AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟಗಾರರ ಕೊರತೆ… ಕಣಕ್ಕಿಳಿದ ಸೌತ್ ಆಫ್ರಿಕಾ ಫೀಲ್ಡಿಂಗ್ ಕೋಚ್

New Zealand vs South Africa: ಲಾಹೋರ್​ನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ 50 ಓವರ್​ಗಳಲ್ಲಿ 304 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 48.4 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಆಟಗಾರರ ಕೊರತೆ... ಕಣಕ್ಕಿಳಿದ ಸೌತ್ ಆಫ್ರಿಕಾ ಫೀಲ್ಡಿಂಗ್ ಕೋಚ್
Wandile Gwavu
ಝಾಹಿರ್ ಯೂಸುಫ್
|

Updated on: Feb 11, 2025 | 1:54 PM

Share

ಪಾಕಿಸ್ತಾನದಲ್ಲಿ ನಡೆಯುತ್ತಿರುವ ತ್ರಿಕೋನ ಸರಣಿಯ 2ನೇ ಪಂದ್ಯದಲ್ಲಿ ಸೌತ್ ಆಫ್ರಿಕಾ ಪರ ಫೀಲ್ಡಿಂಗ್ ಕೋಚ್ ಕಣಕ್ಕಿಳಿದ ಘಟನೆ ನಡೆದಿದೆ. ನ್ಯೂಝಿಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಆಟಗಾರರ ಕೊರತೆಯ ಕಾರಣ ಫೀಲ್ಡಿಂಗ್ ಕೋಚ್ ವಂಡಿಲೆ ಗ್ವಾವು ಮೈದಾನಕ್ಕಿಳಿದಿದ್ದಾರೆ. ಲಾಹೋರ್​ನ ಗದ್ದಾಫಿ ಸ್ಟೇಡಿಯಂನಲ್ಲಿ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು ಮ್ಯಾಥ್ಯೂ ಬ್ರೀಟ್ಝ್​​ಕೆ (150) ಅವರ ಭರ್ಜರಿ ಶತಕದ ನೆರವಿನಿಂದ 50 ಓವರ್​ಗಳಲ್ಲಿ 304 ರನ್ ಕಲೆಹಾಕಿತು.

ಆ ಬಳಿಕ ಸೌತ್ ಆಫ್ರಿಕಾ ತಂಡವು 11 ಆಟಗಾರರೊಂದಿಗೆ ಮೈದಾನಕ್ಕಿಳಿದಿದ್ದರು. ಆದರೆ 37ನೇ ಓವರ್​ ವೇಳೆ ಆಟಗಾರನೊಬ್ಬ ಗಾಯಗೊಂಡು ಮೈದಾನ ತೊರೆದಿದ್ದಾರೆ. ಅತ್ತ ಬದಲಿ ಆಟಗಾರನನ್ನು ಫೀಲ್ಡಿಂಗ್​ಗೆ ಇಳಿಸಲು ಸೌತ್ ಆಫ್ರಿಕಾ ಬಳಿ ಆಯ್ಕೆ ಇರಲಿಲ್ಲ. ಹೀಗಾಗಿ ಫೀಲ್ಡಿಂಗ್ ಕೋಚ್ ವಂಡಿಲೆ ಗ್ವಾವು ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.

ಸೌತ್ ಆಫ್ರಿಕಾ ಫೀಲ್ಡಿಂಗ್ ಕೋಚ್ ವಿಡಿಯೋ:

ಆಟಗಾರರ ಕೊರತೆ ಏಕೆ?

ಸೌತ್ ಆಫ್ರಿಕಾ ಟಿ20 ಲೀಗ್​​ ನಡೆಯುತ್ತಿದ್ದ ಕಾರಣ, ಹರಿಣರ ಪಡೆ 12 ಆಟಗಾರರೊಂದಿಗೆ ಪಾಕಿಸ್ತಾನಕ್ಕೆ ಸರಣಿ ಆಡಲು ಆಗಮಿಸಿದೆ. ಇತ್ತ ಬಂದ 12 ಆಟಗಾರರಲ್ಲಿ ಇಬ್ಬರು ಗಾಯಗೊಳ್ಳುತ್ತಿದ್ದಂತೆ ಸಮಸ್ಯೆ ಎದುರಾಗಿದೆ. ಹೀಗಾಗಿ ಫೀಲ್ಡಿಂಗ್ ಕೋಚ್ ಮೈದಾನಕ್ಕಿಳಿದಿದ್ದಾರೆ.

ಇದನ್ನೂ ಓದಿ: IPL 2025: RCB ತಂಡಕ್ಕೆ ವಿರಾಟ್ ಕೊಹ್ಲಿಯೇ ಕ್ಯಾಪ್ಟನ್..!

ಫೀಲ್ಡಿಂಗ್ ಮಾಡಿದ್ದ ಬ್ಯಾಟಿಂಗ್ ಕೋಚ್:

ಸೌತ್ ಆಫ್ರಿಕಾ ಪರ ಕೋಚ್ ಫೀಲ್ಡಿಂಗ್ ಮಾಡುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಐರ್ಲೆಂಡ್ ವಿರುದ್ಧದ ಸರಣಿ ವೇಳೆ ಆಟಗಾರರ ಕೊರತೆಯಿಂದಾಗಿ ಬ್ಯಾಟಿಂಗ್ ಕೋಚ್ ಜೆಪಿ ಡುಮಿನಿ ಮೈದಾನಕ್ಕಿಳಿದಿದ್ದರು. ಇದೀಗ ಫೀಲ್ಡಿಂಗ್ ಕೋಚ್ ವಂಡಿಲೆ ಗ್ವಾವು ಕೂಡ ಕಣಕ್ಕಿಳಿಯುವ ಮೂಲಕ ಗಮನ ಸೆಳೆದಿದ್ದಾರೆ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?