AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ರಬಾಡ ರಾಕಿಂಗ್ ನಡುವೆ ಕಿಂಗ್ ಕೊಹ್ಲಿ ಮಿಂಚಿಂಗ್: ಮೊದಲ ದಿನ ದಕ್ಷಿಣ ಆಫ್ರಿಕಾ ಮೇಲುಗೈ

South Africa vs India, 3rd Test: ಮೊದಲ ಇನಿಂಗ್ಸ್ ಆರಂಭಿಸಿದ ದಕ್ಷಿಣ ಆಫ್ರಿಕಾ ಮೊದಲ ದಿನದಾಟದ ಅಂತ್ಯಕ್ಕೆ 1 ವಿಕೆಟ್​ ಕಳೆದುಕೊಂಡು 17 ರನ್​ಗಳಿಸಿದೆ. ಕ್ರೀಸ್​ನಲ್ಲಿ ನಾಯಕ ಡೀನ್ ಎಲ್ಗರ್ ಹಾಗೂ ಕೇಶವ್ ಮಹಾರಾಜ್ ಬ್ಯಾಟ್ ಮಾಡುತ್ತಿದ್ದಾರೆ.

IND vs SA: ರಬಾಡ ರಾಕಿಂಗ್ ನಡುವೆ ಕಿಂಗ್ ಕೊಹ್ಲಿ ಮಿಂಚಿಂಗ್: ಮೊದಲ ದಿನ ದಕ್ಷಿಣ ಆಫ್ರಿಕಾ ಮೇಲುಗೈ
South Africa vs India, 3rd Test
TV9 Web
| Edited By: |

Updated on: Jan 11, 2022 | 10:45 PM

Share

ಕೇಪ್​ ಟೌನ್​ನಲ್ಲಿ ನಡೆಯುತ್ತಿರುವ ಭಾರತ-ದಕ್ಷಿಣ ಆಫ್ರಿಕಾ ನಡುವಣ ಮೂರನೇ ಹಾಗೂ ಅಂತಿಮ ಟೆಸ್ಟ್‌ ಪಂದ್ಯದ ಮೊದಲ ದಿನದಾಟ ಸೌತ್ ಆಫ್ರಿಕಾ ಮೇಲುಗೈ ಸಾಧಿಸಿದೆ. ಮೊದಲ ದಿನದಾಟದಲ್ಲೇ ಟೀಮ್ ಇಂಡಿಯಾವನ್ನು ಆಲೌಟ್ ಮಾಡಿರುವ ಹರಿಣರು, ಇದೀಗ ಮೊದಲ ಇನಿಂಗ್ಸ್ ಆರಂಭಿಸಿದೆ. ಇದಕ್ಕೂ ಮುನ್ನ ಟಾಸ್ ಗೆದ್ದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ತಂಡದ ಮೊತ್ತ 33 ಆಗುವಷ್ಟರಲ್ಲಿ ಆರಂಭಿಕರಾದ ಕೆಎಲ್ ರಾಹುಲ್ (12) ಹಾಗೂ ಮಯಾಂಕ್ ಅಗರ್ವಾಲ್ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಜೊತೆಗೂಡಿದ ನಾಯಕ ವಿರಾಟ್ ಕೊಹ್ಲಿ ಹಾಗೂ ಚೇತೇಶ್ವರ ಪೂಜಾರಾ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.

3ನೇ ವಿಕೆಟ್​ಗೆ 62 ರನ್​ಗಳ ಜೊತೆಯಾಟವಾಡಿದ ಈ ಜೋಡಿಯನ್ನು ಅಂತಿಮವಾಗಿ ಮಾರ್ಕೊ ಜಾನ್ಸನ್ ಯಶಸ್ವಿಯಾದರು. ಅದರಂತೆ 43 ರನ್​ ಕಲೆಹಾಕಿ ಪೂಜಾರಾ ಹೊರನಡೆದರು. ಇದರ ಬೆನ್ನಲ್ಲೇ ಅಜಿಂಕ್ಯ ರಹಾನೆ (9) ವಿಕೆಟ್ ಒಪ್ಪಿಸಿದರು. ಇನ್ನು ರಿಷಭ್ ಪಂತ್ ಒಂದಷ್ಟು ಹೊತ್ತು ಕ್ರೀಸ್ ಕಚ್ಚಿ ನಿಂತರೂ 27 ರನ್​ಗಳಿಸಿ ಹೊರನಡೆದರು.

ಆದರೆ ಮತ್ತೊಂದೆಡೆ ಏಕಾಂಗಿಯಾಗಿ ಇನಿಂಗ್ಸ್ ಕಟ್ಟಿದ ವಿರಾಟ್ ಕೊಹ್ಲಿ ತಾಳ್ಮೆಯ ಬ್ಯಾಟಿಂಗ್ ಪ್ರದರ್ಶಿಸಿದರು. ಅದರಂತೆ 158 ಎಸೆತಗಳನ್ನು ಎದುರಿಸಿ ಅರ್ಧಶತಕ ಪೂರೈಸಿದರು. ಆದರೆ ಮತ್ತೊಂದೆಡೆ ಕೊಹ್ಲಿಗೆ ಉತ್ತಮ ಸಾಥ್ ದೊರೆತಿರಲಿಲ್ಲ. ಅಶ್ವಿನ್ (2), ಶಾರ್ದೂಲ್ ಠಾಕೂರ್ (12), ಬುಮ್ರಾ (0) ಬಂದ ವೇಗದಲ್ಲೇ ವಿಕೆಟ್ ಕೈಚೆಲ್ಲಿದರು.

ಈ ಹಂತದಲ್ಲಿ ತಂಡದ ಸ್ಕೋರ್​ ಗತಿಯನ್ನು ಹೆಚ್ಚಿಸುವತ್ತ ಗಮನ ಹರಿಸಿದ ವಿರಾಟ್ ಕೊಹ್ಲಿ ಬ್ಯಾಟಿಂಗ್ ಗೇರ್ ಬದಲಿಸಿದರು. ಇತ್ತ ಶತಕ ಬಾರಿಸುವ ನಿರೀಕ್ಷಯೆನ್ನು ಹುಟ್ಟುಹಾಕಿದರೂ, ಅಂತಿಮ ಹಂತದಲ್ಲಿ ಟೀಮ್ ಇಂಡಿಯಾ ಆಟಗಾರರು ಬ್ಯಾಕ್ ಟು ಬ್ಯಾಕ್ ವಿಕೆಟ್ ಕೈಚೆಲ್ಲಿದ ಪರಿಣಾಮ ಕೊಹ್ಲಿ ಕೂಡ ಬಿರುಸಿನ ಆಟಕ್ಕೆ ಮುಂದಾದರು. ಇದರಿಂದಾಗಿ 79 ರನ್​ಗಳಿಸಿ 9ನೇ ವಿಕೆಟ್ ಆಗಿ ವಿರಾಟ್ ಕೊಹ್ಲಿ ಹಿಂತಿರುಗಿದರು. ಅಂತಿಮವಾಗಿ ಟೀಮ್ ಇಂಡಿಯಾ 223 ರನ್​ಗೆ ಸರ್ವಪತನ ಕಂಡಿತು. ದಕ್ಷಿಣ ಆಫ್ರಿಕಾ ಪರ ರಬಾಡ 4 ವಿಕೆಟ್ ಕಬಳಿಸಿದರೆ, ಮಾರ್ಕೊ ಜಾನ್ಸನ್ 3 ವಿಕೆಟ್ ಪಡೆದರು.

ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆರಂಭಿಸಿದ ದಕ್ಷಿಣ ಆಫ್ರಿಕಾ ಮೊದಲ ದಿನದಾಟದ ಅಂತ್ಯಕ್ಕೆ 1 ವಿಕೆಟ್​ ಕಳೆದುಕೊಂಡು 17 ರನ್​ಗಳಿಸಿದೆ. ಕ್ರೀಸ್​ನಲ್ಲಿ ನಾಯಕ ಡೀನ್ ಎಲ್ಗರ್ ಹಾಗೂ ಕೇಶವ್ ಮಹಾರಾಜ್ ಬ್ಯಾಟ್ ಮಾಡುತ್ತಿದ್ದಾರೆ. ಟೀಮ್ ಇಂಡಿಯಾ ಪರ ಒಂದು ವಿಕೆಟ್ ಕಬಳಿಸುವ ಮೂಲಕ ಜಸ್​ಪ್ರೀತ್ ಬುಮ್ರಾ ವಿಕೆಟ್ ಖಾತೆ ತೆರೆದಿದ್ದಾರೆ.

ಇದನ್ನೂ ಓದಿ: IPL 2022: ಮತ್ತೆ RCB ಪರ ಆಡಬೇಕೆಂದ ಸ್ಟಾರ್ ಬೌಲರ್

ಇದನ್ನೂ ಓದಿ:  Sachin Tendulkar: ಆಲ್‌ ಟೈಮ್ ಬೆಸ್ಟ್‌ 11 ಹೆಸರಿಸಿದ ಸಚಿನ್: ಪ್ರಮುಖ ಆಟಗಾರರಿಗಿಲ್ಲ ಸ್ಥಾನ

ಇದನ್ನೂ ಓದಿ: IPL 2022 Mega Auction: ಐಪಿಎಲ್ ಮೆಗಾ ಹರಾಜು ಡೇಟ್ ಫಿಕ್ಸ್..!

ಇದನ್ನೂ ಓದಿ: IPL 2022: ಅಹಮದಾಬಾದ್ ತಂಡಕ್ಕೆ ಟೀಮ್ ಇಂಡಿಯಾ ಮಾಜಿ ಆಟಗಾರ ಕೋಚ್..!

(South Africa vs India, 3rd Test 1st Day Highlights)

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ