AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಅಬ್ಬಾ..ಎಂತಹ ಅದ್ಭುತ ಕ್ಯಾಚ್: ವಿಕಲಚೇತನನ ಡೈವಿಂಗ್​ಗೆ ಸ್ಟಾರ್ ಕ್ರಿಕೆಟಿಗರೇ ಫಿದಾ

ಈ ಪಂದ್ಯ ಯಾವುದು ಎಲ್ಲಿ ನಡೆದಿರುವುದು ಎಂಬುದರ ಬಗ್ಗೆ ಮಾಹಿತಿ ಇಲ್ಲ. ಇನ್ನು ಈ ಅದ್ಭುತ ವಿಡಿಯೋ ನೋಡಿದವರು ಸೋಷಿಯಲ್ ಮೀಡಿಯಾದಲ್ಲಿ ಈ ಆಟಗಾರನನ್ನು ಜಸ್​ವಂತ್ ಸಿಂಗ್ ರಾಜುಪುರೋಹಿತ್ ಎಂದು ಪ್ರತಿಕ್ರಿಯಿಸುತ್ತಿದ್ದಾರೆ.

Viral Video: ಅಬ್ಬಾ..ಎಂತಹ ಅದ್ಭುತ ಕ್ಯಾಚ್: ವಿಕಲಚೇತನನ ಡೈವಿಂಗ್​ಗೆ ಸ್ಟಾರ್ ಕ್ರಿಕೆಟಿಗರೇ ಫಿದಾ
ವೈರಲ್ ವಿಡಿಯೋ
TV9 Web
| Edited By: |

Updated on: Sep 02, 2021 | 6:06 PM

Share

ಕ್ರಿಕೆಟ್​ ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಅದರಲ್ಲೂ ಭಾರತದಲ್ಲಿ ಗಲ್ಲಿ ಗಲ್ಲಿಯಲ್ಲಿ ಒಬ್ಬೊಬ್ಬ ಅತ್ಯುತ್ತಮ ಆಟಗಾರರು ಕಂಡು ಬರುತ್ತಾರೆ. ಅದರಲ್ಲಿ ಕೆಲವರು ರಾಜ್ಯ ಅಥವಾ ರಾಷ್ಟ್ರೀಯ ತಂಡದಲ್ಲಿ ಮಿಂಚಿ ವಿಶ್ವದ ಗಮನ ಸೆಳೆಯುತ್ತಾರೆ. ಆದರೆ ಕೆಲವರ ಆಟಗಳು ಮೈದಾನದಿಂದ ಆಚೆಗೆ ಸುದ್ದಿಯಾಗುವುದೇ ಇಲ್ಲ. ಅಂತಹದೊಂದು ಅದ್ಭುತ ಆಟ ಇದೀಗ ಸೋಷಿಯಲ್ ಮೀಡಿಯಾ ಮೂಲಕ ವೈರಲ್ ಆಗಿದೆ. ಹೌದು, ವಿಕಲಚೇತನ ಒಬ್ಬರು ಕ್ರಿಕೆಟ್ ಆಡುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸೆನ್ಸೇಷನ್ ಸೃಷ್ಟಿಸಿದೆ.

ಈ ವಿಡಿಯೋದಲ್ಲಿ ಒಂದು ಕಾಲು ಇರದ ವ್ಯಕ್ತಿಯೊಬ್ಬರು ದೊಣ್ಣೆಯ ಸಹಾಯದಿಂದ ಬೌಲಿಂಗ್ ಮಾಡುತ್ತಿದ್ದಾರೆ. ಇತ್ತ ಕಡೆಯಿಂದ ಬ್ಯಾಟ್ಸ್​ಮನ್ ಅವರು ಎಸೆದ ಚೆಂಡನ್ನು ಅದ್ಭುತವಾಗಿ ಬಾರಿಸಿದ್ದರು. ಆದರೆ ಕ್ಷಣಾರ್ಧದಲ್ಲೇ ಅತ್ಯುತ್ತಮವಾಗಿ ಡೈವ್ ಹೊಡೆದ ವಿಕಲಚೇತನ ಕ್ಯಾಚ್ ಹಿಡಿದರು.

ಈ ಅದ್ಭುತ ಕ್ಯಾಚ್ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಭರ್ಜರಿ ಕ್ಯಾಚ್ ನೋಡಿ ದಕ್ಷಿಣ ಆಫ್ರಿಕಾ ಸ್ಪಿನ್ ಬೌಲರ್ ತಬ್ರೇಜ್ ಶಮ್ಸಿ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. “ಅದ್ಭುತ!!! ಇಷ್ಟು ಮಾತ್ರ ಹೇಳಬಲ್ಲೆ”ಎಂದು ಅವರು ಅಳುವ ಮುಖದ ಎಮೋಜಿಯೊಂದಿಗೆ ಶಮ್ಸಿ ಟ್ವೀಟ್ ಮಾಡಿದ್ದಾರೆ. ಇನ್ನು ನ್ಯೂಜಿಲ್ಯಾಂಡ್ ವೇಗಿ ಮಿಚೆಲ್ ಮೆಕ್ಲೆನಾಘನ್, ಕೂಡ “ನಂಬಲಸಾಧ್ಯ !” ಎಂಬ ಶೀರ್ಷಿಕೆಯೊಂದಿಗೆ ವೀಡಿಯೊವನ್ನು ರೀಟ್ವೀಟ್ ಮಾಡಿದ್ದಾರೆ.

ಇದಾಗ್ಯೂ ಈ ಪಂದ್ಯ ಯಾವುದು ಎಲ್ಲಿ ನಡೆದಿರುವುದು ಎಂಬುದರ ಬಗ್ಗೆ ಮಾಹಿತಿ ಇಲ್ಲ. ಇನ್ನು ಈ ಅದ್ಭುತ ವಿಡಿಯೋ ನೋಡಿದವರು ಸೋಷಿಯಲ್ ಮೀಡಿಯಾದಲ್ಲಿ ಈ ಆಟಗಾರನನ್ನು ಜಸ್​ವಂತ್ ಸಿಂಗ್ ರಾಜುಪುರೋಹಿತ್ ಎಂದು ಗುರುತಿಸುತ್ತಿದ್ದಾರೆ. ರಾಜಪುರೋಹಿತ್ ಕೂಡ ವಿಕಚೇತನರಾಗಿದ್ದು, ಅವರು ಸಹ ದೊಣ್ಣೆಯ ನೆರವಿನಿಂದ ಕ್ರಿಕೆಟ್ ಅಂಗಳದಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಅಷ್ಟೇ ಅಲ್ಲದೆ ಈ ಹಿಂದೆ ಟೀಮ್ ಇಂಡಿಯಾ ವಿಕಲಚೇತನರ ತಂಡವನ್ನು ಜಸ್​ವಂತ್ ಸಿಂಗ್ ರಾಜುಪುರೋಹಿತ್ ಪ್ರತಿನಿಧಿಸಿದ್ದರು.

ಇದನ್ನೂ ಓದಿ: ರಾಹುಲ್ ದ್ರಾವಿಡ್ ಗರಡಿ ಹುಡುಗನ ಆರ್ಭಟ: ಎದುರಾಳಿ ತಂಡ 69 ರನ್​ಗೆ ಆಲೌಟ್

ಇದನ್ನೂ ಓದಿ: Shane Warne: ಸಾರ್ವಕಾಲಿಕ ಟಾಪ್ 10 ವೇಗಿಗಳನ್ನು ಹೆಸರಿಸಿದ ಸ್ಪಿನ್ ಮಾಂತ್ರಿಕ ಶೇನ್ ವಾರ್ನ್​

ಇದನ್ನೂ ಓದಿ: Crime News: ಬಾಲಕನನ್ನು ಮದುವೆಯಾಗಿ ಜೈಲು ಸೇರಿದ ಯುವತಿ

(Specially-abled bowler takes one-handed catch in a viral video)

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ