AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟಗಾರರ ಕೊರತೆ… ಕಣಕ್ಕಿಳಿದ ಸೌತ್ ಆಫ್ರಿಕಾ ಫೀಲ್ಡಿಂಗ್ ಕೋಚ್

New Zealand vs South Africa: ಲಾಹೋರ್​ನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ 50 ಓವರ್​ಗಳಲ್ಲಿ 304 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 48.4 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಆಟಗಾರರ ಕೊರತೆ... ಕಣಕ್ಕಿಳಿದ ಸೌತ್ ಆಫ್ರಿಕಾ ಫೀಲ್ಡಿಂಗ್ ಕೋಚ್
Wandile Gwavu
ಝಾಹಿರ್ ಯೂಸುಫ್
|

Updated on: Feb 11, 2025 | 1:54 PM

Share

ಪಾಕಿಸ್ತಾನದಲ್ಲಿ ನಡೆಯುತ್ತಿರುವ ತ್ರಿಕೋನ ಸರಣಿಯ 2ನೇ ಪಂದ್ಯದಲ್ಲಿ ಸೌತ್ ಆಫ್ರಿಕಾ ಪರ ಫೀಲ್ಡಿಂಗ್ ಕೋಚ್ ಕಣಕ್ಕಿಳಿದ ಘಟನೆ ನಡೆದಿದೆ. ನ್ಯೂಝಿಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಆಟಗಾರರ ಕೊರತೆಯ ಕಾರಣ ಫೀಲ್ಡಿಂಗ್ ಕೋಚ್ ವಂಡಿಲೆ ಗ್ವಾವು ಮೈದಾನಕ್ಕಿಳಿದಿದ್ದಾರೆ. ಲಾಹೋರ್​ನ ಗದ್ದಾಫಿ ಸ್ಟೇಡಿಯಂನಲ್ಲಿ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು ಮ್ಯಾಥ್ಯೂ ಬ್ರೀಟ್ಝ್​​ಕೆ (150) ಅವರ ಭರ್ಜರಿ ಶತಕದ ನೆರವಿನಿಂದ 50 ಓವರ್​ಗಳಲ್ಲಿ 304 ರನ್ ಕಲೆಹಾಕಿತು.

ಆ ಬಳಿಕ ಸೌತ್ ಆಫ್ರಿಕಾ ತಂಡವು 11 ಆಟಗಾರರೊಂದಿಗೆ ಮೈದಾನಕ್ಕಿಳಿದಿದ್ದರು. ಆದರೆ 37ನೇ ಓವರ್​ ವೇಳೆ ಆಟಗಾರನೊಬ್ಬ ಗಾಯಗೊಂಡು ಮೈದಾನ ತೊರೆದಿದ್ದಾರೆ. ಅತ್ತ ಬದಲಿ ಆಟಗಾರನನ್ನು ಫೀಲ್ಡಿಂಗ್​ಗೆ ಇಳಿಸಲು ಸೌತ್ ಆಫ್ರಿಕಾ ಬಳಿ ಆಯ್ಕೆ ಇರಲಿಲ್ಲ. ಹೀಗಾಗಿ ಫೀಲ್ಡಿಂಗ್ ಕೋಚ್ ವಂಡಿಲೆ ಗ್ವಾವು ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.

ಸೌತ್ ಆಫ್ರಿಕಾ ಫೀಲ್ಡಿಂಗ್ ಕೋಚ್ ವಿಡಿಯೋ:

ಆಟಗಾರರ ಕೊರತೆ ಏಕೆ?

ಸೌತ್ ಆಫ್ರಿಕಾ ಟಿ20 ಲೀಗ್​​ ನಡೆಯುತ್ತಿದ್ದ ಕಾರಣ, ಹರಿಣರ ಪಡೆ 12 ಆಟಗಾರರೊಂದಿಗೆ ಪಾಕಿಸ್ತಾನಕ್ಕೆ ಸರಣಿ ಆಡಲು ಆಗಮಿಸಿದೆ. ಇತ್ತ ಬಂದ 12 ಆಟಗಾರರಲ್ಲಿ ಇಬ್ಬರು ಗಾಯಗೊಳ್ಳುತ್ತಿದ್ದಂತೆ ಸಮಸ್ಯೆ ಎದುರಾಗಿದೆ. ಹೀಗಾಗಿ ಫೀಲ್ಡಿಂಗ್ ಕೋಚ್ ಮೈದಾನಕ್ಕಿಳಿದಿದ್ದಾರೆ.

ಇದನ್ನೂ ಓದಿ: IPL 2025: RCB ತಂಡಕ್ಕೆ ವಿರಾಟ್ ಕೊಹ್ಲಿಯೇ ಕ್ಯಾಪ್ಟನ್..!

ಫೀಲ್ಡಿಂಗ್ ಮಾಡಿದ್ದ ಬ್ಯಾಟಿಂಗ್ ಕೋಚ್:

ಸೌತ್ ಆಫ್ರಿಕಾ ಪರ ಕೋಚ್ ಫೀಲ್ಡಿಂಗ್ ಮಾಡುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಐರ್ಲೆಂಡ್ ವಿರುದ್ಧದ ಸರಣಿ ವೇಳೆ ಆಟಗಾರರ ಕೊರತೆಯಿಂದಾಗಿ ಬ್ಯಾಟಿಂಗ್ ಕೋಚ್ ಜೆಪಿ ಡುಮಿನಿ ಮೈದಾನಕ್ಕಿಳಿದಿದ್ದರು. ಇದೀಗ ಫೀಲ್ಡಿಂಗ್ ಕೋಚ್ ವಂಡಿಲೆ ಗ್ವಾವು ಕೂಡ ಕಣಕ್ಕಿಳಿಯುವ ಮೂಲಕ ಗಮನ ಸೆಳೆದಿದ್ದಾರೆ.

Follow Us
RSS ನೋಂದಣಿ ಆಗಿಲ್ಲ, ಆಗೋದು ಇಲ್ಲ: ಪ್ರಿಯಾಂಕ್ ಖರ್ಗೆ ಸಂತೋಷ್​​ ತಿರುಗೇಟು
RSS ನೋಂದಣಿ ಆಗಿಲ್ಲ, ಆಗೋದು ಇಲ್ಲ: ಪ್ರಿಯಾಂಕ್ ಖರ್ಗೆ ಸಂತೋಷ್​​ ತಿರುಗೇಟು
'ವಂದೇ ಮಾತರಂ' ಗೀತೆಗೆ ಅವಮಾನಿಸಿದರೇ ಸೋನಿಯಾ ಗಾಂಧಿ?
'ವಂದೇ ಮಾತರಂ' ಗೀತೆಗೆ ಅವಮಾನಿಸಿದರೇ ಸೋನಿಯಾ ಗಾಂಧಿ?
ನಾನು ಮಾತಾಡಲ್ಲ ಅಂದ್ರೆ ಸೈಲೆಂಟ್ ಆಗಿದ್ದೀನಿ ಅಂತಾ ಅರ್ಥ ಅಲ್ಲ ಎಂದ ಸಿದ್ದು
ನಾನು ಮಾತಾಡಲ್ಲ ಅಂದ್ರೆ ಸೈಲೆಂಟ್ ಆಗಿದ್ದೀನಿ ಅಂತಾ ಅರ್ಥ ಅಲ್ಲ ಎಂದ ಸಿದ್ದು
ಸ್ವಾತಂತ್ರ್ಯ ದಿನಾಚರಣೆ ವೇಳೆ ಅಸ್ವಸ್ಥಗೊಂಡ ಆಂಧ್ರ ಸಚಿವ
ಸ್ವಾತಂತ್ರ್ಯ ದಿನಾಚರಣೆ ವೇಳೆ ಅಸ್ವಸ್ಥಗೊಂಡ ಆಂಧ್ರ ಸಚಿವ
6ನೇ ತರಗತಿಯಿಂದ AI ಶಿಕ್ಷಣ, AI ವಿಶ್ವವಿದ್ಯಾಲಯ: ಸಿಎಂ ಮಹತ್ವದ ಘೋಷಣೆ
6ನೇ ತರಗತಿಯಿಂದ AI ಶಿಕ್ಷಣ, AI ವಿಶ್ವವಿದ್ಯಾಲಯ: ಸಿಎಂ ಮಹತ್ವದ ಘೋಷಣೆ
ಸರ್ಕಾರದ ಅಭಿವೃದ್ಧಿ ಯೋಜನೆಗಳ ಬಗ್ಗೆ ಸಿಎಂ ಡಿಕೆ ಶಿವಕುಮಾರ ಏನಂದ್ರು?
ಸರ್ಕಾರದ ಅಭಿವೃದ್ಧಿ ಯೋಜನೆಗಳ ಬಗ್ಗೆ ಸಿಎಂ ಡಿಕೆ ಶಿವಕುಮಾರ ಏನಂದ್ರು?
ಈದ್ಗಾ ಮೈದಾನದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಚಿವ ಜಮೀರ್ ಭಾಗಿ
ಈದ್ಗಾ ಮೈದಾನದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಚಿವ ಜಮೀರ್ ಭಾಗಿ
ವಾಹನ ಸವಾರರೇ ಇಂದು ಸಂಜೆ ಈ ರಸ್ತೆಯಲ್ಲಿ ಹೋಗಬೇಡಿ
ವಾಹನ ಸವಾರರೇ ಇಂದು ಸಂಜೆ ಈ ರಸ್ತೆಯಲ್ಲಿ ಹೋಗಬೇಡಿ
ರಾಜ ರಾಜ ವರ್ಮ ಎಂದ ತುಕಾಲಿ ; ದೇವರಾಜ್ ಸ್ಟೈಲ್​ ಮಿಮಿಕ್ರಿ ಮಾಡಿದ ಸಂತೋಷ್
ರಾಜ ರಾಜ ವರ್ಮ ಎಂದ ತುಕಾಲಿ ; ದೇವರಾಜ್ ಸ್ಟೈಲ್​ ಮಿಮಿಕ್ರಿ ಮಾಡಿದ ಸಂತೋಷ್
ಸ್ವಾತಂತ್ರ್ಯ ಸಂಗ್ರಾಮದ ಬಗ್ಗೆ ಶ್ರೀಶ್ರೀ ರವಿಶಂಕರ್ ಗುರೂಜಿ ಮಾತು
ಸ್ವಾತಂತ್ರ್ಯ ಸಂಗ್ರಾಮದ ಬಗ್ಗೆ ಶ್ರೀಶ್ರೀ ರವಿಶಂಕರ್ ಗುರೂಜಿ ಮಾತು