AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟಗಾರರ ಕೊರತೆ… ಕಣಕ್ಕಿಳಿದ ಸೌತ್ ಆಫ್ರಿಕಾ ಫೀಲ್ಡಿಂಗ್ ಕೋಚ್

New Zealand vs South Africa: ಲಾಹೋರ್​ನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ 50 ಓವರ್​ಗಳಲ್ಲಿ 304 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 48.4 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಆಟಗಾರರ ಕೊರತೆ... ಕಣಕ್ಕಿಳಿದ ಸೌತ್ ಆಫ್ರಿಕಾ ಫೀಲ್ಡಿಂಗ್ ಕೋಚ್
Wandile Gwavu
ಝಾಹಿರ್ ಯೂಸುಫ್
|

Updated on: Feb 11, 2025 | 1:54 PM

Share

ಪಾಕಿಸ್ತಾನದಲ್ಲಿ ನಡೆಯುತ್ತಿರುವ ತ್ರಿಕೋನ ಸರಣಿಯ 2ನೇ ಪಂದ್ಯದಲ್ಲಿ ಸೌತ್ ಆಫ್ರಿಕಾ ಪರ ಫೀಲ್ಡಿಂಗ್ ಕೋಚ್ ಕಣಕ್ಕಿಳಿದ ಘಟನೆ ನಡೆದಿದೆ. ನ್ಯೂಝಿಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಆಟಗಾರರ ಕೊರತೆಯ ಕಾರಣ ಫೀಲ್ಡಿಂಗ್ ಕೋಚ್ ವಂಡಿಲೆ ಗ್ವಾವು ಮೈದಾನಕ್ಕಿಳಿದಿದ್ದಾರೆ. ಲಾಹೋರ್​ನ ಗದ್ದಾಫಿ ಸ್ಟೇಡಿಯಂನಲ್ಲಿ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು ಮ್ಯಾಥ್ಯೂ ಬ್ರೀಟ್ಝ್​​ಕೆ (150) ಅವರ ಭರ್ಜರಿ ಶತಕದ ನೆರವಿನಿಂದ 50 ಓವರ್​ಗಳಲ್ಲಿ 304 ರನ್ ಕಲೆಹಾಕಿತು.

ಆ ಬಳಿಕ ಸೌತ್ ಆಫ್ರಿಕಾ ತಂಡವು 11 ಆಟಗಾರರೊಂದಿಗೆ ಮೈದಾನಕ್ಕಿಳಿದಿದ್ದರು. ಆದರೆ 37ನೇ ಓವರ್​ ವೇಳೆ ಆಟಗಾರನೊಬ್ಬ ಗಾಯಗೊಂಡು ಮೈದಾನ ತೊರೆದಿದ್ದಾರೆ. ಅತ್ತ ಬದಲಿ ಆಟಗಾರನನ್ನು ಫೀಲ್ಡಿಂಗ್​ಗೆ ಇಳಿಸಲು ಸೌತ್ ಆಫ್ರಿಕಾ ಬಳಿ ಆಯ್ಕೆ ಇರಲಿಲ್ಲ. ಹೀಗಾಗಿ ಫೀಲ್ಡಿಂಗ್ ಕೋಚ್ ವಂಡಿಲೆ ಗ್ವಾವು ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.

ಸೌತ್ ಆಫ್ರಿಕಾ ಫೀಲ್ಡಿಂಗ್ ಕೋಚ್ ವಿಡಿಯೋ:

ಆಟಗಾರರ ಕೊರತೆ ಏಕೆ?

ಸೌತ್ ಆಫ್ರಿಕಾ ಟಿ20 ಲೀಗ್​​ ನಡೆಯುತ್ತಿದ್ದ ಕಾರಣ, ಹರಿಣರ ಪಡೆ 12 ಆಟಗಾರರೊಂದಿಗೆ ಪಾಕಿಸ್ತಾನಕ್ಕೆ ಸರಣಿ ಆಡಲು ಆಗಮಿಸಿದೆ. ಇತ್ತ ಬಂದ 12 ಆಟಗಾರರಲ್ಲಿ ಇಬ್ಬರು ಗಾಯಗೊಳ್ಳುತ್ತಿದ್ದಂತೆ ಸಮಸ್ಯೆ ಎದುರಾಗಿದೆ. ಹೀಗಾಗಿ ಫೀಲ್ಡಿಂಗ್ ಕೋಚ್ ಮೈದಾನಕ್ಕಿಳಿದಿದ್ದಾರೆ.

ಇದನ್ನೂ ಓದಿ: IPL 2025: RCB ತಂಡಕ್ಕೆ ವಿರಾಟ್ ಕೊಹ್ಲಿಯೇ ಕ್ಯಾಪ್ಟನ್..!

ಫೀಲ್ಡಿಂಗ್ ಮಾಡಿದ್ದ ಬ್ಯಾಟಿಂಗ್ ಕೋಚ್:

ಸೌತ್ ಆಫ್ರಿಕಾ ಪರ ಕೋಚ್ ಫೀಲ್ಡಿಂಗ್ ಮಾಡುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಐರ್ಲೆಂಡ್ ವಿರುದ್ಧದ ಸರಣಿ ವೇಳೆ ಆಟಗಾರರ ಕೊರತೆಯಿಂದಾಗಿ ಬ್ಯಾಟಿಂಗ್ ಕೋಚ್ ಜೆಪಿ ಡುಮಿನಿ ಮೈದಾನಕ್ಕಿಳಿದಿದ್ದರು. ಇದೀಗ ಫೀಲ್ಡಿಂಗ್ ಕೋಚ್ ವಂಡಿಲೆ ಗ್ವಾವು ಕೂಡ ಕಣಕ್ಕಿಳಿಯುವ ಮೂಲಕ ಗಮನ ಸೆಳೆದಿದ್ದಾರೆ.

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ