸಿನ ಹೊಡೆತಕ್ಕೆ ಮುಂದಾ ಮಾರ್ಕ್ರಾಮ್ ಕ್ಯಾಚ್ ನೀಡಿ ನಿರ್ಗಮಿಸಿದರು. ಇದರ ಬೆನ್ನಲ್ಲೇ ಹೆನ್ರಿಕ್ ಕ್ಲಾಸೆನ್ (5), ಡೆನೊವನ್ (12) ಹಾಗೂ ಆಂಡಿಲ್ ಫೆಹ್ಲುಕ್ವಾಯೊ (0) ವಿಕೆಟ್ ಒಪ್ಪಿಸಿದರು.

ಇತ್ತ ಪಂದ್ಯದ ಮೇಲೆ ಹಿಡಿತ ಸಾಧಿಸಿದ ಟೀಮ್ ಇಂಡಿಯಾ ಬೌಲರ್​ಗಳು ಅಂತಿಮವಾಗಿ ಸೌತ್ ಆಫ್ರಿಕಾ ತಂಡವನ್ನು13.5 ಓವರ್​ಗಳಲ್ಲಿ 95 ರನ್​ಗಳಿಗೆ ಆಲೌಟ್ ಮಾಡುವ ಮೂಲಕ 106 ರನ್​​ಗಳ ಭರ್ಜರಿ ಜಯ ಸಾಧಿಸಿದೆ. ಟೀಮ್ ಇಂಡಿಯಾ ಪರ ಕುಲ್ದೀಪ್ ಯಾದವ್ 2.5 ಓವರ್​ಗಳಲ್ಲಿ ಕೇವಲ 17 ರನ್​ ನೀಡಿ 5 ವಿಕೆಟ್ ಕಬಳಿಸಿದರು.

ಸರಣಿ ಡ್ರಾನಲ್ಲಿ ಅಂತ್ಯ:

ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಟಿ20 ಸರಣಿಯು 1-1 ಅಂತರದಿಂದ ಡ್ರಾನಲ್ಲಿ ಅಂತ್ಯಗೊಂಡಿದೆ. ಇದಕ್ಕೂ ಮುನ್ನ ಮೊದಲ ಪಂದ್ಯವು ಮಳೆಯ ಕಾರಣ ರದ್ದಾಗಿತ್ತು. ಇನ್ನು 2ನೇ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ಜಯ ಸಾಧಿಸಿತ್ತು. ಇದೀಗ ಮೂರನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸುವ ಮೂಲಕ ಸರಣಿಯನ್ನು ಸಮಬಲಗೊಳಿಸುವಲ್ಲಿ ಯಶಸ್ವಿಯಾಗಿದೆ.

ಸೌತ್ ಆಫ್ರಿಕಾ (ಪ್ಲೇಯಿಂಗ್ XI): ರೀಝ ಹೆಂಡ್ರಿಕ್ಸ್, ಮ್ಯಾಥ್ಯೂ ಬ್ರೀಟ್​ಝ್ಕೆ, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಕ್ ಕ್ಲಾಸೆನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ಡೊನೊವನ್ ಫೆರೆರಾ, ಆಂಡಿಲ್ ಫೆಹ್ಲುಕ್ವಾಯೊ, ಕೇಶವ್ ಮಹಾರಾಜ್, ಲಿಜಾದ್ ವಿಲಿಯಮ್ಸ್, ತಬ್ರೈಝ್ ಶಮ್ಸಿ, ನಾಂಡ್ರೆ ಬರ್ಗರ್.

ಇದನ್ನೂ ಓದಿ: Suryakumar Yadav: ದಾಖಲೆಯ ಶತಕ ಸಿಡಿಸಿದ ಸೂರ್ಯಕುಮಾರ್ ಯಾದವ್

ಭಾರತ (ಪ್ಲೇಯಿಂಗ್ XI): ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್(ನಾಯಕ), ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮುಕೇಶ್ ಕುಮಾರ್.

Follow Us
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ