AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021, SRH: ಪಂದ್ಯ ನಡೆಯುವುದು ಖಚಿತ: SRH ತಂಡದಲ್ಲಿ 2 ಪ್ರಮುಖ ಬದಲಾವಣೆ

IPL 2021: ಈಗಾಗಲೇ ದ್ವಿತಿಯಾರ್ಧದಿಂದ ಎಸ್​ಆರ್​ಹೆಚ್​ ಓಪನರ್ ಜಾನಿ ಬೈರ್​ಸ್ಟೋ ಹೊರಗುಳಿದಿದ್ದಾರೆ. ಇದೀಗ ತಂಡದ ಇಬ್ಬರು ಆಟಗಾರರು ಮೊದಲ ಪಂದ್ಯಕ್ಕೆ ಅಲಭ್ಯರಾಗುವುದು ಖಚಿತ.

IPL 2021, SRH: ಪಂದ್ಯ ನಡೆಯುವುದು ಖಚಿತ: SRH ತಂಡದಲ್ಲಿ 2 ಪ್ರಮುಖ ಬದಲಾವಣೆ
SRH
TV9 Web
| Updated By: ಝಾಹಿರ್ ಯೂಸುಫ್|

Updated on:Sep 22, 2021 | 4:20 PM

Share

IPL 2021 SRH vs DC: ಡೆಲ್ಲಿ ಕ್ಯಾಪಿಟಲ್ಸ್ (DC) ವಿರುದ್ಧದ ಪಂದ್ಯಕ್ಕೂ ಮುನ್ನ ಸನ್ ರೈಸರ್ಸ್ ಹೈದರಾಬಾದ್ (SRH) ತಂಡದ ಆಟಗಾರನಿಗೆ ಕೊರೊನಾ ಪಾಸಿಟಿವ್ ಇರುವುದು ಪತ್ತೆಯಾಗಿದೆ. ಸನ್ ರೈಸರ್ಸ್ ಹೈದರಾಬಾದ್ ತಂಡದ ವೇಗದ ಬೌಲರ್ ಟಿ ನಟರಾಜನ್ (T. Natarajan) ಆರ್​ಟಿ ಪಿಸಿಆರ್ ಪರೀಕ್ಷೆಯಲ್ಲಿ ಕೊರೊನಾ ಪಾಸಿಟಿವ್ ಆಗಿರುವುದು ಕಂಡು ಬಂದಿದೆ. ಇದೀಗ ನಟರಾಜನ್​ ಅವರನ್ನು ತಂಡದ ಉಳಿದ ಆಟಗಾರರಿಂದ ಪತ್ಯೇಕವಾಗಿ ಇರಿಸಲಾಗಿದ್ದು, ಹಾಗೆಯೇ ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಹೈದರಾಬಾದ್‌ನ ಆರು ಸದಸ್ಯರನ್ನು ಕೂಡ ಪ್ರತ್ಯೇಕವಾಗಿ ಇರಿಸಲಾಗಿದೆ.

ನಟರಾಜನ್ ಅಲ್ಲದೆ ಆಲ್​ರೌಂಡರ್ ವಿಜಯ್ ಶಂಕರ್, ತಂಡದ ಮ್ಯಾನೇಜರ್ ವಿಜಯ್ ಕುಮಾರ್, ಫಿಸಿಯೋಥೆರಪಿಸ್ಟ್ ಶ್ಯಾಮ್ ಸುಂದರ್​, ಡಾ ಅಂಜನಾ ವನನ್, ಲಾಜಿಸ್ಟಿಕ್ಸ್ ಮ್ಯಾನೇಜರ್ ತುಷಾರ್ ಖೇಡ್ಕರ್ ಮತ್ತು ನೆಟ್ ಬೌಲರ್ ಪೆರಿಯಸ್ವಾಮಿ ಗಣೇಶನ್ ಅವರನ್ನು ಪತ್ಯೇಕವಾಗಿ ಇರಿಸಲಾಗಿದೆ. ಇದಾಗ್ಯೂ ಇಂದಿನ ಪಂದ್ಯವನ್ನು ನಡೆಸಲಾಗುವುದು ಎಂದು ಐಪಿಎಲ್ ಆಡಳಿತ ಮಂಡಳಿ ತಿಳಿಸಿದೆ.

ಇದೀಗ ನಟರಾಜನ್ ಹಾಗೂ ವಿಜಯ್ ಶಂಕರ್ ಅವರನ್ನು ತಂಡದ ಆಯ್ಕೆಯಿಂದ ಕೈ ಬಿಡಲಾಗಿದೆ. ಹೀಗಾಗಿ ಇಂದು ಕಣಕ್ಕಿಳಿಯುವ ಸನ್​ರೈಸರ್ಸ್​ ಹೈದರಾಬಾದ್ ತಂಡದಲ್ಲಿ ಪ್ರಮುಖ ಬದಲಾವಣೆ ಕಂಡು ಬರಲಿದೆ. ಏಕೆಂದರೆ ನಟರಾಜನ್ ಹಾಗೂ ವಿಜಯ್ ಶಂಕರ್ ಪ್ಲೇಯಿಂಗ್​ ಇಲೆವೆನ್​ನ ಖಾಯಂ ಸದಸ್ಯರಾಗಿದ್ದು, ಇದೀಗ ಇಬ್ಬರ ಅನುಪಸ್ಥಿತಿ ಎಸ್​ಆರ್​ಹೆಚ್​ ತಂಡ ಚಿಂತೆಗೆ ಕಾರಣವಾಗಿದೆ.

ಈಗಾಗಲೇ ದ್ವಿತಿಯಾರ್ಧದಿಂದ ಎಸ್​ಆರ್​ಹೆಚ್​ ಓಪನರ್ ಜಾನಿ ಬೈರ್​ಸ್ಟೋ ಹೊರಗುಳಿದಿದ್ದಾರೆ. ಇದೀಗ ತಂಡದ ಇಬ್ಬರು ಆಟಗಾರರು ಮೊದಲ ಪಂದ್ಯಕ್ಕೆ ಅಲಭ್ಯರಾಗುವುದು ಖಚಿತ. ಇವರ ಬದಲಿಗೆ ಹೊಸ ಆಟಗಾರರಿಗೆ ಚಾನ್ಸ್ ಸಿಗುವ ಸಾಧ್ಯತೆಯಿದೆ. ಅದರಂತೆ ಎಸ್​ಆರ್​ಹೆಚ್​ ತಂಡದಲ್ಲಿ 2 ಬದಲಾವಣೆ ಕಾಣಿಸಿಕೊಳ್ಳಲಿದ್ದು, ನಟರಾಜನ್ ಬದಲಿಗೆ ಎಡಗೈ ವೇಗಿ ಖಲೀಲ್ ಅಹ್ಮದ್ ಸ್ಥಾನ ಪಡೆಯಲಿದ್ದಾರೆ. ಹಾಗೆಯೇ ಆಲ್​ರೌಂಡರ್ ವಿಜಯ ಶಂಕರ್ ಸ್ಥಾನದಲ್ಲಿ ಅಭಿಷೇಕ್ ಶರ್ಮಾ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಸನ್ ರೈಸರ್ಸ್ ಹೈದರಾಬಾದ್ (SRH) ಸಂಭಾವ್ಯ ಪ್ಲೇಯಿಂಗ್ XI: ಡೇವಿಡ್ ವಾರ್ನರ್, ವೃದ್ಧಿಮಾನ್ ಸಾಹಾ (ವಿಕೆಟ್ ಕೀಪರ್), ಕೇನ್ ವಿಲಿಯಮ್ಸನ್ (ನಾಯಕ), ಮನೀಶ್ ಪಾಂಡೆ, ಅಭಿಷೇಕ್ ಶರ್ಮಾ , ಅಬ್ದುಲ್ ಸಮದ್ , ಮೊಹಮ್ಮದ್ ನಬಿ, ರಶೀದ್ ಖಾನ್ , ಭುವನೇಶ್ವರ್ ಕುಮಾರ್ , ಸಂದೀಪ್ ಶರ್ಮಾ , ಖಲೀಲ್ ಅಹ್ಮದ್

ಇದನ್ನೂ ಓದಿ: Virat Kohli: ನಮಗೆ ಸೋಲುಣಿಸಿದ ಆತನೇ ನಮ್ಮ ಪ್ರಮುಖ ಅಸ್ತ್ರ..!

ಇದನ್ನೂ ಓದಿ: Virat Kohli: ಐಪಿಎಲ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ವಿರಾಟ್ ಕೊಹ್ಲಿ

ಇದನ್ನೂ ಓದಿ: 90 ಕಿ.ಮೀ ಮೈಲೇಜ್ ನೀಡುವ ಕಡಿಮೆ ಬೆಲೆಯ ಬೈಕ್​ಗಳ ಪಟ್ಟಿ ಇಲ್ಲಿದೆ

ಇದನ್ನೂ ಓದಿ: IPL 2021: ಪ್ಲೇ ಆಫ್​ ಪ್ರವೇಶಿಸುವ 4 ತಂಡಗಳನ್ನು ಹೆಸರಿಸಿದ ಗೌತಮ್ ಗಂಭೀರ್

(SRH Players to replace Vijay Shankar and T. Natarajan in Playing XI)

Published On - 4:12 pm, Wed, 22 September 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ